ಸಖತ್ ಮೈಲೇಜ್ ನೊಂದಿಗೆ ಬಿಗಾಸ್ ಆರ್‌ಯುವಿ350 ಇವಿ ಸ್ಕೂಟರ್ ಬಿಡುಗಡೆ

ಬಿಗಾಸ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯು ತನ್ನ ಹೊಸ ಆರ್‌ಯುವಿ350 ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್ ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ಸಖತ್ ಮೈಲೇಜ್ ನೊಂದಿಗೆ ಬಿಗಾಸ್ ಆರ್‌ಯುವಿ350 ಇವಿ ಸ್ಕೂಟರ್ ಬಿಡುಗಡೆ
ಬಿಗಾಸ್ ಆರ್‌ಯುವಿ350 ಇವಿ ಸ್ಕೂಟರ್
Follow us
|

Updated on: Jun 30, 2024 | 10:20 PM

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯಾಗಿರುವ ಬಿಗಾಸ್ (BGauss) ತನ್ನ ಹೊಸ ಆರ್‌ಯುವಿ350 ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಮಾದರಿಯು ಆರ್‌ಯುವಿ350ಐ ಇಎಕ್ಸ್ , ಆರ್‌ಯುವಿ350 ಇಎಕ್ಸ್ ಮತ್ತು ಆರ್‌ಯುವಿ350 ಮ್ಯಾಕ್ಸ್ ಎನ್ನುವ ಮೂರು ವೆರಿಯೆಂಟ್ ಗಳೊಂದಿಗೆ ಖರೀದಿಗೆ ಲಭ್ಯವಿದೆ. ಇದರಲ್ಲಿ ಆರಂಭಿಕ ಮಾದರಿಯು ರೂ.1,09,999 ಬೆಲೆ ಹೊಂದಿದ್ದರೆ ಮಧ್ಯಮ ಕ್ರಮಾಂಕದ ಮಾದರಿಯು ರೂ.1,24,999 ಮತ್ತು ಟಾಪ್ ಎಂಡ್ ಮಾದರಿಯು ರೂ.1,34,999 ಬೆಲೆ ಹೊಂದಿದೆ.

ಸದ್ಯ ಮಾರುಕಟ್ಟೆಯಲ್ಲಿ ಡಿ15 ಹಾಗೂ ಸಿ12ಐ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿರುವ ಬಿಗಾಸ್ ಕಂಪನಿಯು ಇದೀಗ ಹೊಸ ಫೀಚರ್ಸ್ ಹೊಂದಿರುವ ಆರ್‌ಯುವಿ350 ಇವಿ ಸ್ಕೂಟರ್ ಪರಿಚಯಿಸಿದ್ದು, ಇದು ಪ್ರಮುಖ 5 ಆಕರ್ಷಕ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಜೊತೆಗೆ ಹೊಸ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ರೂ.10,000 ದಿಂದ ರೂ.20,000 ಮೌಲ್ಯದ ಉಚಿತ ವಿಮೆ ಮತ್ತು ಬ್ಯಾಟರಿ ವಾರಂಟಿ ಸೌಲಭ್ಯಗಳನ್ನು ನೀಡುತ್ತಿದ್ದು, ಇವಿ ಸ್ಕೂಟರ್ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಹೊಸ ಆರ್‌ಯುವಿ350 ಇವಿ ಸ್ಕೂಟರ್ ನಲ್ಲಿ ಬಿಗಾಸ್ ಕಂಪನಿಯು ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ 2.3 ಕೆವಿಹೆಚ್ ಮತ್ತು 3 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇವು ಪ್ರತಿ ಚಾರ್ಜ್ ಗೆ 90 ರಿಂದ 120 ಕಿ.ಮೀ ಮೈಲೇಜ್ ನೀಡುತ್ತವೆ. ಆರ್‌ಯುವಿ350 ಮ್ಯಾಕ್ಸ್ ಮಾದರಿಯು ದುಬಾರಿ ಬೆಲೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದ್ದು, ಇದು ಮೈಲೇಜ್ ನಲ್ಲೂ ಗಮನಸೆಳೆಯುತ್ತದೆ.

ಇದನ್ನೂ ಓದಿ: ಕೇವಲ ರೂ. 15 ಸಾವಿರಕ್ಕೆ ಸಿಎನ್‌ಜಿ ಆವೃತ್ತಿಯಾಗಲಿವೆ ನಿಮ್ಮ ಪೆಟ್ರೋಲ್ ಚಾಲಿತ ದ್ವಿಚಕ್ರ ವಾಹನಗಳು..

ಹಾಗೆಯೇ ಹೊಸ ಇವಿ ಸ್ಕೂಟರ್ ನಲ್ಲಿ ಅತ್ಯಾಧುನಿಕ ವಿನ್ಯಾಸದೊಂದಿಗೆ ಸಖತ್ ಫೀಚರ್ಸ್ ಜೋಡಣೆ ಮಾಡಲಾಗಿದ್ದು, ಅರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗುವ ಬ್ಲೂಟೂಥ್, ಕ್ರೂಸ್ ಕಂಟ್ರೋಲ್ ಮತ್ತು ಹಿಲ್ ಹೋಲ್ಡ್ ಫೀಚರ್ಸ್ ನೀಡಲಾಗಿದೆ. ಜೊತೆಗೆ 16 ಇಂಚಿನ ವೀಲ್ಹ್ ಜೊತೆಗೆ 130 ಎಂಎಂ ಡ್ರಮ್ ಬ್ರೇಕ್ಸ್ ಜೋಡಣೆ ಮಾಡಲಾಗಿದ್ದು, ಬೆಲೆ ವಿಚಾರದಲ್ಲಿ ಇದು ಟಿವಿಎಸ್ ಐಕ್ಯೂಬ್, ಎಥರ್ ರಿಜ್ಟಾಗೆ ಇವಿ ಸ್ಕೂಟರ್ ಗಳಿಗೆ ಉತ್ತಮ ಪೈಪೋಟಿ ನೀರಿಕ್ಷೆಯಿದೆ.

ತಾಜಾ ಸುದ್ದಿ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್