ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.
RBI MPC Meet: ಬಡ್ಡಿದರ 25 ಮೂಲಾಂಕಗಳಷ್ಟು ಇಳಿಸಿದ ಆರ್ಬಿಐ; ರಿಪೋ ದರ ಶೇ. 5.25ಕ್ಕೆ ಇಳಿಕೆ
RBI Governor Sanjay Malhotra announces policy decisions of MPC: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದೆ. ಈ ಮೂಲಕ ಬಡ್ಡಿದರ ಶೇ. 5.50ರಷ್ಟು ಇದ್ದದ್ದು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಶುಕ್ರವಾರ ಪ್ರಕಟಿಸಿದ್ದಾರೆ.
- Vijaya Sarathy SN
- Updated on: Dec 5, 2025
- 10:12 am
ಕೇಂದ್ರೀಯ ಅಬಕಾರಿ ತಿದ್ದುಪಡಿ ಮಸೂದೆಗೆ ಸಂಸತ್ ಅಸ್ತು; ರಾಜ್ಯಗಳಿಗೂ ಲಾಭ ಹಂಚಿಕೆ ಎಂದ ನಿರ್ಮಲಾ ಸೀತಾರಾಮನ್
Parliament approves Central Excise Amendment Bill: ಅಬಕಾರಿ ತಿದ್ದುಪಡಿ ಮಸೂದೆಗೆ ಲೋಕಸಭೆ ಬಳಿಕ ರಾಜ್ಯಸಭೆಯೂ ಅನುಮೋದನೆ ನೀಡಿದೆ. ಇದರೊಂದಿಗೆ ಈ ಮಸೂದೆಗೆ ಸಂಸತ್ನ ಅಂಗೀಕಾರ ಸಿಕ್ಕಂತಾಗಿದೆ. ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆಯನ್ನೂ ಇದೇ ವೇಳೆ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಸದ್ಯ ಇರುವ ಕಾಂಪೆನ್ಸೇಶನ್ ಸೆಸ್ ಅವಧಿ ಮುಗಿಯುತ್ತಾ ಬಂದಿದ್ದು ಇದರಿಂದ ಬರಲಿರುವ ಆದಾಯ ಕೊರತೆ ನೀಗಿಸಲು ಅಬಕಾರಿ ಸುಂಕ ನೆರವಿಗೆ ಬರಲಿದೆ.
- Vijaya Sarathy SN
- Updated on: Dec 4, 2025
- 8:01 pm
ಪುಟಿನ್ ಭೇಟಿಯಿಂದ ಭಾರತಕ್ಕೇನು ಲಾಭ? ರಷ್ಯಾದೊಂದಿಗೆ ಅಗಾಧ ವ್ಯಾಪಾರ ಅಂತರ ತಗ್ಗಿಸಲು ಭಾರತಕ್ಕೆ ಸಾಧ್ಯವಾ?
Vladimir Putin 2-day visit to India: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 23ನೇ ಭಾರತ-ರಷ್ಯಾ ವಾರ್ಷಿಕ ಸಮಿಟ್ನಲ್ಲಿ ಪಾಲ್ಗೊಳ್ಳಲು ಬರುತ್ತಿದ್ದಾರೆ. ಅವರ ಜೊತೆ ರಷ್ಯನ್ ಬ್ಯುಸಿನೆಸ್ ಪ್ರತಿನಿಧಿಗಳಿರುವ ದೊಡ್ಡ ನಿಯೋಗವೇ ಇದೆ. ಈ ಸಂದರ್ಭದಲ್ಲಿ ಭಾರತ ಹಾಗೂ ರಷ್ಯಾ ನಡುವೆ ಹಲವು ಎಂಒಯು ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆ ಇದೆ.
- Vijaya Sarathy SN
- Updated on: Dec 4, 2025
- 6:55 pm
ಪಿಎಲ್ಐ ಸ್ಕೀಮ್ ಅಡಿಯಲ್ಲಿ ಸೋಲಾರ್ ಪಿವಿ ಮಾಡ್ಯೂಲ್; ಸೃಷ್ಟಿಯಾದ ಉದ್ಯೋಗಗಳ ಸಂಖ್ಯೆ 43,000
PLI scheme for Solar Module manufacturing creates 43,000 jobs in 9 states: ಪಿಎಲ್ಐ ಸ್ಕೀಮ್ ಅಡಿಯಲ್ಲಿ ಸೋಲಾರ್ ಫೋಟೋ ವೋಲ್ಟಾಯ್ಕ್ ಮಾಡ್ಯೂಲ್ಗಳನ್ನು ತಯಾರಿಸಲು ವಿವಿಧ ಸಂಸ್ಥೆಗಳಿಗೆ ಅನುಮತಿಸಲಾಗಿದೆ. ದೇಶಾದ್ಯಂತ 9 ರಾಜ್ಯಗಳಲ್ಲಿ ಸ್ಥಾಪನೆಯಾಗಿರುವ ಪಿವಿ ಮಾಡ್ಯೂಲ್ ಘಟಕಗಳಿಂದ 43,000 ಉದ್ಯೋಗಗಳು ಸೃಷ್ಟಿಯಾಗಿವೆ. ಗುಜರಾತ್ನಲ್ಲೇ ಅರ್ಧದಷ್ಟು ಉದ್ಯೋಗಗಳು ಸೃಷ್ಟಿಯಾಗಿವೆ. ತಮಿಳುನಾಡಿನಲ್ಲೂ 6,800 ಉದ್ಯೋಗಗಳು ಸೃಷ್ಟಿಯಾಗಿವೆ.
- Vijaya Sarathy SN
- Updated on: Dec 4, 2025
- 5:04 pm
ಟ್ಯಾರಿಫ್ನಿಂದ ರುಪಾಯಿ ಮೌಲ್ಯ ಕುಸಿದಿದೆ, ಆದರೆ, ಕರೆನ್ಸಿ ದುರ್ಬಲಗೊಂಡಿಲ್ಲ: ಎಸ್ಬಿಐ ರಿಸರ್ಚ್
SBI Research report defends Rupee: ಡಾಲರ್ ಎದುರು ರುಪಾಯಿ ಮೌಲ್ಯ ಗುರುವಾರ ಒಂದು ಹಂತದಲ್ಲಿ 90.56ರವರೆಗೂ ಕುಸಿದಿದೆ. ಎಸ್ಬಿಐ ರಿಸರ್ಚ್ ವರದಿ ಪ್ರಕಾರ ರುಪಾಯಿ ಮೌಲ್ಯ ಅತಿಹೆಚ್ಚು ಕುಸಿದಿದೆಯದರೂ, ಕರೆನ್ಸಿ ದುರ್ಬಲಗೊಂಡಿಲ್ಲ. ಅತಿ ಕಡಿಮೆ ಪ್ರಕ್ಷುಬ್ದತೆಯ ಕರೆನ್ಸಿಗಳಲ್ಲಿ ರುಪಾಯಿಯೂ ಒಂದು ಎಂದು ಈ ವರದಿಯಲ್ಲಿ ಹೇಳಲಾಗಿದೆ.
- Vijaya Sarathy SN
- Updated on: Dec 4, 2025
- 4:02 pm
ಚಾಟ್ಜಿಪಿಟಿ ಬಳಸಿ ವಂಚಕನಿಗೇ ಮಂಕುಬೂದಿ ಎರಚಿದ ವ್ಯಕ್ತಿ; ಹೀಗೊಂದು ಮಾದರಿ ಪ್ರಕರಣ
Reddit user shares his experience of stealing from a thief: ಆನ್ಲೈನ್ನಲ್ಲಿ ಆಗಂತುಕರು ವಂಚಿಸಲು ಯತ್ನಿಸುತ್ತಿರುವುದು ಗೊತ್ತಾದಾಗ ಹೆಚ್ಚಿನ ಜನರು ತಪ್ಪಿಸಿಕೊಂಡರೆ ಸಾಕೆಂದು ಸುಮ್ಮನಾಗುತ್ತಾರೆ. ಆದರೆ, ದೆಹಲಿಯ ವ್ಯಕ್ತಿಯೊಬ್ಬರು ವಂಚಕನಿಗೆ ಮಂಕುಬೂದಿ ಯಾಕಿ ದಮ್ಮಯ್ಯ ಎಂದು ಬೇಡಿಕೊಳ್ಳುವಂತೆ ಮಾಡಿದ ಘಟನೆ ಇದೆ. ರೆಡ್ಡಿಟ್ನಲ್ಲಿ ಈ ಅನುಭವ ಹಂಚಿಕೊಂಡಿರುವ ಆ ವ್ಯಕ್ತಿ, ತಾನು ಚಾಟ್ಜಿಪಿಟಿ ಬಳಸಿ ಹೇಗೆ ಯಾಮಾರಿಸಿದೆ ಎಂದು ಘಟನೆ ವಿವರಿಸಿದ್ದಾರೆ. ಬಹಳ ಕುತೂಹಲಕಾರಿಯಾಗಿದೆ ಈ ಘಟನೆ.
- Vijaya Sarathy SN
- Updated on: Dec 4, 2025
- 1:44 pm
ಭಾರತದಲ್ಲಿ ಈ 3 ಬ್ಯಾಂಕುಗಳು ಅತೀ ಸುರಕ್ಷಿತವೆಂದು ಆರ್ಬಿಐ ಘೋಷಣೆ; ಇವುಗಳಿಗೆ ವಿಶೇಷ ಮಾರ್ಗಸೂಚಿ
RBI declares these 3 as safest banks in India: ದೇಶದ ಮೂರು ಅಗ್ರಗಣ್ಯ ಬ್ಯಾಂಕುಗಳನ್ನು ಡೊಮೆಸ್ಟಿಕ್ ಸಿಸ್ಟಮಿಕಲಿ ಇಂಪಾರ್ಟೆಂಟ್ ಬ್ಯಾಂಕುಗಳೆಂದು ಆರ್ಬಿಐ ವರ್ಗೀಕರಿಸಿದೆ. ಎಸ್ಬಿಐ, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕುಗಳು ದೇಶದ ಅತ್ಯಂತ ಸುರಕ್ಷಿತ ಮತ್ತು ಅತಿ ಮುಖ್ಯ ಬ್ಯಾಂಕುಗಳೆನಿಸಿವೆ. ಈ ಮೂರು ಬ್ಯಾಂಕುಗಳಿಗೆ ಆರ್ಬಿಐ ವಿಶೇಷ ಮತ್ತು ಹೆಚ್ಚುವರಿ ಮಾರ್ಗಸೂಚಿ ನೀಡಿದೆ.
- Vijaya Sarathy SN
- Updated on: Dec 4, 2025
- 12:28 pm
Gold Rate Today Bangalore: ಚಿನ್ನದ ಬೆಲೆ ಗ್ರಾಮ್ಗೆ 20 ರೂ ಇಳಿಕೆ
Bullion Market 2025 December 4th: ಇಂದು ಗುರುವಾರ ಚಿನ್ನದ ಬೆಲೆ ತುಸು ಇಳಿತ ಕಂಡರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 11,970 ರೂನಿಂದ 11,950 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,036 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 191 ರೂನಲ್ಲಿ ಮುಂದುವರಿದಿದೆ. ಆದರೆ, ಚೆನ್ನೈ ಮೊದಲಾದ ಕೆಲವೆಡೆ ಬೆಲೆ 201 ರೂನಿಂದ 200 ರೂಗೆ ಇಳಿದಿದೆ.
- Vijaya Sarathy SN
- Updated on: Dec 4, 2025
- 11:26 am
ಜಲಶಕ್ತಿ ಸುಜಲಾಂ ಭಾರತ್: ನೀರಿನ ಸಮಸ್ಯೆ, ಸಂರಕ್ಷಣೆ ಮತ್ತು ಸಮುದಾಯ ಸಹಭಾಗಿತ್ವ
India's Sujalam Sufalam mission: ಭಾರತವು ಜಲ ಸಮಸ್ಯೆ ಎದುರಿಸುತ್ತಿದೆ, ಬೆಂಗಳೂರಿನಂತಹ ನಗರಗಳಲ್ಲಿ ನೀರಿನ ತತ್ವಾರ ಹೆಚ್ಚಾಗಿದೆ. ಇದಕ್ಕೆ ಪರಿಹಾರವಾಗಿ ಜಲಶಕ್ತಿ ಸಚಿವಾಲಯವು ಸುಜಲಾಂ ಭಾರತ್ ವಿಷನ್ ಶೃಂಗಸಭೆ ಆಯೋಜಿಸಿದೆ. ಇದು ನೀರಿನ ಭದ್ರತೆ, ಸಂರಕ್ಷಣೆ, ತಂತ್ರಜ್ಞಾನ ಆಧಾರಿತ ಪರಿಹಾರಗಳು, ಸುಸ್ಥಿರ ಅಭ್ಯಾಸಗಳು ಮತ್ತು ಸಮುದಾಯದ ಸಹಭಾಗಿತ್ವಕ್ಕೆ ಒತ್ತು ನೀಡುತ್ತದೆ. ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಮಿಷನ್ಗಳಂತಹ ಯೋಜನೆಗಳ ಮೂಲಕ ದೇಶಾದ್ಯಂತ ಶುದ್ಧ ನೀರಿನ ವ್ಯವಸ್ಥೆಯನ್ನು ಬಲಪಡಿಸುವುದು ಇದರ ಗುರಿ.
- Vijaya Sarathy SN
- Updated on: Dec 3, 2025
- 7:17 pm
Bharat Taxi: ಸಹಕಾರಿ ತತ್ವದಲ್ಲಿ ರಸ್ತೆಗಿಳಿದ ಭಾರತ್ ಟ್ಯಾಕ್ಸಿ; ರಾಪಿಡೋ, ಓಲಾ, ಊಬರ್ಗೆ ಪ್ರಬಲ ಪೈಪೋಟಿ
Bharat Taxi becomes world's biggest cooperative ride hailing platform: ಸಹಕಾರ ತತ್ವದಲ್ಲಿ ಟ್ಯಾಕ್ಸಿ ಸರ್ವಿಸ್ ನಡೆಸುವ ಭಾರತದ ಮೊದಲ ಕಂಪನಿ ಭಾರತ್ ಟ್ಯಾಕ್ಸಿ. ಇದು 10 ದಿನಗಳಿಂದ ದೆಹಲಿ ಮತ್ತು ಸೌರಾಷ್ಟ್ರದಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಂಡಿದೆ. ಕೇವಲ 10 ದಿನದಲ್ಲಿ 51,000 ಡ್ರೈವರ್ಗಳು ಈ ಪ್ಲಾಟ್ಫಾರ್ಮ್ಗೆ ನೊಂದಾಯಿಸಿದ್ದಾರೆ. ಇಲ್ಲಿ ಡ್ರೈವರ್ಗಳೇ ಮಾಲೀಕರು ಎನ್ನುವುದು ವಿಶೇಷ.
- Vijaya Sarathy SN
- Updated on: Dec 3, 2025
- 5:31 pm
ನೈಸರ್ಗಿಕ ಕೃಷಿಗಾರಿಕೆ ಭಾರತದ ಕೃಷಿ ಕ್ಷೇತ್ರದ ಭವಿಷ್ಯದ ಹಾದಿ: ನರೇಂದ್ರ ಮೋದಿ
PM Narendra Modi's blog post on natural farming: ಭಾರತೀಯ ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಲಿಂಕ್ಡ್ನ್ ಪೋಸ್ಟ್ನಲ್ಲಿ ಬ್ಲಾಗ್ ಬರೆದಿರುವ ಮೋದಿ, ರಾಸಾಯನಿಕ ಬಳಕೆ ನಿಲ್ಲಿಸಿ, ಸಂಪೂರ್ಣ ದೇಸೀಯವಾದ ಕೃಷಿ ವಿಧಾನಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದ್ದಾರೆ. ಪಂಚಗವ್ಯ, ಜೀವಾಮೃತ, ಬೀಜಾಮೃತ, ಮಲ್ಚಿಂಗ್ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸಬಹುದು ಎಂದಿದ್ದಾರೆ.
- Vijaya Sarathy SN
- Updated on: Dec 3, 2025
- 4:21 pm
ರಾಕೆಟ್ ಸ್ಲೆಡ್ ಮೂಲಕ ಏರ್ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಪರೀಕ್ಷಿಸುವ ಸಾಮರ್ಥ್ಯ ಸಾಬೀತುಪಡಿಸಿದ ಭಾರತ
India among very few nations capable of advance testing of fighter jet escape system: ಫೈಟರ್ ಜೆಟ್ ಎಸ್ಕೇಪ್ ಸಿಸ್ಟಂ ಅನ್ನು ಹೈಸ್ಪೀಡ್ ರಾಕೆಟ್ ಸ್ಲೆಡ್ ಮೂಲಕ ಭಾರತ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ಈ ಅಡ್ವಾನ್ಸ್ಡ್ ಸಿಸ್ಟಂ ಅನ್ನು ಅಭಿವೃದ್ಧಿಪಡಿಸಲು ಡಿಆರ್ಡಿಒ ಜೊತೆಗೆ ಎಡಿಎ ಮತ್ತು ಎಚ್ಎಎಲ್ ಸಂಸ್ಥೆಗಳೂ ಕೈ ಜೋಡಿಸಿವೆ. ರಾಕೆಟ್ ಪ್ರೊಪಲ್ಷನ್ ಸಹಾಯದಿಂದ ಎರಡು ಹಳಿಗಳ ಮೇಲೆ ಎಸ್ಕೇಪ್ ಸಿಸ್ಟಂ ಅನ್ನು ಗಂಟೆಗೆ 800 ಕಿಮೀ ವೇಗದಲ್ಲಿ ಚಲಾಯಿಸಿ ಪರೀಕ್ಷೆ ಮಾಡಲಾಯಿತು.
- Vijaya Sarathy SN
- Updated on: Dec 3, 2025
- 3:12 pm