ಪ್ರೇಯಸಿಯನ್ನು ಮದುವೆಯಾಗಲು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ; ದಾರಿ ಮಧ್ಯೆ ಯುವಕನನ್ನು ಬಿಟ್ಟು ಯುವತಿ ಪರಾರಿ
ಪ್ರೀತಿಸಿದ ಹುಡುಗಿಯನ್ನು ಕರೆದುಕೊಂಡು ಹೋಗಲು ಬೆಂಗಳೂರಿನಿಂದ ಬಂದಿದ್ದ ಯುವಕನ ಮದುವೆ ಕನಸು ಹಿರೇಕೆರೂರಿನಲ್ಲಿ ನಡೆದ ಅಪಘಾತದಿಂದ ನುಚ್ಚುನೂರಾಗಿದೆ. ಕಾರು ಪಲ್ಟಿಯಾಗಿ ಪ್ರಿಯಕರ ಸೇರಿ ಮೂವರು ಗಾಯಗೊಂಡರೆ, ಯುವತಿ ಮಾತ್ರ ತನ್ನ ಪ್ರಿಯಕರನನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿ ಬೆಂಗಳೂರು ಸೇರಿಕೊಂಡಳು. ಪ್ರೇಮ ವಿವಾಹದ ಯೋಜನೆ ದುರಂತ ಅಂತ್ಯ ಕಂಡಿದೆ.
- Web contact
- Updated on: Feb 21, 2026
- 3:40 pm
ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ
ಮುಂಬರುವ ಚುನಾವಣೆಗಳನ್ನ ಗೆಲ್ಲೋದಕ್ಕೆ ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ. ಪಕ್ಷದಲ್ಲಿನ ಒಂದಿಷ್ಟು ಗೊಂದಲಕ್ಕೆ ಬ್ರೇಕ್ ಹಾಕಿ ಪಕ್ಷ ಸಂಘಟನೆ, ಮುಂದಿನ ಹಾದಿ, ಆಡಳಿತ ಪಕ್ಷದ ವಿರುದ್ದ ನಡೆಸಬೇಕಾದ ಹೋರಾಟದ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು. ಹಾಗಾದ್ರೆ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ರು, ಏನೆಲ್ಲಾ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು ಎನ್ನುವ ಮಾಹಿತಿ ಇಲ್ಲಿದೆ.
- Web contact
- Updated on: Feb 19, 2026
- 10:13 pm
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ಕೆ.ಆರ್. ಮಾರ್ಕೆಟ್ನಲ್ಲಿ ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಅಭಿವೃದ್ಧಿ ಶುಲ್ಕದ ವಿವಾದದಿಂದ ಬೆಂಗಳೂರಿನಲ್ಲಿ ಕಸದ ಸಮಸ್ಯೆ ತೀವ್ರಗೊಂಡಿದೆ. ಬೆಳ್ಳಹಳ್ಳಿ, ದೊಡ್ಡಬಳ್ಳಾಪುರ, ಮಹದೇವಪುರ ಡಂಪಿಂಗ್ ಯಾರ್ಡ್ಗಳಲ್ಲಿ 400ಕ್ಕೂ ಹೆಚ್ಚು ಕಸದ ಲಾರಿಗಳನ್ನು ಪ್ರವೇಶಿಸಲು ಗ್ರಾಮಸ್ಥರು ಬಿಡುತ್ತಿಲ್ಲ. ಇದರಿಂದಾಗಿ ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದಾದ್ಯಂತ ಕಸ ಸಂಗ್ರಹ ಸ್ಥಗಿತಗೊಂಡಿದ್ದು, ಕಸ ತುಂಬಿದ ಆಟೋಗಳು ಮತ್ತು ಲಾರಿಗಳು ನಿಂತಲ್ಲೇ ನಿಂತಿವೆ. ರಾಜ್ಯ ಸರ್ಕಾರ ಮತ್ತು ಜಿಬಿಎ ಅಧಿಕಾರಿಗಳು ಪರಿಹಾರ ಹುಡುಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
- Web contact
- Updated on: Feb 19, 2026
- 9:02 am
ಎ ಖಾತಾ ವರ್ಗಾವಣೆಗೆ ಆನ್ಲೈನ್ನಲ್ಲಿ ಹಣ ಪಾವತಿಸುವ ಮುನ್ನ ಎಚ್ಚರ: ಎ ಖಾತಾ ಮಾಡಿಸುವವರು ಇದನ್ನ ಓದಲೇಬೇಕು
ಬೆಂಗಳೂರಿನಲ್ಲಿ ಬಿ-ಖಾತಾ ಆಸ್ತಿಗಳನ್ನು ಎ-ಖಾತಾಗೆ ಪರಿವರ್ತಿಸುವ ಆನ್ಲೈನ್ ವ್ಯವಸ್ಥೆಯಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿವೆ ಎನ್ನಲಾಗುತ್ತಿದೆ. ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸಿದ್ದರೂ, ವೆಬ್ಸೈಟ್ನಲ್ಲಿ ಮಾತ್ರ ಪೇಮೆಂಟ್ ಪೆಂಡಿಂಗ್ ಎಂದು ತೋರಿಸುತ್ತಿದೆ. ಇತ್ತ ಬ್ಯಾಂಕ್ ಖಾತೆಯಿಂದ ಹಣ ಕಟ್ ಆಗಿದೆ. ಇನ್ನು ಜಿಬಿಎಯಿಂದ ರಸೀದಿ ಕೂಡ ಸಿಕ್ಕಿಲ್ಲ. ಇದರಿಂದ ಆಸ್ತಿ ಮಾಲೀಕರು ಆತಂಕಗೊಂಡಿದ್ದಾರೆ. ಇನ್ನು ಈ ಬಗ್ಗೆ ವ್ಯಕ್ತಿಯೊಬ್ಬರು ತಮಗಾದ ಸಮಸ್ಯೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
- Web contact
- Updated on: Feb 18, 2026
- 10:42 pm
ಮಹಾಶಿವರಾತ್ರಿ ಹಬ್ಬದ ಎಫೆಕ್ಟ್: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ವಾರಕ್ಕಿಂತ ಹೂವುಗಳ ಬೆಲೆ ಶೇಕಡಾ 40-60ರಷ್ಟು ಮತ್ತು ಹಣ್ಣುಗಳ ಬೆಲೆ ಶೇಕಡಾ 30ರಷ್ಟು ಹೆಚ್ಚಳ ಕಂಡಿದೆ. ಹಬ್ಬದ ಆಚರಣೆಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸಲು ಬಂದ ಗ್ರಾಹಕರು ದುಬಾರಿ ಬೆಲೆಯಿಂದ ಕಂಗಾಲಾಗಿದ್ದಾರೆ.
- Web contact
- Updated on: Feb 13, 2026
- 5:46 pm
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ: ಸರ್ಕಾರಿ ಬಸ್ – ಖಾಸಗಿ ಬಸ್ ಮುಖಾಮುಖಿ ಡಿಕ್ಕಿ
ಮಹದೇಶ್ವರ ಬೆಟ್ಟದ ಜಾತ್ರೆ ಸಮಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹನೂರು ತಾಲೂಕಿನ 4ನೇ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಲ್ಲಿ ಆತಂಕ ಮೂಡಿಸಿದೆ.
- Web contact
- Updated on: Feb 13, 2026
- 4:34 pm
ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಯಶಸ್ವಿಯಾಗಿ ಭೇದಿಸಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅರುಣ್ ಕುಮಾರ್ ಮತ್ತು ಸ್ವಾಮಿ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ₹55,200 ಮೌಲ್ಯದ ಲಾಟರಿ ಟಿಕೆಟ್ಗಳು ಹಾಗೂ ₹22,930 ನಗದು ಸೇರಿದಂತೆ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಲಾಟರಿ ಮಾರಾಟ ನಿಷಿದ್ಧವಾಗಿದ್ದರೂ, ಗಡಿ ಮೂಲಕ ಅಕ್ರಮ ದಂಧೆ ನಡೆಯುತ್ತಿತ್ತು.
- Web contact
- Updated on: Feb 12, 2026
- 8:16 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 10ರ ದಿನಭವಿಷ್ಯ
ಆದಾಯದಲ್ಲಿ ತೀವ್ರ ಏರಿಳಿತ ಹಾಗೂ ಹಣಕಾಸಿನ ವಿಚಾರಕ್ಕೆ ಅಂದುಕೊಂಡಂತೆ ಹರಿವು ಇಲ್ಲ ಎಂದಾದಲ್ಲಿ ‘ಪೈರೈಟ್’ ಉಂಗುರವನ್ನು ಧಾರಣೆ ಮಾಡುವುದರಿಂದ ಅಡೆತಡೆಗಳು ನಿವಾರಣೆ ಆಗಲಿದೆ. ಅದೇ ಸಮಯಕ್ಕೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ.
- Web contact
- Updated on: Feb 10, 2026
- 3:34 am
ಹಲವು ಇಂಧನದ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪ್ರತಿಕ್ರಿಯೆ
ಅಮೆರಿಕ ಈಗಾಗಲೇ ಘೋಷಿಸಿರುವಂತೆ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು ಸ್ಥಗಿತಗೊಳಿಸುತ್ತದೆ ಎಂಬ ಕುರಿತಾಗಿ ಹರಿದಾಡುತ್ತಿರುವ ವರದಿಗಳ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಬಹು ಇಂಧನ ಮೂಲಗಳನ್ನು ನಿರ್ವಹಿಸುತ್ತದೆ. ಭಾರತಕ್ಕೆ ರಷ್ಯಾ ಅಥವಾ ಬೇರಾವುದೋ ಒಂದೇ ದೇಶದಿಂದ ಇಂಧನ ಪೂರೈಕೆಯಾಗುವುದಿಲ್ಲ. ರಾಷ್ಟ್ರೀಯ ಹಿತಾಸಕ್ತಿಯು ಎಲ್ಲಾ ತೈಲ ಖರೀದಿಗಳಿಗೆ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದ್ದಾರೆ.
- Web contact
- Updated on: Feb 9, 2026
- 10:22 pm
ಪೊಲೀಸರ ಸಮಯಪ್ರಜ್ಞೆಯಿಂದ ಬೆಂಗಳೂರಿನಲ್ಲಿ ತಪ್ಪಿದ ಭಾರೀ ದೊಡ್ಡ ದುರಂತ
ಬೆಂಗಳೂರಿನ ಅಕ್ಷಯನಗರದ ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ನಡೆಸಲಾಗುತ್ತಿತ್ತು. ಪೊಲೀಸರ ಸಮಯಪ್ರಜ್ಞೆಯಿಂದ 15 ಜಿಲೆಟಿನ್ ಕಡ್ಡಿಗಳು ಹಾಗೂ 30 ಡಿಟೋನೇಟರ್ಗಳನ್ನು ಜಪ್ತಿ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲಿ ನಡೆಯುತ್ತಿದ್ದ ಈ ಘಟನೆಯಿಂದ ದೊಡ್ಡ ದುರಂತ ತಪ್ಪಿದೆ. ಸೈಟ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಾಂಬ್ ಸ್ಕ್ವಾಡ್ ತನಿಖೆ ನಡೆಸುತ್ತಿದೆ.
- Web contact
- Updated on: Feb 3, 2026
- 8:19 pm
ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ: ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್
ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ವೇದಾಂತ ಭಾರತಿ ಹಾಗೂ ಪರಮ್ ಫೌಂಡೇಶನ್ ನಿಂದ ಆಯೋಜಿಸಲಾದ ನಾಲ್ಕು ದಿನಗಳ ರಾಷ್ಟ್ರಮಟ್ಟದ ಬೃಹತ್ “ವಿವೇಕ ದೀಪ್ತಿ” ಸಮಾವೇಶ ಹಮ್ಮಿಕೊಂಡಿದ್ದು, ಇದರಲ್ಲಿ ವಿಜ್ಞಾನ ಮತ್ತು ಧರ್ಮ ಕುರಿತು ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್ ಮಾತನಾಡಿದರು. ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ ಎಂದು ತಮ್ಮ ಭಾಷಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- Web contact
- Updated on: Jan 29, 2026
- 8:04 pm
ಭಾಸ್ಕರ ಪರ್ವ: ಮಾಧ್ಯಮ ಲೋಕದ ಧೀಮಂತ ಗುರು ಡಾ. ಭಾಸ್ಕರ ಹೆಗಡೆಗೆ ವಿಶಿಷ್ಟ ಬೀಳ್ಕೊಡುಗೆ, ಸನ್ಮಾನ
ಪತ್ರಿಕೋದ್ಯಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಉಜಿರೆ ಎಸ್ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರಿಗೆ ಜನವರಿ 31ರಂದು ‘ಭಾಸ್ಕರ ಪರ್ವ’ ಕಾರ್ಯಕ್ರಮದ ಮೂಲಕ ವಿಶಿಷ್ಟ ಬೀಳ್ಕೊಡುಗೆ ನೀಡಲಾಗುತ್ತಿದೆ.
- Web contact
- Updated on: Jan 29, 2026
- 3:00 pm