ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದೆ. ಯುದ್ಧದ ಸಂದರ್ಭದಲ್ಲಿ ಇಳಿದಿದ್ದ ಬೆಲೆ ಈಗ ಏರಿಕೆ ಆಗಿದ್ದು, ಗ್ರಾಹಕರಿಗೆ ಬೇಸರ ತಂದಿದೆ. ಆದರೂ, ಅಕ್ಷಯ ತೃತೀಯ ಹತ್ತಿರವಾಗುತ್ತಿರುವುದರಿಂದ ಮತ್ತು ಮತ್ತಷ್ಟು ಬೆಲೆ ಏರಿಕೆಯ ಭೀತಿಯಿಂದ ಚಿನ್ನದ ಅಂಗಡಿಗಳತ್ತ ಜನ ಮುಗಿಬೀಳುತ್ತಿದ್ದಾರೆ.
- Vinay Kashappanavar
- Updated on: Apr 11, 2026
- 7:09 pm
ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ
2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ 1ನೇ ತರಗತಿಗೆ ಮಕ್ಕಳ ದಾಖಲಾತಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಶೈಕ್ಷಣಿಕ ವರ್ಷದ ಜೂನ್ 1ರಿಂದ ಗರಿಷ್ಠ 60 ದಿನಗಳ ಸಡಿಲಿಕೆ ನೀಡಿದೆ. ಮಗುವಿನ ವಯಸ್ಸು ಲೆಕ್ಕಹಾಕಿ ದಾಖಲಾತಿಗೆ ಪರಿಗಣಿಸಲು ಆದೇಶಿಸಲಾಗಿದೆ.
- Vinay Kashappanavar
- Updated on: Apr 10, 2026
- 6:34 pm
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್!
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗಂಭೀರ ಲೋಪ ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ ಕೆಲ ವಿದ್ಯಾರ್ಥಿಗಳಿಗೆ 683 ಅಂಕಗಳನ್ನು ನೀಡಲಾಗಿದೆ. ಅಧಿಕೃತ ವೆಬ್ಸೈಟ್ನಲ್ಲಿಯೇ ಈ ಎಡವಟ್ಟಾಗಿದ್ದು, ತಾಂತ್ರಿಕ ದೋಷವೇ ಇದಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಬೋರ್ಡ್ನ ಈ ಅಚಾತುರ್ಯದಿಂದ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಗೊಂದಲ ಸೃಷ್ಟಿಯಾಗಿದೆ.
- Vinay Kashappanavar
- Updated on: Apr 10, 2026
- 2:55 pm
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ, ಪಾಸಾದವರು ಎಷ್ಟು ಗೊತ್ತಾ?
ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆನ್ಲೈನಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಅಧಿಕೃತ ವೆಬ್ಸೈಟ್ https://www.karresults.nic.in/ ಮೂಲಕ ಫಲಿತಾಂಶ ಪರಿಶೀಲನೆ ಮಾಡಿಕೊಳ್ಳಬಹುದು. ಇನ್ನು ಈ ಬಾರಿ ಪಿಯುಸಿ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ
- Vinay Kashappanavar
- Updated on: Apr 9, 2026
- 4:01 pm
ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ರೋಗಿಗಳಿಗೆ ವೈದ್ಯಕೀಯ ಸೇವೆ ಸಿಗೋದು ಡೌಟ್
ಬೆಂಗಳೂರಿನ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯನ್ನು 2027ರ ಜನಗಣತಿ ಕಾರ್ಯಕ್ಕೆ ನಿಯೋಜಿಸುತ್ತಿರುವುದರಿಂದ ರೋಗಿಗಳಿಗೆ ಚಿಕಿತ್ಸೆ ಸಿಗುವುದು ಕಷ್ಟವಾಗಲಿದೆ. ಲ್ಯಾಬ್ ಟೆಕ್ನಿಶಿಯನ್ಸ್ ಸೇರಿದಂತೆ ತುರ್ತು ಸೇವಾ ಸಿಬ್ಬಂದಿಯನ್ನು ಈ ಕಾರ್ಯಕ್ಕೆ ಬಳಸುವುದರಿಂದ ಆರೋಗ್ಯ ಸೇವೆಗಳ ಮೇಲೆ ನಕಾರಾತ್ಮಕ ಪರಿಣಾಮ ಆಗಲಿದ್ದು, ಗಣತಿಯಿಂದ ಕೈಬಿಡುವಂತೆ ಆರೋಗ್ಯ ಇಲಾಖೆ ನೌಕರರ ಸಂಘ ಮನವಿ ಮಾಡಿದೆ.
- Vinay Kashappanavar
- Updated on: Apr 7, 2026
- 11:27 am
Karnataka 2nd PUC Results 2026: ಇಂದೇ ದ್ವಿತೀಯ ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ-ಪೋಷಕರಿಗೆ ಖುಷಿಯ ಸುದ್ದಿ
ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿರುವ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ನ್ಯೂಸ್ ನೀಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುತ್ತಿದೆ. ಈ ಹಿಂದೆ ಕೆಲ ಕಾರಣಾಂತರಗಳಿಂದ ಫಲಿತಾಂಶ ಈ ವಾರದಲ್ಲಿ ಪ್ರಕಟವಾಗುವುದಿಲ್ಲ ಎಂದು ಹೇಳಲಾಗಿತ್ತು. ಆದರೆ ಇದೀಗ ಶಿಕ್ಷಣ ಇಲಾಖೆ ಫಲಿತಾಂಶ ಘೋಷಣೆ ಮಾಡಲು ಮುಂದಾಗಿದೆ.
- Vinay Kashappanavar
- Updated on: Apr 9, 2026
- 6:24 am
ಯುದ್ಧದ ಎಫೆಕ್ಟ್: ಗ್ಯಾಸ್ ಅಭಾವದ ಬೆನ್ನಲ್ಲೇ ರೋಗಿಗಳಿಗೂ ಶಾಕ್, ಈ ವಾರದಿಂದಲೇ ಔಷಧ ಬೆಲೆ ಏರಿಕೆ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ಸಂಕಷ್ಟಕ್ಕೀಡಾಗಿದೆ. ಇದರ ಬೆನ್ನಲ್ಲೇ ಜಾಗತಿಕ ಯುದ್ಧದ ಎಫೆಕ್ಟ್ನಿಂದಾಗಿ ಏಪ್ರಿಲ್ನಿಂದ ಅಗತ್ಯ ಔಷಧಗಳ ಬೆಲೆ ಶೇ 15-20 ರಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ. ಯಾವೆಲ್ಲ ಔಷಧಗಳು ದುಬಾರಿಯಾಗಲಿವೆ ಎಂಬ ಮಾಹಿತಿ ಇಲ್ಲಿದೆ.
- Vinay Kashappanavar
- Updated on: Apr 1, 2026
- 7:23 pm
ಪೋಷಕರಿಗೆ ಡಬಲ್ ಶಾಕ್: ವಯೋಮಿತಿ ಗೊಂದಲದ ಬೆನ್ನಲ್ಲೇ ಖಾಸಗಿ ಶಾಲೆಗಳ ಶುಲ್ಕ ಭರ್ಜರಿ ಏರಿಕೆ!
ಬೆಂಗಳೂರಿನಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಪೋಷಕರು ಕಂಗಾಲಾಗಿದ್ದಾರೆ. ಒಂದೆಡೆ ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆಯ ಗೊಂದಲ ಪೋಷಕರನ್ನು ಕಾಡುತ್ತಿದ್ದರೆ, ಇನ್ನೊಂದೆಡೆ ಖಾಸಗಿ ಶಾಲೆಗಳು ಶೇ 5 ರಿಂದ 15 ರಷ್ಟು ಶುಲ್ಕ ಹೆಚ್ಚಳ ಮಾಡಿ ಬರೆ ಎಳೆದಿವೆ.
- Vinay Kashappanavar
- Updated on: Mar 31, 2026
- 7:23 am
ಸಿಲಿಂಡರ್ ಸಮಸ್ಯೆ: ಸಂಕಷ್ಟಕ್ಕೆ ಸಿಲುಕಿ ಹೋಟೆಲ್ಗಳನ್ನೇ ಮಾರಲು ಮುಂದಾದ ಮಾಲೀಕರು!
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ಭಾರಿ ಸಂಕಷ್ಟ ತಂದಿದೆ. ವಾಣಿಜ್ಯ ಸಿಲಿಂಡರ್ಗಳ ಅಭಾವದಿಂದ ಹೋಟೆಲ್ಗಳು ಮೆನು ಕಡಿತಗೊಳಿಸಿ, ಗ್ರಾಹಕರು ಮತ್ತು ಸಿಬ್ಬಂದಿಯನ್ನು ಕಳೆದುಕೊಂಡಿವೆ. ಬೆಂಗಳೂರಿನಲ್ಲಿ ಮಾಲೀಕರು 20-25 ಹೋಟೆಲ್ಳನ್ನು ಮಾರಾಟ ಮಾಡಲು ಮುಂದಾಗಿದ್ದು, ರಾಜ್ಯದಾದ್ಯಂತ ಹಲವು ಹೋಟೆಲ್ಗಳು ಭಾರಿ ನಷ್ಟ ಅನುಭವಿಸುತ್ತಿವೆ.
- Vinay Kashappanavar
- Updated on: Mar 30, 2026
- 1:35 pm
ಹೊಸ ಸಂಘರ್ಷಕ್ಕೆ ಕಾರಣವಾಯ್ತು ಮಕ್ಕಳ 1ನೇ ಕ್ಲಾಸ್ ಪ್ರವೇಶ ವಯೋಮಿತಿ ಸಡಿಲಿಕೆ
ಮಕ್ಕಳ ಒಂದನೇ ತರಗತಿ ದಾಖಲಾತಿಗೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಇದೀಗ ಪೋಷಕರ ವಿರೋಧ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 60 ದಿನಗಳು ಅಂದರೆ ಎರಡು ತಿಂಗಳು ವಿನಾಯಿತಿಯನ್ನ ನೀಡಿದೆ. ಆದ್ರೆ ಈ ವಿನಾಯತಿ ಈಗ ಮತ್ತೊಂದು ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಇದೇನಿದು ವಿನಾಯಿತು ನೀಡಿದರೂ ಹೊಸ ಸಂಘರ್ಷ ಶುರುವಾಗಿದ್ಯಾಕೆ ಅಂತೀರಾ? ಈ ಸ್ಟೋರಿ ಓದಿ.
- Vinay Kashappanavar
- Updated on: Mar 29, 2026
- 9:03 pm
ಮುಸ್ಲಿಮ್ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ಕ್ಲಾಸ್ನಲ್ಲೇ ಅವಮಾನಿಸಿದ ಪ್ರೊಫೆಸರ್!
ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್ನಲ್ಲಿರುವ ಕ್ಯಾಂಪಸ್ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು “ಭಯೋತ್ಪಾದಕ” ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ.
- Vinay Kashappanavar
- Updated on: Mar 28, 2026
- 1:07 pm
Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್ಗೆ ಭಾರೀ ಬೇಡಿಕೆ!
ಚಿನ್ನದ ಬೆಲೆಯಲ್ಲಿ ನಿರಂತರ ಏರುಪೇರುಗಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗೋಲ್ಡ್ ಕಾಯಿನ್ಗಳಿಗೆ ಭಾರೀ ಬೇಡಿಕೆ ಹೆಚ್ಚಿದೆ. 2, 4, 6, 8 ಗ್ರಾಂ ನಾಣ್ಯಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಭವಿಷ್ಯದಲ್ಲಿ ಚಿನ್ನದ ದರ ಏರಿಕೆಯಾಗಬಹುದೆಂಬ ನಿರೀಕ್ಷೆಯಲ್ಲಿ ಹೂಡಿಕೆಗಾಗಿ ಜನರು ಕಾಯಿನ್ಗಳನ್ನು ಕೊಳ್ಳುತ್ತಿದ್ದು, ಅಂಗಡಿಗಳು ಬೇಡಿಕೆ ಪೂರೈಸಲು ಪರದಾಡುತ್ತಿವೆ.
- Vinay Kashappanavar
- Updated on: Mar 27, 2026
- 8:21 am