AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Kashappanavar

Vinay Kashappanavar

Author - TV9 Kannada

vinaykumar.kashappanavar@tv9.com
ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಾವು ಕಡಿತ ಪ್ರಕರಣಗಳು ಮತ್ತು ಸಾವುಗಳು ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿವೆ. ಕಳೆದ ಐದು ತಿಂಗಳಲ್ಲಿ 5597 ಜನರಿಗೆ ಹಾವು ಕಚ್ಚಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆಗೆ ಮುಂದಾಗಿದೆ. ನಿರ್ಲಕ್ಷ್ಯ ವಹಿಸದ್ದಂತೆ ಜನರಿಗೂ ಸೂಚಿಸಲಾಗಿದೆ.

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​

ಬೆಂಗಳೂರಿನಲ್ಲಿ ಆತಂಕ ಮೂಡಿಸಿದ್ದ ಉಗಾಂಡಾ ಮೂಲದ ಮಹಿಳೆಯ ಎಬೋಲಾ ವೈರಸ್ ತಪಾಸಣಾ ವರದಿ ನೆಗೆಟಿವ್ ಬಂದಿದೆ. ಇದರಿಂದಾಗಿ ರಾಜ್ಯ ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದ್ದು, ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಉಗಾಂಡಾದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಹೀಗಾಗಿ ಐಸೋಲೇಷನ್​​ನಲ್ಲಿ ಇಡಲಾಗಿದ್ದ ಅವರನ್ನು ಆಸ್ಪತ್ರೆಯಿಂದ ಹೋಟೆಲ್​ಗೆ ಸ್ಥಳಾಂತರ ಮಾಡಲಾಗಿದೆ.

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ

ಆತಂಕ ಸೃಷ್ಟಿಸಿರುವ ಎಬೋಲಾ ವೈರಸ್​ ಸದ್ಯ ರಾಜಧಾನಿಗೂ ಕಾಲಿಟ್ಟಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಏಕೆಂದರೆ ಉಗಾಂಡಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮಹಿಳೆಯಲ್ಲಿ ಎಬೋಲಾ ವೈರಸ್ ರೋಗ ಪತ್ತೆ ಶಂಕೆ ವ್ಯಕ್ತವಾಗಿದೆ. ಸದ್ಯ ಮಹಿಳೆಯನ್ನು ಐಸೋಲೇಷನ್​​ಗಾಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಆರೋಗ್ಯ ಇಲಾಖೆ ವರದಿಗಾಗಿ ಕಾಯುತ್ತಿದೆ.

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ

ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಾದ್ಯಂತ ಶಾಲೆಗಳು (School) ಪುನರಾರಂಭವಾಗಲಿದೆ. ಬೇಸಿಗೆ ರಜೆ ಮುಗಿಸಿ ಮಕ್ಕಳೆಲ್ಲಾ (Students) ಶಾಲೆಗೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿರುವಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ (Education Department Guidelines) ಬಿಡುಗಡೆ ಮಾಡಿದೆ. ಹಾಗಾದ್ರೆ, ಮಾರ್ಗಸೂಚಿಯಲ್ಲಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಏನೆಲ್ಲಾ ಅಂಶಗಳಿವೆ ಎನ್ನುವ ವಿವರ ಇಲ್ಲಿದೆ.

ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ

ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ

ಬೆಂಗಳೂರಿನ ಬಸವೇಶ್ವರ ನಗರದಲ್ಲಿ ದೇಶದ ಮೊದಲ ಅತ್ಯಾಧುನಿಕ 108 ಆ್ಯಂಬುಲೆನ್ಸ್ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದು, ಇನ್ಮುಂದೆ ಎಲ್ಲಾ ಪ್ರಮುಖ ತುರ್ತು ಸಹಾಯವಾಣಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲಿವೆ. ಸರ್ಕಾರಿ ಆ್ಯಂಬುಲೆನ್ಸ್ ಸೇವೆ ಜನರಿಗೆ ಸುಲಭವಾಗಿ ದೊರೆಯಲಿದೆ.

ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?

ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?

ಬೆಂಗಳೂರಿನ ರಸ್ತೆಗಳ ದುರಾವಸ್ಥೆಯಿಂದಾಗಿ ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಯೊಬ್ಬ ಯುಪಿಎಸ್‌ಸಿ ಪರೀಕ್ಷೆಯಿಂದ ವಂಚಿತನಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​​ನ ತನ್ನ ಮನೆಯಿಂದ ಬೆಳಿಗ್ಗೆ 7 ಗಂಟೆಗೆ ಹೊರಟಿದ್ದರೂ ಎಕ್ಸಾಂ ಸೆಂಟರ್​​ ತಲುಪುವಾಗ ವಿದ್ಯಾರ್ಥಿಗೆ ತಡವಾಗಿದೆ. ಅಷ್ಟರಲ್ಲಾಗಲೇ ಗೇಟ್ ಕ್ಲೋಸ್ ಆಗಿದ್ದರಿಂದ ನಿಯಮಗಳ ಪ್ರಕಾರ ಪರೀಕ್ಷೆ ಬರೆಯಲು ಅಧಿಕಾರಿಗಳು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದ ದೇಶಗಳಲ್ಲಿ ಹರಡುತ್ತಿರುವ ಭೀಕರ 'ಎಬೋಲಾ' ಹರಡುವ ಆತಂಕ ಎದುರಾಗಿದ್ದು, ಮೇ 17, 2026 ರಂದು ವಿಶ್ವ ಆರೋಗ್ಯ ಸಂಸ್ಥೆಯು (WHO) ಈ ಸೋಂಕನ್ನು ‘ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ’ (PHEIC) ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲೂ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Karnataka 2nd PUC-2 Result 2026: ದ್ವಿತೀಯ ಪಿಯುಸಿ ಪರೀಕ್ಷೆ-2  ಫಲಿತಾಂಶ ಪ್ರಕಟ

Karnataka 2nd PUC-2 Result 2026: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 2026 ಫಲಿತಾಂಶ ಪ್ರಕಟ: 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟವಾಗಿದೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ ಸೈಟ್​​ನಲ್ಲಿ ರಿಸಲ್ಟ್ ಪ್ರಕಟಿಸಿದೆ. ಹಾಗಾದ್ರೆ, ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ನೋಡುವುದ್ಹೇಗೆ ಎನ್ನುವ ವಿವರ ಈ ಕೆಳಗಿನಂತಿದೆ.

ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ! ಜನೌಷಧಿ ಕೇಂದ್ರ, ಅಪೊಲೋ​, ಮೆಡ್ ಪ್ಲಸ್ ಓಪನ್

ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ! ಜನೌಷಧಿ ಕೇಂದ್ರ, ಅಪೊಲೋ​, ಮೆಡ್ ಪ್ಲಸ್ ಓಪನ್

ಕರ್ನಾಟಕದಲ್ಲಿ ಮೆಡಿಕಲ್ ಶಾಪ್‌ಗಳ ಬಂದ್‌ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಔಷಧಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳ ಔಷಧ ಮಳಿಗೆಗಳು, ಜನೌಷಧಿ ಕೇಂದ್ರಗಳು, ಅಪೋಲೋ ಮತ್ತು ಮೆಡ್‌ಪ್ಲಸ್ ಫಾರ್ಮಸಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಆನ್‌ಲೈನ್ ವಿತರಣೆ ಮತ್ತು ಕಾರ್ಪೊರೇಟ್ ನೀತಿಗಳಿಂದಾಗಿ ಈ ಮಳಿಗೆಗಳು ಬಂದ್‌ಗೆ ಬೆಂಬಲ ನೀಡಿಲ್ಲ.

ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ

ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೂ ಮುನ್ನವೇ ಪೋಷಕರಿಗೆ ಬೆಲೆ ಏರಿಕೆಯ ಸಂಕಷ್ಟ ಎದುರಾಗಿದೆ. ಶಾಲಾ ಶುಲ್ಕ, ವಾಹನ ಬಾಡಿಗೆಯ ಜೊತೆಗೆ ನೋಟ್‌ಬುಕ್ ಹಾಗೂ ಪ್ರಿಂಟ್ ಪೇಪರ್‌ಗಳ ಬೆಲೆ ಶೇ 20-25ರಷ್ಟು ಹೆಚ್ಚಳವಾಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ಇಂಧನ ದರ ಹೆಚ್ಚಳ ಇದಕ್ಕೆ ಕಾರಣವಾಗಿದೆ. ಇದರಿಂದ ಪೋಷಕರ ಜೇಬಿಗೆ ಹೊರೆಯಾಗಿದೆ.

ನಾಳೆ ಸಾರಿಗೆ ಬಸ್ ಮಾತ್ರವಲ್ಲ, ಔಷಧಗಳು ಸಿಗೋದೂ ಡೌಟ್! ಕರ್ನಾಟಕದಲ್ಲೂ ಮೆಡಿಕಲ್ ಶಾಪ್ ಬಂದ್

ನಾಳೆ ಸಾರಿಗೆ ಬಸ್ ಮಾತ್ರವಲ್ಲ, ಔಷಧಗಳು ಸಿಗೋದೂ ಡೌಟ್! ಕರ್ನಾಟಕದಲ್ಲೂ ಮೆಡಿಕಲ್ ಶಾಪ್ ಬಂದ್

ಆನ್‌ಲೈನ್ ಮೆಡಿಸಿನ್ ಮಾರಾಟ ಹಾಗೂ ಭಾರಿ ರಿಯಾಯಿತಿ ನೀಡುವುದನ್ನು ವಿರೋಧಿಸಿ ಮೇ 20ರಂದು ದೇಶಾದ್ಯಂತ ಖಾಸಗಿ ಮೆಡಿಕಲ್ ಶಾಪ್ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲೂ ಔಷಧ ವ್ಯಾಪಾರಿಗಳ ಸಂಘಟನೆಗಳು ಇದಕ್ಕೆ ಬೆಂಬಲ ನೀಡಿದ್ದು, ನಾಳೆ ಔಷಧಗಳ ಲಭ್ಯತೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಶಾಲಾ-ಕಾಲೇಜು ಆರಂಭಕ್ಕೂ ಮುನ್ನ ಪೋಷಕರಿಗೆ ಡಬಲ್ ಶಾಕ್!

ಶಾಲಾ-ಕಾಲೇಜು ಆರಂಭಕ್ಕೂ ಮುನ್ನ ಪೋಷಕರಿಗೆ ಡಬಲ್ ಶಾಕ್!

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ, ಅಡುಗೆ ಎಣ್ಣೆ ದರವೂ ಹೆಚ್ಚಾಳ. ಸಿಎನ್‌ಜಿ ದರವೂ ಗಗನಕ್ಕೇರಿದೆ. ಈ ಸಾಲು ಸಾಲು ದರ ಏರಿಕೆಗಳ ಮಧ್ಯೆ ಇದೀಗ ಮತ್ತೊಂದು ದರ ಏರಿಕೆ ಶಾಕ್​ ಎದುರಾಗಿದೆ. ಶಾಲಾ ವಾಹನಗಳ ಶುಲ್ಕ ಏರಿಕೆಗೆ ಮಾಲೀಕರು ಮುಂದಾಗಿದ್ದಾರೆ. ಸದ್ಯ ಈ ವಿಚಾರ ಪೋಷಕರನ್ನು ಕಂಗಾಲಾಗಿಸಿದೆ.