ವಿಕಾಸ್ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.
ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ!
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಐಪಿಎಸ್ ಲೇಔಟ್ ಸರ್ವಿಸ್ ವಿಲ್ಲಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಮಿಗೋಸ್ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿ ಮದ್ಯ ಹಾಗೂ ಹುಕ್ಕಾ ಪಾರ್ಟಿ ಆಯೋಜಿಸಿದ್ದ ದೀಕ್ಷಿತ್ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
- Vikas bm
- Updated on: Jul 29, 2026
- 11:49 am
ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ, MLC ಸ್ಥಾನ ಕೊಡಿಸ್ತೇನೆಂದವನಿಗೆ ₹1.50 ಕೋಟಿ ಕೊಟ್ಟು ಕೈಸುಟ್ಟುಕೊಂಡ ಮಹಿಳೆ!
ಕಾಂಗ್ರೆಸ್ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ ಮಾಡಿರುವ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೆಹಲಿ ಪ್ರವಾಸದ ವೇಳೆ ಅಸಭ್ಯವಾಗಿ ವರ್ತಿಸಿದ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ. ಪ್ರಕರಣದ ಪೂರ್ಣ ಮಾಹಿತಿ ಇಲ್ಲಿದೆ.
- Vikas bm
- Updated on: Jul 29, 2026
- 11:46 am