AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ

ಬಿವೈಡಿ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಅಟ್ಟೊ3 ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸ ಆರಂಭಿಕ ವೆರಿಯೆಂಟ್ ಬಿಡುಗಡೆ ಮಾಡಿದೆ.

ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ
ಬಿವೈಡಿ ಅಟ್ಟೊ 3 ಇವಿ
Praveen Sannamani
|

Updated on: Jul 13, 2024 | 10:37 PM

Share

ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಬಿವೈಡಿ ಇಂಡಿಯಾ ತನ್ನ ಜನಪ್ರಿಯ ಅಟ್ಟೊ 3 (Atto 3) ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸದಾಗಿ ಡೈನಾಮಿಕ್ ವೆರಿಯೆಂಟ್ ಪರಿಚಯಿಸಿದೆ. ಹೊಸ ವೆರಿಯೆಂಟ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 24.99 ಲಕ್ಷ ಬೆಲೆ ಹೊಂದಿದ್ದು, ಇದು ಟಾಪ್ ಎಂಡ್ ಮಾದರಿಗಿಂತಲೂ ರೂ. 9 ಲಕ್ಷ ಕಡಿಮೆ ಬೆಲೆಗೆ ಲಭ್ಯವಿದೆ.

ಅಟ್ಟೊ3 ಕಾರು ಮಾದರಿಯಲ್ಲಿ ಹೊಸ ಡೈನಾಮಿಕ್ ವೆರಿಯೆಂಟ್ ನೊಂದಿಗೆ ಈಗಾಗಲೇ ಪ್ರೀಮಿಯಂ ಮತ್ತು ಸುಪೀರಿಯೋ ಎನ್ನುವ ಎರಡು ಟಾಪ್ ಎಂಡ್ ವೆರಿಯೆಂಟ್ ಹೊಂದಿದೆ. ಇವು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 29.85 ಲಕ್ಷ ಮತ್ತು ರೂ.33.99 ಲಕ್ಷ ಬೆಲೆ ಹೊಂದಿದ್ದು, ಇದೀಗ ಬಿಡುಗಡೆಯಾಗಿರುವ ಡೈನಾಮಿಕ್ ವೆರಿಯೆಂಟ್ ಉಳಿದೆರಡು ವೆರಿಯೆಂಟ್ ಗಳಿಂತಲೂ ಕಡಿಮೆ ಬೆಲೆಯೊಂದಿಗೆ ಕೆಲವು ಐಷಾರಾಮಿ ಫೀಚರ್ಸ್ ಗಳನ್ನು ಕಳೆದುಕೊಂಡಿರಲಿದೆ. ಆದರೆ ಪ್ರತಿಸ್ಪರ್ಧಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಮತ್ತು ಸ್ಮಾರ್ಟ್ ಫೀಚರ್ಸ್ ಗಳೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿದೆ.

ಬಿವೈಡಿ ಕಂಪನಿಯು ಹೊಸ ಡೈನಾಮಿಕ್ ವೆರಿಯೆಂಟ್ ನಲ್ಲಿದೆ 49.92kWh ಬ್ಯಾಟರಿ ಆಯ್ಕೆ ನೀಡಿದ್ದು, ಇದು ಪ್ರತಿ ಚಾರ್ಜ್ ಗೆ ಗರಿಷ್ಠ 468 ಕಿ.ಮೀ ಮೈಲೇಜ್ ನೀಡುತ್ತದೆ. ಆದರೆ ಹೈ ಎಂಡ್ ಮಾದರಿಗಳನ್ನು ಖರೀದಿಸುವ ಗ್ರಾಹಕರಿಗೆ 60.48kWh ಬ್ಯಾಟರಿ ಪ್ಯಾಕ್ ಆಯ್ಕೆ ದೊರಲಿದ್ದು, ಇದು ಪ್ರತಿ ಚಾರ್ಜ್ ಗೆ 521 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಟಾಪ್ ಎಂಡ್ ಮಾದರಿಯಲ್ಲಿ ಎಡಿಎಎಸ್ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಗಳಿದ್ದು, ಆರಂಭಿಕ ವೆರಿಯೆಂಟ್ ಖರೀದಿಸುವ ಗ್ರಾಹಕರಿಗೆ ಕೆಲವು ಪ್ರೀಮಿಯಂ ಫೀಚರ್ಸ್ ಸಿಗುವುದಿಲ್ಲ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಬಯಸುವ ಗ್ರಾಹಕರಿಗಾಗಿ ಹೊಸ ವೆರಿಯೆಂಟ್ ಅತ್ಯುತ್ತಮ ಆಯ್ಕೆಯಾಗಿದ್ದು, ಕಾಸ್ಮೊ ಬ್ಲ್ಯಾಕ್ ಬಣ್ಣದೊಂದಿಗೆ ಹಲವಾರು ಫೀಚರ್ಸ್ ಗಳನ್ನು ಜೋಡಣೆ ಮಾಡಲಾಗಿದೆ. ಈ ಮೂಲಕ ಇದು ಎಂಜಿ ಜೆಡ್ಎಸ್ ಇವಿ ಮಾದರಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಮುಂಬರುವ ಹ್ಯುಂಡೈ ಕ್ರೆಟಾ ಇವಿ ಮತ್ತು ಮಾರುತಿ ಇವಿಎಕ್ಸ್ ಮಾದರಿಗಳಿಗೆ ಉತ್ತಮ ಪೈಪೋಟಿಯಾಗಲಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್