ADAS Cars: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಭಾರತದಲ್ಲಿ ಹೊಸದಾಗಿ ಬಿಡುಗಡೆಯಾಗುತ್ತಿರುವ ಹೊಸ ಕಾರುಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳಲ್ಲೂ ಇದೀಗ ಗರಿಷ್ಠ ಸುರಕ್ಷತೆಗಾಗಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ನೀಡಲಾಗುತ್ತಿದೆ.

ADAS Cars: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!
ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!
Follow us
|

Updated on:May 01, 2024 | 9:13 PM

ಹೊಸ ಕಾರುಗಳಲ್ಲಿ(New Cars) ಇದೀಗ ಗ್ರಾಹಕರು ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರಲ್ಲೂ ಮಧ್ಯಮ ಕ್ರಮಾಂಕದ ಕಾರುಗಳ ಸುರಕ್ಷತೆ ಸಾಕಷ್ಟು ಸುಧಾರಿಸಿದೆ. ಹೊಸ ತಲೆಮಾರಿನ ಸುರಕ್ಷಾ ಫೀಚರ್ಸ್ ಗಳಾದ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ (ADAS) ಸೌಲಭ್ಯವು ಇದೀಗ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಭಾರತದಲ್ಲಿ ಮಾರಾಟವಾಗುತ್ತಿರುವ ಹಲವು ಕಾರು ಮಾದರಿಗಳಲ್ಲಿ ಈ ಫೀಚರ್ಸ್ ನೋಡಬಹುದಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಪ್ರಮುಖ ಮಧ್ಯಮ ಕ್ರಮಾಂಕದ ಹಲವು ಕಾರುಗಳಲ್ಲಿ ಎಡಿಎಎಸ್ ಫೀಚರ್ಸ್ ಗಮನಸೆಳೆಯುತ್ತಿದ್ದು, ಎಡಿಎಎಸ್ ಸೌಲಭ್ಯ ಹೊಂದಿರುವ ಮಧ್ಯಮ ಕ್ರಮಾಂಕದ ಪ್ರಮುಖ ಕಾರುಗಳ ಮಾಹಿತಿ ಇಲ್ಲಿದೆ.

ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಹೊಸ ಅಡ್ವಾನ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸಾಕಷ್ಟು ನೆರವಾಗುತ್ತಿದ್ದು, ಎಡಿಎಎಸ್ ಸೌಲಭ್ಯವು ಸಂಪೂರ್ಣವಾಗಿ ರಡಾರ್ ಆಧರಿಸಿ ಕಾರ್ಯನಿರ್ವಹಿಸುತ್ತದೆ. ಇದು ಭವಿಷ್ಯದ ಆಟೊನೊಮಸ್ ಕಾರುಗಳಲ್ಲೂ ನಿರ್ಣಾಯಕ ಪಾತ್ರವಹಿಸಲಿದ್ದು, ಭಾರತದಲ್ಲಿ ಸದ್ಯಕ್ಕೆ ಲೆವಲ್ 1 ಮತ್ತು ಲೆವಲ್ 2 ಎಡಿಎಎಸ್ ಬಳಕೆ ಮಾಡಲಾಗುತ್ತಿದೆ. ಎಡಿಎಎಸ್ ನಲ್ಲಿ ಲೆವಲ್ 1 ರಿಂದ 5ರ ತನಕ ಬಳಕೆಯಿದ್ದು, ಕಾರು ಮಾದರಿಗಳಿಗೆ ಅನುಗುಣವಾಗಿ ವಿವಿಧ ಹಂತಗಳನ್ನು ಜೋಡಣೆ ಮಾಡಲಾಗುತ್ತದೆ.

ಮಹೀಂದ್ರಾ ಎಕ್ಸ್ ಯುವಿ 3ಎಕ್ಸ್ಒ

ಹೊಸದಾಗಿ ಬಿಡುಗಡೆಯಾಗಿರುವ ಮಹೀಂದ್ರಾ ಎಕ್ಸ್ ಯುವಿ 3ಎಕ್ಸ್ಒ ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗಿದ್ದು, ಇದು ಐಷಾರಾಮಿ ಫೀಚರ್ಸ್ ಗಳೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ. ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್ ಯುವಿ700 ಮಾದರಿಯಲ್ಲಿರುವಂತೆ ಲೆವಲ್ 2 ಎಡಿಎಎಸ್ ಸೌಲಭ್ಯವನ್ನು ಜೋಡಣೆ ಮಾಡಿದ್ದು, ಇದು ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಾದ ಅತಿ ಕಡಿಮೆ ಬೆಲೆಯ ಎಡಿಎಎಸ್ ಕಾರು ಮಾದರಿಯಾಗಿದೆ. ಲೆವಲ್ 2 ಎಡಿಎಎಸ್ ನಲ್ಲಿ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಟೋ ಹೋಲ್ಡ್, ಹಿಲ್ ಸ್ಟಾರ್ಟ್, ಹಿಲ್ ಡಿಸೆಂಟ್, 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾರ್ಟ್ ಮಾನಿಟರ್ ನೀಡಲಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 11.99 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಫೇಮಸ್ ಎಸ್‌ಯುವಿ ಕಾರುಗಳಿವು!

ಹ್ಯುಂಡೈ ವೆನ್ಯೂ

ಬಜೆಟ್ ಬೆಲೆಯಲ್ಲಿ ಎಡಿಎಎಸ್ ಸೌಲಭ್ಯ ಹೊಂದಿರುವ ಕಾರುಗಳಲ್ಲಿ ಹ್ಯುಂಡೈ ವೆನ್ಯೂ ಕೂಡಾ ಪ್ರಮುಖವಾಗಿದೆ. ವೆನ್ಯೂ ಕಾರು ಫೇಸ್ ಲಿಫ್ಟ್ ಆವೃತ್ತಿಯೊಂದಿಗೆ ಎಡಿಎಎಸ್ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇದು ಲೆವಲ್ 1 ಎಡಿಎಎಸ್ ಸೌಲಭ್ಯವನ್ನು ಪಡೆದುಕೊಂಡಿದೆ. ಲೆವಲ್ 1 ಎಡಿಎಎಸ್ ನಲ್ಲಿ ಫಾರ್ವಡ್ ಕೂಲಿಷನ್ ಅವಾಯ್ಡ್ ಅಸಿಸ್ಟ್, ಲೇನ್ ಕೀಪಿಂಗ್ ಅಸಿಸ್ಟ್, ಲೇನ್ ಡಿಪಾರ್ಚರ್ ವಾರ್ನಿಂಗ್, ಡ್ರೈವರ್ ಅಟ್ಷೆಷನ್ ವಾರ್ನಿಂಗ್, ಲೇನ್ ಫಾಲೋವಿಂಗ್ ಅಸಿಸ್ಟ್ ಮತ್ತು ಹೈ ಭೀಮ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 12.44 ಲಕ್ಷ ಬೆಲೆ ಹೊಂದಿದ್ದು, ಇದು ಟಾಪ್ ಎಂಡ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಹೋಂಡಾ ಸಿಟಿ

ಎಡಿಎಎಸ್ ಸೌಲಭ್ಯ ಹೊಂದಿರುವ ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಹೋಂಡಾ ಸಿಟಿ ಸೆಡಾನ್ ಪ್ರಮುಖ ಆಯ್ಕೆಯಾಗಿದೆ. ಇದು ಕೂಡಾ ಲೆವಲ್ 2 ಎಡಿಎಎಸ್ ಫೀಚರ್ಸ್ ಹೊಂದಿದ್ದು, ಇದರಲ್ಲಿ 360 ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾರ್ಟ್ ಮಾನಿಟರ್ ಸಿಸ್ಟಂ ಸೇರಿದಂತೆ ಹಲವು ಆಕ್ಟಿವ್ ಸೇಫ್ಟಿ ಫೀಚರ್ಸ್ ಹೊಂದಿದೆ. ಸಿಟಿ ಕಾರಿನ ವಿ ವೆರಿಯೆಂಟ್ ನಂತರದ ಮಾದರಿಗಳಲ್ಲಿ ಎಡಿಎಎಸ್ ಫೀಚರ್ಸ್ ಲಭ್ಯವಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 12.70 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಕಿಯಾ ಸೊನೆಟ್

ಹೊಸ ಕಿಯಾ ಸೊನೆಟ್ ಕಾರು ಲೆವಲ್ 1 ಎಡಿಎಎಸ್ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇದರಲ್ಲಿ ಫಾರ್ವಡ್ ಕೂಲಿಷನ್ ವಾರ್ನಿಂಗ್, ಲೇನ್ ಡಿಪಾರ್ಚರ್ ವಾರ್ನಿಂಗ್, ಫಾರ್ವಡ್ ಕೂಲಿಷನ್ ಅವಾಯ್ಡ್ ಅಸಿಸ್ಟ್, ಹೈ ಬೀಮ್ ಅಸಿಸ್ಟ್ ಮತ್ತು ಲೇನ್ ಕೀಪ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಜೊತೆಗೆ ಹಲವಾರು ಸುರಕ್ಷಾ ಫೀಚರ್ಸ್ ಹೊಂದಿರುವ ಹೊಸ ಸೊನೆಟ್ ಕಾರಿನಲ್ಲಿ ಎಡಿಎಎಸ್ ಫೀಚರ್ಸ್ ಹೊಂದಿರುವ ಮಾದರಿಗಳು ಎಕ್ಸ್ ಶೋರೂಂ ಪ್ರಕಾರ ರೂ. 14.55 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಕೋಟಿ ಬೆಲೆಯ ಪವರ್ ಫುಲ್ ಐಷಾರಾಮಿ ಕಾರು ಖರೀದಿಸಿದ ‘ಸಿಂಹಪ್ರಿಯಾ’ ಜೋಡಿ

ಹೋಂಡಾ ಎಲಿವೇಟ್

ಹೊಸದಾಗಿ ಬಿಡುಗಡೆಯಾಗಿರುವ ಹೋಂಡಾ ಎಲಿವೇಟ್ ನಲ್ಲೂ ಕೂಡಾ ಲೆವಲ್ 2 ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ನೀಡಲಾಗಿದ್ದು, ಇದರಲ್ಲಿ ಕೂಲಿಷನ್ ಬ್ರೇಕಿಂಗ್ ಸಿಸ್ಟಂ, ಲೇನ್ ಡಿಫಾರ್ಚರ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಕೀಪ್ ಅಸಿಸ್ಟ್, ರೋಡ್ ಡಿಪಾರ್ಚರ್ ವಾರ್ನಿಂಗ್ ಮತ್ತು ಆಟೋಮ್ಯಾಟಿಕ್ ಹೈ ಭೀಮ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಎಡಿಎಎಸ್ ಫೀಚರ್ಸ್ ಹೊಂದಿರುವ ಎಲಿವೇಟ್ ಎಕ್ಸ್ ಶೋರೂಂ ಪ್ರಕಾರ ರೂ.15.21 ಲಕ್ಷ ಬೆಲೆ ಹೊಂದಿದೆ.

Published On - 9:00 pm, Wed, 1 May 24

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು