AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕ ಬಡಿಗೇರ್​

ವಿನಾಯಕ ಬಡಿಗೇರ್​

Author - TV9 Kannada

vinayak.badiger@tv9.com
ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು!

ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು!

ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅಪರೂಪದ ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆ ಮೂಲಕ 2 ವರ್ಷದ ಮಗುವಿಗೆ ಮರುಜೀವ ನೀಡಿದ್ದಾರೆ. 'ಪೈಕಾ' ರೋಗದಿಂದ ಬಳಲುತ್ತಿದ್ದ ಮಗುವಿನ ಹೊಟ್ಟೆಯಲ್ಲಿದ್ದ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಮತ್ತು ರಬ್ಬರ್ ಬ್ಯಾಂಡ್‌ಗಳನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ. ತೀವ್ರ ಹೊಟ್ಟೆನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಮಗು ಈಗ ಅಪಾಯದಿಂದ ಪಾರಾಗಿದ್ದು, ವೈದ್ಯರ ತಂಡದ ಈ ಸಾಧನೆ ಶ್ಲಾಘನೀಯ.

ಬಳ್ಳಾರಿ: ಜಿಂದಾಲ್‌ನಿಂದ ಕೋಟಿ ಕೋಟಿ ತೆರಿಗೆ ಬಾಕಿ; ವಸೂಲಿಗೆ ಸ್ಥಳೀಯ ಆಡಳಿತ ಸರ್ಕಸ್

ಬಳ್ಳಾರಿ: ಜಿಂದಾಲ್‌ನಿಂದ ಕೋಟಿ ಕೋಟಿ ತೆರಿಗೆ ಬಾಕಿ; ವಸೂಲಿಗೆ ಸ್ಥಳೀಯ ಆಡಳಿತ ಸರ್ಕಸ್

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ JSW ಜಿಂದಾಲ್ ಕಂಪನಿ 2018ರಿಂದ ಇಲ್ಲಿಯವರೆಗೆ 20 ಕೋಟಿಗೂ ಹೆಚ್ಚು ಆಸ್ತಿ ಮತ್ತು ಅಭಿವೃದ್ಧಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಹಲವು ನೋಟಿಸ್‌ಗಳ ಹೊರತಾಗಿಯೂ ತೆರಿಗೆ ಪಾವತಿಸದ ಕಂಪನಿ ವಿರುದ್ಧ ಸ್ಥಳೀಯ ಆಡಳಿತ ಅಸಮಾಧಾನಗೊಂಡಿದ್ದು, ಸದ್ಯ ತೆರಿಗೆ ವಸೂಲಿ ಸವಾಲಾಗಿದೆ.

ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್, 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್, 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಉಪವಿಭಾಗದಲ್ಲಿ ನಡೆದ ಮನೆಗಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ನಾಲ್ಕು ಪ್ರಕರಣಗಳಲ್ಲಿ ಕಳುವಾಗಿದ್ದ 14.06 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ, ಉತ್ತಮ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಇಲಾಖೆ ವತಿಯಿಂದ ಪ್ರಶಂಸೆ ವ್ಯಕ್ತಪಡಿಸಲಾಗಿದೆ.

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ! ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಅಂದರ್

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ! ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಅಂದರ್

ಬಳ್ಳಾರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಬಂಧನಕ್ಕೊಳಗಾಗಿದ್ದಾರೆ. ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗಳನ್ನು ಅಡ್ಡಗಟ್ಟಿ, ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಮೂರು ಲಕ್ಷ ರೂ. ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ದೂರಿನ ಮೇರೆಗೆ ಮೋಕಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು: ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು: ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಸಾವಿಗೆ ವೈದ್ಯರು ಹಾಗೂ ಜೈಲು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕೈದಿ ಏಕಾಏಕಿ ಸಾವಿಗೀಡಾಗಿರುವುದು ಸಾಕಷ್ಟು ಅನುಮಾನಕ್ಕೂ ಎಡೆಮಾಡಿ ಕೊಟ್ಟಿದೆ.

ತುಂಗಭದ್ರಾ ಜಲಾಶಯದಲ್ಲಿ ಡೆಡ್ ಸ್ಟೋರೇಜ್ ಆತಂಕ: ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಭೀತಿ

ತುಂಗಭದ್ರಾ ಜಲಾಶಯದಲ್ಲಿ ಡೆಡ್ ಸ್ಟೋರೇಜ್ ಆತಂಕ: ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಭೀತಿ

ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ 10 ಟಿಎಂಸಿಗೆ ಕುಸಿದಿದ್ದು, ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವುದು ಟಿಬಿ ಮಂಡಳಿಗೆ ಸವಾಲಾಗಿ ಪರಿಣಮಿಸಿದೆ. ಇನ್ನೊಂದೆಡೆ 54 ಕೋಟಿ ರೂ. ವೆಚ್ಚದಲ್ಲಿ 33 ಕ್ರಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಪೂರ್ಣಗೊಂಡಿದ್ದು, ಮೇ 15ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಮದುವೆ ಮಂಟಪಕ್ಕೇ ನುಗ್ಗಿ ಬಂಗಾರ, ಬೆಳ್ಳಿ ಕದ್ದ ಕಳ್ಳ: ಎಸ್ಕೇಪ್​​ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಮದುವೆ ಮಂಟಪಕ್ಕೇ ನುಗ್ಗಿ ಬಂಗಾರ, ಬೆಳ್ಳಿ ಕದ್ದ ಕಳ್ಳ: ಎಸ್ಕೇಪ್​​ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ವಿಜಯನಗರದ ಹೊಸಪೇಟೆಯ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ಬ್ಯಾಗ್‌ನಲ್ಲಿದ್ದ ಚಿನ್ನ, ಬೆಳ್ಳಿ ಆಭರಣ, ನಗದು, ಮೊಬೈಲ್‌ಗಳನ್ನು ಕಳ್ಳನೊಬ್ಬ ದೋಚಿದ್ದಾನೆ. ಕಳ್ಳ ಬ್ಯಾಗ್​​ ಸಮೇತ ಎಸ್ಕೇಪ್​​ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ನಡೆದು 2 ದಿನಗಳಾದರೂ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು!

ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು!

ವಿಜಯನಗರ ಜಿಲ್ಲೆಯ ಕಾನಹೊಸಹಳ್ಳಿಯಲ್ಲಿ ಹೃದಯ ಕಲಕುವ ಘಟನೆ ನಡೆದಿದೆ. ಹೊಸ ಮನೆಯ ಕನಸು ಹೊತ್ತಿದ್ದ 54 ವರ್ಷದ ಬಸವರಾಜಪ್ಪ ಅವರು ತಮ್ಮ ನಿರ್ಮಾಣ ಹಂತದಲ್ಲಿದ್ದ ಮನೆ ಬಳಿ ಗೋಡೆ ಕುಸಿದು ಮೃತಪಟ್ಟಿದ್ದಾರೆ. ಪೈಪ್‌ಲೈನ್ ಅಳವಡಿಸಲು ತೋಡಿದ್ದ ಪಾಯ ಸಮತಟ್ಟು ಮಾಡುವಾಗ ಹಳೆಯ ಗೋಡೆ ಕುಸಿದು ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ.

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿಲ್ಲ ಕನಿಷ್ಠ ಮೂಲ ಸೌಕರ್ಯ

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿಲ್ಲ ಕನಿಷ್ಠ ಮೂಲ ಸೌಕರ್ಯ

ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕೆಟ್ಟು ನಿಂತಿದ್ದು, ಬಾಣಂತಿಯರು ಮತ್ತು ನವಜಾತ ಶಿಶುಗಳು ಬಿಸಿಲ ತಾಪಕ್ಕೆ ತತ್ತರಿಸುತ್ತಿದ್ದಾರೆ. ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಮನೆಯಿಂದಲೇ ಫ್ಯಾನ್ ತರುವ ಅನಿವಾರ್ಯತೆ ಎದುರಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ತಕ್ಷಣದ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸುಡುವ ಬಿಸಿಲು, ಉಷ್ಣ ಅಲೆಯ ನಡುವೆಯೂ ಹಂಪಿ ಮೃಗಾಲಯದ ಪ್ರಾಣಿಗಳು ಕೂಲ್ ಕೂಲ್! ಹೇಗೆ ಗೊತ್ತಾ?

ಸುಡುವ ಬಿಸಿಲು, ಉಷ್ಣ ಅಲೆಯ ನಡುವೆಯೂ ಹಂಪಿ ಮೃಗಾಲಯದ ಪ್ರಾಣಿಗಳು ಕೂಲ್ ಕೂಲ್! ಹೇಗೆ ಗೊತ್ತಾ?

ವಿಜಯನಗರ ಜಿಲ್ಲೆಯಲ್ಲಿ ತಾಪಮಾನ 40 ಡಿಗ್ರಿ ದಾಟಿದ್ದರೂ, ಹಂಪಿ ಮೃಗಾಲಯದ ಪ್ರಾಣಿಗಳಿಗೆ ಬಿಸಿಲಿನ ಬೇಗೆ ತಟ್ಟಿಲ್ಲ. ಸ್ಪ್ರಿಂಕ್ಲರ್ ವ್ಯವಸ್ಥೆ ಮತ್ತು ನೀರಿನ ಹೊಂಡಗಳ ಮೂಲಕ ಪ್ರಾಣಿಗಳ ಆರೋಗ್ಯ ಕಾಪಾಡಲು ಮೃಗಾಲಯದ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಹಂಪಿ ಮೃಗಾಲಯದಲ್ಲಿ ಪ್ರಾಣಿಗಳನ್ನು ತಂಪಾಗಿರಿಸಲು ಹೇಗಿದೆ ವ್ಯವಸ್ಥೆ ಎಂಬ ಮಾಹಿತಿ ಇಲ್ಲಿದೆ.

ಕ್ಯಾನ್ಸರ್ ಸಂಬಂಧಿತ ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಸಾವು! ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಕ್ಯಾನ್ಸರ್ ಸಂಬಂಧಿತ ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಸಾವು! ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಬಳ್ಳಾರಿಯ ಬಿಎಂಇಆರ್‌ಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಅಕ್ಕಮ್ಮ ಸಾವನ್ನಪ್ಪಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಆಪರೇಷನ್ ನಂತರ ಸೂಕ್ತ ಔಷಧಿ, ಚಿಕಿತ್ಸೆ ಸಿಗದೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಖಾಸಗಿ ಔಷಧಿ, ಪರೀಕ್ಷೆಗಳಿಗೆ ಹಣ ಖರ್ಚು ಮಾಡಿಸಿದ್ದಾರೆಂದೂ ಆರೋಪಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬಿರುಗಾಳಿ ಮಳೆಗೆ ಬಳ್ಳಾರಿ ಹೊಸ ಬಸ್​ ನಿಲ್ದಾಣದ ಬಳಿ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ

ಬಿರುಗಾಳಿ ಮಳೆಗೆ ಬಳ್ಳಾರಿ ಹೊಸ ಬಸ್​ ನಿಲ್ದಾಣದ ಬಳಿ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ

ಬಳ್ಳಾರಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿರುಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿದ ಪರಿಣಾಮ, ಅಲ್ಲಿ ಪಾರ್ಕಿಂಗ್ ಮಾಡಿದ್ದ 15ಕ್ಕೂ ಹೆಚ್ಚು ಬೈಕ್​ಗಳು ಜಖಂಗೊಂಡಿವೆ. ಘಟನೆಯಿಂದ ಭಾರಿ ನಷ್ಟ ಅನುಭವಿಸದ ಪರಿಣಾಮ ಪರಿಹಾರಕ್ಕಾಗಿ ಬೈಕ್ ಮಾಲೀಕರು ಪಾರ್ಕಿಂಗ್ ಮ್ಯಾನೇಜರ್​​ನ ಆಗ್ರಹಿಸಿರುವ ಪ್ರಸಂಗವೂ ನಡೆದಿದೆ.