AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ

ಬಿವೈಡಿ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಅಟ್ಟೊ3 ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸ ಆರಂಭಿಕ ವೆರಿಯೆಂಟ್ ಬಿಡುಗಡೆ ಮಾಡಿದೆ.

ರೂ. 9 ಲಕ್ಷ ಕಡಿಮೆ ಬೆಲೆಗೆ ಬಿವೈಡಿ ಅಟ್ಟೊ 3 ಇವಿ ಕಾರಿನ ಹೊಸ ವೆರಿಯೆಂಟ್ ಬಿಡುಗಡೆ
ಬಿವೈಡಿ ಅಟ್ಟೊ 3 ಇವಿ
Praveen Sannamani
Praveen Sannamani|

Updated on: Jul 13, 2024 | 10:37 PM

Share

ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಬಿವೈಡಿ ಇಂಡಿಯಾ ತನ್ನ ಜನಪ್ರಿಯ ಅಟ್ಟೊ 3 (Atto 3) ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಲ್ಲಿ ಹೊಸದಾಗಿ ಡೈನಾಮಿಕ್ ವೆರಿಯೆಂಟ್ ಪರಿಚಯಿಸಿದೆ. ಹೊಸ ವೆರಿಯೆಂಟ್ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 24.99 ಲಕ್ಷ ಬೆಲೆ ಹೊಂದಿದ್ದು, ಇದು ಟಾಪ್ ಎಂಡ್ ಮಾದರಿಗಿಂತಲೂ ರೂ. 9 ಲಕ್ಷ ಕಡಿಮೆ ಬೆಲೆಗೆ ಲಭ್ಯವಿದೆ.

ಅಟ್ಟೊ3 ಕಾರು ಮಾದರಿಯಲ್ಲಿ ಹೊಸ ಡೈನಾಮಿಕ್ ವೆರಿಯೆಂಟ್ ನೊಂದಿಗೆ ಈಗಾಗಲೇ ಪ್ರೀಮಿಯಂ ಮತ್ತು ಸುಪೀರಿಯೋ ಎನ್ನುವ ಎರಡು ಟಾಪ್ ಎಂಡ್ ವೆರಿಯೆಂಟ್ ಹೊಂದಿದೆ. ಇವು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 29.85 ಲಕ್ಷ ಮತ್ತು ರೂ.33.99 ಲಕ್ಷ ಬೆಲೆ ಹೊಂದಿದ್ದು, ಇದೀಗ ಬಿಡುಗಡೆಯಾಗಿರುವ ಡೈನಾಮಿಕ್ ವೆರಿಯೆಂಟ್ ಉಳಿದೆರಡು ವೆರಿಯೆಂಟ್ ಗಳಿಂತಲೂ ಕಡಿಮೆ ಬೆಲೆಯೊಂದಿಗೆ ಕೆಲವು ಐಷಾರಾಮಿ ಫೀಚರ್ಸ್ ಗಳನ್ನು ಕಳೆದುಕೊಂಡಿರಲಿದೆ. ಆದರೆ ಪ್ರತಿಸ್ಪರ್ಧಿ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಮತ್ತು ಸ್ಮಾರ್ಟ್ ಫೀಚರ್ಸ್ ಗಳೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿದೆ.

ಬಿವೈಡಿ ಕಂಪನಿಯು ಹೊಸ ಡೈನಾಮಿಕ್ ವೆರಿಯೆಂಟ್ ನಲ್ಲಿದೆ 49.92kWh ಬ್ಯಾಟರಿ ಆಯ್ಕೆ ನೀಡಿದ್ದು, ಇದು ಪ್ರತಿ ಚಾರ್ಜ್ ಗೆ ಗರಿಷ್ಠ 468 ಕಿ.ಮೀ ಮೈಲೇಜ್ ನೀಡುತ್ತದೆ. ಆದರೆ ಹೈ ಎಂಡ್ ಮಾದರಿಗಳನ್ನು ಖರೀದಿಸುವ ಗ್ರಾಹಕರಿಗೆ 60.48kWh ಬ್ಯಾಟರಿ ಪ್ಯಾಕ್ ಆಯ್ಕೆ ದೊರಲಿದ್ದು, ಇದು ಪ್ರತಿ ಚಾರ್ಜ್ ಗೆ 521 ಕಿ.ಮೀ ಮೈಲೇಜ್ ನೀಡುತ್ತದೆ. ಹಾಗೆಯೇ ಟಾಪ್ ಎಂಡ್ ಮಾದರಿಯಲ್ಲಿ ಎಡಿಎಎಸ್ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಗಳಿದ್ದು, ಆರಂಭಿಕ ವೆರಿಯೆಂಟ್ ಖರೀದಿಸುವ ಗ್ರಾಹಕರಿಗೆ ಕೆಲವು ಪ್ರೀಮಿಯಂ ಫೀಚರ್ಸ್ ಸಿಗುವುದಿಲ್ಲ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಬಯಸುವ ಗ್ರಾಹಕರಿಗಾಗಿ ಹೊಸ ವೆರಿಯೆಂಟ್ ಅತ್ಯುತ್ತಮ ಆಯ್ಕೆಯಾಗಿದ್ದು, ಕಾಸ್ಮೊ ಬ್ಲ್ಯಾಕ್ ಬಣ್ಣದೊಂದಿಗೆ ಹಲವಾರು ಫೀಚರ್ಸ್ ಗಳನ್ನು ಜೋಡಣೆ ಮಾಡಲಾಗಿದೆ. ಈ ಮೂಲಕ ಇದು ಎಂಜಿ ಜೆಡ್ಎಸ್ ಇವಿ ಮಾದರಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಮುಂಬರುವ ಹ್ಯುಂಡೈ ಕ್ರೆಟಾ ಇವಿ ಮತ್ತು ಮಾರುತಿ ಇವಿಎಕ್ಸ್ ಮಾದರಿಗಳಿಗೆ ಉತ್ತಮ ಪೈಪೋಟಿಯಾಗಲಿದೆ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು