ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ: ರೇಣುಕಾಸ್ವಾಮಿ ರೀತಿ ಮಾಡುತ್ತೇವೆ ಎಂದ ಆರೋಪಿಗಳು
ಕಳೆದ ವರ್ಷ ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಇಂತಹದ್ದೇ ಪ್ರಕರಣ ನಡೆದಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿಯಲ್ಲೇ ಓರ್ವ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ.
- Vivek Biradar
- Updated on: Jul 7, 2025
- 9:01 am
Daily devotional: ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮದುವೆಯ ಸಂದರ್ಭದಲ್ಲಿ ಹೆಣ್ಣುಮಗಳ ಕೊರಳಿಗೆ ಕಟ್ಟುವ ಮಾಂಗಲ್ಯವು ಕೇವಲ ಆಭರಣವಲ್ಲ. ಇದು ಪವಿತ್ರವಾದ ಸಂಬಂಧವನ್ನು ಸೂಚಿಸುತ್ತದೆ. ಪುರಾಣಗಳಲ್ಲಿ ಮತ್ತು ಜಾನಪದ ನಂಬಿಕೆಗಳಲ್ಲಿ ಮಾಂಗಲ್ಯದ ರಕ್ಷಣಾತ್ಮಕ ಶಕ್ತಿಯ ಬಗ್ಗೆ ಉಲ್ಲೇಖಗಳಿವೆ. ಈ ವಿಡಿಯೋದಲ್ಲಿ ಮಾಂಗಲ್ಯದ ಮಹತ್ವ ಮತ್ತು ಅದರ ಆಧ್ಯಾತ್ಮಿಕ ಅರ್ಥವನ್ನು ತಿಳಿಸಲಾಗಿದೆ.
- Vivek Biradar
- Updated on: Jul 7, 2025
- 7:31 am
Daily Horoscope: ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಜುಲೈ 7 ದಿನ ಭವಿಷ್ಯ ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ ಮತ್ತು ಕರ್ಕಾಟಕ ರಾಶಿಗಳಿಗೆ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ ಮತ್ತು ಕುಟುಂಬದಲ್ಲಿ ಸುಖ ಶಾಂತಿ ಇರುವ ಬಗ್ಗೆ ತಿಳಿಸಲಾಗಿದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ದಿಕ್ಕನ್ನು ಸಹ ತಿಳಿಸಲಾಗಿದೆ.
- Vivek Biradar
- Updated on: Jul 7, 2025
- 6:41 am
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಪ್ರಲ್ಹಾದ ಜೋಶಿ
ಕರ್ನಾಟಕದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆಯೇ ಕಾರಣ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ತಜ್ಞರ ಸಮಿತಿಯು ಲಸಿಕೆ ಮತ್ತು ಹೃದಯಾಘಾತಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬೇಜವಾಬ್ದಾರಿ ಪರಮಾವಧಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ಮಾಡಿದ್ದಾರೆ.
- Vivek Biradar
- Updated on: Jul 6, 2025
- 7:37 pm
ಬೆಂಗಳೂರಿನಲ್ಲಿ ಮತ್ತೊಂದು ಚೀಟಿ ಪಂಗನಾಮ: ಬರೋಬ್ಬರಿ 40 ಕೋಟಿ ರೂ.ನೊಂದಿಗೆ ದಂಪತಿ ಎಸ್ಕೇಪ್
ಬೆಂಗಳೂರಿನ ಜರಗನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿ ಕೋಟ್ಯಾಂತರ ರೂಪಾಯಿ ಚೀಟಿ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಸುಧಾ ಮತ್ತು ಸಿದ್ದಿಚಾರಿ ದಂಪತಿ 600ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಪರಾರಿಯಾಗಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವಂಚನೆಗೊಳಗಾದವರು ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.
- Vivek Biradar
- Updated on: Jul 6, 2025
- 6:08 pm
ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್: ಸರ್ಕಾರಕ್ಕೆ ಮತ್ತೆ ಮುಜುಗರ ತಂದಿಟ್ಟ ರಾಯರೆಡ್ಡಿ..!
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎಂಬ ಆರೋಪಗಳ ನಡುವೆ, ಸಿಎಂರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಬಸವರಾಜ ರಾಯರೆಡ್ಡಿ ಹೇಳಿಕೆಯು ರಾಜ್ಯ ಸರ್ಕಾರವು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ.
- Vivek Biradar
- Updated on: Jul 6, 2025
- 2:41 pm
ಗಾಣಿಗ ಮಠಕ್ಕೆ ಅನುದಾನ ಬಿಡುಗಡೆಗೆ ಕಮಿಷನ್ ಕೇಳಿದ ಸಚಿವ: ಸ್ವಾಮೀಜಿ ಗಂಭೀರ ಆರೋಪ
ನೆಲಮಂಗಲದ ತೈಲೇಶ್ವರ ಗಾಣಿಗ ಮಠಕ್ಕೆ ಮಂಜೂರಾದ ಅನುದಾನ ಬಿಡುಗಡೆಯಲ್ಲಿ ರಾಜ್ಯ ಸರ್ಕಾರದ ಪ್ರಭಾವಿ ಸಚಿವ ಕಮಿಷನ್ ಕೇಳಿದ್ದಾರೆಂದು ಪೂರ್ಣಾನಂದಪೂರಿ ಸ್ವಾಮೀಜಿ ಆರೋಪಿಸಿದ್ದಾರೆ. ಈ ಆರೋಪದಿಂದಾಗಿ, ಸ್ವಾಮೀಜಿಯವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅನುದಾನದಲ್ಲಿ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪಗಳನ್ನು ಸ್ವಾಮೀಜಿಗಳು ಮಾಡಿದ್ದಾರೆ.
- Vivek Biradar
- Updated on: Jul 5, 2025
- 6:21 pm
ಬೆಂಗಳೂರಿನ ಹೆಲ್ಮೆಟ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ
ಬೆಂಗಳೂರು ಸಂಚಾರ ಪೊಲೀಸರು, ಆರ್ಟಿಓ ಮತ್ತು ಮಾಪನ ಇಲಾಖೆ ಅಧಿಕಾರಿಗಳು ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ಗಳ ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. 19 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ಆರು ಅಂಗಡಿಗಳಿಗೆ 50,000 ರೂ. ದಂಡ ವಿಧಿಸಲಾಗಿದೆ ಮತ್ತು ನೋಟೀಸ್ ಜಾರಿ ಮಾಡಲಾಗಿದೆ. ಕಳಪೆ ಹೆಲ್ಮೆಟ್ ಧರಿಸಿದ 38 ಬೈಕ್ ಸವಾರರಿಗೂ ದಂಡ ವಿಧಿಸಲಾಗಿದೆ. ಐಎಸ್ಐ ಮಾರ್ಕ್ ಇಲ್ಲದ ಅಥವಾ ಅರ್ಧ ಹೆಲ್ಮೆಟ್ ಧರಿಸುವುದು ಅಪಾಯಕಾರಿ ಮತ್ತು ಕಾನೂನುಬಾಹಿರ ಎಂದು ಎಚ್ಚರಿಸಲಾಗಿದೆ.
- Vivek Biradar
- Updated on: Jul 5, 2025
- 4:10 pm
ಈಶಾ ಫೌಂಡೇಶನ್ನ ಸಹಕಾರದಿಂದ ಬುಡಕಟ್ಟು ಮಹಿಳೆಯರು ಈಗ ತೆರಿಗೆದಾರರು: ಕೇಂದ್ರ ಸಚಿವ ಶ್ಲಾಘನೆ
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವಾಲ್ ಓರಮ್ ಅವರು ಕೊಯಮತ್ತೂರಿನ ಈಶಾ ಫೌಂಡೇಶನ್ನ ಕಾರ್ಯಗಳನ್ನು ಶ್ಲಾಘಿಸಿದ್ದಾರೆ. ಈಶಾ ಫೌಂಡೇಶನ್ನ ಸಹಾಯದಿಂದ ಬುಡಕಟ್ಟು ಮಹಿಳೆಯರು ಲಕ್ಷಾಧಿಪತಿಗಳಾಗಿದ್ದು, ತೆರಿಗೆ ಪಾವತಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಂತಹ ಉಪಕ್ರಮಗಳು ಭಾರತದ ಅಭಿವೃದ್ಧಿಗೆ ನೆರವಾಗುತ್ತವೆ ಎಂದು ಅವರು ತಿಳಿಸಿದರು. ಸಚಿವರು ಈಶಾ ಫೌಂಡೇಶನ್ನ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು ಮತ್ತು ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು.
- Vivek Biradar
- Updated on: Jul 5, 2025
- 2:58 pm
ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಪತ್ತೆ: ನಟಿ ರನ್ಯಾ ರಾವ್ಗೆ ಸೇರಿದ ಕೋಟ್ಯಾಂತರ ರೂ. ಆಸ್ತಿ ಜಪ್ತಿ
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ಅವರ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ. ಇಡಿ ತನಿಖೆಯಿಂದ ರನ್ಯಾ ರಾವ್ ದುಬೈ ಮತ್ತು ಉಗಾಂಡಾದ ಪೂರೈಕೆದಾರರಿಂದ ಚಿನ್ನ ಖರೀದಿಸಿ ಹವಾಲಾ ಮೂಲಕ ಪಾವತಿ ಮಾಡುತ್ತಿದ್ದರು ಎಂಬುದು ಬಯಲಾಗಿದೆ. ಅಕ್ರಮ ಚಿನ್ನ ಸಾಗಣೆ ಮತ್ತು ಹಣ ವರ್ಗಾವಣೆ ಆರೋಪಗಳ ಮೇಲೆ ತನಿಖೆ ಮುಂದುವರೆದಿದೆ.
- Vivek Biradar
- Updated on: Jul 4, 2025
- 9:07 pm
ನೀರಜ್ ಚೋಪ್ರಾ ಕ್ಲಾಸಿಕ್ 2025: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ, ಪಾರ್ಕಿಂಗ್ ನಿಷೇಧ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜುಲೈ 5 ರಂದು ನಡೆಯುವ ನೀರಜ್ ಚೋಪ್ರಾ ಕ್ಲಾಸಿಕ್ 2025ಗೆ ಸಂಬಂಧಿಸಿದಂತೆ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಜೆ 4 ರಿಂದ ರಾತ್ರಿ 10 ರವರೆಗೆ ಸಂಚಾರ ಬದಲಾವಣೆಗಳನ್ನು ಮಾಡಲಾಗಿದೆ. ಕೆಲವು ರಸ್ತೆಗಳಲ್ಲಿ ಗೂಡ್ಸ್ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ ಮತ್ತು ಪಾರ್ಕಿಂಗ್ ಸೌಲಭ್ಯಗಳ ಮಾಹಿತಿಯನ್ನು ನೀಡಲಾಗಿದೆ. ಸಾರ್ವಜನಿಕರು ಮೆಟ್ರೋ ಅಥವಾ ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.
- Vivek Biradar
- Updated on: Jul 4, 2025
- 4:08 pm
ಮತ್ತೆ ನಾಲಿಗೆ ಹರಿಬಿಟ್ಟ ಬಿಜೆಪಿ MLC ರವಿಕುಮಾರ್: ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ, ದೂರು ದಾಖಲು
ಕರ್ನಾಟಕದ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರವಿಕುಮಾರ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
- Vivek Biradar
- Updated on: Jul 2, 2025
- 7:56 pm