ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಸ್ಕ್ಯಾಮ್ ಕೇಸ್: 10 ದಿನವಾದ್ರೂ ಪತ್ತೆಯಾಗದ ಆರೋಪಿ, ಉದ್ಯಮಿಗಳು, ರಾಜಕಾರಣಿಗಳಿಗೂ ವಂಚನೆ
ಬಳ್ಳಾರಿಯ ಮನಿ ಡಬ್ಲಿಂಗ್ ಸ್ಕ್ಯಾಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ಹಣದ ಸಮೇತ ಪರಾರಿಯಾಗಿರುವ ವಂಚಕ ವಿಶ್ವನಾಥ್, 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಕರ್ನಾಟಕ ಮತ್ತು ಆಂಧ್ರ ಸೇರಿದಂತೆ ವಿವಿಧೆಡೆ ಹುಡುಕಾಟ ನಡೆಸಿದರು ಆರೋಪಿಯ ಸುಳಿವಿಲ್ಲ. ಹೀಗಾಗಿ ಸದ್ಯ ಪ್ರಕರಣ ಪೊಲೀಸರಿಗೆ ಸವಾಲಾಗಿದೆ.
- Vinayak Badiger
- Updated on: Apr 16, 2025
- 1:34 pm
ಮಗಳನ್ನೇ ದೇವದಾಸಿ ಮಾಡಲು ಹೋದ ತಾಯಿ: ರಕ್ಷಿಸಿ ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿದ ಪೊಲೀಸ್
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನಲ್ಲಿ ತಾಯಿಯೇ ಮಗಳನ್ನು ದೇವದಾಸಿ ಪದ್ಧತಿಗೆ ದೂಡಲು ಮುಂದಾಗಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ಪೊಲೀಸರು ಆಕೆಯನ್ನು ರಕ್ಷಿಸಿ, ತಾನು ಪ್ರೀತಿಸುತ್ತಿದ್ದ ಯುವಕನೊಂದಿಗೆ ಮದುವೆ ಮಾಡಿಸಿದ್ದಾರೆ. ಆ ಮೂಲಕ ಯುವತಿ ದೇವದಾಸಿ ಆಗುವುದನ್ನು ತಡೆದಿದ್ದಾರೆ. ಸದ್ಯ ಪೊಲೀಸರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
- Vinayak Badiger
- Updated on: Apr 16, 2025
- 12:49 pm
ನನಸಾಗದ ರಾಹುಲ್ ಗಾಂಧಿ ಕನಸು: ಬಳ್ಳಾರಿಯ 40 ಜೀನ್ಸ್ ವಾಷಿಂಗ್ ಘಟಕಗಳು ಬಂದ್
ಬಳ್ಳಾರಿಯಲ್ಲಿ ಜೀನ್ಸ್ ಉಡುಪು ತಯಾರಿಕೆಯಲ್ಲಿ ತೊಡಗಿರುವ 80 ಜೀನ್ಸ್ ವಾಷಿಂಗ್ ಘಟಕಗಳ ಪೈಕಿ 40 ಘಟಕಗಳು ವಿದ್ಯುತ್ ದರ ಏರಿಕೆ, ನೀರಿನ ಸಮಸ್ಯೆ ಮತ್ತು ಕಚ್ಚಾ ವಸ್ತುಗಳ ದರ ಏರಿಕೆಯಿಂದಾಗಿ ಮುಚ್ಚಿವೆ. ಉತ್ಪಾದನಾ ವೆಚ್ಚ ಹೆಚ್ಚಳದಿಂದ ಕಾರ್ಮಿಕರಿಗೆ ಸಂಬಳ ನೀಡುವುದು ಕೂಡ ಕಷ್ಟವಾಗಿದೆ. ಜೀನ್ಸ್ ಪಾರ್ಕ್ ಸ್ಥಾಪನೆಗೆ ನೀಡಲಾದ ಭರವಸೆಗಳು ಇನ್ನೂ ಫಲ ನೀಡಿಲ್ಲ. ಈ ಸಂಕಷ್ಟದಿಂದ ಬಳ್ಳಾರಿಯ ಜೀನ್ಸ್ ಉದ್ಯಮ ತೀವ್ರ ಆರ್ಥಿಕ ಹೊಡೆತಕ್ಕೆ ಸಿಲುಕಿದೆ.
- Vinayak Badiger
- Updated on: Apr 12, 2025
- 7:14 pm
ಬಳ್ಳಾರಿ ಜಿಲ್ಲೆಯ ಬಹುತೇಕ ಪಿಎಚ್ಸಿಗಳಲಿಲ್ಲ ಮರಣೋತ್ತರ ಪರೀಕ್ಷೆ ಕೇಂದ್ರಗಳು
ಬಳ್ಳಾರಿಯ 29 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಕೇವಲ 8ರಲ್ಲಿ ಮಾತ್ರ ಮರಣೋತ್ತರ ಪರೀಕ್ಷಾ ಕೇಂದ್ರಗಳಿವೆ. ಇದು ಆರೋಗ್ಯ ಇಲಾಖೆಯ ನಿಯಮಗಳ ಉಲ್ಲಂಘನೆಯಾಗಿದೆ. ಮೃತದೇಹಗಳನ್ನು ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಸರ್ಕಾರವು ಪ್ರತಿ ಪಿಎಚ್ಸಿಗಳಲ್ಲಿ ಮರಣೋತ್ತರ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಬೇಕಿದೆ. ಬಳ್ಳಾರಿಯ ಆರೋಗ್ಯ ವ್ಯವಸ್ಥೆಯಲ್ಲಿ ಈ ಕೊರತೆಯನ್ನು ತುರ್ತಾಗಿ ನಿವಾರಿಸಬೇಕು.
- Vinayak Badiger
- Updated on: Apr 11, 2025
- 9:32 pm
ಬಳ್ಳಾರಿಯಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್: ಬರೋಬ್ಬರಿ 50 ಕೋಟಿಗೂ ಹೆಚ್ಚು ವಂಚನೆ!
ಬಳ್ಳಾರಿಯಲ್ಲಿ ಮತ್ತೊಂದು ಮನಿ ಡಬ್ಲಿಂಗ್ ಸ್ಕ್ಯಾಮ್ ನಡೆದಿದೆ. ಅಮಾಯಕ ಜನರಿಂದ ಕೋಟಿ ಕೋಟಿ ರೂ. ಪಡೆದು ಓರ್ವ ವ್ಯಕ್ತಿ ಪರಾರಿಯಾಗಿದ್ದಾನೆ. ಮನಿ ಡಬ್ಲಿಂಗ್ ಎಂದು ನಂಬಿಸಿ ಜನರನ್ನು ವಂಚಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. ಇತ್ತ ಹಣ ಕಳೆದುಕೊಂಡ ಜನರು ಕಂಗಾಲಾಗಿದ್ದಾರೆ.
- Vinayak Badiger
- Updated on: Apr 9, 2025
- 10:27 am
ಅಕ್ರಮ ಸಂಬಂಧಕ್ಕೆ ಅಡ್ಡಿ.. ಪತಿ ಕಥೆ ಮುಗಿಸಿದ ಪತ್ನಿ, ಗಂಡನ ಶವದ ಮುಂದೆ ಕಣ್ಣೀರಿಟ್ಟಿದ್ದ ಮಳ್ಳಿ
ಪ್ರಿಯಕರನಿಗೆ ಸುಪಾರಿ ಕೊಟ್ಟು, ಹೆಂಡತಿಯೇ ಗಂಡನನ್ನ ಕೊಲೆ ಮಾಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ತನಗೇನೂ ಗೊತ್ತಿಲ್ಲ ಎನ್ನುವಂತೆ ನಟನೆ ಮಾಡಿ, ಗಂಡನ ಸಾವಿನ ಬಳಿಕ ಗೋಳಾಡಿ ಕಣ್ಣೀರಿಟ್ಟಿದ್ದ ಕಿಲಾಡಿ ಹೆಂಡತಿ ಇದೀಗ ಕಂಬಿ ಹಿಂದೆ ಮುದ್ದೆ ಮುರಿಯುತ್ತಿದ್ದಾಳೆ. ಗಂಡನ ಕೊಲೆಗೆ ಪ್ರಿಯಕರನ ಜೊತೆ ಸೇರಿ ಕಿರಾತಕಿ ಹೆಂಡತಿ ಹೇಗೆಲ್ಲಾ ಪ್ಲಾನ್ ಮಾಡಿದ್ಲು?. ಯಾಕಾಗಿ ಕೊಲೆ ಮಾಡಿಸೋ ಕೃತ್ಯಕ್ಕೆ ಮುಂದಾಗಿದ್ದಳು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Vinayak Badiger
- Updated on: Apr 6, 2025
- 6:15 pm
ಕಲ್ಯಾಣ ಕರ್ನಾಟಕ ರೈತರ 7 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಕೆಎಂಎಫ್
ಕರ್ನಾಟಕ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್ಗೆ 4 ರೂಪಾಯಿ ಹೆಚ್ಚಿಸಿದೆ. ಕೆಎಂಎಫ್ನ ರಬಕೊವಿ ಒಕ್ಕೂಟ 7 ಕೋಟಿ ರೂಪಾಯಿ ಬಾಕಿ ಹಣವನ್ನು ಹಾಲು ಉತ್ಪಾದಕರಿಗೆ ನೀಡದ ಕಾರಣ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆದಿದೆ. ರಬಕೊವಿ ಅಧಿಕಾರಿಗಳು ಲೀಟರ್ಗೆ 1.50 ರೂಪಾಯಿ ಕಡಿತಗೊಳಿಸಿದ್ದಾರೆ. ರೈತರ ಮುತ್ತಿಗೆಯ ನಂತರ, ಅಧಿಕಾರಿಗಳು ಒಂದು ತಿಂಗಳೊಳಗೆ ಹಣ ಪಾವತಿಸುವ ಭರವಸೆ ನೀಡಿದ್ದಾರೆ.
- Vinayak Badiger
- Updated on: Mar 29, 2025
- 3:56 pm
ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಬಳ್ಳಾರಿ ಜ್ಯುವೆಲ್ಲರಿ ಅಂಗಡಿ ಮಾಲೀಕ, ಉದ್ಯಮಿ ಸಾಹಿಲ್ ಜೈನ್ ಬಂಧನ
ಬಳ್ಳಾರಿ ಮೂಲದ ಆಭರಣ ವ್ಯಾಪಾರಿ ಸಾಹಿಲ್ ಜೈನ್ ಅನ್ನು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯು ರನ್ಯಾ ಮತ್ತು ತರುಣ್ ರಾಜ್ ಜೊತೆ ಸಂಪರ್ಕ ಹೊಂದಿದ್ದರು ಮತ್ತು ಅಕ್ರಮ ಚಿನ್ನದ ವ್ಯವಹಾರದಲ್ಲಿ ಶಾಮೀಲಾಗಿದ್ದರು ಎಂದು ಶಂಕಿಸಲಾಗಿದೆ. ಬಂಧಿತ ಸಾಹಿಲ್ ಜೈನ್ ಯಾರು? ಹಿನ್ನೆಲೆ ಏನು? ಎಲ್ಲ ವಿವರ ಇಲ್ಲಿದೆ.
- Vinayak Badiger
- Updated on: Mar 27, 2025
- 1:04 pm
ಬಳ್ಳಾರಿಯಲ್ಲಿ ನೀರಿನ ಅಭಾವ: ಕುಡಿಯುವ ನೀರಿಗಾಗಿ ನದಿಯಲ್ಲೇ ಬೋರವೆಲ್ ಕೊರೆದ ಜನ
ಬಳ್ಳಾರಿಯಲ್ಲಿ ತೀವ್ರ ನೀರಿನ ಕೊರತೆಯಿಂದಾಗಿ ಗ್ರಾಮಸ್ಥರು ವೇದಾವತಿ ನದಿಯಲ್ಲಿ ಬೋರ್ವೆಲ್ಗಳನ್ನು ಕೊರೆದಿದ್ದಾರೆ. ಬೇಸಿಗೆಯ ಬಿಸಿಲಿನಿಂದಾಗಿ ಭೂಗರ್ಭಜಲ ಮಟ್ಟ ಕುಸಿದಿದೆ ಮತ್ತು ಸಾಮಾನ್ಯ ಬೋರ್ವೆಲ್ಗಳು ಖಾಲಿಯಾಗಿವೆ. ರೂಪನಗುಡಿ, ಕಮ್ಮರಚೇಡ ಮತ್ತು ರಾರಾವಿ ಗ್ರಾಮಗಳಲ್ಲಿ ಪರಿಸ್ಥಿತಿ ತೀವ್ರವಾಗಿದೆ. ನದಿ ಒಣಗುತ್ತಿರುವುದು ಜನರು ಮತ್ತು ಜಾನುವಾರುಗಳಿಗೆ ಸಂಕಷ್ಟ ತಂದೊಡ್ಡಿದೆ.
- Vinayak Badiger
- Updated on: Mar 23, 2025
- 5:59 pm
ಹಂಪಿ ನೋಡಲು ಬಂದ ಕುಟುಂಬ ಆತ್ಮಹತ್ಯೆಗೆ ಯತ್ನ: ಓರ್ವ ಸಾವು, ಮೂರು ಪ್ರಾಣಾಪಾಯದಿಂದ ಪಾರು
ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರ ಪಟ್ಟಣದ ಕುಟುಂಬ ಹಂಪಿಗೆ ಆಗಮಿಸಿದ್ದು, ಈ ವೇಳೆ ದಂಪತಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾವು ಸೇವಿಸಿದ್ದಾರೆ. ಅದೃಷ್ಟವಶಾತ್ ಮೂವರು ಮೂರು ಬದುಕಿಳಿದಿದ್ದಾರೆ.
- Vinayak Badiger
- Updated on: Mar 19, 2025
- 4:06 pm
7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್
ಬಿಜೆಪಿ ಯುವ ಮುಖಂಡನ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಜಿಲ್ಲಾ ಪಂಚಾಯಿತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮುಖಂಡನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
- Vinayak Badiger
- Updated on: Mar 19, 2025
- 3:08 pm
ಕುಡಿದ ಮತ್ತಿನಲ್ಲಿ ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ಯುವಕ
ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರಿಗೆ ವಾಟ್ಸಪ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಶಾಸಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಂಬ್ ಸಂದೇಶ ಕಳುಹಿಸಿದ ಯುವಕ ಸಂತೋಷನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಸಂತೋಷನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಳ್ಳಾರಿಯಲ್ಲಿ ನಡೆದಿದ್ದು, ಶಾಸಕರು ಬೆಂಗಳೂರಿನಲ್ಲಿದ್ದಾಗಲೇ ಬೆದರಿಕೆ ಸಂದೇಶ ಬಂದಿದೆ.
- Vinayak Badiger
- Updated on: Mar 18, 2025
- 2:50 pm