ಬಳ್ಳಾರಿ: ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕುಡಿಯುವ ನೀರಿನಲ್ಲಿ ಹುಳುಗಳು ಪತ್ತೆಯಾಗಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸಭೆಯಲ್ಲಿ ಅಧಿಕಾರಿಗಳಿಗೆ ಕಲುಷಿತ ನೀರನ್ನು ಪ್ರದರ್ಶಿಸಿ, ಕುಡಿಯುವ ನೀರು ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿದ್ದಾರೆ. ಅಧಿಕಾರಿಗಳನ್ನು ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
- Vinayak Badiger
- Updated on: Sep 16, 2026
- 11:31 am
ಗಣೇಶ ಮೂರ್ತಿ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ಕಾಲುವೆಗೆ ಉರುಳಿದ ಟ್ರ್ಯಾಕ್ಟರ್; ಕೂದಲೆಳೆ ಅಂತರದಲ್ಲಿ ಇಬ್ಬರು ಪಾರು
ಅದ್ಧೂರಿಯಾಗಿ ಗಣೇಶ ಉತ್ಸವ ಆಚರಣೆ ವೇಳೆಯೇ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನಗುಡಿಯಲ್ಲಿ ಅವಘಡವೊಂದು ಸಂಭವಿಸಿದೆ. ವಿದ್ಯುತ್ ತಂತಿಗೆ ಬಿದಿರು ತಾಗಿ ಶಾರ್ಟ್ ಸರ್ಕ್ಯೂಟ್ ಆಗಿ ಟ್ರ್ಯಾಕ್ಟರ್ ಕಾಲುವೆಗೆ ಉರುಳಿದೆ. ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Vinayak Badiger
- Updated on: Sep 14, 2026
- 7:49 pm
ಬಳ್ಳಾರಿ ಚಲೋ ಪಾದಯಾತ್ರೆ: ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್!
ಬಳ್ಳಾರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ವೇಳೆ ಪೂರ್ವಾನುಮತಿ ಇಲ್ಲದೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
- Vinayak Badiger
- Updated on: Sep 13, 2026
- 1:07 pm
ಬಳ್ಳಾರಿಯಲ್ಲಿ ಕೊಲ್ಕತ್ತಾ ಕಲಾವಿದರ ಕೈಚಳಕ: 20 ಅಡಿ ಎತ್ತರದ ರಾಧಾಕೃಷ್ಣ ಮಾದರಿ ಗಣಪತಿಗಳಿಗೆ ಫುಲ್ ಡಿಮ್ಯಾಂಡ್
ಗಣಿನಾಡು ಬಳ್ಳಾರಿಯಲ್ಲಿ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಜಿಲ್ಲಾಡಳಿತದ ಸೂಚನೆಯಂತೆ ಮಣ್ಣಿನ ಗಣಪತಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಪಿಒಪಿ ಮೂರ್ತಿಗಳಿಗೆ ಸಂಪೂರ್ಣ ನಿಷೇಧವಿದೆ. ಕೊಲ್ಕತ್ತಾ ಮಾದರಿ, ರಾಧಾಕೃಷ್ಣ, ಪುರಿ ಜಗನ್ನಾಥ, ಪರಿಸರ ಜಾಗೃತಿ ಮೂರ್ತಿಗಳು ಜನರ ಕಣ್ಮನ ಸೆಳೆಯುತ್ತಿವೆ. ಸಮುದಾಯ ಗಣಪತಿಗಳು ಮತ್ತು ಮನೆ ಗಣಪತಿಗಳ ಮೂಲಕ ಹಬ್ಬವನ್ನು ಸಡಗರದಿಂದ ಆಚರಿಸಲು ಬಳ್ಳಾರಿ ಜನರು ಸಿದ್ಧರಾಗಿದ್ದಾರೆ.
- Vinayak Badiger
- Updated on: Sep 11, 2026
- 6:17 pm
ಲೈವ್ ವಿಡಿಯೋ: ಕೂಡ್ಲಿಗಿಯಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ‘ಪ್ರಜಾಸೇವಾ ಅಭಿಯಾನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲು ಸಹಕಾರ’ ಎಂಬ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
- Vinayak Badiger
- Updated on: Sep 5, 2026
- 12:17 pm
ಬಳ್ಳಾರಿಯ ಅಂಗನವಾಡಿಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ಅವಧಿ ಮೀರಿದ ಫುಡ್ ಕಿಟ್ ವಿತರಣೆ: ಗಂಭೀರ ಆರೋಪ
ಬಳ್ಳಾರಿಯ ಅಂಗನವಾಡಿಯೊಂದರಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಅವಧಿ ಮೀರಿದ ಪೌಷ್ಟಿಕ ಆಹಾರದ ಕಿಟ್ಗಳನ್ನು ವಿತರಿಸಿರುವ ಆರೋಪ ಕೇಳಿಬಂದಿದೆ. ಮೇ ತಿಂಗಳಿನಲ್ಲಿ ತಯಾರಾದ ಆಹಾರ ಸಾಮಗ್ರಿಗಳ ಬಳಕೆ ಅವಧಿ ಮುಗಿದಿದ್ದರೂ ನೀಡಲಾಗಿದ್ದು, ಕಳಪೆ ಆಹಾರದಿಂದ ಆರೋಗ್ಯ ಹದಗೆಟ್ಟರೆ ಯಾರು ಹೊಣೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
- Vinayak Badiger
- Updated on: Sep 4, 2026
- 1:20 pm
ಬಳ್ಳಾರಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಮುಜುಗರ: ಪ್ರವಚನ ಮಧ್ಯದಲ್ಲೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀಗಳು
ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಿದ್ಧ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ತೀವ್ರ ಮುಜುಗರ ಉಂಟಾಗಿದೆ. ಮೈಕ್ ತೊಂದರೆ ಮತ್ತು ವೇದಿಕೆಯಲ್ಲಿನ ಗದ್ದಲದಿಂದ ಶ್ರೀಗಳು ತಮ್ಮ ಆಶೀರ್ವಚನವನ್ನು ಅರ್ಧಕ್ಕೆ ನಿಲ್ಲಿಸಿ ನಿರ್ಗಮಿಸಿದರು. ರಾಜಕೀಯ ನಾಯಕರ ಆಗಮನದ ವೇಳೆ ಆದ ಹೆಚ್ಚುವರಿ ಗಲಾಟೆಯಿಂದ ಭಕ್ತರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ವ್ಯವಸ್ಥಾಪಕರ ನಿರ್ಲಕ್ಷ್ಯದ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.
- Vinayak Badiger
- Updated on: Aug 11, 2026
- 7:55 pm
ಬಳ್ಳಾರಿಯಲ್ಲಿ ಪಾಳು ಬಿದ್ದ ₹4 ಕೋಟಿ ಹಾಸ್ಟೆಲ್! ವಿದ್ಯಾರ್ಥಿಗಳ ಬಳಕೆಗೆ ಸಿಗದ ವಸತಿ ನಿಲಯ
Ballari News: ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಬಾಲಕರ ಹಾಸ್ಟೆಲ್ 2023ರಲ್ಲಿ ಉದ್ಘಾಟನೆಯಾದರೂ ಇದುವರೆಗೆ ವಿದ್ಯಾರ್ಥಿಗಳ ಬಳಕೆಗೆ ಸಿಕ್ಕಿಲ್ಲ. ಕಟ್ಟಡ ಪಾಳು ಬೀಳುತ್ತಿದ್ದು, 12 ಲಕ್ಷ ರೂ. ಮೌಲ್ಯದ ವಿದ್ಯುತ್ ಉಪಕರಣಗಳ ಕಳ್ಳತನವೂ ನಡೆದಿದೆ. ಕಟ್ಟಡವನ್ನು ಮತ್ತಷ್ಟು ಹಾಳಾಗಲು ಬಿಡದೆ, ವಿದ್ಯಾರ್ಥಿಗಳಿಗೆ ಒದಗಿಸಿಕೊಡುವಂತೆ ಆಗ್ರಹ ವಗಯಕ್ತವಾಗಿದೆ.
- Vinayak Badiger
- Updated on: Aug 10, 2026
- 1:03 pm
‘ನಾಗೇಂದ್ರರನ್ನು ಪುನಃ ಮಂತ್ರಿ ಮಾಡಿದ್ದು ಇದೇ ಕಾರಣಕ್ಕೆ’: ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸಿ ಈ ಹಿಂದೆ ರಾಜೀನಾಮೆ ನೀಡಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ ಅವರ ನೂತನ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಳಿಸಿರುವುದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ಈ ನಡೆಗೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.
- Vinayak Badiger
- Updated on: Aug 4, 2026
- 7:47 pm
ಕೈಕೊಟ್ಟ ಮಳೆ: ಬಳ್ಳಾರಿ, ವಿಜಯನಗರದಿಂದ ಬರೋಬ್ಬರಿ 13,000 ಮಂದಿ ಗುಳೆ?
ಮುಂಗಾರು ಮಳೆ ಅಭಾವ ಮತ್ತು ಸ್ಥಳೀಯವಾಗಿ ಕೆಲಸ ಸಿಗದ ಕಾರಣ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ನೂರಾರು ತಾಂಡಾಗಳಿಂದ ಸುಮಾರು 13,000ಕ್ಕೂ ಹೆಚ್ಚು ಜನರು ಬೆಂಗಳೂರು, ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಗುಳೆ ಹೊರಟಿದ್ದಾರೆ ಎನ್ನಲಾಗಿದೆ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳನ್ನು ಮಾಡಲು ಸಾಧ್ಯವಿಲ್ಲ. ಇದುವರೆಗೂ ಬಿತ್ತನೆ ಕಾರ್ಯವೂ ಆರಂಭವಾಗಿಲ್ಲ. ಇತ್ತ ಉದ್ಯೋಗ ಖಾತ್ರಿ ಯೋಜನೆಗಳಡಿಯೂ ಸಮರ್ಪಕವಾಗಿ ಕೆಲಸ ಸಿಗದ ಕಾರಣ ಈ ನಿರ್ಧಾರ ಅನಿವಾರ್ಯ ಎಂಬ ಮಾತುಗಳು ಕೇಳಿಬಂದಿವೆ.
- Vinayak Badiger
- Updated on: Jul 22, 2026
- 6:27 pm
ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ
ಬಳ್ಳಾರಿಯಲ್ಲಿ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ರಿಸೆಪ್ಷನ್ ಮುಗಿದ ಕೆಲವೇ ಗಂಟೆಗಳಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.
- Vinayak Badiger
- Updated on: Jul 17, 2026
- 12:10 pm
ಅಕ್ರಮ ಗಣಿಗಾರಿಕೆ ಕೇಸ್: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ?
ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಮತ್ತು ಗಡಿ ಅತಿಕ್ರಮಣದ ಕುರಿತು ವರದಿ ನೀಡಲು ಕೇಂದ್ರ ಪರಿಸರ ಸಚಿವಾಲಯವು ರಾಜ್ಯ ಅರಣ್ಯ ಇಲಾಖೆಗೆ ಸೂಚನೆ ನೀಡಿರುವುದರಿಂದ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೆಲ ತಿಂಗಳ ಹಿಂದೆ ನಿವೃತ್ತ ನ್ಯಾಯಾಧೀಶ ಸುಧಾಂಶ ಧುಲಿಯಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೋನ್ ಮೂಲಕ ಸರ್ವೇ ನಡೆಸಿತ್ತು. ಇದು ನೀಡಿದ್ದ ವರದಿಯನ್ನು ದೂರುದಾರ ಟಪಾಲ್ ಗಣೇಶ ಕೇಂದ್ರ ಸರ್ಕಾರದ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ್ದರು.
- Vinayak Badiger
- Updated on: Jul 5, 2026
- 7:16 am