AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕ ಬಡಿಗೇರ್​

ವಿನಾಯಕ ಬಡಿಗೇರ್​

Author - TV9 Kannada

vinayak.badiger@tv9.com
ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬೀಡಿ, ಸಿಗರೇಟ್ ವಿಚಾರಕ್ಕೆ ಕೈದಿಗಳು ಜೈಲು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬಳ್ಳಾರಿಯ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಕಾರಾಗೃಹಗಳಲ್ಲಿ ಮನಃಪರಿವರ್ತನೆ ಬದಲಿಗೆ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಾ, ಸಿಬ್ಬಂದಿಗೆ ಬೆದರಿಕೆ ಹಾಕುತ್ತಿದ್ದಾರೆ. ಇದು ಜೈಲು ಆಡಳಿತದ ವೈಫಲ್ಯ ಮತ್ತು ಬಂಧೀಖಾನೆಗಳ ಮೂಲ ಉದ್ದೇಶದ ಬಗ್ಗೆಯೇ ಹಲವು ಪ್ರಶ್ನೆಗಳು ಹುಟ್ಟಲು ಕಾರಣವಾಗಿದೆ.

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಆಭರಣ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಆಭರಣ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!

ಬಳ್ಳಾರಿಯ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಅವರ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, 14 ಸೈಟ್, 44 ಎಕರೆ ಜಮೀನು, 600 ಗ್ರಾಂ ಚಿನ್ನ ಹಾಗೂ 8.5 ಲಕ್ಷ ನಗದು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಶಿವಣ್ಣ ಅಕ್ರಮ ಆಸ್ತಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ!

ಹೊಸ ತಿರುವು ಪಡೆದ ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹೊಸ ತಿರುವು ಪಡೆದ ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಬಳ್ಳಾರಿಯಲ್ಲಿ ಪಾಲಿಕೆ ಸದಸ್ಯ ವಿ. ಕುಬೇರ್ ಅವರಿಂದ ಎಇಇ ವೀರೆಶ್ ಮೇಲೆ ನಡೆದ ಹಲ್ಲೆ ಘಟನೆ ಕುರಿತು ಶಾಸಕ ನಾರಾ ಭರತ್‌ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಅಧಿಕಾರಿಗಳ ಮೇಲಿನ ಇಂತಹ ಹಲ್ಲೆ ತಪ್ಪು ಎಂದು ಖಂಡಿಸಿದ ಅವರು, ಘಟನೆಯ ಸತ್ಯಾಂಶ ತಿಳಿದು ನ್ಯಾಯಯುತವಾಗಿ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. ಅಧಿಕಾರಿಗಳು ಮತ್ತು ಕಾರ್ಪೊರೇಟರ್‌ಗಳ ನಡುವೆ ಸಮನ್ವಯದ ಅಗತ್ಯವನ್ನೂ ಒತ್ತಿಹೇಳಿದ್ದಾರೆ.

ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಬಳ್ಳಾರಿಯಲ್ಲಿ ಕಾರ್ಪೊರೇಟರ್ ವಿ. ಕುಬೇರ್ ಕರ್ತವ್ಯ ನಿರತ ಎಇಇ ವೀರೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಅವರ ಸಲಾಂ ಬಳ್ಳಾರಿ ಕಾರ್ಯಕ್ರಮದ ವೇಳೆ ನಡೆದ ಈ ಘಟನೆಯಿಂದ ವೀರೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕೃತ್ಯವನ್ನು ಮಹಾನಗರಪಾಲಿಕೆ ಆಯುಕ್ತರು ತೀವ್ರವಾಗಿ ಖಂಡಿಸಿದ್ದು, ಇದು ಸರ್ಕಾರಿ ನೌಕರರ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಎಂದಿದ್ದಾರೆ.

ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಭಯೋತ್ಪಾದಕ ನಂಟು ಆರೋಪದ ಮೇಲೆ ಬಳ್ಳಾರಿಯ ಯುವಕ ಸೇರಿ ದೇಶದ 12 ಮಂದಿಯನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮೂಲಭೂತವಾದಿ ಐಎಸ್‌ಐಎಸ್ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದ ಇವರು, ಯುವಕರನ್ನು ಜಿಹಾದ್‌ಗೆ ಪ್ರೇರೇಪಿಸುತ್ತಿದ್ದರು. 'ಅಲ್ ಮಾಲಿಕ್ ಇಸ್ಲಾಮಿಕ್ ಯೂತ್' ಎಂಬ ಗುಂಪು ರಚಿಸಿ ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿತ್ತು ಎನ್ನಲಾಗಿದೆ.

ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ಲೂಟಿ! ಗುತ್ತಿಗೆ ನೌಕರ ಸೇರಿ ಏಳು ಮಂದಿ ಮೇಲೆ ಎಫ್ಐಆರ್

ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ಲೂಟಿ! ಗುತ್ತಿಗೆ ನೌಕರ ಸೇರಿ ಏಳು ಮಂದಿ ಮೇಲೆ ಎಫ್ಐಆರ್

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ರೂ.ಗೂ ಹೆಚ್ಚು ಆರ್ಥಿಕ ಅವ್ಯವಹಾರ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಅವಧಿಯಲ್ಲಿ ಅಧಿಕಾರಿಗಳ ನಕಲಿ ಸಹಿ ಬಳಸಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎನ್ನಲಾಗಿದೆ. ಆಂತರಿಕ ಆಡಿಟ್ ಮೂಲಕ ಈ ಹಗರಣ ಪತ್ತೆಯಾಗಿದ್ದು, 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಐಡಿಗೆ ಪ್ರಕರಣ ವರ್ಗಾವಣೆಯಾಗುವ ಸಾಧ್ಯತೆಯಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಬಳ್ಳಾರಿ ಜೀನ್ಸ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೊಲ್ಲಿ ರಾಷ್ಟ್ರಗಳಿಂದ ರಾಸಾಯನಿಕ ಪೂರೈಕೆ ಸ್ಥಗಿತಗೊಂಡಿದ್ದು, ಉತ್ಪಾದನೆ ಕುಸಿದಿದೆ. ರಫ್ತು ಸ್ಥಗಿತಗೊಂಡ ಪರಿಣಾಮ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ರಂಜಾನ್ ಸೀಸನ್‌ನಲ್ಲಿ ಭಾರೀ ಬೇಡಿಕೆ ಇದ್ದರೂ, ಉತ್ಪಾದನೆ ಕುಸಿತದಿಂದ ಪೂರೈಕೆ ಕಷ್ಟವಾಗಿದೆ.

ಮೇಲಾಧಿಕಾರಿ ಕಿರುಕುಳ ಆರೋಪ: ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

ಮೇಲಾಧಿಕಾರಿ ಕಿರುಕುಳ ಆರೋಪ: ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

11 ತಿಂಗಳಿಂದ ಸಂಬಳ ನೀಡಿಲ್ಲ. ಸಾಲಗಾರರ ಕಾಟ ತಾಳಲಾರದೇ ಡೆತ್ ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ ಶರಣಾಗಿದ್ದು, ಇನ್ನೊಂದೆಡೆ ಮೇಲಾಧಿಕಾರಿಯ ಮಾನಸಿಕ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ, ಕೃಷಿ ಇಲಾಖೆಯ ಅಧಿಕಾರಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಬಳ್ಳಾರಿ: ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ರಾಡ್​ನಿಂದ ಹಲ್ಲೆ; ಎಸ್​​​ಪಿ ಹೇಳಿದ್ದಿಷ್ಟು

ಬಳ್ಳಾರಿ: ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ರಾಡ್​ನಿಂದ ಹಲ್ಲೆ; ಎಸ್​​​ಪಿ ಹೇಳಿದ್ದಿಷ್ಟು

ಬಳ್ಳಾರಿಯ ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಇತರರ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳಾ ವಾರ್ಡನ್ ಸೇರಿದಂತೆ ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆರೋಪಿ ವಿದ್ಯಾರ್ಥಿಯ ಪತ್ತೆಗೆ ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಶಾಲಾ ಆಡಳಿತ ಮಂಡಳಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಬಳ್ಳಾರಿಯ ಖಾಸಗಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ರಾಡ್‌ನಿಂದ ದಾಳಿ ನಡೆಸಿ, ಓರ್ವ ವಿದ್ಯಾರ್ಥಿಯನ್ನು ಕೊಂದು, ವಾರ್ಡನ್‌ ಸೇರಿ 8 ಮಂದಿಯನ್ನು ಗಾಯಗೊಳಿಸಿದ್ದಾನೆ. ಆರೋಪಿತ ವಿದ್ಯಾರ್ಥಿ ಪರಾರಿಯಾಗಿದ್ದು, ಮೃತ ಬಾಲಕನ ಪೋಷಕರು ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ದಾಳಿ ನಡೆಸಿದ ವಿದ್ಯಾರ್ಥಿ ಮಾದಕ ವ್ಯಸನಕ್ಕೆ ದಾಸನಾಗಿದ್ದನಾ ಎಂಬ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.

700ಕ್ಕೆ 1163 ಅಂಕ! ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಮತ್ತೊಂದು ಎಡವಟ್ಟು

700ಕ್ಕೆ 1163 ಅಂಕ! ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಮತ್ತೊಂದು ಎಡವಟ್ಟು

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಮತ್ತೊಂದು ಅಂಕಪಟ್ಟಿ ಎಡವಟ್ಟು ಮಾಡಿದೆ. ಬಿಬಿಎ ವಿದ್ಯಾರ್ಥಿಗಳ ಫಲಿತಾಂಶದಲ್ಲಿ 700 ಗರಿಷ್ಠ ಅಂಕಗಳ ಬದಲಿಗೆ 1163 ಅಂಕಗಳನ್ನು ಮುದ್ರಿಸಿರುವುದು ಬೆಳಕಿಗೆ ಬಂದಿದೆ. ಇದು ತಾಂತ್ರಿಕ ದೋಷದಿಂದಾಗಿದೆ ಎಂದು ವಿವಿ ಹೇಳಿದ್ದು, ದೋಷಪೂರಿತ ಅಂಕಪಟ್ಟಿಗಳನ್ನು ಸರಿಪಡಿಸಿ ಶೀಘ್ರದಲ್ಲೇ ಮರುಮುದ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಯುದ್ಧ ಭೂಮಿಯಿಂದ ಬಳ್ಳಾರಿ ಮಂದಿ ವಾಪಸ್: ದೃಷ್ಟಿ ತೆಗೆದು, ಪಟಾಕಿ ಸಿಡಿಸಿ ಸ್ವಾಗತಿಸಿದ ಕುಟುಂಬಸ್ಥರು

ಯುದ್ಧ ಭೂಮಿಯಿಂದ ಬಳ್ಳಾರಿ ಮಂದಿ ವಾಪಸ್: ದೃಷ್ಟಿ ತೆಗೆದು, ಪಟಾಕಿ ಸಿಡಿಸಿ ಸ್ವಾಗತಿಸಿದ ಕುಟುಂಬಸ್ಥರು

ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ದುಬೈನಲ್ಲಿ ಸಿಲುಕಿದ್ದ 35ಕ್ಕೂ ಹೆಚ್ಚು ಬಳ್ಳಾರಿ ಜನರು ಇಂದು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಪ್ರವಾಸ ಮುಗಿಸಿ ಹಿಂತಿರುಗಬೇಕಿದ್ದವರು ವಿಮಾನ ಸೇವೆ ರದ್ದಾದ ಕಾರಣ ಸಿಲುಕಿಕೊಂಡು ಪರದಾಡಿದ್ದರು. ಇದೀಗ ಎಲ್ಲರೂ ಬಳ್ಳಾರಿಗೆ ತಲುಪಿದ್ದು ಕುಟುಂಬಸ್ಥರು ಪಟಾಕಿ ಸಿಡಿಸಿ ಬರಮಾಡಿಕೊಂಡಿದ್ದಾರೆ.