ಪಿಯುಸಿ ಮಕ್ಕಳಿಗೆ ಇನ್ಮುಂದೆ ಸ್ಟಡಿ ಹಾಲಿಡೇ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಕಾಲೇಜಿಗೆ ಬರಲೇಬೇಕು
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಶಾಕ್ ನೀಡಿದೆ. ಫಲಿತಾಂಶ ಸುಧಾರಣೆ ದೃಷ್ಟಿಯಿಂದ ಈವರೆಗೆ ನೀಡಲಾಗುತ್ತಿದ್ದ ಸ್ಟಡಿ ಹಾಲಿಡೇ ರದ್ದುಗೊಳಿಸಲಾಗಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಕಡ್ಡಾಯವಾಗಿ ಹಾಜರಾಗಬೇಕು. ಉಪನ್ಯಾಸಕರ ನೇತೃತ್ವದಲ್ಲಿ ಅಭ್ಯಾಸ ಮಾಡಬೇಕೆಂದು ಆದೇಶಿಸಲಾಗಿದೆ. ಈ ಹೊಸ ಕ್ರಮದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.
- Vinay Kashappanavar
- Updated on: Jan 20, 2026
- 12:02 pm
SSLC ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಪ್ರಕಟ: ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ
ಎಸ್ಎಸ್ಎಲ್ಸಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಕೆಲ ಶಾಲಾ ಮುಖ್ಯಶಿಕ್ಷಕರು ಪ್ರಯತ್ನಿಸಿದ್ದರು. ಇದಕ್ಕಾಗಿ ಪೂರಕವಾಗಿ ವಿದ್ಯಾರ್ಥಿಗಳನ್ನು ತಯಾರಿಗೊಳಿಸುತ್ತಿದ್ದ ಶಾಲೆಗಳು, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ತಾವಾಗಿಯೇ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದರು ಎಂದು ತಿಳಿದು ಬಂದಿದೆ. ಈ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಶಿಕ್ಷಣ ಇಲಾಖೆ ಅಲರ್ಟ್ ಆಗಿದ್ದು, ಪರೀಕ್ಷೆಯ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
- Vinay Kashappanavar
- Updated on: Jan 19, 2026
- 8:41 pm
ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ
ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ, ಶಿಕ್ಷಣ ಇಲಾಖೆಯು ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲು ಮುಂದಾಗಿದೆ. ಜನವರಿ 27ರಿಂದ ನಡೆಯುವ ರಾಜ್ಯಮಟ್ಟದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೂಡ ಮೊಬೈಲ್ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಲು ಮುಂದಾಗಿದೆ. ಪರೀಕ್ಷೆಗಳ ಪಾವಿತ್ರ್ಯತೆ ಕಾಪಾಡಲು ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
- Vinay Kashappanavar
- Updated on: Jan 19, 2026
- 1:32 pm
ಶಾಲಾ ಮಕ್ಕಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ? ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್!
ಕರ್ನಾಟಕದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಬದಲಿಗೆ ಚಪ್ಪಲಿ ವಿತರಿಸುವ ಮಹತ್ವದ ಚಿಂತನೆ ನಡೆದಿದೆ. ಹವಾಮಾನ ವೈಪರೀತ್ಯ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಬದಲಾವಣೆ ಅವಶ್ಯಕ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಮಾಹಿತಿ, ಅಭಿಪ್ರಾಯ ಸಂಗ್ರಹಿಸುವಂತೆ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.
- Vinay Kashappanavar
- Updated on: Jan 19, 2026
- 11:27 am
ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ: ಆರೋಪಿಗಳಷ್ಟೇ ಅಲ್ಲ ಕಾಲೇಜುಗಳೂ ಬ್ಲಾಕ್ ಲಿಸ್ಟ್ಗೆ, ಮಾನ್ಯತೆ, ಅನುದಾನಕ್ಕೂ ಕತ್ತರಿ
ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆಯೇ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಮುಂದಾಗುತ್ತಿದ್ದಾರೆ. ಇನ್ನು ಕೆಲವರು ಸಮಾಜಿಕ ಜಾತಣದಲ್ಲಿ ಪ್ರಶ್ನೆ ಪತ್ರಿಕೆ ಲೀಕ ಮಾಡಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದು, ಇತಂಹ ಕಿಡಗೇಡಿಗಳನ್ನು ಮಟ್ಟ ಹಾಕಲು ಪಿಯು ಬೋರ್ಡ್ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
- Vinay Kashappanavar
- Updated on: Jan 17, 2026
- 9:44 am
ಕರ್ನಾಟಕದಲ್ಲಿ ಮತ್ತೆ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ?
Students Elections: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ ಮತ್ತೆ ಶುರುವಾಗವ ಲಕ್ಷಣಗಳು ಕಂಡು ಬರ್ತಿದೆ.. ಸ್ಟೂಡೆಂಟ್ ಲೀಡರ್ ಹುಟ್ಟು ಹಾಕುಲು ಸರ್ಕಾರ ಮುಂದಾಗಿದೆ. ಈ ವರ್ಷದಿಂದ ಮತ್ತೆ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲೆಕ್ಷನ್ ನಡೆಸಲು ಮುಂದಾಗಿದ್ದು ಮತ್ತೆ ರಾಜ್ಯದ ಕಾಲೇಜುಗಳಲ್ಲಿ ಮರುಕಳಿಸಲಿದೆ ಸ್ಟೂಡೆಂಟ್ ಯೂನಿಯನ್ ಎಲೆಕ್ಷನ್ ಮರುಕಳಿಸಲಿದೆ.
- Vinay Kashappanavar
- Updated on: Jan 16, 2026
- 10:33 pm
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್ ಪ್ಲ್ಯಾನ್: ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಶಿಕ್ಷಕರ ಕೊರತೆ ಮತ್ತು ಏಕೋಪಾಧ್ಯಾಯ ಶಾಲೆಗಳ ಹೆಚ್ಚಳದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ಇದನ್ನು ನಿಭಾಯಿಸಲು ಶಿಕ್ಷಣ ಇಲಾಖೆ 'ಮಾಸ್ಟರ್ ಪ್ಲಾನ್' ರೂಪಿಸಿದೆ. ಉಚಿತ ನೋಟ್ಬುಕ್ಗಳು, ವಾರಕ್ಕೆ ಐದು ದಿನ ಮೊಟ್ಟೆ ವಿತರಣೆ ಹಾಗೂ ಶುಲ್ಕವಿಲ್ಲದ ಶಿಕ್ಷಣದ ಕುರಿತು ಪಾಲಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಇಲಾಖೆ ಮುಂದಾಗಿದೆ.
- Vinay Kashappanavar
- Updated on: Jan 15, 2026
- 3:23 pm
ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾಮಾನ್ಯವಾಗಿಬಿಟ್ಟಿದೆ. ವಯಸ್ಸು 20 ದಾಟಿರಲ್ಲ, ಆಗಲೇ ಕೆಲವರ ಹೃದಯಕ್ಕೆ ಸ್ಟೆಂಟ್ ಅಳವಡಿಸಿರಲಾಗುತ್ತದೆ. ಕಳೆದ 10 ವರ್ಷಗಳ ಪೈಕಿ ಕಳೆದ ಎರಡು ವರ್ಷಗಳಲ್ಲಿ ಹೃದಯಾಘಾತದ ಪ್ರಕರಣಗಳು ಸರಾಸರಿ ಶೇ 40 ರಷ್ಟು ಹೆಚ್ಚಳ ಕಂಡಿವೆ. ಯುವಕರಲ್ಲಿ ಹೃದಯಾಘಾತ ಏರಿಕೆ ಆಗುತ್ತಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರಿನಲ್ಲಿ ಹೃದಯಘಾತದ ಸಾವು ತಡೆಯಲು ಹೊಸ ಯೋಜನೆಗೆ ಮುಂದಾಗಿದೆ.
- Vinay Kashappanavar
- Updated on: Jan 13, 2026
- 9:50 am
ಒರಿಜಿನಲ್ ಅಂತ ನಕಲಿ 2nd PU ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು
ದ್ವಿತೀಯ ಪಿಯು ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ನಕಲಿ ಲೀಕ್ ಪ್ರಕರಣದ ತನಿಖೆ ನಡೆಯುತ್ತಿದೆ. ಕಿಡಿಗೇಡಿಗಳು ನಕಲಿ ಪ್ರಶ್ನೆ ಪತ್ರಿಕೆಗಳನ್ನು ಸೃಷ್ಟಿಸಿ, YouTube ಚಾನೆಲ್ ಮೂಲಕ ಹರಿಬಿಟ್ಟು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಈ ಕುರಿತು ಪಿಯು ಮಂಡಳಿಯ ಜಂಟಿ ನಿರ್ದೇಶಕರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
- Vinay Kashappanavar
- Updated on: Jan 12, 2026
- 10:32 pm
ಎಸ್ಎಸ್ಎಲ್ಸಿ ಪ್ರಶ್ನೆಪತ್ರಿಕೆ ಲೀಕ್ ! ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಬೆಳಗಾವಿಯ SSLC ಸಮಾಜ ವಿಜ್ಞಾನ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. 'Delta SSLC' ಇನ್ಸ್ಟಾಗ್ರಾಮ್ ಖಾತೆಯಿಂದ ಇದು ವೈರಲ್ ಆಗಿದ್ದು, ಕಳೆದ ವರ್ಷವೂ ಇದೇ ರೀತಿ ನಡೆದಿತ್ತು. ಪರೀಕ್ಷಾ ಮಂಡಳಿಯು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಗೊಂದಲ ಮೂಡಿಸಿದೆ. ನಕಲಿ ಪ್ರಶ್ನೆಪತ್ರಿಕೆಗಳ ಕುರಿತು ಶಿಕ್ಷಣ ಇಲಾಖೆಯ ಎಚ್ಚರಿಕೆಯನ್ನೂ ನೀಡಿದ್ದು, ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಶಿಕ್ಷಣ ಇಲಾಖೆ ಮೇಲಿನ ಒತ್ತಡ ಹೆಚ್ಚಿದೆ.
- Vinay Kashappanavar
- Updated on: Jan 10, 2026
- 2:53 pm
SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ
ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ, ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದಾರೆ. 100 ರೂಪಾಯಿಗೆ ನಕಲಿ ಪತ್ರಿಕೆ ನೀಡಿ, ವಿದ್ಯಾರ್ಥಿಗಳ ಹಣ ಹಾಗೂ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಮತ್ತು ತಜ್ಞರು ಈ ವದಂತಿಗಳಿಗೆ ಬಲಿಯಾಗದಂತೆ ಮಕ್ಕಳಿಗೆ ಎಚ್ಚರಿಕೆ ನೀಡಿದ್ದು, ಅಧಿಕೃತ ಮಾಹಿತಿಗಳನ್ನಷ್ಟೇ ನಂಬಲು ಮನವಿ ಮಾಡಿದ್ದಾರೆ. ವಂಚಕರ ವಿರುದ್ಧ ದೂರು ದಾಖಲಿಸಲಾಗಿದೆ.
- Vinay Kashappanavar
- Updated on: Jan 9, 2026
- 10:54 am
ಸರ್ಕಾರದ ಮನೆಗಳ ಕರ್ಮಕಾಂಡ ಬಯಲು: ಭಯದಲ್ಲೇ ಬದುಕುತ್ತಿವೆ ನೂರಾರು ಕುಟುಂಬಗಳು
ಬೆಂಗಳೂರಿನ ಕೆಂಗೇರಿಯಲ್ಲಿ ಕರ್ನಾಟಕ ಗೃಹ ಮಂಡಳಿ ನಿರ್ಮಿಸಿರುವ ಫ್ಲಾಟ್ಗಳ ಕಳಪೆ ಕಾಮಗಾರಿ ಬಟಾಬಯಲಾಗಿದೆ. ಕೋಗಿಲು ನಿವಾಸಿಗಳಿಗೆ ಸರ್ಕಾರ ಮನೆ ನೀಡಲು ಮುಂದಾಗಿರುವಾಗ, ಕೆಹೆಚ್ಬಿ ಫ್ಲಾಟ್ಗಳಿಗೆ ಲಕ್ಷಾಂತರ ರೂ ಕೊಟ್ಟು ನೂರಾರು ಕುಟುಂಬಗಳು ಪರದಾಡುವಂತಾಗಿದೆ. ಸರ್ಕಾರ ತಮ್ಮ ಕಡೆ ಗಮನಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.
- Vinay Kashappanavar
- Updated on: Jan 5, 2026
- 8:06 pm