AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honda WR-V SUV: ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್!

ಹೋಂಡಾ ಕಾರ್ಸ್ ಕಂಪನಿಯು ಜಾಗತಿಕ ಮಾರುಕಟ್ಟೆಗಾಗಿ ತನ್ನ ಹೊಸ ಡಬ್ಲ್ಯುಆರ್-ವಿ ಕಂಪ್ಯಾಕ್ಟ್ ಎಸ್ ಯುವಿ ಅನಾವರಣಗೊಳಿಸಿದ್ದು, ಹೊಸ ಕಾರು ಭಾರತದಲ್ಲೂ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Honda WR-V SUV: ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್!
Honda WR-V
Praveen Sannamani
Praveen Sannamani|

Updated on:Nov 07, 2022 | 4:43 PM

Share

ಭಾರತದಲ್ಲಿ ಪ್ರೀಮಿಯಂ ಕಾರುಗಳ ಮೂಲಕ ಜನಪ್ರಿಯವಾಗಿರುವ ಹೋಂಡಾ ಕಾರ್ಸ್ ಕಂಪನಿಯು ಶೀಘ್ರದಲ್ಲಿಯೇ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುಕಟ್ಟೆಯಲ್ಲಿ ತೀವ್ರ ಪೈಪೋಟಿ ಎದುರಿಸುತ್ತಿರುವ ಹೋಂಡಾ ಕಂಪನಿಯು ಪ್ರತಿಸ್ಪರ್ಧಿ ಕಂಪನಿಗಳ ಕಾರು ಮಾದರಿಗಳಿಗೆ ಟಕ್ಕರ್ ನೀಡಲು ಈ ಬಾರಿ ಹೊಸ ಪ್ಲ್ಯಾನ್ ರೂಪಿಸಿದೆ. ಹೊಸ ಕಾರು ಮಾದರಿಯ ಯೋಜನೆಯನ್ನು ಈಗಾಗಲೇ ಖಚಿತಪಡಿಸಿರುವ ಹೋಂಡಾ ಕಂಪನಿಯು ಪ್ರಮುಖ ಕಂಪ್ಯಾಕ್ಟ್ ಎಸ್ ಯುವಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳ ಕ್ರೇಜ್ ಹೆಚ್ಚುತ್ತಿದ್ದು, ಇದೀಗ ಹೋಂಡಾ ಕಾರ್ಸ್ ಕಂಪನಿಯು ತನ್ನ ಮತ್ತೊಂದು ನವೀಕೃತ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಜಾಗತಿಕ ಮಾರುಕಟ್ಟೆಗಾಗಿ ತನ್ನ ಡಬ್ಲ್ಯುಆರ್-ವಿ(WR-V) ಕಂಪ್ಯಾಕ್ಟ್ ಎಸ್ ಯುವಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಇತ್ತೀಚೆಗೆ ಕಂಪನಿಯು ಹೊಸ ಕಾರನ್ನು ಇಂಡೋನೇಷ್ಯಾದಲ್ಲಿ ಅನಾವರಣಗೊಳಿಸಿದೆ. ಮುಂಬರುವ ದಿನಗಳಲ್ಲಿ ಭಾರತದಲ್ಲೂ ಹೊಸ ಕಾರು ಬಿಡುಗಡೆಯಾಗಲಿದ್ದು, 2023ರ ಡಬ್ಲ್ಯುಆರ್-ವಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

Honda WR-V

ವಿನ್ಯಾಸ ಮತ್ತು ಫೀಚರ್ಸ್ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹೋಂಡಾ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್ ಜೊತೆ ವಿನ್ಯಾಸದಲ್ಲೂ ಮಹತ್ವದ ಬದಲಾವಣೆ ತಂದಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರಿಗಿಂತಲೂ ಹೆಚ್ಚಿನ ಉದ್ದಳತೆಯೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಥಳಾವಕಾಶ ಒದಗಿಸಲಿದೆ. ಈ ಮೂಲಕ ಹೊಸ ಕಾರು ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸುವುದರ ಜೊತೆ ಹೊಸ ಲುಕ್ ನಲ್ಲಿ ಮಿಂಚಲಿದೆ. ಹೊಸ ಕಾರಿನ ಮುಂಭಾಗದ ವಿನ್ಯಾಸವು ಈ ಬಾರಿ ಸಂಪೂರ್ಣವಾಗಿ ಬದಲಾವಣೆಗೊಂಡಿದ್ದು, ಬಲಿಷ್ಠ ಎಸ್ ಯುವಿ ವಿನ್ಯಾಸವು ಗ್ರಾಹಕರನ್ನು ಸೆಳೆಯಲಿದೆ.

ಇದನ್ನೂ ಓದಿ: ಜನಪ್ರಿಯ ಕಿಯಾ ಕಾರೆನ್ಸ್ ಎಂಪಿವಿ ಇದೀಗ ಮತ್ತಷ್ಟು ದುಬಾರಿ

ಹೊಸ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣ ಹೊಸ ಡಬ್ಲ್ಯುಆರ್-ವಿ ಕಾರು ಹೊಸ ತಲೆಮಾರಿನ ಸಿಟಿ ಸೆಡಾನ್ ಮತ್ತು ಅಮೇಜ್ ಕಂಪ್ಯಾಕ್ಟ್ ಸೆಡಾನ್ ಕಾರುಗಳ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದೆ. ಇದರಲ್ಲಿ ಕಂಪನಿಯು ಟ್ಯಾಪರಿಂಗ್ ರೂಫ್ ಲೈನ್, ಆ್ಯಂಗುಲರ್ ಟೈಲ್ ಗೇಟ್, ಸ್ಪೋರ್ಟಿ ಶೋಡ್ಡರ್ ಲೈನ್, ಬಾಡಿ ಕ್ಲ್ಯಾಡಿಂಗ್, ವ್ಹೀಲ್ ಆರ್ಚ್ ಮತ್ತು 16 ಇಂಚಿನ ಅಲಾಯ್ ವ್ಹೀಲ್ ಸೌಲಭ್ಯ ಪಡೆದುಕೊಳ್ಳಲಿದೆ. ಹಾಗೆಯೇ ಕಾರಿನ ಒಳಭಾಗದಲ್ಲೂ ಹಲವು ಹೊಸ ಸೌಲಭ್ಯಗಳಿದ್ದು, ಸ್ಪೋರ್ಟಿ ವರ್ಷನ್ ನಲ್ಲಿ ಆಲ್ ಬ್ಲ್ಯಾಕ್ ಇಂಟಿರಿಯರ್, ಅನಲಾಗ್ ಡಯಲ್, 4.2 ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ ಪ್ಲೇ, ಮಲ್ಟಿ ಜೋನ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಹೊಂದಿರಲಿದೆ.

Honda WR-V

ಎಂಜಿನ್ ಮತ್ತು ಪರ್ಫಾಮೆನ್ಸ್ ಹೊಸ ಕಾರಿನಲ್ಲಿ ಹೋಂಡಾ ಕಂಪನಿಯು ಪವರ್ ಫುಲ್ 1.5 ಲೀಟರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದ್ದು, ಇದು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಈ ಮೂಲಕ ಹೊಸ ಕಾರು 121 ಬಿಎಚ್ ಪಿ ಮತ್ತು 145 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಸಿಟಿ ಸೆಡಾನ್ ಮಾದರಿಯಲ್ಲಿನ ಗೇರ್ ಬಾಕ್ಸ್ ಆಯ್ಕೆಯನ್ನೇ ಹೊಸ ಕಾರಿನಲ್ಲಿ ಬಳಕೆ ಮಾಡಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಸಿಎನ್​ಜಿ ಕಾರುಗಳಿವು!

ಸುರಕ್ಷಾ ಸೌಲಭ್ಯಗಳು ಹೊಸ ಕಾರು ಅತ್ಯುತ್ತಮ ಪರ್ಫಾಮೆನ್ಸ್ ಹಾಗೂ ಪ್ರೀಮಿಯಂ ಫೀಚರ್ಸ್ ಜೊತೆಗೆ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರಿನಲ್ಲಿ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಹೊಸ ಸೇಫ್ಟಿ ಫೀಚರ್ಸ್ ನೀಡಿದೆ. ಹೊಸ ಕಾರಿನಲ್ಲಿ ಈ ಬಾರಿಗೆ ಗರಿಷ್ಠ ಸುರಕ್ಷತೆಗಾಗಿ 6 ಏರ್ ಬ್ಯಾಗ್, ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ ಪ್ರಮುಖ ಫೀಚರ್ಸ್ ಗಳಿವೆ. ಜೊತೆಗೆ ಹೊಸ ಕಾರು ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಹೈರೈಡರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Published On - 4:31 pm, Mon, 7 November 22

Follow Us
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!