ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.
ಸ್ವಾತಂತ್ರ್ಯೋತ್ಸವ ಅಂಗವಾಗಿ HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹೆಚ್ಎಂಟಿ ಸಂಸ್ಥೆಯು ಗಂಡಭೇರುಂಡ ಚಿಹ್ನೆ ಮತ್ತು ಕನ್ನಡ ಅಂಕಿಗಳಿರುವ ವಿಶೇಷ ವಾಚ್ಗಳನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಜಾಲಹಳ್ಳಿ ಕೇಂದ್ರದಲ್ಲಿ ಈ ಅನನ್ಯ ವಾಚ್ಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. 2 ಕಿಲೋಮೀಟರ್ ಉದ್ದದ ಕ್ಯೂನಲ್ಲಿ ನಿಂತು ಜನ ತಮ್ಮ ಮೆಚ್ಚಿನ ಮೇಡ್ ಇನ್ ಇಂಡಿಯಾ ವಾಚ್ಗಳನ್ನು ಖರೀದಿಸುತ್ತಿದ್ದಾರೆ, ಇದು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಸಾರುತ್ತಿದೆ.
- Vinay Kashappanavar
- Updated on: Aug 15, 2026
- 10:13 pm
ಸಾಲು ಸಾಲು ಅಕ್ರಮ ಆರೋಪ: ಕೆಪಿಎಸ್ಸಿಗೆ ಮೇಜರ್ ಸರ್ಜರಿ!
KPSC Officer Transfers: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಲು ಸಾಲು ಅಕ್ರಮ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೆಪಿಎಸ್ಸಿಗೆ ಮೇಜರ್ ಸರ್ಜರಿ ಮಾಡಿದೆ. ಕೆಪಿಎಸ್ಸಿಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
- Vinay Kashappanavar
- Updated on: Aug 12, 2026
- 5:52 pm
Gutkha and Pan Masala Ban: ಕರ್ನಾಟಕದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ
ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳನ್ನು ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಆಗಸ್ಟ್ 10ರಂದು ಹೊರಡಿಸಿದ ಅಧಿಸೂಚನೆಯನ್ವಯ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ವ್ಯಸನಮುಕ್ತ ಕರ್ನಾಟಕಕ್ಕೆ ಸಹಕರಿಸಲು ಮನವಿ ಮಾಡಿದೆ.
- Vinay Kashappanavar
- Updated on: Aug 13, 2026
- 5:51 pm
ಟ್ಯಾಟೂ ಪ್ರಿಯರಿಗೆ ಶಾಕ್: ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಯುವಜನತೆಯಲ್ಲಿ ಟ್ಯಾಟೂ ಕ್ರೇಜ್ ಹೆಚ್ಚಿದ್ದರೂ, ಅಸುರಕ್ಷಿತ ವಿಧಾನಗಳು ಮತ್ತು ರಾಸಾಯನಿಕಯುಕ್ತ ಶಾಯಿಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಎಚ್ಐವಿ, ಹೆಪಟೈಟಿಸ್, ಚರ್ಮದ ಕ್ಯಾನ್ಸರ್ ಮತ್ತು ಅಲರ್ಜಿಗಳಂತಹ ಮಾರಣಾಂತಿಕ ರೋಗಗಳು ಹರಡುತ್ತಿವೆ. ಈ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮತ್ತು ಡ್ರಗ್ ಕಂಟ್ರೋಲ್ ಬೋರ್ಡ್ ಟ್ಯಾಟೂ ಪಾರ್ಲರ್ಗಳು ಮತ್ತು ಇಂಕ್ ಬಳಕೆಯನ್ನು ನಿಯಂತ್ರಿಸಲು ಹೊಸ ಕಾನೂನು ಮತ್ತು ಮಾರ್ಗಸೂಚಿಗಳನ್ನು ತರಲು ಮುಂದಾಗಿವೆ. ಟ್ಯಾಟೂ ತಯಾರಕರಿಗೆ ಮತ್ತು ಕಲಾವಿದರಿಗೆ ಸೂಕ್ತ ಮಾನದಂಡಗಳ ಅಗತ್ಯವಿದೆ.
- Vinay Kashappanavar
- Updated on: Aug 12, 2026
- 1:09 pm
ಹೋಟೆಲ್, ಪಬ್- ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಿಗೆ ಹೊಸ ಮಾರ್ಗಸೂಚಿ: ಉಲ್ಲಂಘಿಸಿದ್ರೆ ಕ್ರಮದ ಎಚ್ಚರಿಕೆ
ಕಳೆದ ನಾಲ್ಕೈದು ದಿನಗಳಿಂದ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಬೆಂಗಳೂರಿನ ಕೆಲ ಸ್ಟಾರ್ ಹೋಟೆಲ್ಗಳ ಮೇಲೆ ದಾಳಿ ಮಾಡಿದ್ದು, ಈ ವೇಲೆ ಅವಧಿ ಮುಗಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಕೊಳೆತ ತರಕಾರಿ, ಮಾಂಸ ಸಿಕ್ಕಿದ್ದು, ಈ ಮೂಲಕ ಆಹಾರ ಸುರಕ್ಷಾ ನಿಯಮಗಳನ್ನ ಉಲ್ಲಂಘನೆ ಮಾಡಿವೆ. ಹೀಗಾಗಿ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
- Vinay Kashappanavar
- Updated on: Aug 11, 2026
- 8:23 pm
ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟ: ಎಫ್ಎಸ್ಎಸ್ಎಐ ನಿಯಮ ಮೀರಿದ ಇಂದಿರಾ ಕ್ಯಾಂಟೀನ್ ಘಟಕಗಳಿಗೆ ನೋಟಿಸ್
ಬೆಂಗಳೂರಿನ ಇಂದಿರಾ ಕ್ಯಾಂಟೀನ್ಗಳ ಮೂರು ಕೇಂದ್ರ ಅಡುಗೆ ಘಟಕಗಳ ಮೇಲೆ FSSAI ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ, ಕಳಪೆ ಲೇಬಲಿಂಗ್ ಮತ್ತು ಅಶುಚಿತ್ವ ಕಂಡುಬಂದಿದೆ. ಗೊಟ್ಟಿಗೆರೆ ಕ್ಯಾಂಟೀನ್ ಗೋಡೌನ್ ಸೀಲ್ ಮಾಡಲಾಗಿದ್ದು, ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಾರ್ವಜನಿಕರಿಗೆ ಸುರಕ್ಷಿತ ಆಹಾರ ಖಚಿತಪಡಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಎಚ್ಚರಿಕೆ ನೀಡಿದೆ.
- Vinay Kashappanavar
- Updated on: Aug 11, 2026
- 7:15 pm
ಇಂದಿರಾ ಕ್ಯಾಂಟೀನ್ಗಳ ಅಡುಗೆ ಮನೆಗಳ ಮೇಲೆ ದಾಳಿ: ಇಲಿ, ಹೆಗ್ಗಣಗಳ ಕಂಡು ಹೌಹಾರಿದ ಅಧಿಕಾರಿಗಳು!
ಬೆಂಗಳೂರಿನಲ್ಲಿ ಪ್ರಮುಖ ಪಂಚತಾರಾ ಹೋಟೆಲ್ಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ (FSSAI) ಅಧಿಕಾರಿಗಳು, ಇದೀಗ ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ಗಳ ಮೇಲೆಯೂ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಅಡುಗೆ ಮನೆಗಳಲ್ಲಿನ ಅಸ್ವಚ್ಛತೆ ಹಾಗೂ ಇಲಿ-ಹೆಗ್ಗಣಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.
- Vinay Kashappanavar
- Updated on: Aug 11, 2026
- 1:35 pm
ಆ.13ರ ಕರ್ನಾಟಕ ಬಂದ್ಗೆ ಕ್ಯಾಮ್ಸ್ನಿಂದ ನೈತಿಕ ಬೆಂಬಲ ಮಾತ್ರ: ಖಾಸಗಿ ಶಾಲೆಗಳಿಗಿಲ್ಲ ರಜೆ!
ಗುರುವಾರ ಕರೆ ನೀಡಿರುವ ಕರ್ನಾಟಕ ಬಂದ್ಗೆ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಕ್ಯಾಮ್ಸ್ ಸಂಘಟನೆ ಸ್ಪಷ್ಟಪಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ಬಂದ್ನಿಂದ ಹೊರಗುಳಿದಿರುವ ಖಾಸಗಿ ಶಾಲೆಗಳು ನೈತಿಕ ಬೆಂಬಲ ಮಾತ್ರ ನೀಡಲಿವೆ. ಶಿಕ್ಷಕರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿ ಧರಿಸುವ ಮೂಲಕ ನೈತಿಕ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ಕ್ಯಾಮ್ಸ್ ತಿಳಿಸಿದೆ.
- Vinay Kashappanavar
- Updated on: Aug 11, 2026
- 1:14 pm
ಪೋಷಕರೇ ಎಚ್ಚರ: ಬೆಂಗಳೂರಿನ ಹವಾಮಾನ ವೈಪರೀತ್ಯಕ್ಕೆ ಮಕ್ಕಳಲ್ಲಿ ಹೆಚ್ಚುತ್ತಿದೆ ವೈರಲ್ ಸೋಂಕು!
ಬೆಂಗಳೂರಿನಲ್ಲಿ ಮಳೆ ಹಾಗೂ ಬಿಸಿಲಿನ ಮಿಶ್ರಿತ ಹವಾಮಾನದಿಂದಾಗಿ ಮಕ್ಕಳಲ್ಲಿ ವೈರಲ್ ಜ್ವರ, ಕೆಮ್ಮು, ನೆಗಡಿ ಹಾಗೂ ಫುಡ್ ಪಾಯ್ಸನ್ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿವೆ. ಇದರ ನಡುವೆ ತೀವ್ರ ಸ್ವರೂಪದ ಚಂಡಿಪುರ ವೈರಸ್ ಭೀತಿ ಕೂಡ ಎದುರಾಗಿದ್ದು, ಮಕ್ಕಳಲ್ಲಿ ಹಠಾತ್ ಜ್ವರ ಅಥವಾ ಪ್ರಜ್ಞೆ ತಪ್ಪುವ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಸಚಿವರು ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.
- Vinay Kashappanavar
- Updated on: Aug 11, 2026
- 8:41 am
ಸ್ಟಾರ್ ಹೋಟೆಲ್ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ, ಲಿಫ್ಟಿಕ್, ಕ್ರಿಮ್ ಎಷ್ಟು ಸೇಫ್?
ಬೆಂಗಳೂರಿನಲ್ಲಿ ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್ ಮಾಡಲು ಲ್ಯಾಬ್ಗೆ ಕಳುಹಿಸಿದ್ದಾರೆ
- Vinay Kashappanavar
- Updated on: Aug 10, 2026
- 2:50 pm
ಬೆಂಗಳೂರಿನಲ್ಲಿ ಮುಂದುವರಿದ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕಾರ್ಯಚರಣೆ
Food department raids: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಇಂದು ಕೂಡ ದಾಳಿ ಮುಂದುವರೆದಿದ್ದು, ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಿದರು.
- Vinay Kashappanavar
- Updated on: Aug 9, 2026
- 10:01 pm
ಹೋಟೆಲ್ಗಳ ಬೆನ್ನಲ್ಲೇ ನಕಲಿ ಕಾಸ್ಮೆಟಿಕ್ಸ್ ಮೇಲೆ ಸರ್ಕಾರದ ಹದ್ದಿನ ಕಣ್ಣು!
ಬೆಂಗಳೂರಿನ ಹೋಟೆಲ್ಗಳ ಮೇಲಿನ ದಾಳಿಯ ಬೆನ್ನಲ್ಲೇ, ನಗರದಲ್ಲಿ ಮಾರಾಟವಾಗುತ್ತಿರುವ ನಕಲಿ ಹಾಗೂ ಕಳಪೆ ಕಾಸ್ಮೆಟಿಕ್ಸ್ ಉತ್ಪನ್ನಗಳ ಮೇಲೆ ಹದ್ದಿನ ಕಣ್ಣಿಡಲು ಡ್ರಗ್ಸ್ ಕಂಟ್ರೋಲ್ ಬೋರ್ಡ್ ಮುಂದಾಗಿದೆ. ಲಿಪ್ಸ್ಟಿಕ್, ಸೆರಮ್, ಫೇಶಿಯಲ್ ಕ್ರೀಮ್ಗಳ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಟೆಸ್ಟ್ಗೆ ಕಳುಹಿಸಲು ಪಟ್ಟಿ ಸಿದ್ಧಪಡಿಸಲಾಗಿದೆ. ಈ ಕುರಿತು ಎಚ್ಚರಿಕೆ ನೀಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವವರನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ.
- Vinay Kashappanavar
- Updated on: Aug 9, 2026
- 1:12 pm