AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ

ಬಿವೈಡಿ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಅಟ್ಟೊ3 ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸ ಆರಂಭಿಕ ವೆರಿಯೆಂಟ್ ಬಿಡುಗಡೆ ಮಾಡಿದೆ.

ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ
ಬಿವೈಡಿ ಅಟ್ಟೊ 3 ಇವಿ
Praveen Sannamani
Praveen Sannamani|

Updated on: Jul 13, 2024 | 10:37 PM

Share

ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಬಿವೈಡಿ ಇಂಡಿಯಾ ತನ್ನ ಜನಪ್ರಿಯ ಅಟ್ಟೊ 3 (Atto 3) ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸದಾಗಿ ಡೈನಾಮಿಕ್ ವೆರಿಯೆಂಟ್ ಪರಿಚಯಿಸಿದೆ. ಹೊಸ ವೆರಿಯೆಂಟ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 24.99 ಲಕ್ಷ ಬೆಲೆ ಹೊಂದಿದ್ದು, ಇದು ಟಾಪ್ ಎಂಡ್ ಮಾದರಿಗಿಂತಲೂ ರೂ. 9 ಲಕ್ಷ ಕಡಿಮೆ ಬೆಲೆಗೆ ಲಭ್ಯವಿದೆ.

ಅಟ್ಟೊ3 ಕಾರು ಮಾದರಿಯಲ್ಲಿ ಹೊಸ ಡೈನಾಮಿಕ್ ವೆರಿಯೆಂಟ್ ನೊಂದಿಗೆ ಈಗಾಗಲೇ ಪ್ರೀಮಿಯಂ ಮತ್ತು ಸುಪೀರಿಯೋ ಎನ್ನುವ ಎರಡು ಟಾಪ್ ಎಂಡ್ ವೆರಿಯೆಂಟ್ ಹೊಂದಿದೆ. ಇವು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 29.85 ಲಕ್ಷ ಮತ್ತು ರೂ.33.99 ಲಕ್ಷ ಬೆಲೆ ಹೊಂದಿದ್ದು, ಇದೀಗ ಬಿಡುಗಡೆಯಾಗಿರುವ ಡೈನಾಮಿಕ್ ವೆರಿಯೆಂಟ್ ಉಳಿದೆರಡು ವೆರಿಯೆಂಟ್ ಗಳಿಂತಲೂ ಕಡಿಮೆ ಬೆಲೆಯೊಂದಿಗೆ ಕೆಲವು ಐಷಾರಾಮಿ ಫೀಚರ್ಸ್ ಗಳನ್ನು ಕಳೆದುಕೊಂಡಿರಲಿದೆ. ಆದರೆ ಪ್ರತಿಸ್ಪರ್ಧಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಮತ್ತು ಸ್ಮಾರ್ಟ್ ಫೀಚರ್ಸ್ ಗಳೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿದೆ.

ಬಿವೈಡಿ ಕಂಪನಿಯು ಹೊಸ ಡೈನಾಮಿಕ್ ವೆರಿಯೆಂಟ್ ನಲ್ಲಿದೆ 49.92kWh ಬ್ಯಾಟರಿ ಆಯ್ಕೆ ನೀಡಿದ್ದು, ಇದು ಪ್ರತಿ ಚಾರ್ಜ್ ಗೆ ಗರಿಷ್ಠ 468 ಕಿ.ಮೀ ಮೈಲೇಜ್ ನೀಡುತ್ತದೆ. ಆದರೆ ಹೈ ಎಂಡ್ ಮಾದರಿಗಳನ್ನು ಖರೀದಿಸುವ ಗ್ರಾಹಕರಿಗೆ 60.48kWh ಬ್ಯಾಟರಿ ಪ್ಯಾಕ್ ಆಯ್ಕೆ ದೊರಲಿದ್ದು, ಇದು ಪ್ರತಿ ಚಾರ್ಜ್ ಗೆ 521 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಟಾಪ್ ಎಂಡ್ ಮಾದರಿಯಲ್ಲಿ ಎಡಿಎಎಸ್ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಗಳಿದ್ದು, ಆರಂಭಿಕ ವೆರಿಯೆಂಟ್ ಖರೀದಿಸುವ ಗ್ರಾಹಕರಿಗೆ ಕೆಲವು ಪ್ರೀಮಿಯಂ ಫೀಚರ್ಸ್ ಸಿಗುವುದಿಲ್ಲ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಬಯಸುವ ಗ್ರಾಹಕರಿಗಾಗಿ ಹೊಸ ವೆರಿಯೆಂಟ್ ಅತ್ಯುತ್ತಮ ಆಯ್ಕೆಯಾಗಿದ್ದು, ಕಾಸ್ಮೊ ಬ್ಲ್ಯಾಕ್ ಬಣ್ಣದೊಂದಿಗೆ ಹಲವಾರು ಫೀಚರ್ಸ್ ಗಳನ್ನು ಜೋಡಣೆ ಮಾಡಲಾಗಿದೆ. ಈ ಮೂಲಕ ಇದು ಎಂಜಿ ಜೆಡ್ಎಸ್ ಇವಿ ಮಾದರಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಮುಂಬರುವ ಹ್ಯುಂಡೈ ಕ್ರೆಟಾ ಇವಿ ಮತ್ತು ಮಾರುತಿ ಇವಿಎಕ್ಸ್ ಮಾದರಿಗಳಿಗೆ ಉತ್ತಮ ಪೈಪೋಟಿಯಾಗಲಿದೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​