AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕ ಬಡಿಗೇರ್​

ವಿನಾಯಕ ಬಡಿಗೇರ್​

Author - TV9 Kannada

vinayak.badiger@tv9.com
ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ

ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಗಳಿಗೆ ಕೋಟ್ಯಂತರ ರೂ. ವಂಚನೆ ಎಸಗಲಾಗಿದ್ದು, ವೆಂಕಟೇಶ ಎಂಬಾತ ಚಿಟ್ ಫಂಡ್ ವ್ಯವಹಾರದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಸಂಗ್ರಹಿಸಿ ಪರಾರಿಯಾಗಿದ್ದಾನೆ. 800ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದು, 200ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ವಂಚಕನನ್ನು ಬಂಧಿಸಿ ಹಣ ಮರಳಿಸುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ.

ಕುಂಟುತ್ತಾ ಸಾಗಿದ ತುಂಗಭದ್ರಾ  ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ

ಕುಂಟುತ್ತಾ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ

ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಮೇ ಅಂತ್ಯದೊಳಗೆ ಗೇಟ್ ದುರಸ್ತಿ ಮುಗಿಯದಿದ್ದರೆ ನೀರು ಸಂಗ್ರಹಕ್ಕೆ ಕಷ್ಟವಾಗಲಿದ್ದು, ಹೀಗಾಗಿ ರೈತರಿಗೆ ಆತಂಕ ಎದುರಾಗಿದೆ. ಕುಡಿಯುವ ನೀರು ಹಾಗೂ ಎರಡನೇ ಬೆಳೆಗೆ ತೊಂದರೆ ಆಗುವ ಭೀತಿ ಉಂಟಾಗಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಲಾಗಿದೆ.

ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ

ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ

ಪ್ರೀತಿ ಪ್ರೇಮ ಎಂದು ನಂಬಿಸಿ ಕೊನೆಗೆ ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬ ಗಂಭೀರ ಆರೋಪಗಳ ನಡುವೆಯೇ ಬಳ್ಳಾರಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಆಟೋ ಚಾಲಕ ಶೇಖರ್ ಅಲಿಯಾಸ್ ಮಣಿ (31) ಹಾಗೂ ಬಳ್ಳಾರಿ ತಾಲೂಕಿನ ಚಾಗನೂರ ಗ್ರಾಮದ ನಿವಾಸಿ, ಮಂಗಳಮುಖಿ ಸುಹಾಸಿನಿ (29) ಎಂದು ಗುರುತಿಸಲಾಗಿದೆ. ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಇವರಿಬ್ಬರ ಮೃತದೇಹಗಳು ಮನೆಯ ಕಿಡಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇದು ಆತ್ಮತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಬ್ರೂಸ್‌ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಮಂಗಳಮುಖಿಯೊಬ್ಬರು ಸ್ಫೋಟ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ

ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ: ಆಮೇಲಾಗಿದ್ದು ದುರಂತ

ಬಳ್ಳಾರಿಯಲ್ಲಿ ಯುವಕ ಹಾಗೂ ಮಂಗಳಮುಖಿ ನಡುವಣ ಲವ್ ಕಹಾನಿ ಈಗ ದುರಂತಮಯವಾಗಿದೆ. ಪರಸ್ಪರ ಪ್ರೀತಿಸಿ ಒಟ್ಟಿಗೆ ವಾಸ ಮಾಡುತ್ತಿದ್ದರು ಎನ್ನಲಾದ ಇಬ್ಬರು ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯ ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ

ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ

ಇತಿಹಾಸ ಪ್ರಸಿದ್ಧ ಮತ್ತು ಕರ್ನಾಟಕದ ಪ್ರಖ್ಯಾತ ಪ್ರವಾಸಿ ತಾಣ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿದೆ. ಇಲ್ಲಿನ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಬಂದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದನ್ನು ನೋಡಿ ಸ್ಥಳೀಯ ನಿವಾಸಿಗಳು, ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ವಿಡಿಯೋ ಇಲ್ಲಿದೆ.

ಸರ್ಕಾರಿ ಮಕ್ಕಳಿಗೆ ‘ಸರ್ಪ್ರೈಸ್’ ಕೊಟ್ಟ ಸಚಿವ ಜಮೀರ್: ಸ್ವಂತ ಖರ್ಚಿನಲ್ಲಿ 60 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್ ರೈಡ್

ಸರ್ಕಾರಿ ಮಕ್ಕಳಿಗೆ ‘ಸರ್ಪ್ರೈಸ್’ ಕೊಟ್ಟ ಸಚಿವ ಜಮೀರ್: ಸ್ವಂತ ಖರ್ಚಿನಲ್ಲಿ 60 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್ ರೈಡ್

ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಸರ್ಕಾರಿ ಶಾಲಾ ಮಕ್ಕಳಿಗೆ ಅವಿಸ್ಮರಣೀಯ ಕ್ಷಣಗಳನ್ನು ನೀಡಿದರು. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ 60ಕ್ಕೂ ಹೆಚ್ಚು ಪುಟಾಣಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹೆಲಿ-ರೈಡ್ ಮಾಡಿಸಿದ್ದಾರೆ. ಮಕ್ಕಳ ಜೀವನದ ಕನಸು ನನಸಾಗಿಸಿದ ಸಚಿವರ ಈ ನಡೆ, ಉತ್ಸವದ ಆಕರ್ಷಣೆಗೆ ಮತ್ತಷ್ಟು ಮೆರುಗು ನೀಡಿತು. ಇದು ಮಕ್ಕಳಿಗೆ ಸ್ಮರಣೀಯ ಅನುಭವವಾಗಿದೆ.

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ಹಂಪಿ ಉತ್ಸವ 2026: ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಮೂರು ದಿನಗಳ ಹಂಪಿ ಉತ್ಸವ 2026ಕ್ಕೆ ಚಾಲನೆ ನೀಡಿದರು. ನಗಾರಿ ಬಾರಿಸುವ ಮೂಲಕ ಮತ್ತು ವಿಶಿಷ್ಟ ಧ್ವನಿ ಹಾಗೂ ಬೆಳಕು ಕಾರ್ಯಕ್ರಮದ ಉದ್ಘಾಟನೆಯೊಂದಿಗೆ ಉತ್ಸವ ಆರಂಭಗೊಂಡಿತು. ಇದು ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಮರುಕಳಿಸುವುದಲ್ಲದೆ, ಕರ್ನಾಟಕದ ಪ್ರಗತಿಯನ್ನು ಸಾರುತ್ತದೆ.

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ

ವಿಶ್ವವಿಖ್ಯಾತ ಹಂಪಿ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುತ್ತಿದ್ದಾಗ ಪಟಾಕಿ ಕಿಡಿಯಿಂದ ವೇದಿಕೆ ಮೇಲೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು. ಇದು ಭಾರಿ ಆತಂಕ ಸೃಷ್ಟಿಸಿತು. ಆದರೆ, ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿ, ದೊಡ್ಡ ಅನಾಹುತವನ್ನು ತಪ್ಪಿಸಿದರು. ಅವರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ

ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿಯ ತೆಕ್ಕಲಕೋಟೆ ಉತ್ಖನನದಲ್ಲಿ ಶಿಲಾಯುಗದ ಮೂರನೇ ಅಸ್ಥಿಪಂಜರ ಪತ್ತೆಯಾಗಿದೆ. ಈ ಹಿಂದೆ 2 ಅಸ್ಥಿಪಂಜರಗಳು ದೊರೆತಿದ್ದವು. ಶೋಧಕರು ಉತ್ಖನನ ಕಾರ್ಯ ಸ್ಥಗಿತಗೊಳಿಸಿದ್ದು, ಉತ್ಖನನ ಸ್ಥಳಕ್ಕೆ ಬಳ್ಳಾರಿ SP ಡಾ.ಸುಮನ್ ಫನ್ನೆಕರ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಅಸ್ಥಿಪಂಜರಗಳ ನಿಖರ ಕಾಲಮಾನದ ನಿರ್ಧಾರ ಕಾರ್ಬನ್ ಡೇಟಿಂಗ್ ಪರೀಕ್ಷೆ ಬಳಿಕ ಅಂತಿಮವಾಗಿ ತಿಳಿಯಬೇಕಿದೆ.

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ

ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಈ ವೈಭವೋಪೇತ ಉತ್ಸವಕ್ಕೆ ವ್ಯಾಪಕ ಸಿದ್ಧತೆ ಮಾಡಲಾಗಿದೆ, ಐವತ್ತು ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಬಳ್ಳಾರಿ: ವರ್ಗಾವಣೆಯಾದ IPS ಅಧಿಕಾರಿ ವರ್ತಿಕಾ ವಿರುದ್ಧ ಬೆದರಿಕೆ ಆರೋಪ! ಮೊಬೈಲ್ ಸಂಭಾಷಣೆ ವೈರಲ್

ಬಳ್ಳಾರಿ: ವರ್ಗಾವಣೆಯಾದ IPS ಅಧಿಕಾರಿ ವರ್ತಿಕಾ ವಿರುದ್ಧ ಬೆದರಿಕೆ ಆರೋಪ! ಮೊಬೈಲ್ ಸಂಭಾಷಣೆ ವೈರಲ್

ಬಳ್ಳಾರಿ DIGP ಹುದ್ದೆಯಿಂದ ವರ್ಗಾವಣೆಗೊಂಡ ಐಪಿಎಸ್ ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವರ್ಗಾವಣೆ ಬಳಿಕವೂ ಕಡತಗಳನ್ನು ಹೊಸ ಅಧಿಕಾರಿಗೆ ನೀಡದಂತೆ ಕೆಳಹಂತದ ಅಧಿಕಾರಿಗಳಿಗೆ ವಾಟ್ಸಾಪ್ ಕರೆ ಮೂಲಕ ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ತಮ್ಮ ವರ್ಗಾವಣೆ CATನಲ್ಲಿರುವುದರಿಂದ ದಾಖಲೆ ನೀಡಿದರೆ ಪ್ರತಿವಾದಿಯಾಗಿಸುವುದಾಗಿ ಹೆದರಿಸಿದ್ದಾರೆ ಎನ್ನಲಾಗಿದೆ. ಇದು ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು!

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು!

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಉತ್ಖನನದಲ್ಲಿ ಪ್ರಾಗೈತಿಹಾಸಿಕ ಕಾಲದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. 5.5 ಅಡಿ ಉದ್ದದ ಈ ಅಸ್ಥಿಪಂಜರಗಳು 3,000 ರಿಂದ 5,000 ವರ್ಷಗಳಷ್ಟು ಹಳೆಯದೆಂದು ಅಂದಾಜಿಸಲಾಗಿದೆ. ಇವುಗಳ ಸುತ್ತ ಮಡಿಕೆ ಚೂರುಗಳು, ಸೂಕ್ಷ್ಮ ಶಿಲಾಯುಗದ ಅವಶೇಷಗಳು ದೊರೆತಿದ್ದು, ಇದು ನವಶಿಲಾಯುಗ ಅಥವಾ ಪ್ರಾಗೈತಿಹಾಸಿಕ ಕಾಲದ ಪ್ರಮುಖ ಮಾನವ ನೆಲೆಯಾಗಿತ್ತು ಎಂಬುದಕ್ಕೆ ಸಾಕ್ಷಿ ದೊರೆತಂತಾಗಿದೆ.