ಪಾಲಿಶ್ ಅಕ್ಕಿ ಮಕ್ಕಳ ಹೃದಯಕ್ಕೆ ಕುತ್ತು: ತಜ್ಞರು ಬಹಿರಂಗಪಡಿಸಿದ್ರು ಆಘಾತಕಾರಿ ಅಂಶ
ದಿನನಿತ್ಯದ ನಮ್ಮ ಆಹಾರ ಪದ್ಧತಿಯಲ್ಲಿ ಆರೋಗ್ಯ ಕುತ್ತು ತರುವ ಅನೇಕ ತಿನಿಸು, ಪದಾರ್ಥಗಳನ್ನು ಸೇವನೆ ಮಾಡುತ್ತಿದ್ದೇವೆ. ಅದರಲ್ಲೂ ಅನ್ನ ಎಲ್ಲ ಮನೆಗಳಲ್ಲಿ ಸಾಮಾನ್ಯವಾಗಿ ದಿನನಿತ್ಯ ಸೇವಿಸುವ ಒಂದು ಆಹಾರವಾಗಿದೆ. ಬಿಳಿ ಅಕ್ಕಿಯಲ್ಲೇ ಬಗೆ ಬಗೆಯ ಅಡುಗೆ ಮಾಡಿ ಸೇವಿಸಲಾಗುತ್ತದೆ. ಈ ಬೆನ್ನಲ್ಲೇ ಇದೀಗ ಈ ಬಿಳಿ ಪಾಲಿಶ್ ಅಕ್ಕಿ ಸೇವಿಸುವವರು ಎಚ್ಚರದಿಂದ ಇರಬೇಕಾದ ಪರಿಸ್ಥಿತಿ ಬಂದಿದೆ.
- Vinay Kashappanavar
- Updated on: Apr 30, 2025
- 8:50 pm
Karnataka Snakebite Cases: ಕೇವಲ 120 ದಿನಗಳಲ್ಲಿ ಕರ್ನಾಟಕದಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿಗೆ ಹಾವು ಕಡಿತ!
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕಾಂಕ್ರೀಟೀಕರಣ ಹೆಚ್ಚಾಗುತ್ತಿದೆ. ಕಾಡು ಮೇಡಿನ ಜಾಗದಲ್ಲಿ ಬೃಹತ್ ಕಟ್ಟಡಗಳು ಮೇಲೇಳುತ್ತಿವೆ. ಎಲ್ಲೂ ಆಶ್ರಯ ಸಿಗದೇ ಮೂಕ ರೋಧನೆ ಅನುಭವಿಸುತ್ತಿರುವ ಪ್ರಾಣಿ, ಪಕ್ಷಿಗಳ ಮಧ್ಯೆ ಇತರ ಜಿಲ್ಲೆಗಳೂ ಸೇರಿ ರಾಜಧಾನಿ ಬೆಂಗಳೂರಿನಲ್ಲಿ ಹಾವುಗಳ ಕಡಿತ ಪ್ರಕರಣಗಳು ಹೆಚ್ಚಾಗಿವೆ. ಕೇವಲ 120 ದಿನಗಳಲ್ಲಿ 3259 ಹಾವು ಕಡಿತ ಪ್ರಕರಣಗಳು ದಾಖಲಾಗಿವೆ. ಇದು ಆರೋಗ್ಯ ಇಲಾಖೆಯ ನಿದ್ದೆ ಕೆಡಿಸಿದ್ದು, ಹಾವು ಕಡಿತದಿಂದ ಸಂಭವಿಸಿದ ಸಾವುಗಳ ಆಡಿಟ್ಗೆ ಆರೋಗ್ಯ ಇಲಾಖೆ ಮುಂದಾಗಿದೆ.
- Vinay Kashappanavar
- Updated on: Apr 30, 2025
- 8:43 am
ಬೆಂಗಳೂರಿನಲ್ಲಿ ಸೈಲೆಂಟ್ ಆಗಿ ಡೆಂಘಿ ಹೆಚ್ಚಳ: ಮೂರುವರೇ ತಿಂಗಳಲ್ಲಿ 435 ಮಂದಿಗೆ ಡೆಂಘಿ ದೃಢ
ಬೆಂಗಳೂರಿನಲ್ಲಿ ಅಕಾಲಿಕ ಮಳೆಯಿಂದಾಗಿ ಡೆಂಘಿ ಪ್ರಕರಣಗಳು ಏರಿಕೆಯಾಗುತ್ತಿವೆ. ಕಳೆದ ಮೂರು ತಿಂಗಳಲ್ಲಿ 2361 ಶಂಕಿತರ ಪರೀಕ್ಷೆಯಲ್ಲಿ 435 ಮಂದಿಗೆ ಡೆಂಘಿ ದೃಢಪಟ್ಟಿದೆ. ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಸೊಳ್ಳೆ ನಿಯಂತ್ರಣ ಮತ್ತು ಸ್ವಚ್ಛತೆಗೆ ಒತ್ತು ನೀಡಲಾಗುತ್ತಿದೆ. ಜನರು ಸಹ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
- Vinay Kashappanavar
- Updated on: Apr 27, 2025
- 8:14 am
ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಇನ್ನೇನು ಸಿಇಟಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸಿಇಟಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಕೆಇಎ ಹೊಸ ನಿಮಯ ಜಾರಿಗೆ ತಂದಿದೆ. ಈ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.
- Vinay Kashappanavar
- Updated on: Apr 26, 2025
- 6:59 pm
ಅಡುಗೆಗೆ ಸಾಸಿವೆ, ಜೀರಿಗೆ ಬಳಸುವ ಮುನ್ನ ಎಚ್ಚರ: ಅದರಲ್ಲೂ ಕಲಬೆರಿಕೆ, ಬಣ್ಣ ಮಿಕ್ಸ್?
ಅಡುಗೆಗೆ ಮಸಾಲೆ ಪದಾರ್ಥಗಳು ತುಂಬಾನೆ ಮುಖ್ಯ. ಕೆಲವರು ಅಡುಗೆಗೆ ಮಸಾಲ ಪದಾರ್ಥಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಹೀಗಿರುವಾಗ, ಅನೇಕ ಮಸಾಲೆ ಪದಾರ್ಥಗಳಲ್ಲೂ ಕಲಬೆರೆಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ. ನಿರಂತರ ಆಹಾರ ಕಲಬೆರೆಕೆ ಹಿನ್ನೆಲೆಯಲ್ಲ ಸಿಟಿ ಜನರು ಕೂಡ ಬೇಸತ್ತು ಹೋಗಿದ್ದಾರೆ.
- Vinay Kashappanavar
- Updated on: Apr 23, 2025
- 6:43 pm
Karnataka Text Book Price: ಶಾಲಾ ಶುಲ್ಕ ಆಯ್ತು, ಇದೀಗ ಪಠ್ಯ ಪುಸ್ತಕಗಳ ಬೆಲೆ ಶೇ 10 ಏರಿಕೆ
ಕರ್ನಾಟಕ ಪಠ್ಯ ಪುಸ್ತಕ ದರ ಹೆಚ್ಚಳ: ಶಾಲಾ ಫೀಸ್, ಶಾಲೆ ಬಸ್ ಶುಲ್ಕ ಹೆಚ್ಚಳ, ಲೇಖನ ಸಾಮಗ್ರಿಗಳ ದರ ಹೆಚ್ಚಳ ನಿರ್ಧಾರ ಈಗಾಗಲೇ ಪೋಷಕರ ನಿದ್ದೆಗೆಡಿಸಿದೆ. ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಬರೆ ಎಳೆಯಲು ಕರ್ನಾಟಕ ಪಠ್ಯ ಪುಸ್ತಕ ಸಂಘ ಮುಂದಾಗಿದೆ. ಪಠ್ಯ ಪುಸ್ತಕ ದರ ಏರಿಕೆ ಮಾಡಲು ನಿರ್ಧರಿಸಲಾಗಿದೆ.
- Vinay Kashappanavar
- Updated on: Apr 22, 2025
- 10:35 am
ಓಂ ಪ್ರಕಾಶ್ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್? ಇಲ್ಲಿದೆ ಡಾಕ್ಟರ್ ಮಾತು
ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಪತ್ನಿಯಿಂದಲೇ ಓಂ ಪ್ರಕಾಶ್ ಕಗ್ಗೊಲೆಯಾಗಿದ್ದಾರೆ. ಓಂ ಪ್ರಕಾಶ್ ಪಲ್ಲವಿಯೇ ಪತಿಯನ್ನ 8ರಿಂದ 10 ಬಾರಿ ಕೊಚ್ಚಿ ಕೊಂದಿದ್ದಾರೆ. ಇನ್ನು ಪಲ್ಲವಿ ಸ್ಕಿಜೋಫ್ರೇನಿಯಾ ರೋಗದಿಂದ ಬಳಲುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಏನಿದು ರೋಗ. ಒಬ್ಬರನ್ನು ಕೊಲೆ ಮಾಡುಷ್ಟು ಅಪಾಯಕಾರಿನಾ? ಈ ಬಗ್ಗೆ ವೈದ್ಯರು ಹೇಳಿದ್ದಿಷ್ಟು
- Vinay Kashappanavar
- Updated on: Apr 21, 2025
- 6:32 pm
ಓಂ ಪ್ರಕಾಶ್ ಹತ್ಯೆ: ಪತ್ನಿ ಪಲ್ಲವಿಗಿರುವ ಸ್ಕಿಜೋಫ್ರೇನಿಯಾ ರೋಗ ಎಷ್ಟು ಅಪಾಯಕಾರಿ? ಲಕ್ಷಣಗಳೇನು?
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಕೊಲೆಯಾಗಿದ್ದಾರೆ. ಓಂ ಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿಯವರು ಚಾಕುವಿನಿಂದ 8-10 ಬಾರಿ ಇರಿದು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಪಲ್ಲವಿಯವರು ಸ್ಕಿಜೋಫ್ರೇನಿಯಾ ರೋಗದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಿದ್ದರೆ, ಏನಿದು ಸ್ಕಿಜೋಫ್ರೇನಿಯಾ ರೋಗ, ಹೇಗೆ ಬರುತ್ತದೆ, ಲಕ್ಷಣಗಳೇನು? ಇಲ್ಲಿದೆ ವಿವರ
- Vinay Kashappanavar
- Updated on: Apr 21, 2025
- 6:04 pm
1ನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲಿಕೆ ಸಂಘರ್ಷ: ಕೋರ್ಟ್ ಮೊರೆ ಹೋಗಲು ಮುಂದಾದ ಖಾಸಗಿ ಶಾಲೆಗಳ ಒಕ್ಕೂಟ
ಕರ್ನಾಟಕದಲ್ಲಿ 1ನೇ ತರಗತಿ ದಾಖಲಾತಿಗೆ ಕಡ್ಡಾಯ 6 ವರ್ಷ ವಯಸ್ಸಿನ ನಿಯಮದಿಂದ ಇದೀಗ ಮತ್ತೊಂದು ಸಂಘರ್ಷ ಉಂಟಾಗಿದೆ. ಪೋಷಕರ ಒತ್ತಾಯದಿಂದ ಈ ವರ್ಷ 5.5 ವರ್ಷಕ್ಕೆ ವಿನಾಯಿತಿ ನೀಡಲಾಗಿದೆ. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ವಿರುದ್ಧ ಕೋರ್ಟ್ ಮೆಟಿಲ್ಲೇರಲು ಮುಂದಾಗಿವೆ.
- Vinay Kashappanavar
- Updated on: Apr 21, 2025
- 9:04 am
ಶುಲ್ಕ ವಿವರ ಪ್ರಕಟಿಸಿದೆ ಖಾಸಗಿ ಶಾಲೆಗಳ ಉದ್ಧಟತನ: ಶಿಕ್ಷಣ ಇಲಾಖೆ ಆದೇಶಕ್ಕೂ ಡೋಂಟ್ ಕೇರ್!
ಕರ್ನಾಟಕದಲ್ಲಿ ಖಾಸಗಿ ಶಾಲೆಗಳ ಶುಲ್ಕ ಏರಿಕೆ ಮಾಡಿಕೊಂಡು ದಾಖಲಾತಿ ಶುರು ಮಾಡಿವೆ. ಇದರಿಂದ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೊತೆಗೆ ಶುಲ್ಕದ ವಿವರ ಬಹಿರಂಗಪಡಿಸದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಶುಲ್ಕದ ವಿವರಗಳನ್ನು ಬಹಿರಂಗಪಡಿಸುವಂತೆ ಶಿಕ್ಷಣ ಇಲಾಖೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದೆ.
- Vinay Kashappanavar
- Updated on: Apr 20, 2025
- 7:58 am
ಜನಿವಾರ ವಿವಾದ; ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು
ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸಿಇಟಿ ಪರೀಕ್ಷಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಬೀದರ್ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು.
- Vinay Kashappanavar
- Updated on: Apr 19, 2025
- 10:41 pm
ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ; ಅಧಿಕಾರಿಗಳದ್ದೇ ತಪ್ಪೆಂದು ವರದಿ ಸಲ್ಲಿಸಿದ ಡಿಸಿ
ಶಿವಮೊಗ್ಗ ಮತ್ತು ಬೀದರ್ನಲ್ಲಿ ಸಿಇಟಿ ಅಭ್ಯರ್ಥಿಗಳನ್ನು ಪರೀಕ್ಷೆ ಬರೆಯಲು ಕೊಠಡಿಗೆ ಕಳುಹಿಸುವಾಗ ತಪಾಸಣೆ ಮಾಡಿದ್ದ ಅಧಿಕಾರಿಗಳು ಜನಿವಾರ ಹಾಕಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರಾಕರಿಸಿದ್ದರು. ಹಲವು ವಿದ್ಯಾರ್ಥಿಗಳ ಜನಿವಾರ ಮತ್ತು ಕೈಯಲ್ಲಿದ್ದ ಕಾಶಿ ದಾರವನ್ನು ಬಿಚ್ಚಿಸಿದ್ದರು. ಇದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಇದೀಗ ಜನಿವಾರ ತೆಗಸಿರುವ ಹಾಗೂ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಡಿಸಿ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಆ ವರದಿಯಲ್ಲೇನಿದೆ? ಎಂಬ ಮಾಹಿತಿ ಇಲ್ಲಿದೆ.
- Vinay Kashappanavar
- Updated on: Apr 19, 2025
- 7:52 pm