AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಾಸ್​ ಬಿಎಂ

ವಿಕಾಸ್​ ಬಿಎಂ

ಬೆಂಗಳೂರು ಕ್ರೈಂ ವರದಿಗಾರ - TV9 Kannada

vikas.manjunath@tv9.com

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
ಜೈಲಲ್ಲೂ ಬಿಂದಾಸ್​ ಆಗಿದ್ದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್, ಮಾಜಿ ಎಂಪಿ ಪೊಲೀಸ್ ಕಸ್ಟಡಿಗೆ

ಜೈಲಲ್ಲೂ ಬಿಂದಾಸ್​ ಆಗಿದ್ದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್, ಮಾಜಿ ಎಂಪಿ ಪೊಲೀಸ್ ಕಸ್ಟಡಿಗೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೂ ಕಲರ್​ಫುಲ್​ ಬಟ್ಟೆ ತೊಟ್ಟು, ಅಕ್ರಮವಾಗಿ ಮೊಬೈಲ್​ ಬಳಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಇದೀಗ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ. ಎರಡ್ಮೂರು ಪ್ರಕರಣಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಇದೀಗ ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕಣ ಸಂಕಷ್ಟ ತಂದಿಟ್ಟಿದೆ.

  • Vikas bm
  • Updated on: Sep 8, 2026
  • 3:39 pm
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ

ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಬೆಂಕಿ ಅನಾಹುತ ಸಂಭವಿಸಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಬಳಿ ನಿಂತಿದ್ದ ಹಳೆಯ ಖಾಲಿ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಬೋಗಿ ಭಾಗಶಃ ಸುಟ್ಟುಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತವಾಗಲೀ, ಯಾವುದೇ ಪ್ರಾಣಹಾನಿಯಾಗಲೀ ಸಂಭವಿಸಿಲ್ಲ.

  • Vikas bm
  • Updated on: Sep 7, 2026
  • 7:07 am
ಬೆಂಗಳೂರು: ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿಬಿದ್ದ ಯುವಕ

ಬೆಂಗಳೂರು: ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿಬಿದ್ದ ಯುವಕ

ಅಗರ ಕೆರೆ ಆವರಣದಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಗೊಲ್ಡನ್ ಕುಮಾರ್ ಬಂಧನ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಗಮನಕ್ಕೆ ಬಂದ ಘಟನೆ ಸಾರ್ವಜನಿಕರ ಗಮನಕ್ಕೆ ತರಲಾಯಿತು. ಮಹಿಳೆಯರ ಖಾಸಗಿತನ ಮತ್ತು ಸುರಕ್ಷತೆಗೆ ಧಕ್ಕೆ ತಂದ ಈ ಕೃತ್ಯದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಮೂಡಿದೆ.

  • Vikas bm
  • Updated on: Sep 3, 2026
  • 12:16 pm
ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು

ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು

ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿಚಾರಣೆ ಮುಂದುವರಿದಿದೆ. ಪರೀಕ್ಷಾ ಪ್ರಕ್ರಿಯೆಗಳ ಉಸ್ತುವಾರಿಯಾಗಿದ್ದ ಜ್ಞಾನೇಂದ್ರ, ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಸ್ಟ್ರಾಂಗ್ ರೂಮ್ ಲೋಪದ ಆರೋಪ ಎದುರಿಸುತ್ತಿದ್ದಾರೆ. ಸಿಐಡಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಕಾರಣ ಅವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳು ಡಿಲೀಟ್ ಆಗಿರುವ ಬಗ್ಗೆಯೂ ತನಿಖೆ ನಡೆಯುತ್ತಿದೆ.

  • Vikas bm
  • Updated on: Aug 30, 2026
  • 1:30 pm
ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಜೂಜಾಟವಾಡಿ ವಂಚಿಸ್ತಿದ್ದ ಗ್ಯಾಂಗ್ ಖಾಕಿ ಬಲೆಗೆ: ಐವರು ಅರೆಸ್ಟ್​​, 50 ಲಕ್ಷ ಮೌಲ್ಯದ ಸ್ಕ್ಯಾನರ್‌ ಸೇರಿ ಹಲವು ವಸ್ತುಗಳು ಜಪ್ತಿ

ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಜೂಜಾಟವಾಡಿ ವಂಚಿಸ್ತಿದ್ದ ಗ್ಯಾಂಗ್ ಖಾಕಿ ಬಲೆಗೆ: ಐವರು ಅರೆಸ್ಟ್​​, 50 ಲಕ್ಷ ಮೌಲ್ಯದ ಸ್ಕ್ಯಾನರ್‌ ಸೇರಿ ಹಲವು ವಸ್ತುಗಳು ಜಪ್ತಿ

ಎಲೆಕ್ಟ್ರಾನಿಕ್ ಡಿವೈಸ್ ಹಾಗೂ ಸ್ಕ್ಯಾನರ್‌ಗಳನ್ನು ಬಳಸಿ ಇಸ್ಪೀಟ್ ಜೂಜಾಟದಲ್ಲಿ ವಂಚಿಸುತ್ತಿದ್ದ ಗ್ಯಾಂಗ್‌ನ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 50 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು ಸೇರಿ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಮತ್ತೊಂದೆಡೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು, ಬರೋಬ್ಬರಿ 40 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

  • Vikas bm
  • Updated on: Aug 25, 2026
  • 5:04 pm
ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಒಂದು ಕೆಜಿ ಚಿನ್ನಾಭರಣ ಕಳ್ಳತನ

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಒಂದು ಕೆಜಿ ಚಿನ್ನಾಭರಣ ಕಳ್ಳತನ

ಬೆಂಗಳೂರಿನ ಕಟ್ಟಿಗೆನಹಳ್ಳಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯ ಮನೆಯಲ್ಲಿ 1 ಕೆಜಿ ಚಿನ್ನಾಭರಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗಲು ಯತ್ನಿಸಿದ್ದ ನೇಪಾಳಿ ಗ್ಯಾಂಗ್‌ನ ನಾಲ್ವರನ್ನು ಯಲಹಂಕ ಪೊಲೀಸರು ನೇಪಾಳ ಬಾರ್ಡರ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 55 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿಗಳಿಗೆ ಹುಡುಕಾಟ ಮುಂದುವರಿದಿದೆ.

  • Vikas bm
  • Updated on: Aug 25, 2026
  • 6:40 pm
ಕದ್ದ ಹಣದಲ್ಲೇ ಸ್ನೇಹಿತರಿಗೆ ಪಾರ್ಟಿ, ಬಡವರಿಗೆ ಸಹಾಯ! ಖತರ್ನಾಕ್ ಮನೆಗಳ್ಳ ಅರೆಸ್ಟ್

ಕದ್ದ ಹಣದಲ್ಲೇ ಸ್ನೇಹಿತರಿಗೆ ಪಾರ್ಟಿ, ಬಡವರಿಗೆ ಸಹಾಯ! ಖತರ್ನಾಕ್ ಮನೆಗಳ್ಳ ಅರೆಸ್ಟ್

ಕದ್ದ ಹಣದಲ್ಲಿ ಬಡವರಿಗೆ ನೆರವಾಗಿ, ಸ್ನೇಹಿತರಿಗೆ ಪಾರ್ಟಿ ನೀಡುತ್ತಿದ್ದ ಖತರ್ನಾಕ್ ಮನೆಗಳ್ಳ ಶಿವರಸನ್‌ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ನೆಲೆಸಿದ್ದ ಈತನಿಂದ 8 ಮನೆಗಳ್ಳತನ ಪ್ರಕರಣ ಭೇದಿಸಲಾಗಿದ್ದು, 196 ಗ್ರಾಂ ಚಿನ್ನ ಹಾಗೂ 4 ಕೆಜಿ ಬೆಳ್ಳಿ ಸೇರಿದಂತೆ ₹36 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

  • Vikas bm
  • Updated on: Aug 25, 2026
  • 12:21 pm
ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಚಾಮರಾಜನಗರದ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಆಗಸ್ಟ್ 14ರಂದು ನಡೆದ ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಮೃತರ ವಿರುದ್ಧ ಕಳ್ಳಬೇಟೆಯ ಆರೋಪವಿದ್ದು, ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಈ ಆದೇಶದಿಂದ ಪ್ರಕರಣದ ಮಹತ್ವ ಹೆಚ್ಚಿದೆ.

  • Vikas bm
  • Updated on: Aug 25, 2026
  • 10:41 am
9 ಗಂಟೆಗಳ ಶೋಧ, ಸಿಗದ ದಾಖಲೆಗಳು: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?

9 ಗಂಟೆಗಳ ಶೋಧ, ಸಿಗದ ದಾಖಲೆಗಳು: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?

ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 9 ಗಂಟೆಗಳ ಶೋಧನೆ ನಡೆಸಿದರೂ, ಮಹತ್ವದ ದಾಖಲೆಗಳು ಸಿಕ್ಕಿಲ್ಲ. ದಾಳಿಯ ಸುಳಿವು ಅರಿತು ಜ್ಞಾನೇಂದ್ರ ಕುಮಾರ್ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಡಿವೈಸ್‌ಗಳೊಂದಿಗೆ ಪೂರ್ವನಿಯೋಜಿತವಾಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

  • Vikas bm
  • Updated on: Aug 24, 2026
  • 7:14 pm
ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣ: 24 ಗಂಟೆಯೊಳಗೆ ರೌಡಿಶೀಟರ್ ಸೇರಿ 6 ಮಂದಿ ಬಂಧನ

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣ: 24 ಗಂಟೆಯೊಳಗೆ ರೌಡಿಶೀಟರ್ ಸೇರಿ 6 ಮಂದಿ ಬಂಧನ

ಬೆಂಗಳೂರಿನ ಮಡಿವಾಳ ಅಂಡರ್‌ಪಾಸ್‌ ಬಳಿ ಶನಿವಾರ ರಾತ್ರಿ ನಡೆದ ಸುಹೇಲ್ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಘಟನೆ ನಡೆದ 24 ಗಂಟೆಯೊಳಗೆ ರೌಡಿಶೀಟರ್ ಆದಿಲ್ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿದ ಬಳಿಕ ಬಿಡದಿಗೆ ತೆರಳಿದ್ದರು ಎನ್ನಲಾಗಿದ್ದು, ಅಲ್ಲಿಂದ ಲಾರಿ ಮೂಲಕ ಮುಂಬೈಗೆ ಪರಾರಿಯಾಗಲು ಪ್ಲಾನ್ ಮಾಡಿದ್ದರು ಎಂಬುದು ತಿಳಿದುಬಂದಿದೆ.

  • Vikas bm
  • Updated on: Aug 24, 2026
  • 9:56 am
ದರ್ಶನ್ ಕೇಸ್: ಸಾಕ್ಷಿಗೆ ಬೆದರಿಕೆ ಹಾಕಿದ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜತೆ ಪ್ರಭಾವಿ ಮಹಿಳೆ ನಂಟು

ದರ್ಶನ್ ಕೇಸ್: ಸಾಕ್ಷಿಗೆ ಬೆದರಿಕೆ ಹಾಕಿದ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜತೆ ಪ್ರಭಾವಿ ಮಹಿಳೆ ನಂಟು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಪುನೀತ್, ವೇಣು, ಸುಹಾಸ್​ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಪುನೀತ್ ಜೊತೆ ಇನ್ನಿಬ್ಬರು ಆರೋಪಿಗಳಾದ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಸಂಪರ್ಕದಲ್ಲಿ ಇರುವುದು ದೃಢಪಟ್ಟಿದೆ. ಅಲ್ಲದೇ ಪ್ರಭಾವಿ ಮಹಿಳೆಯೊಬ್ಬರ ನಂಟು ಇರುವ ಶಂಕೆ ಕೂಡ ಮೂಡಿದೆ.

  • Vikas bm
  • Updated on: Aug 23, 2026
  • 11:52 am
ಪೊಲೀಸ್ ಅಧಿಕಾರಿಯ  ಅರೆಬೆತ್ತಲೆ ವಿಡಿಯೋ ವೈರಲ್: ಇದರ ಹಿಂದಿನ ಸೂತ್ರಧಾರಿಗಳ ಹೆಸರು ಬಹಿರಂಗ

ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್: ಇದರ ಹಿಂದಿನ ಸೂತ್ರಧಾರಿಗಳ ಹೆಸರು ಬಹಿರಂಗ

ಜೈಲಿನ ಸಶಸ್ತ್ರ ಕಾವಲು ಕಾಯಬೇಕಾದ ವ್ಯವಸ್ಥೆಯ ಕತ್ತಲ ಕೋಣೆಯಿಂದ ತೂರಿಬಂದ ಒಂದು ವೀಡಿಯೋ ತುಣುಕು ಇಡೀ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಖಾಕಿ ಸಮವಸ್ತ್ರದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನ ಖೈದಿಯೊಂದಿಗೆ ಇರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ಸಂಬಂಧ ಲೇಡಿ ಪೊಲೀಸ್ ದೂರು ದಾಖಲಿಸಿದ್ದಾರೆ.

  • Vikas bm
  • Updated on: Aug 20, 2026
  • 3:27 pm