AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kashappanavar

Vinay Kashappanavar

Author - TV9 Kannada

vinaykumar.kashappanavar@tv9.com
ಬೆಂಗಳೂರಿನ ಹಲವೆಡೆ ತುಂತುರು ಮಳೆ,  ಚುಮು ಚುಮು ಚಳಿ

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

Bengaluru Weather Update: ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ತಂಪಾದ ಮತ್ತು ಮೋಡ ಕವಿದ ವಾತಾವರಣವಿದೆ. ಇಡೀ ನಗರದಾದ್ಯಂತ ಮೋಡಗಳಿಂದ ಆವೃತವಾಗಿದ್ದು, ತಂಪಾದ ಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಧ್ಯಾಹ್ನದ ನಂತರವೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದ ಕೆಲವೆಡೆ ಈಗಾಗಲೇ ತುಂತುರು ಮಳೆಯಾಗಿದೆ.

ಬೆಂಗಳೂರಿಗರೇ ಎಚ್ಚರ ಎಚ್ಚರ: ನಿದ್ದೆ, ಬೆಳಿಗ್ಗೆ ತಿಂಡಿ ಬಿಟ್ರೆ ಅಪಾಯ ಫಿಕ್ಸ್​​!; ಬೆಚ್ಚಿ ಬೀಳಿಸುತ್ತೆ ಇತ್ತೀಚಿನ ಮಾಹಿತಿ

ಬೆಂಗಳೂರಿಗರೇ ಎಚ್ಚರ ಎಚ್ಚರ: ನಿದ್ದೆ, ಬೆಳಿಗ್ಗೆ ತಿಂಡಿ ಬಿಟ್ರೆ ಅಪಾಯ ಫಿಕ್ಸ್​​!; ಬೆಚ್ಚಿ ಬೀಳಿಸುತ್ತೆ ಇತ್ತೀಚಿನ ಮಾಹಿತಿ

ಉದ್ಯೋಗಸ್ಥರು ಸಮಯದ ಕೊರತೆಯಿಂದ ನಿದ್ದೆ ಮತ್ತು ಬೆಳಗ್ಗಿನ ಉಪಹಾರವನ್ನು ತ್ಯಜಿಸುತ್ತಿದ್ದಾರೆ. ಇದು ಯುವಜನರಲ್ಲಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಿಗೆ, ಆಸ್ಪತ್ರೆ ದಾಖಲಾತಿಗಳಿಗೆ ಕಾರಣವಾಗುತ್ತಿದೆ.  ಖಾಲಿ ಹೊಟ್ಟೆಯಲ್ಲಿ ಪ್ರಯಾಣಿಸುವುದರಿಂದ ಅಸ್ವಸ್ಥರಾಗುವ ಪ್ರಕರಣಗಳು ಹೆಚ್ಚಾಗಿವೆ. ಅಷ್ಟಕ್ಕೂ ಈ ರೀತಿ ಆಗಲು ಕಾರಣ ಏನು? ಈ ಸಮಸ್ಯೆ ಆಗದಂತೆ ಯಾವ ರೀತಿಯ ಮುಂಜಾಗೃತೆ ವಹಿಸಬೇಕು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಅಕ್ಯುಟ್‌ ಡಯಾರಿಯಲ್‌ ಡಿಸೀಸ್ ಏರಿಕೆ: ಆರೋಗ್ಯ ಇಲಾಖೆಗೂ ಟೆನ್ಷನ್ ಶುರು

ಬೆಂಗಳೂರಿನಲ್ಲಿ ಅಕ್ಯುಟ್‌ ಡಯಾರಿಯಲ್‌ ಡಿಸೀಸ್ ಏರಿಕೆ: ಆರೋಗ್ಯ ಇಲಾಖೆಗೂ ಟೆನ್ಷನ್ ಶುರು

ಸಿಲಿಕಾನ್​​ ಸಿಟಿ ಜನರೇ ಚಳಿಗಾಲ ಮುಗಿಯುವರೆಗೂ ಕೊಂಚ ಎಚ್ಚರ ಎಂದು ಆರೋಗ್ಯ ತಜ್ಞರು ಹೇಳುತ್ತಿದ್ದಾರೆ. ಏಕೆಂದರೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಕ್ಯುಟ್‌ ಡಯಾರಿಯಲ್‌ ಡಿಸೀಸ್ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದೆ. ಇದು ಆರೋಗ್ಯ ಇಲಾಖೆಗೂ ಟೆನ್ಷನ್ ಹೆಚ್ಚಿಸಿದೆ.

ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ, ಎಸ್​ಎಸ್ಎಲ್​ಸಿ-ಪಿಯುಸಿ ಪರೀಕ್ಷೆ ವಿಧಾನದ ಕುರಿತು ಸ್ಪಷ್ಟನೆ

ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ, ಎಸ್​ಎಸ್ಎಲ್​ಸಿ-ಪಿಯುಸಿ ಪರೀಕ್ಷೆ ವಿಧಾನದ ಕುರಿತು ಸ್ಪಷ್ಟನೆ

ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಪಠ್ಯಪುಸ್ತಗಳೊಂದಿಗೆ ಇನ್ನು ಮುಂದೆ ನೋಟ್​ಬುಕ್​ ಕೂಡ ಉಚಿತ

ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಪಠ್ಯಪುಸ್ತಗಳೊಂದಿಗೆ ಇನ್ನು ಮುಂದೆ ನೋಟ್​ಬುಕ್​ ಕೂಡ ಉಚಿತ

ಕರ್ನಾಟಕ ಸರ್ಕಾರವು ಮುಂದಿನ ವರ್ಷದಿಂದ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಿದೆ. ಪಠ್ಯಪುಸ್ತಕ ಮತ್ತು ಸಮವಸ್ತ್ರದ ಜೊತೆಗೆ ಈ ಹೊಸ ಯೋಜನೆಯು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ದೊಡ್ಡ ನೆರವು ನೀಡಲಿದೆ. ಪ್ರತಿ ವಿದ್ಯಾರ್ಥಿಗೆ 6 ವಿಷಯಗಳಿಗೆ 6 ನೋಟ್‌ಬುಕ್‌ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್; ಕೆಎಂಎಫ್ ಹೊಸ ರೂಲ್ಸ್

ನಂದಿನಿ ಬೂತ್​ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಗೆ ಬ್ರೇಕ್; ಕೆಎಂಎಫ್ ಹೊಸ ರೂಲ್ಸ್

ಕೆಎಂಎಫ್ ತನ್ನ ನಂದಿನಿ ಮಳಿಗೆಗಳಲ್ಲಿ ಬೇರೆ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ನಂದಿನಿ ಉತ್ಪನ್ನಗಳ ಜೊತೆ ಇತರೆ ಪ್ರಾಡಕ್ಟ್‌ಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಸಿದೆ. ಇನ್ನು ಕೇವಲ ನಂದಿನಿ ಉತ್ಪನ್ನಗಳನ್ನೇ ಮಾರಾಟ ಮಾಡಬೇಕೆಂದು ಕೆಎಂಎಫ್ ತಿಳಿಸಿದೆ.

Ditwah Cyclone: ಕರ್ನಾಟಕದ ಯಾವೆಲ್ಲ ಜಿಲ್ಲೆಗಳ ಮೇಲೆ ದಿತ್ವಾ ಸೈಕ್ಲೋನ್ ಪರಿಣಾಮ? ಇಲ್ಲಿದೆ ವಿವರ

Ditwah Cyclone: ಕರ್ನಾಟಕದ ಯಾವೆಲ್ಲ ಜಿಲ್ಲೆಗಳ ಮೇಲೆ ದಿತ್ವಾ ಸೈಕ್ಲೋನ್ ಪರಿಣಾಮ? ಇಲ್ಲಿದೆ ವಿವರ

ದುರ್ಬಲಗೊಂಡಿರುವ ದಿತ್ವಾ ಚಂಡಮಾರುತದಿಂದ ಡಿಸೆಂಬರ್ 1 ರಿಂದ 4 ರವರೆಗೆ ಕರ್ನಾಟಕದ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶದಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಹಲವು ಜಿಲ್ಲೆಗಳಲ್ಲಿ ದಾಖಲೆಯ ಚಳಿ ವಾತಾವರಣ ಮುಂದುವರಿಯಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

ಶಾಲೆಗಳ ಸುತ್ತಮುತ್ತ ಬೀದಿ ನಾಯಿ ಉಪಟಳ ತಡೆಯಲು  ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಶಾಲೆಗಳ ಸುತ್ತಮುತ್ತ ಬೀದಿ ನಾಯಿ ಉಪಟಳ ತಡೆಯಲು ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಬೀದಿ ನಾಯಿಗಳ ಮಾಹಿತಿ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಎಲ್ಲ ಸಂಘ ಸಂಸ್ಥೆಗಳಿಗೆ ಆಯಾ ನಗರ ಪಾಲಿಕೆಗಳು ನೋಟಿಸ್ ಜಾರಿ ಮಾಡಿವೆ. ಇದರ ಬೆನ್ನಲ್ಲೇ ಇದೀಗ ಶಾಲೆಗಳ ಸುತ್ತಮುತ್ತ ಬೀದನಾಯಿಗಳ ಉಪಟಳ ತಡೆಗಟ್ಟಲು ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗಾದ್ರೆ, ಈ ಮಾರ್ಗಸೂಚಿಯಲ್ಲಿ ಏನೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ನಕಲಿ ನಂದಿನಿ ತುಪ್ಪ ಕಡಿವಾಣಕ್ಕೆ KMF ಹೊಸ ಪ್ರಯೋಗ: ಕ್ಯೂ ಆರ್ ಕೋಡಿನಲ್ಲೇ ಅಸಲಿ, ನಕಲಿ ಪತ್ತೆ

ನಕಲಿ ನಂದಿನಿ ತುಪ್ಪ ಕಡಿವಾಣಕ್ಕೆ KMF ಹೊಸ ಪ್ರಯೋಗ: ಕ್ಯೂ ಆರ್ ಕೋಡಿನಲ್ಲೇ ಅಸಲಿ, ನಕಲಿ ಪತ್ತೆ

ನಂದಿನಿ ಬ್ರಾಂಡ್‌ ತುಪ್ಪವನ್ನು ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವೊಂದು ಬೆಂಗಳೂರಿನಲ್ಲಿ ಇತ್ತೀಚೆಗೆ ಪತ್ತೆ ಆಗಿತ್ತು. ಇದಕ್ಕೆ ಕಡಿವಾಣ ಹಾಕಲು ಇದೀಗ KMF QR ಕೋಡ್ ಬಳಸಲು ಮುಂದಾಗಿದೆ. ಹಾಗಾದರೆ ಇದರಿಂದ ಗ್ರಾಹಕರಿಗೆ ಹೊರೆಯಾಗುತ್ತಾ, ಇಲ್ಲವಾ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು: ಇಂದಿನಿಂದ ಡಿಸೆಂಬರ್ 7ರವರೆಗೆ ಕಬ್ಬನ್ ಪಾರ್ಕ್​ನಲ್ಲಿ ಫ್ಲವರ್ ಶೋ!

ಬೆಂಗಳೂರು: ಇಂದಿನಿಂದ ಡಿಸೆಂಬರ್ 7ರವರೆಗೆ ಕಬ್ಬನ್ ಪಾರ್ಕ್​ನಲ್ಲಿ ಫ್ಲವರ್ ಶೋ!

ಕಬ್ಬನ್ ಪಾರ್ಕ್‌ನಲ್ಲಿ ನವೆಂಬರ್ 27ರಿಂದ ಡಿಸೆಂಬರ್ 7ರವರೆಗೆ ಹೂವಿನ ಪ್ರದರ್ಶನ ಆಯೋಜಿಸಲಾಗಿದೆ. ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ 10 ವರ್ಷಗಳ ನಂತರ ನಡೆಯುತ್ತಿರುವ ಈ ಪುಷ್ಪ ಮೇಳದಲ್ಲಿ ಆಕರ್ಷಕ ಕಲಾಕೃತಿಗಳು ಹಾಗೂ ವಿವಿಧ ಜಾತಿಯ ಹೂವುಗಳನ್ನು ಪ್ರದರ್ಶಿಸಲು ಇಲಾಖೆ ಮುಂದಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ.

ಅಪರೂಪದ ಹೃದ್ರೋಗಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಯದೇವ ವೈದ್ಯರ ಮತ್ತೊಂದು ಸಾಧನೆ

ಅಪರೂಪದ ಹೃದ್ರೋಗಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಯದೇವ ವೈದ್ಯರ ಮತ್ತೊಂದು ಸಾಧನೆ

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ವೈದ್ಯರು ಮತ್ತೊಂದು ಹೊಸ ಸಾಧನೆ ಮಾಡಿದ್ದಾರೆ. ಅಪರೂಪದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 2 ವರ್ಷದ ವಿದೇಶಿ ಮಗುವಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ ನಡೆಸಲಾಗಿದೆ. ಗುಣಮುಖಗೊಂಡ ಮಗು ಇಂದು ಜಯದೇವ ಆಸ್ಪತ್ರೆಯಿಂದಲೂ ಡಿಸ್ಚಾರ್ಜ್​​ ಆಗಿದೆ.

ಬಾಹ್ಯಾಕಾಶದಲ್ಲಿ ಏನೇನು ಸಂಕಷ್ಟ ಎದುರಾಗಿತ್ತು? ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜತೆ ಮನದಾಳ ತೆರೆದಿಟ್ಟ ಗಗನಯಾನಿ ಶುಭಾಂಶು ಶುಕ್ಲಾ

ಬಾಹ್ಯಾಕಾಶದಲ್ಲಿ ಏನೇನು ಸಂಕಷ್ಟ ಎದುರಾಗಿತ್ತು? ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಜತೆ ಮನದಾಳ ತೆರೆದಿಟ್ಟ ಗಗನಯಾನಿ ಶುಭಾಂಶು ಶುಕ್ಲಾ

ಕೈ ಈಗಿರುವುದಕ್ಕಿಂತ ಎಂಟು ಪಟ್ಟು ಭಾರವಾಯಿತು, ಕೆಲ ಗಂಟೆಗಳ ಕಾಲ ದೇಹದ ಎತ್ತರವೇ ತುಸು ಹೆಚ್ಚಾಯಿತು! ಒಬ್ಬ ಮನುಷ್ಯನಿಗೆ ಹೀಗೆಲ್ಲ ಆಗುತ್ತದಾ!? ಇಂಥದ್ದೊಂದು ಪ್ರಶ್ನೆ ನಿಮ್ಮಲ್ಲಿ ಮೂಡಿದರೆ ಅಚ್ಚರಿಯಿಲ್ಲ. ಆದರೆ, ಬಾಹ್ಯಾಕಾಶ ನಿಲ್ದಾಣದಲ್ಲಿ ಇವೆಲ್ಲವೂ ಸಾಧ್ಯ. ಖುದ್ದು ಅಲ್ಲಿಗೆ ಹೋಗಿ ಬಂದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೇ ಹೇಳಿದ ಮಾತಿದು! ಹಾಗಾದರೆ ಅವರು ಹೇಳಿದ್ದೇನು? ವಿವರಗಳಿಗೆ ಮುಂದೆ ಓದಿ.