ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.
NEET Exam: ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ; ‘NEET ಬೇಡ, ನಮ್ಮ CET ಬೇಕು’ ಸಹಿ ಅಭಿಯಾನ!
ನೀಟ್ ಪರೀಕ್ಷೆಯ ಸರಣಿ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕರ್ನಾಟಕದಲ್ಲಿ 'NEET ಬೇಡ, K-CET ಬೇಕು' ಸಹಿ ಅಭಿಯಾನ ತೀವ್ರಗೊಂಡಿದೆ. ಚಿತ್ರ ಸಾಹಿತಿ ಕವಿರಾಜ್ ನೇತೃತ್ವದಲ್ಲಿ ಒಂದೇ ದಿನದಲ್ಲಿ 2000ಕ್ಕೂ ಹೆಚ್ಚು ಸಹಿ ಸಂಗ್ರಹವಾಗಿದ್ದು, ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ ಮೂಲಕವೇ ವೈದ್ಯಕೀಯ ಸೀಟು ಹಂಚಿಕೆ ನಡೆಸಬೇಕೆಂದು ಸಾಹಿತಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
- Vinay Kashappanavar
- Updated on: Jul 26, 2026
- 12:23 pm
ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ಗಳಿಗೆ ದತ್ತು ನೀಡಲು ಸರ್ಕಾರದ ನಿರ್ಧಾರ: ಶಿಕ್ಷಣ ತಜ್ಞರು, ಪೋಷಕರಿಂದ ವ್ಯಾಪಕ ವಿರೋಧ
ಕರ್ನಾಟಕ ಸರ್ಕಾರದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್/ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ನಿರ್ಧಾರಕ್ಕೆ ಶಿಕ್ಷಣ ತಜ್ಞರು, ಪೋಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದು ಸಾರ್ವಜನಿಕ ಶಿಕ್ಷಣದ ಆಶಯಕ್ಕೆ ವಿರುದ್ಧವಾಗಿದ್ದು, ಲಾಭಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುವ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಸರ್ಕಾರವೇ ಶಾಲೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ನೀಡಬೇಕು, ಖಾಸಗೀಕರಣವನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿ ಉಗ್ರ ಹೋರಾಟಕ್ಕೆ ಎಚ್ಚರಿಕೆ ನೀಡಿದ್ದಾರೆ.
- Vinay Kashappanavar
- Updated on: Jul 25, 2026
- 1:38 pm
ಉಸಿರಾಟ ಸಂಬಂಧಿ ಕಾಯಿಲೆಗಳು: ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ; ಮಾರ್ಗಸೂಚಿ ಪ್ರಕಟ
Bengaluru pigeon feeding regulations: ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಈ ಮಹತ್ವದ ಕ್ರಮ ಕೈಗೊಂಡಿದೆ. ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಪ್ರದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವುದಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ.
- Vinay Kashappanavar
- Updated on: Jul 23, 2026
- 4:32 pm
ಎಚ್ಚರ! ನೀವು ತಿನ್ನುವ ಕರಿದ ತಿಂಡಿ ಎಣ್ಣೆಯಲ್ಲೇ ಅಪಾಯಕಾರಿ ಟ್ರಾನ್ಸ್ ಫ್ಯಾಟ್, 40ಕ್ಕೂ ಹೆಚ್ಚು ಕಡೆ ಅಸುರಕ್ಷಿತ ಎಣ್ಣೆ ಪತ್ತೆ
ಬೆಂಗಳೂರು ಸೇರಿದಂತೆ ವಿವಿಧ ಆಹಾರ ಮಳಿಗೆಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ಮಾದರಿಗಳ ಪರೀಕ್ಷೆಯಲ್ಲಿ 40ಕ್ಕೂ ಹೆಚ್ಚು ಕಡೆ ಅಸುರಕ್ಷಿತ ಗುಣಮಟ್ಟ ಪತ್ತೆಯಾಗಿದೆ. ಸಂಬಂಧಿಸಿದ ಮಾಲೀಕರಿಗೆ ನೋಟಿಸ್ ನೀಡಿ 28.91 ಲಕ್ಷ ರೂ.ದಂಡ ವಿಧಿಸಿರುವ ಆಹಾರ ಸುರಕ್ಷತಾ ಇಲಾಖೆ ಇದೀಗ ಹೊಸ ಮಾರ್ಗಸೂಚಿಗೆ ಮುಂದಾಗಿದೆ.
- Vinay Kashappanavar
- Updated on: Jul 23, 2026
- 11:02 am
ಆಯುಷ್ಮಾನ್ ಭಾರತ್ ಯೋಜನೆ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪರಿಷ್ಕರಣೆಗೆ ಮುಂದಾದ ಸರ್ಕಾರ
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ಪ್ಯಾಕೇಜ್ ದರ ಪರಿಷ್ಕರಣೆ ಹಾಗೂ ಖಾಸಗಿ ಆಸ್ಪತ್ರೆಗಳ ಸಂಖ್ಯೆಯನ್ನು 600ಕ್ಕೂ ಹೆಚ್ಚು ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ದರ ಪರಿಷ್ಕರಣೆ ಹಾಗೂ ಖಾಸಗಿ ಆಸ್ಪತ್ರೆಗಳ ಸಂಖ್ಯೆ ವಿಸ್ತರಣೆಯಿಂದ ಬಡ ರೋಗಿಗಳಿಗೆ ಚಿಕಿತ್ಸೆ ಸುಲಭವಾಗುವ ನಿರೀಕ್ಷೆ ಮೂಡಿದೆ.
- Vinay Kashappanavar
- Updated on: Jul 23, 2026
- 7:35 am
ಬೆಂಗಳೂರಿಗೆ ಪಿಒಪಿ ಗಣೇಶ ಮೂರ್ತಿಗಳ ಎಂಟ್ರಿ: ಪ್ರಧಾನಿ ಮೋದಿ ಕರೆಗೂ ಇಲ್ಲ ಬೆಲೆ!
POP Ganesha Idols: ಸದ್ಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರಧಾನಿ ಮೋದಿ ಅವರು ಪರಿಸರ ಸ್ನೇಹಿ ಗಣೇಶ ಬಳಕೆಗೆ ಕರೆ ನೀಡಿದ್ದರು. ಇನ್ನು ಇತ್ತೀಚೆಗೆ ಮಾಜಿ ಸಚಿವ ಸುರೇಶ್ ಕುಮಾರ್ ಪಿಒಪಿ ಮೂರ್ತಿಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದರು. ಇದೆಲ್ಲದರ ಮಧ್ಯೆ ಇದೀಗ ಬೆಂಗಳೂರು ಮಾರುಕಟ್ಟೆಗೆ POP ಗಣೇಶ ಮೂರ್ತಿಗಳು ಲಗ್ಗೆ ಇಟ್ಟಿವೆ.
- Vinay Kashappanavar
- Updated on: Jul 22, 2026
- 7:12 pm
ಶಾಲಾ ಮಕ್ಕಳಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ: ಜಂಕ್ ಫುಡ್ ವಿರುದ್ಧ ಸಮರ ಸಾರಿದ ಆಹಾರ ಸುರಕ್ಷಿತ ಇಲಾಖೆ
ಮಕ್ಕಳಲ್ಲಿ ಬೊಜ್ಜು ಮತ್ತು ಮಧುಮೇಹದಂತಹ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತೆ ಇಲಾಖೆಯು ಶಾಲಾ-ಕಾಲೇಜುಗಳ ಕ್ಯಾಂಟೀನ್ಗಳು ಸೇರಿ ಶಿಕ್ಷಣ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಂಕ್ ಫುಡ್ ಮಾರಾಟಕ್ಕೆ ಕಡಿವಾಣ ಹಾಕಲು ಹೊಸ ಮಾರ್ಗಸೂಚಿ ಪ್ರಕಟಿಸಲು ಸಿದ್ಧತೆ ನಡೆಸಿದೆ. ಆ ಕುರಿತ ಮಾಹಿತಿ ಇಲ್ಲಿದೆ.
- Vinay Kashappanavar
- Updated on: Jul 21, 2026
- 6:36 pm
ನೈತಿಕ ಶಿಕ್ಷಣಕ್ಕೆ ಹೊಸ ರೂಪ: ಲೈಂಗಿಕ, ಆರೋಗ್ಯ ಶಿಕ್ಷಣ ಸೇರಿ ಹಲವು ವಿಷಯಗಳ ಪರಿಚಯಿಸಲು ನಿರ್ಧಾರ
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮೌಲ್ಯಗಳನ್ನು ಧಾರೆ ಎರೆಯಲು ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇದೇ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣಕ್ಕೆ ಹೊಸ ರೂಪ ನೀಡಲು ಇಲಾಖೆ ಮುಂದಾಗಿದ್ದು, ನೈತಿಕ ಪಠ್ಯದ ಅಡಿಯಲ್ಲಿ ಲೈಂಗಿಕ, ಆರೋಗ್ಯ ಶಿಕ್ಷಣ ಸೇರಿದಂತೆ ಹಲವು ಹೊಸ ವಿಷಯಗಳನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ.
- Vinay Kashappanavar
- Updated on: Jul 20, 2026
- 8:41 pm
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ, ಎಬೋಲಾ ಹರಡುವಿಕೆ ತಡೆಗೆ ಏರ್ಪೋರ್ಟ್ಗಳಲ್ಲಿ ಸ್ಕ್ರೀನಿಂಗ್: ಯುಟಿ ಖಾದರ್ ಘೋಷಣೆ
ಕರ್ನಾಟಕದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಪ್ರತಿಯೊಂದು ಕ್ಷೇತ್ರದ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ. ಎಬೋಲಾ ಸೋಂಕಿನ ಆತಂಕ ಹಿನ್ನೆಲೆಯಲ್ಲಿ ಕಾಂಗೋ, ಉಗಾಂಡಾ ಸೇರಿದಂತೆ ಕೆಲವು ಆಫ್ರಿಕಾ ದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
- Vinay Kashappanavar
- Updated on: Jul 20, 2026
- 2:00 pm
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ, ಅವರ ದಾಂಪತ್ಯ ಆದರ್ಶ: ಬ್ರಹ್ಮಾಂಡ ಗುರೂಜಿ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಬ್ರಹ್ಮಾಂಡ ಗುರೂಜಿ ಸಂತಾಪ ವ್ಯಕ್ತಪಡಿಸಿದ್ದು, ದೇವೇಗೌಡರ ಯಶಸ್ಸಿನ ಹಿಂದಿದ್ದ ಮನೆಯ ಮಹಾಲಕ್ಷ್ಮಿ ಹಾಗೂ ಪರಮ ದೈವಭಕ್ತೆ ಚೆನ್ನಮ್ಮನವರ ಆದರ್ಶ ದಾಂಪತ್ಯವನ್ನು ಇಂದಿನ ಪೀಳಿಗೆ ಕಲಿಯಬೇಕೆಂದು ಹೇಳಿದ್ದಾರೆ. ಮನೆಯ ಮಕ್ಕಳು, ಮೊಮ್ಮಕ್ಕಳ ಯಶಸ್ಸು ಕೀರ್ತಿ ಪಡೆಯಲು ಮತ್ತು ದೇವೇಗೌಡರನ್ನು ಮೂರು ಬಾರಿ ಬದುಕಿಸಿದ್ದು ಕೂಡ ಇದೇ ಚೆನ್ನಮ್ಮನವರು ಎಂಬುದನ್ನು ನೆನಪಿಸಿಕೊಂಡಿದ್ದಾರೆ.
- Vinay Kashappanavar
- Updated on: Jul 19, 2026
- 12:14 pm
ಎಸ್ಐಆರ್ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳು-ಪೋಷಕರ ಪ್ರತಿಭಟನೆ
ಬೆಂಗಳೂರಿನ ಶಾಲೆಗಳ ಶಿಕ್ಷಕರನ್ನು ಎಸ್ಐಆರ್ ಪ್ರಕ್ರಿಯೆಗೆ ನಿಯೋಜಿಸಿರುವ ಕಾರಣ ತರಗತಿಗಳು ನಡೆಯುತ್ತಿಲ್ಲ. ಮಾಗಡಿ ರಸ್ತೆಯ ಗುರುಕುಲ್ ಇಂಟರ್ನ್ಯಾಷನಲ್ ಶಾಲೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಕ್ಷಕರು ಎಸ್ಐಆರ್ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಪಾಠ ಪ್ರವಚನಗಳಿಗೆ ಅಡ್ಡಿಯಾಗಿದ್ದು, ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Vinay Kashappanavar
- Updated on: Jul 18, 2026
- 2:37 pm
ಶಾಲೆಗಳಲ್ಲಿ ದೈಹಿಕ ಶಿಕ್ಷೆಗೆ ಸಂಪೂರ್ಣ ಬ್ರೇಕ್? ಕಟ್ಟುನಿಟ್ಟಿನ ಆದೇಶ ಹೊರಡಿಸಲು ಶಿಕ್ಷಣ ಇಲಾಖೆಗೆ ತಜ್ಞರ ಒತ್ತಾಯ
ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೈಹಿಕ ಶಿಕ್ಷೆ ಮತ್ತು ಮಾನಸಿಕ ಕಿರುಕುಳದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಲೆಗಳಲ್ಲಿ ಯಾವುದೇ ರೀತಿಯ ದೈಹಿಕ ಶಿಕ್ಷೆ ಹಾಗೂ ಅವಮಾನಕಾರಿ ಶಿಕ್ಷೆಗಳನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಶಿಕ್ಷಣ ಇಲಾಖೆಗೆ ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ತಜ್ಞರಿಂದಲೂ ಆಗ್ರಹ ವ್ಯಕ್ತವಾಗಿದೆ.
- Vinay Kashappanavar
- Updated on: Jul 17, 2026
- 8:18 am