ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.
ಸ್ಟಾರ್ ಹೋಟೆಲ್ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ, ಲಿಫ್ಟಿಕ್, ಕ್ರಿಮ್ ಎಷ್ಟು ಸೇಫ್?
ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್ ಮಾಡಲು ಲ್ಯಾಬ್ಗೆ ಕಳುಹಿಸಿದ್ದಾರೆ
- Vinay Kashappanavar
- Updated on: Aug 10, 2026
- 2:50 pm
ಬೆಂಗಳೂರಿನಲ್ಲಿ ಮುಂದುವರಿದ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕಾರ್ಯಚರಣೆ
Food department raids: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಇಂದು ಕೂಡ ದಾಳಿ ಮುಂದುವರೆದಿದ್ದು, ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಿದರು.
- Vinay Kashappanavar
- Updated on: Aug 9, 2026
- 10:01 pm
ಹೋಟೆಲ್ಗಳ ಬೆನ್ನಲ್ಲೇ ನಕಲಿ ಕಾಸ್ಮೆಟಿಕ್ಸ್ ಮೇಲೆ ಸರ್ಕಾರದ ಹದ್ದಿನ ಕಣ್ಣು!
ಬೆಂಗಳೂರಿನ ಹೋಟೆಲ್ಗಳ ಮೇಲಿನ ದಾಳಿಯ ಬೆನ್ನಲ್ಲೇ, ನಗರದಲ್ಲಿ ಮಾರಾಟವಾಗುತ್ತಿರುವ ನಕಲಿ ಹಾಗೂ ಕಳಪೆ ಕಾಸ್ಮೆಟಿಕ್ಸ್ ಉತ್ಪನ್ನಗಳ ಮೇಲೆ ಹದ್ದಿನ ಕಣ್ಣಿಡಲು ಡ್ರಗ್ಸ್ ಕಂಟ್ರೋಲ್ ಬೋರ್ಡ್ ಮುಂದಾಗಿದೆ. ಲಿಪ್ಸ್ಟಿಕ್, ಸೆರಮ್, ಫೇಶಿಯಲ್ ಕ್ರೀಮ್ಗಳ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಟೆಸ್ಟ್ಗೆ ಕಳುಹಿಸಲು ಪಟ್ಟಿ ಸಿದ್ಧಪಡಿಸಲಾಗಿದೆ. ಈ ಕುರಿತು ಎಚ್ಚರಿಕೆ ನೀಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವವರನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ.
- Vinay Kashappanavar
- Updated on: Aug 9, 2026
- 1:12 pm
ಬೆಂಗಳೂರು ಸ್ಟಾರ್ ಹೋಟೆಲ್ಗಳ ಬಂಡವಾಳ ಬಯಲು: 26 ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ
ಬೆಂಗಳೂರಿನ 26 ಪ್ರಮುಖ ಸ್ಟಾರ್ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ನಿಯಮ ಉಲ್ಲಂಘನೆಯಾಗಿರುವುದು ಇಂದಿನ ದಾಳಿಯಲ್ಲೂ ಪತ್ತೆಯಾಗಿದೆ. ಅವಧಿ ಮೀರಿದ ಆಹಾರ, ಕಳಪೆ ಮಾಂಸ, ಮೀನು, ತರಕಾರಿ, ಅಶುಚಿ ಹಾಗೂ FSSAI ನಿಯಮಬಾಹಿರ ಲೇಬಲಿಂಗ್ ಕಂಡುಬಂದಿದೆ. ಅಧಿಕಾರಿಗಳು ಆಹಾರ ಮಾದರಿಗಳನ್ನು ಲ್ಯಾಬ್ಗೆ ಕಳುಹಿಸಿ, ತಪ್ಪಿತಸ್ಥ ಹೋಟೆಲ್ಗಳ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ.
- Vinay Kashappanavar
- Updated on: Aug 8, 2026
- 12:13 pm
ಬೆಂಗಳೂರಿನಲ್ಲಿ ಮೊದಲ ಬಾರಿಗೆ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ: ಏನಿದರ ವಿಶೇಷತೆ?
ಸಿಲಿಕಾನ್ ಸಿಟಿ ಬೆಂಗಳೂರಿನ ಇಕ್ಕಟ್ಟಿನ ರಸ್ತೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದರೆ ತಕ್ಷಣಕ್ಕೆ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳಕ್ಕೆ ತಲುಪುವುದೇ ದೊಡ್ಡ ಸವಾಲು. ಅದರಲ್ಲೂ ಪ್ರಮುಖ ಮಾರುಕಟ್ಟೆಗಳ ಇಕ್ಕಟ್ಟಿನ ಪ್ರದೇಶದಂತಹ ಕಿರಿದಾದ ರಸ್ತೆಗಳಲ್ಲಿ ಬೆಂಕಿ ನಂದಿಸಲು ನೀರಿನ ಕೊರತೆ ಸಮಸ್ಯೆಯಾಗುತ್ತಿತ್ತು. ಇದೀಗ ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಇಂಟಿಗ್ರೇಟೆಡ್ ಫೈರ್ ಹೈಡ್ರಂಟ್ ವ್ಯವಸ್ಥೆಯುಳ್ಳ ವೈಟ್ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.
- Vinay Kashappanavar
- Updated on: Aug 5, 2026
- 8:21 pm
ಮದ್ಯಪ್ರಿಯರಿಗೆ ಬಿಗ್ ಶಾಕ್: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಪ್ರಮುಖ ಬ್ರ್ಯಾಂಡ್ ಬ್ಯಾನ್
ಭಾರತೀಯ ಆಹಾರ ಸುರಕ್ಷತಾ ಪ್ರಾಧಿಕಾರ (FSSAI) ಓಲ್ಡ್ ಮಾಂಕ್ ಸೇರಿ ಜನಪ್ರಿಯ ಮದ್ಯ ಬ್ರ್ಯಾಂಡ್ಗಳಲ್ಲಿ ಕೃತಕ ಫ್ಲೇವರ್ ಮತ್ತು ಬಣ್ಣಗಳನ್ನು ಪತ್ತೆ ಹಚ್ಚಿದೆ. 'ಏಜ್ಡ್' ಮದ್ಯ ಎಂದು ತಪ್ಪು ಮಾಹಿತಿ ನೀಡಿ ಗ್ರಾಹಕರನ್ನು ವಂಚಿಸುತ್ತಿರುವುದು ಪ್ರಯೋಗಾಲಯ ತಪಾಸಣೆಯಲ್ಲಿ ದೃಢಪಟ್ಟಿದೆ. FSSAI ಈ ಬ್ರ್ಯಾಂಡ್ಗಳನ್ನು ನಿರ್ಬಂಧಿಸಿದ್ದು, ಮದ್ಯ ತಯಾರಿಕಾ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೆ ಮುಂದಾಗಿದೆ. ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
- Vinay Kashappanavar
- Updated on: Aug 5, 2026
- 6:59 pm
ಸಿಎಂ ಡಿಕೆಶಿ ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ಮಾಜಿ ಸಂಸದೆ ರಮ್ಯಾ
ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಮಾಜಿ ಸಂಸದೆ, ನಟಿ ರಮ್ಯಾ ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕನಿಷ್ಟ 2-3 ಮಹಿಳಾ ಸಚಿವರಾದರೂ ಇರಬೇಕಿತ್ತು ಎಂದು ಅವರು ಹೇಳಿದ್ದು, ಇದು ಕೇವಲ ತನ್ನ ಅಭಿಪ್ರಾಯ ಎಂಬುದನ್ನೂ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
- Vinay Kashappanavar
- Updated on: Aug 4, 2026
- 10:23 pm
ಮಹಿಳೆಯರಿಗಾಗಿ ‘ಋತುತಾರೆ’ ಯೋಜನೆ: ಆರೋಗ್ಯ ಸಚಿವ ಯು.ಟಿ.ಖಾದರ್ ಘೋಷಣೆ
ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಮೆನೋಪಾಸ್ (ಋತುಬಂಧ) ಸಮಸ್ಯೆಗಳು ಹಾಗೂ ಮಾನಸಿಕ ಒತ್ತಡ ನಿರ್ವಹಣೆಗಾಗಿ ಆರೋಗ್ಯ ಇಲಾಖೆಯು 'ಋತುತಾರೆ' ಎಂಬ ನೂತನ ಯೋಜನೆಯನ್ನು ಘೋಷಿಸಿದೆ. ನಟಿ ರಮ್ಯಾ ಈ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆರೋಗ್ಯ ಸೌಧದಲ್ಲಿ ನಡೆದ ಪ್ರಮುಖ ಸಂವಾದದ ನಂತರ ಪ್ರಕಟಿಸಲಾದ ಈ ಯೋಜನೆಯ ಮುಖ್ಯ ವಿವರಗಳು ಇಲ್ಲಿವೆ.
- Vinay Kashappanavar
- Updated on: Aug 4, 2026
- 7:45 pm
ಪೊಲೀಸ್ ನೇಮಕಾತಿ ಪರೀಕ್ಷೆ ಯಶಸ್ವಿ: OMR, ಪ್ರಶ್ನೆ ಪತ್ರಿಕೆ ಸಂಖ್ಯೆ ಒಂದೇ ಆಗಿರಬೇಕಿಲ್ಲ ಎಂದ ಕೆಇಎ
Karnataka Police Constable Exam: ರಾಜ್ಯಾದ್ಯಂತ ಇಂದು ನಡೆದ ಪೊಲೀಸ್ ನೇಮಕಾತಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹೇಳಿದ್ದಾರೆ. OMR ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಒಂದೇ ಆಗಿರಬೇಕಿಲ್ಲ ಎಂದು ಕೆಇಎ ಸ್ಪಷ್ಟನೆ ನಿಡಿದೆ.
- Vinay Kashappanavar
- Updated on: Aug 2, 2026
- 9:36 pm
ಭತ್ತ ಬಿತ್ತನೆ ಕುಂಠಿತವಾಗಿರುವ ಬೆನ್ನಲ್ಲೇ ಅಕ್ಕಿ ದರ ಗಗನಕ್ಕೆ: ಶೇ.35ರಷ್ಟು ಬೆಲೆ ಹೆಚ್ಚಳ
Rice Price Hike: ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ಭತ್ತದ ಬಿತ್ತನೆ ಕುಂಠಿತಗೊಂಡಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಅಕ್ಕಿ ದರ ಏಕಾಏಕಿ ಶೇ. 35ರಷ್ಟು ಏರಿಕೆಯಾಗುವ ಮೂಲಕ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಸೋನಾ ಮಸೂರಿ ಸೇರಿದಂತೆ ಪ್ರಮುಖ ಅಕ್ಕಿ ತಳಿಗಳ ಬೆಲೆ ದಾಖಲೆ ಮಟ್ಟದಲ್ಲಿ ಹೆಚ್ಚಿದ್ದು, ವ್ಯಾಪಾರಿಗಳೂ ಸಂಕಷ್ಟ ಎದುರಿಸುತ್ತಿದ್ದಾರೆ.
- Vinay Kashappanavar
- Updated on: Aug 2, 2026
- 11:29 am
ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್ಐವಿ ಸೋಂಕು ವದಂತಿ ಸುಳ್ಳು: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ
ರಾಜ್ಯದಲ್ಲಿ ಹೆಚ್ಐವಿ (HIV) ಸೋಂಕಿನ ಬಗ್ಗೆ ಹರಡಿದ್ದ ವದಂತಿಗಳನ್ನು ಆರೋಗ್ಯ ಇಲಾಖೆ ತಳ್ಳಿಹಾಕಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಡ್ಡಾಯ ಪರೀಕ್ಷೆ ಇಲ್ಲ, 7,000 ಸೋಂಕಿತರ ಸುದ್ದಿ ಸುಳ್ಳು ಎಂದು ಸಚಿವ ಯುಟಿ ಖಾದರ್ ಸ್ಪಷ್ಟಪಡಿಸಿದ್ದಾರೆ. ಗರ್ಭಿಣಿಯರು ಮತ್ತು ರಕ್ತದಾನಿಗಳಿಗೆ ಮಾತ್ರ ಪರೀಕ್ಷೆ. 56,000 ಸೋಂಕಿತರು ಚಿಕಿತ್ಸೆಯಿಂದ ಹೊರಗುಳಿದಿದ್ದು, ಅವರನ್ನು ಪತ್ತೆಹಚ್ಚುವ ಪ್ರಯತ್ನ ನಡೆಯುತ್ತಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು.
- Vinay Kashappanavar
- Updated on: Aug 1, 2026
- 6:06 pm
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ್ಚರಿಕೆ
ಪೊಲೀಸ್ ನೇಮಕಾತಿ ಪರೀಕ್ಷೆಯ ಪಾರದರ್ಶಕತೆಗೆ ಕೆಇಎ ಬದ್ಧವಾಗಿದೆ ಎಂದು ನಿರ್ದೇಶಕ ಎಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಅಭ್ಯರ್ಥಿಗಳ ಓಎಂಆರ್ ಪ್ರತಿಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದಾಗಿ ತಿಳಿಸಿದ್ದಾರೆ. ಆಧಾರ್ ದುರ್ಬಳಕೆ, ಅನಗತ್ಯ ಸಾಮಾಜಿಕ ಜಾಲತಾಣ ಪೋಸ್ಟ್ಗಳ ವಿರುದ್ಧ ಎಚ್ಚರಿಕೆ ನೀಡಿದ್ದು, ಪರೀಕ್ಷಾ ಕೇಂದ್ರಕ್ಕೆ ಬೇಗ ತಲುಪಿ, ಸರಿಯಾದ ಡ್ರೆಸ್ ಕೋಡ್ ಪಾಲಿಸುವಂತೆ ಸಲಹೆ ನೀಡಿದ್ದಾರೆ.
- Vinay Kashappanavar
- Updated on: Jul 31, 2026
- 7:29 pm