ಬೆಚ್ಚಿಬಿದ್ದ ಬಳ್ಳಾರಿ: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತನ ಬರ್ಬರ ಕೊಲೆ
ಬಳ್ಳಾರಿಯಲ್ಲಿ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ರಿಸೆಪ್ಷನ್ ಮುಗಿದ ಕೆಲವೇ ಗಂಟೆಗಳಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ರಾತ್ರಿ 11.30ರ ಸುಮಾರಿಗೆ ಸ್ನೇಹಿತ ಕರೆದ ಅಂತಾ ರಸೂಲ್ ಹೊರಹೋಗಿದ್ದರು. ಆದರೆ ಅವರು ರಾತ್ರಿ 2 ಗಂಟೆ ಆದ್ರೂ ಬಂದಿರಲಿಲ್ಲ. ಹೀಗಾಗಿ ಮನೆ ಸುತ್ತ ಪೋಷಕರು ಮತ್ತು ಸಂಬಂಧಿಕರು ಹುಡುಕಾಡಿದಾಗ ಮನೆಯಿಂದ 700 ಮೀಟರ್ ದೂರದಲ್ಲಿ ರಸೂಲ್ ಶವ ಪತ್ತೆಯಾಗಿದೆ.
- Vinayak Badiger
- Updated on: Jul 17, 2026
- 12:10 pm
ಅಕ್ರಮ ಗಣಿಗಾರಿಕೆ ಕೇಸ್: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ?
ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಮತ್ತು ಗಡಿ ಅತಿಕ್ರಮಣದ ಕುರಿತು ವರದಿ ನೀಡಲು ಕೇಂದ್ರ ಪರಿಸರ ಸಚಿವಾಲಯವು ರಾಜ್ಯ ಅರಣ್ಯ ಇಲಾಖೆಗೆ ಸೂಚನೆ ನೀಡಿರುವುದರಿಂದ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೆಲ ತಿಂಗಳ ಹಿಂದೆ ನಿವೃತ್ತ ನ್ಯಾಯಾಧೀಶ ಸುಧಾಂಶ ಧುಲಿಯಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮಕ್ಕೆ ಭೇಟಿ ನೀಡಿ ಡ್ರೋನ್ ಮೂಲಕ ಸರ್ವೇ ನಡೆಸಿತ್ತು. ಇದು ನೀಡಿದ್ದ ವರದಿಯನ್ನು ದೂರುದಾರ ಟಪಾಲ್ ಗಣೇಶ ಕೇಂದ್ರ ಸರ್ಕಾರದ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ್ದರು.
- Vinayak Badiger
- Updated on: Jul 5, 2026
- 7:16 am
ವಾರಕ್ಕೊಂದು ಬೈಕ್ ಕದ್ದು ನಕಲಿ ಆರ್ಸಿ ಸೃಷ್ಟಿಸಿ ಮಾರುತ್ತಿದ್ದ ಸ್ಪ್ಲೆಂಡರ್ ಸಿದ್ದಾರೆಡ್ಡಿ ಅರೆಸ್ಟ್: 41 ಬೈಕ್ಗಳು ಜಪ್ತಿ
Ballari News: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಕಳೆದ ಒಂದೂವರೆ ವರ್ಷದಿಂದ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಕುಖ್ಯಾತ ‘ಸ್ಪ್ಲೆಂಡರ್’ ಸಿದ್ದಾರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 20.50 ಲಕ್ಷ ರೂ. ಮೌಲ್ಯದ 41 ಬೈಕ್ಗಳನ್ನು ಜಪ್ತಿ ಮಾಡಲಾಗಿದ್ದು, ಈತ ‘ಕರ್ನಾಟಕ ಒನ್’ ಮೂಲಕ ನಕಲಿ ಆರ್ಸಿ ಸೃಷ್ಟಿಸಿ ಅಮಾಯಕ ರೈತರಿಗೆ ಬೈಕ್ ಮಾರಾಟ ಮಾಡುತ್ತಿದ್ದ ಎಂಬುದು ಬಯಲಾಗಿದೆ.
- Vinayak Badiger
- Updated on: Jun 24, 2026
- 1:34 pm
ಸರ್ವಿಸ್ ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್ ಸಂಸದ ಇ. ತುಕಾರಾಂ
ಕಳಪೆ ಕಾಮಗಾರಿ ಪ್ರಶ್ನಿಸಿದ ಸ್ಥಳೀಯ ನಿವಾಸಿಗಳ ವಿರುದ್ಧ ಸಂಸದ ಇ. ತುಕಾರಾಂ ಅಶ್ಲೀಲ ಪದ ಬಳಸಿ ನಿಂದಿಸಿರುವ ಘಟನೆ ನಡೆದಿದೆ. ಹೊಸಪೇಟೆ ಬಳಿ ಕುಸಿದ ಸರ್ವಿಸ್ ರಸ್ತೆ ವೀಕ್ಷಿಸಲು ತೆರಳಿದ್ದಾಗ, ಕಾಮಗಾರಿ ಬಗ್ಗೆ ಪ್ರಶ್ನೆ ಎತ್ತಿದ ಕೆಲವರನ್ನು ಗುರುಯಾಗಿಸಿ ಸಂಸದರು ಕೆಟ್ಟ ಪದ ಬಳಸಿದ್ದಾರೆ. ನಿಂದನೆ ಮಾಡಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
- Vinayak Badiger
- Updated on: Jun 15, 2026
- 12:12 pm
6 ಸಾವಿರ ಕೊಟ್ರೆ ಒಂದು ವಿಷಯ ಪಾಸ್: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು
ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಫೇಲಾದ ವಿದ್ಯಾರ್ಥಿಗಳನ್ನು ಹಣ ಪಡೆದು ಪಾಸ್ ಮಾಡುವ ಹಗರಣ ಬಯಲಾಗಿದ್ದು, ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ತನಿಖೆಗೆ ಎಬಿವಿಪಿ (ABVP) ಆಗ್ರಹಿಸಿದೆ. ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿರುವ ಬಗ್ಗೆ ದೂರಲಾಗಿದ್ದು, ಅನೇಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿದೆ ಎಂಬ ಆರೋಪವೂ ಕೇಳಿಬಂದಿದೆ.
- Vinayak Badiger
- Updated on: Jun 11, 2026
- 12:34 pm
ಬಳ್ಳಾರಿಯಲ್ಲಿ ಮುಂಗಾರು ಮಳೆ ಅಬ್ಬರ, ಭಾರಿ ಅವಾಂತರ: ವಿಮ್ಸ್ ಆಸ್ಪತ್ರೆ, ಕೆಇಬಿ ಕಚೇರಿಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ಸುರಿದ ಭಾರಿ ಮಳೆಗೆ ವಿಮ್ಸ್ ಆಸ್ಪತ್ರೆ ಮತ್ತು ಕೆಇಬಿ ಕೇಂದ್ರಗಳು ಜಲಾವೃತಗೊಂಡಿವೆ. ಆಸ್ಪತ್ರೆಯೊಳಗೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡುವಂತಾಯಿತು. ಇಡೀ ನಗರದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರ ನಡುವೆ, ಹಂದ್ರಾಳ ಹಳ್ಳದಲ್ಲಿ ಪ್ರಗತಿ ಬ್ಯಾಂಕ್ ಉದ್ಯೋಗಿ ಅನಿಷಾ ಫಾತೀಮಾ ಮೃತದೇಹ ಪತ್ತೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Vinayak Badiger
- Updated on: Jun 8, 2026
- 7:25 am
ಸ್ಟಾರ್ ನಟಿಯರ ಡಿಸೈನರ್ ಅಂಜಲಿ ಕೈಚಳಕಕ್ಕೆ ಆರ್ಸಿಬಿ ಫ್ಯಾನ್ಸ್ ಫಿದಾ! ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್
ಬೆಂಗಳೂರಿನ ಖ್ಯಾತ ಡಿಸೈನರ್ ಅಂಜಲಿ ಅವರು RCB ತಂಡದ ಮೇಲಿನ ಅಭಿಮಾನದಿಂದ ವಿಶೇಷ ಬ್ಲೌಸ್ಗಳನ್ನು ವಿನ್ಯಾಸಗೊಳಿಸಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ನೀಲಿ, ಕೆಂಪು ಮತ್ತು ಚಿನ್ನದ ಬಣ್ಣಗಳ ಸಂಯೋಜನೆಯಲ್ಲಿ 'ಈ ಸಲ ಕಪ್ ನಮ್ದೇ' ಎಂಬ ಸ್ಲೋಗನ್ನೊಂದಿಗೆ ತಯಾರಿಸಿದ ಈ ಸ್ಟೈಲಿಶ್ ಬ್ಲೌಸ್ಗಳಿಗೆ ಮಹಿಳಾ ಅಭಿಮಾನಿಗಳು ಮಾರುಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫ್ಯಾಷನ್ ಟ್ರೆಂಡ್ ವೈರಲ್ ಆಗಿದ್ದು, ಭಾರಿ ಬೇಡಿಕೆ ಸೃಷ್ಟಿಸಿದೆ.
- Vinayak Badiger
- Updated on: May 31, 2026
- 2:58 pm
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಜಿಲ್ಲೆಯ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯೆ ಉಮಾದೇವಿ ಅವರ ಪತಿ ಶಿವರಾಜ್ ವಿರುದ್ಧ ಬಡವರಿಗೆ ಭೂಮಿ ನೀಡುವ ನೆಪದಲ್ಲಿ ಮಹಾ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಬೂದಿಹಾಳ ಸರ್ವೇ ನಂಬರ್ 125ರಲ್ಲಿ ಸುಮಾರು 7.87 ಎಕರೆ ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಶಿವರಾಜ್ ಅವರು ಲೇಔಟ್ ನಿರ್ಮಿಸಿದ್ದರು. ಈ ಲೇಔಟ್ನಲ್ಲಿ ಬಡ ಕುಟುಂಬಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿಗಳಿಗೆ ಪ್ಲಾಟ್ಗಳನ್ನು ಮಾರಾಟ ಮಾಡಿದ್ದರು.
- Vinayak Badiger
- Updated on: May 23, 2026
- 1:54 pm
ಬಳ್ಳಾರಿಯಲ್ಲಿ ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಬಳ್ಳಾರಿಯ ಗಾಂಧಿನಗರ, ಎಪಿಎಂಸಿ ಮತ್ತು ಬ್ರೂಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ಜೋರಾಗಿದೆ. ವೇಶ್ಯಾವಾಟಿಕೆಗೆ ಕಡಿವಾಣ ಹಾಕಲು ಪೊಲೀಸರು ಸತತ ಪ್ರಯತ್ನ ನಡೆಸಿದ್ದು, ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. 6 ಆರೋಪಿಗಳನ್ನು ಬಂಧಿಸಿದ್ದು, 8 ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.
- Vinayak Badiger
- Updated on: May 21, 2026
- 10:42 pm
Ebola Virus Threat: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ!: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಜಗತ್ತು ಮತ್ತೊಂದು ಮಾರಣಾಂತಿಕ 'ಎಬೋಲಾ ವೈರಸ್' ಆತಂಕದಲ್ಲಿದೆ. ಆಫ್ರಿಕಾದಲ್ಲಿ ಹರಡುತ್ತಿರುವ ಈ ಬುಂಡಿಬುಗ್ಯೊ ತಳಿಗೆ ಲಸಿಕೆ ಲಭ್ಯವಿಲ್ಲ, ಸಾವಿನ ಪ್ರಮಾಣವೂ ಅಧಿಕ. ವಿಶ್ವ ಆರೋಗ್ಯ ಸಂಸ್ಥೆ ತುರ್ತುಸ್ಥಿತಿ ಘೋಷಿಸಿದ್ದು, ಭಾರತದಲ್ಲೂ ಆತಂಕ ಎದುರಾಗಿದೆ. ಕೋವಿಡ್ನಂತೆ ಗಾಳಿಯಲ್ಲಿ ಹರಡದಿದ್ದರೂ, ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮತ್ತು ಕ್ವಾರಂಟೈನ್ ಅತ್ಯಗತ್ಯ ಎಂದು ತಜ್ಞರು ಎಚ್ಚರಿಸಿದ್ದಾರೆ. ಸಾರ್ವಜನಿಕರು ಆಫ್ರಿಕಾ ಪ್ರವಾಸದಿಂದ ದೂರವಿರುವುದು ಉತ್ತಮ.
- Vinayak Badiger
- Updated on: May 21, 2026
- 12:42 pm
ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು!
ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅಪರೂಪದ ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆ ಮೂಲಕ 2 ವರ್ಷದ ಮಗುವಿಗೆ ಮರುಜೀವ ನೀಡಿದ್ದಾರೆ. 'ಪೈಕಾ' ರೋಗದಿಂದ ಬಳಲುತ್ತಿದ್ದ ಮಗುವಿನ ಹೊಟ್ಟೆಯಲ್ಲಿದ್ದ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಮತ್ತು ರಬ್ಬರ್ ಬ್ಯಾಂಡ್ಗಳನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ. ತೀವ್ರ ಹೊಟ್ಟೆನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ ಮಗು ಈಗ ಅಪಾಯದಿಂದ ಪಾರಾಗಿದ್ದು, ವೈದ್ಯರ ತಂಡದ ಈ ಸಾಧನೆ ಶ್ಲಾಘನೀಯ.
- Vinayak Badiger
- Updated on: May 16, 2026
- 7:31 pm
ಬಳ್ಳಾರಿ: ಜಿಂದಾಲ್ನಿಂದ ಕೋಟಿ ಕೋಟಿ ತೆರಿಗೆ ಬಾಕಿ; ವಸೂಲಿಗೆ ಸ್ಥಳೀಯ ಆಡಳಿತ ಸರ್ಕಸ್
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ JSW ಜಿಂದಾಲ್ ಕಂಪನಿ 2018ರಿಂದ ಇಲ್ಲಿಯವರೆಗೆ 20 ಕೋಟಿಗೂ ಹೆಚ್ಚು ಆಸ್ತಿ ಮತ್ತು ಅಭಿವೃದ್ಧಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಹಲವು ನೋಟಿಸ್ಗಳ ಹೊರತಾಗಿಯೂ ತೆರಿಗೆ ಪಾವತಿಸದ ಕಂಪನಿ ವಿರುದ್ಧ ಸ್ಥಳೀಯ ಆಡಳಿತ ಅಸಮಾಧಾನಗೊಂಡಿದ್ದು, ಸದ್ಯ ತೆರಿಗೆ ವಸೂಲಿ ಸವಾಲಾಗಿದೆ.
- Vinayak Badiger
- Updated on: May 12, 2026
- 4:07 pm