ಕೇಕ್ನಲ್ಲಿ ಮೂಡಿದ ಡಿಸ್ನಿ ಕ್ಯಾಸಲ್, ಮಾಸ್ಟರ್ ಶೆಫ್! ಬೆಂಗಳೂರಿನ ಕೇಕ್ ಶೋ ಹೇಗಿದೆ ನೋಡಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ 51ನೇ ವಾರ್ಷಿಕ ಕೇಕ್ ಶೋ ಆರಂಭಗೊಂಡಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದು, ಜನವರಿ 4ರವರೆಗೆ ನಡೆಯಲಿದೆ. ಶೆಫ್ಗಳ ಕಲಾತ್ಮಕ ಕೈಚಳಕದಲ್ಲಿ ಮೂಡಿಬಂದಿರುವ 25ಕ್ಕೂ ಹೆಚ್ಚು ವೈವಿಧ್ಯಮಯ ಕೇಕ್ ಕಲಾಕೃತಿಗಳು ಗಮನ ಸೆಳೆಯುತ್ತಿವೆ. ಉಚಿತ ಪ್ರವೇಶವಿರುವ ಈ ಪ್ರದರ್ಶನದಲ್ಲಿ ಡಿಸ್ನಿ ಕ್ಯಾಸಲ್, ಧಾರ್ಮಿಕ ದೇವಾಲಯಗಳು ಸೇರಿದಂತೆ ವಿಶಿಷ್ಟ ಕೇಕ್ಗಳನ್ನು ಕಾಣಬಹುದು.
- Vinay Kashappanavar
- Updated on: Dec 12, 2025
- 8:41 am
ಸೈಲೆಂಟ್ ಕಿಲ್ಲರ್ ಆಗ್ತಿದೆ ಗ್ಯಾಸ್ ಗೀಸರ್: ಜನರೇ ಎಚ್ಚರ!
ಇತ್ತೀಚೆಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಗ್ಯಾಸ್ ಗೀಸರ್ನಿಂದ ಸಾಕಷ್ಟು ಅನಾಹುತಗಳು ಸಂಭವಿಸುತ್ತಿದ್ದು, ಜನರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕಳಪೆ ಗುಣಮಟ್ಟದ ಗ್ಯಾಸ್ ಗೀಸರ್ ಬಳಕೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ನಿತ್ಯ ಸ್ನಾನಕ್ಕೆ ಗ್ಯಾಸ್ ಗೀಸರ್ ಬಳಕೆ ಮಾಡುವವರು ಎಚ್ಚರವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.
- Vinay Kashappanavar
- Updated on: Dec 10, 2025
- 6:33 pm
ಮೊಟ್ಟೆ ದರ ಏರಿಕೆಯಿಂದ ಸರ್ಕಾರಿ ಶಾಲಾ ಅಧ್ಯಾಪಕರು ಕಂಗಾಲು: ಮಕ್ಕಳಿಗೆ ಮೊಟ್ಟೆ ನೀಡಲು ಖರ್ಚಾಗುತ್ತಿದೆ ಶಿಕ್ಷಕರ ದುಡ್ಡು!
ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸರಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆ ಈಗ ಶಿಕ್ಷಕರಿಗೆ ಹೊರೆಯಾಗಿದೆ. ಸರಕಾರಿ ಶಾಲೆಗಳಲ್ಲಿ ವಾರದಲ್ಲಿ ಆರು ದಿನ ಮೊಟ್ಟೆ ವಿತರಿಸಲಾಗುತ್ತಿದೆ. ಪ್ರಸ್ತುತ ಮೊಟ್ಟೆ ದರ 8 ರೂ.ಗೆ ಏರಿಕೆಯಾಗಿದ್ದರೂ, ಸರ್ಕಾರ 6 ರೂ. ನಿಗದಿಪಡಿಸಿದ್ದರಿಂದ ಶಿಕ್ಷಕರು ಹೆಚ್ಚುವರಿ ವೆಚ್ಚ ಭರಿಸಬೇಕಾಗಿದೆ. ಇದು ಶಿಕ್ಷಕರ ಜೇಬು ಸುಡುವಂತೆ ಮಾಡಿದೆ.
- Vinay Kashappanavar
- Updated on: Dec 10, 2025
- 7:55 am
ಸಂಘರ್ಷಕ್ಕೆ ಕಾರಣವಾಯ್ತು 1ನೇ ತರಗತಿಗೆ 6 ವರ್ಷ ಕಡ್ಡಾಯ: ಏನಿದು ರಗಳೆ?
ಕರ್ನಾಟಕ ಶಿಕ್ಷಣ ಇಲಾಖೆ 2025-26ನೇ ಸಾಲಿಗೆ ಸಿಮಿತಗೊಳಿಸಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇದ್ದ ವಯೋಮಿತಿಯನ್ನು ಸಡಲಿಕೆ ಮಾಡಿತ್ತು. ಅದೇ ವಯೋಮಿತಿ ಸಡಲಿಕೆ ವಿಚಾರ ಇದೀಗ ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. 2026-27ನೇ ಸಾಲಿಗೂ ವಯೋಮಿತಿ ಸಡಲಿಕೆ ನೀಡುವಂತೆ ಪೋಷಕರು ಶಿಕ್ಷಣೆ ಇಲಾಖೆಗೆ ಒತ್ತಾಯಿಸಿದ್ದಾರೆ.
- Vinay Kashappanavar
- Updated on: Dec 8, 2025
- 7:38 pm
ವಿಧಾನ ಸೌಧದ ಮುಂದೆ ಗಮನ ಸೆಳೆದ ವಿಂಟೇಜ್ ಬ್ಯೂಟಿಗಳು; ಡ್ರಗ್ಸ್ ಬಗ್ಗೆ ಅರಿವು ಮೂಡಿಸಲು ಪೊಲೀಸರ ಹೊಸ ಪ್ರಯತ್ನ
ಬೆಂಗಳೂರು ಪೊಲೀಸರು ಯುವ ಸಮೂಹದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆಯ ವಿರುದ್ಧ ಜಾಗೃತಿ ಮೂಡಿಸಲು ಭಾನುವಾರ ವಿಶಿಷ್ಟ ವಿಂಟೇಜ್ ಕಾರ್ ರ್ಯಾಲಿ ಆಯೋಜಿಸಿದ್ದರು. "ಮಾದಕ ಮುಕ್ತ ಕರ್ನಾಟಕ" ಸಂದೇಶದೊಂದಿಗೆ ನಡೆದ ಈ ಅಭಿಯಾನದಲ್ಲಿ 75ಕ್ಕೂ ಹೆಚ್ಚು ವಿಂಟೇಜ್ ವಾಹನಗಳು ಪಾಲ್ಗೊಂಡಿದ್ದವು. ಗೃಹ ಸಚಿವರು ಚಾಲನೆ ನೀಡಿದ ಈ ಕಾರ್ಯಕ್ರಮವು ಯುವಕರನ್ನು ಮಾದಕ ವ್ಯಸನದಿಂದ ದೂರವಿರಿಸುವ ಗುರಿ ಹೊಂದಿದೆ.
- Vinay Kashappanavar
- Updated on: Dec 8, 2025
- 9:05 am
ಬೆಂಗಳೂರಲ್ಲಿ ಚಳಿ ಎಫೆಕ್ಟ್: ಮಕ್ಕಳು ಮತ್ತು ವೃದ್ಧರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಚಳಿ ಮತ್ತು ಶೀತ ಗಾಳಿಯಿಂದ ಉಸಿರಾಟದ ಸಮಸ್ಯೆಗಳು ಹೆಚ್ಚಾಗಿವೆ. ಹವಾಮಾನ ಬದಲಾವಣೆಯಿಂದ ಪುಟಾಣಿ ಮಕ್ಕಳು ಮತ್ತು ವೃದ್ಧರು ಹೆಚ್ಚಾಗಿ ಕೆಮ್ಮು, ನೆಗಡಿ, ಜ್ವರ, ಉಬ್ಬಸದಂತಹ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ವೈದ್ಯರು ನೀಡಿರುವ ಸಲಹೆ, ಸೂಚನೆ ಇಲ್ಲಿವೆ.
- Vinay Kashappanavar
- Updated on: Dec 7, 2025
- 2:16 pm
ಕ್ಷಣಕ್ಷಣಕ್ಕೂ ಬದಲಾಗ್ತಿದೆ ಬೆಂಗಳೂರು ವಾತಾವರಣ: ಇನ್ನೆರಡು ದಿನ ಇರಲಿದೆ ಭಾರಿ ಚಳಿ!
Bengaluru Weather: ಬೆಂಗಳೂರು ಕಳೆದ ಎರಡು ವಾರದಿಂದ ಕೂಲ್ ಸಿಟಿಯಾಗಿ ಮಾರ್ಪಟ್ಟಿದೆ. ನಗರದಲ್ಲಿ ಸತತ ಹಲವು ದಿನಗಳಿಂದ ಜಿಟಿ ಮಳೆ ಚಳಿ, ಸದಾ ಮೋಡಕವಿದ ವಾತವರಣದಿಂದ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ರಾಜಧಾನಿಯ ವಾತಾವರಣ ಮಕ್ಕಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಆತಂಕ ಸೃಷ್ಟಿಸಿದೆ.
- Vinay Kashappanavar
- Updated on: Dec 6, 2025
- 7:19 am
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
Bengaluru Weather Update: ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ತಂಪಾದ ಮತ್ತು ಮೋಡ ಕವಿದ ವಾತಾವರಣವಿದೆ. ಇಡೀ ನಗರದಾದ್ಯಂತ ಮೋಡಗಳಿಂದ ಆವೃತವಾಗಿದ್ದು, ತಂಪಾದ ಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಧ್ಯಾಹ್ನದ ನಂತರವೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದ ಕೆಲವೆಡೆ ಈಗಾಗಲೇ ತುಂತುರು ಮಳೆಯಾಗಿದೆ.
- Vinay Kashappanavar
- Updated on: Dec 5, 2025
- 11:19 am
ಬೆಂಗಳೂರಿಗರೇ ಎಚ್ಚರ ಎಚ್ಚರ: ನಿದ್ದೆ, ಬೆಳಿಗ್ಗೆ ತಿಂಡಿ ಬಿಟ್ರೆ ಅಪಾಯ ಫಿಕ್ಸ್!; ಬೆಚ್ಚಿ ಬೀಳಿಸುತ್ತೆ ಇತ್ತೀಚಿನ ಮಾಹಿತಿ
ಉದ್ಯೋಗಸ್ಥರು ಸಮಯದ ಕೊರತೆಯಿಂದ ನಿದ್ದೆ ಮತ್ತು ಬೆಳಗ್ಗಿನ ಉಪಹಾರವನ್ನು ತ್ಯಜಿಸುತ್ತಿದ್ದಾರೆ. ಇದು ಯುವಜನರಲ್ಲಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳಿಗೆ, ಆಸ್ಪತ್ರೆ ದಾಖಲಾತಿಗಳಿಗೆ ಕಾರಣವಾಗುತ್ತಿದೆ. ಖಾಲಿ ಹೊಟ್ಟೆಯಲ್ಲಿ ಪ್ರಯಾಣಿಸುವುದರಿಂದ ಅಸ್ವಸ್ಥರಾಗುವ ಪ್ರಕರಣಗಳು ಹೆಚ್ಚಾಗಿವೆ. ಅಷ್ಟಕ್ಕೂ ಈ ರೀತಿ ಆಗಲು ಕಾರಣ ಏನು? ಈ ಸಮಸ್ಯೆ ಆಗದಂತೆ ಯಾವ ರೀತಿಯ ಮುಂಜಾಗೃತೆ ವಹಿಸಬೇಕು ಎಂಬ ಮಾಹಿತಿ ಇಲ್ಲಿದೆ.
- Vinay Kashappanavar
- Updated on: Dec 3, 2025
- 6:30 pm
ಬೆಂಗಳೂರಿನಲ್ಲಿ ಅಕ್ಯುಟ್ ಡಯಾರಿಯಲ್ ಡಿಸೀಸ್ ಏರಿಕೆ: ಆರೋಗ್ಯ ಇಲಾಖೆಗೂ ಟೆನ್ಷನ್ ಶುರು
ಸಿಲಿಕಾನ್ ಸಿಟಿ ಜನರೇ ಚಳಿಗಾಲ ಮುಗಿಯುವರೆಗೂ ಕೊಂಚ ಎಚ್ಚರ ಎಂದು ಆರೋಗ್ಯ ತಜ್ಞರು ಹೇಳುತ್ತಿದ್ದಾರೆ. ಏಕೆಂದರೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಕ್ಯುಟ್ ಡಯಾರಿಯಲ್ ಡಿಸೀಸ್ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದೆ. ಇದು ಆರೋಗ್ಯ ಇಲಾಖೆಗೂ ಟೆನ್ಷನ್ ಹೆಚ್ಚಿಸಿದೆ.
- Vinay Kashappanavar
- Updated on: Dec 3, 2025
- 6:11 pm
ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ, ಎಸ್ಎಸ್ಎಲ್ಸಿ-ಪಿಯುಸಿ ಪರೀಕ್ಷೆ ವಿಧಾನದ ಕುರಿತು ಸ್ಪಷ್ಟನೆ
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
- Vinay Kashappanavar
- Updated on: Dec 3, 2025
- 11:27 am
ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಪಠ್ಯಪುಸ್ತಗಳೊಂದಿಗೆ ಇನ್ನು ಮುಂದೆ ನೋಟ್ಬುಕ್ ಕೂಡ ಉಚಿತ
ಕರ್ನಾಟಕ ಸರ್ಕಾರವು ಮುಂದಿನ ವರ್ಷದಿಂದ ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ಗಳನ್ನು ವಿತರಿಸಲಿದೆ. ಪಠ್ಯಪುಸ್ತಕ ಮತ್ತು ಸಮವಸ್ತ್ರದ ಜೊತೆಗೆ ಈ ಹೊಸ ಯೋಜನೆಯು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ದೊಡ್ಡ ನೆರವು ನೀಡಲಿದೆ. ಪ್ರತಿ ವಿದ್ಯಾರ್ಥಿಗೆ 6 ವಿಷಯಗಳಿಗೆ 6 ನೋಟ್ಬುಕ್ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಲಾಗಿದೆ.
- Vinay Kashappanavar
- Updated on: Dec 3, 2025
- 10:35 am