AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಬಸಾಲ್ಟ್ ಕೂಪೆ ಎಸ್ ಯುವಿ ಉತ್ಪಾದನೆ ಆರಂಭಿದ ಸಿಟ್ರನ್

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ ಭಾರತದಲ್ಲಿ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಬಸಾಲ್ಟ್ ವಿಷನ್ ಕೂಪೆ ಎಸ್‌ಯುವಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ಭಾರತದಲ್ಲಿ ಬಸಾಲ್ಟ್ ಕೂಪೆ ಎಸ್ ಯುವಿ ಉತ್ಪಾದನೆ ಆರಂಭಿದ ಸಿಟ್ರನ್
ಸಿಟ್ರನ್ ಬಸಾಲ್ಟ್ ವಿಷನ್ ಕೂಪೆ ಎಸ್‌ಯುವಿ
Praveen Sannamani
|

Updated on: Jun 16, 2024 | 10:21 PM

Share

ಹೊಸ ಕಾರುಗಳೊಂದಿಗೆ ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಫ್ರೆಂಚ್ ಕಾರು ಉತ್ಪಾದನಾ ಕಂಪನಿ ಸಿಟ್ರನ್ (Citroen) ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಕಾರುಗಳಲ್ಲಿ ಬಸಾಲ್ಟ್ ವಿಷನ್ ಕೂಪೆ ಎಸ್‌ಯುವಿ ಕೂಡಾ ಒಂದಾಗಿದ್ದು, ಹೊಸ ಕಾರನ್ನು ಸಿಟ್ರನ್ ಕಂಪನಿ ಭಾರತ ಮತ್ತು ದಕ್ಷಿಣ ಅಮೆರಿಕದಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಹೊಸ ಕಾರನ್ನು ಸದ್ಯ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಇದೀಗ ಅಧಿಕೃತವಾಗಿ ಉತ್ಪಾದನೆಗೂ ಸಹ ಚಾಲನೆ ನೀಡಲಾಗಿದೆ.

ಭಾರತದಲ್ಲಿ ಸದ್ಯ ಸಿ3, ಇಸಿ3, ಸಿ3 ಏರ್ ಕ್ರಾಸ್ ಮತ್ತು ಸಿ5 ಏರ್ ಕ್ರಾಸ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಸಿಟ್ರನ್ ಕಂಪನಿ ಇದೀಗ 5ನೇ ಕಾರು ಮಾದರಿಯಾಗಿ ಬಸಾಲ್ಟ್ ಹೊಸ ಕೂಪೆ ಎಸ್ ಯುವಿ ಬಿಡುಗಡೆ ಮಾಡುತ್ತಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿ3 ಏರ್ ಕ್ರಾಸ್ ಆಧರಿಸಿ ನಿರ್ಮಾಣಗೊಳ್ಳಲಿದೆ. ಇದು ಮಧ್ಯಮ ಕ್ರಮಾಂಕದ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರಲಿದ್ದು, ಹೊಸ ಕಾರಿನಲ್ಲಿ ಸಿ3 ಏರ್ ಕ್ರಾಸ್ನಲ್ಲಿರುವಂತೆ ಹಲವು ತಾಂತ್ರಿಕ ಅಂಶಗಳೊಂದಿಗೆ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದೆ.

ಹೊಸ ಬಸಾಲ್ಟ್ ವಿಷನ್ ಕಾರು ಆಕರ್ಷಕವಾದ ಕೂಪೆ ಎಸ್‌ಯುವಿ ಶೈಲಿ ಹೊಂದಿರುವುದರಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿವೆ. ಇದು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಎಂಜಿ ಆಸ್ಟರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಇದಕ್ಕಾಗಿ ಹೊಸ ಕಾರಿನಲ್ಲಿ ಸಿಟ್ರನ್ ಕಂಪನಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಿದೆ.

ಬಸಾಲ್ಟ್ ವಿಷನ್ ಕಾರು ಪ್ರತಿಸ್ಪರ್ಧಿಗಳಿಗೆ ಪೈಪೋಟಿಯಾಗಿ ಎಲ್ಇಡಿ ಹೆಡ್ ಲ್ಯಾಂಪ್ಸ್, ಎಲ್ಇಡಿ ಟೈಲ್ ಲ್ಯಾಂಪ್ಸ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ಸ್ ಮತ್ತು ಕೂಪೆ ವಿನ್ಯಾಸಕ್ಕೆ ಪೂರಕವಾದ ಶಾರ್ಕ್ ಫಿನ್ ಆಟೆಂನಾ ಸೇರಿದಂತೆ ಹಲವಾರು ಹೊಸ ಫೀಚರ್ಸ್ ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರಿನ ಒಳಾಂಗಣವು ಕೂಡಾ ಸಾಕಷ್ಟು ಸ್ಥಳಾವಕಾಶದೊಂದಿಗೆ ಪ್ರಯಾಣಿಕರಿಗೆ ಪ್ರೀಮಿಯಂ ಚಾಲನಾ ಅನುಭವ ನೀಡಲಿದ್ದು, ಹೊಸ ಕಾರಿನ ಇಂಟಿರಿಯರ್ ಶೀಘ್ರದಲ್ಲಿಯೇ ಬಹಿರಂಗವಾಗಲಿದೆ.

ಇನ್ನು ಹೊಸ ಕಾರಿನ ಒಳಭಾಗದಲ್ಲಿ ಸಿಟ್ರನ್ ಕಂಪನಿಯು ಲೆದರ್ ಆಸನಗಳೊಂದಿಗೆ ಫ್ರಂಟ್ ಸೀಟ್ ವೆಂಟೆಲೆಷನ್ ಸಿಸ್ಟಂ ಜೋಡಣೆ ಮಾಡಿದೆ. ಇದರ ಜೊತೆಗೆ ವೆರ್ ಲೆಸ್ ಚಾರ್ಜಿಂಗ್ ಪಾಡ್, ಆಟೋ ಹೆಡ್ ಲ್ಯಾಂಪ್, ಆಟೋ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ಹಲವು ಫೀಚರ್ಸ್ ಗಳಿರಲಿವೆ.

ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಕಂಪನಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳನ್ನು ಪರಿಚಯಿಸಲಿದೆಯೆಂತೆ. ಟ್ಯೂನ್ ಮಾಡಲಾಗಿರುವ ಹೊಸ ಪೆಟ್ರೋಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದ್ದು, ಇದು 108 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದನಾ ಸಾಮರ್ಥ್ಯ ಹೊಂದಿರಬಹುದಾಗಿದೆ.

ಈ ಮೂಲಕ ಹೊಸ ಬಸಾಲ್ಟ್ ವಿಷನ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಸಿಟ್ರನ್ ಕಂಪನಿ ಈ ವರ್ಷದ ಕೊನೆಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆಯೆಂತೆ. ಇದರೊಂದಿಗೆ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 12 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಹೊಸ ಕಾರಿನ ಮೂಲಕ ಸಿಟ್ರನ್ ಕಂಪನಿ ಭಾರತದಲ್ಲಿ ತನ್ನ ಮಾರುಕಟ್ಟೆ ಪಾಲು ಹೆಚ್ಚಿಸಿಕೊಳ್ಳುವ ತವಕದಲ್ಲಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು