Sign In

By signing in or creating an account, you agree with Associated Broadcasting Company's Terms & Conditions and Privacy Policy.

Citroen: ಸಿಟ್ರನ್ ಹೊಸ ಎಸ್‍ಯುವಿ ಖರೀದಿ ಬರೋಬ್ಬರಿ ರೂ. 1 ಲಕ್ಷ ಡಿಸ್ಕೌಂಟ್ ಘೋಷಣೆ

ಸಿಟ್ರನ್ ಇಂಡಿಯಾ ಕಂಪನಿಯು ಸಿ3 ಏರ್‌ಕ್ರಾಸ್ ಎಸ್‍ಯುವಿಯ ಭಾರೀ ಪ್ರಮಾಣದ ಡಿಸ್ಕೌಂಟ್ ಘೋಷಣೆ ಮಾಡಿದೆ.

Citroen: ಸಿಟ್ರನ್ ಹೊಸ ಎಸ್‍ಯುವಿ ಖರೀದಿ ಬರೋಬ್ಬರಿ ರೂ. 1 ಲಕ್ಷ ಡಿಸ್ಕೌಂಟ್ ಘೋಷಣೆ
ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‍ಯುವಿ
Follow us
Praveen Sannamani
|

Updated on:Nov 01, 2023 | 3:58 PM

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ (Citroen) ಭಾರತದಲ್ಲಿ ಹೊಸ ಕಾರುಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ದೀಪಾವಳಿ ವಿಶೇಷತೆಗಾಗಿ ಸಿ3 ಏರ್‌ಕ್ರಾಸ್ (C3 Aircross) ಎಸ್‍ಯುವಿ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದೆ. ಹೊಸ ಆಫರ್ ನಲ್ಲಿ ಗ್ರಾಹಕರು ಕ್ಯಾಶ್ ಬ್ಯಾಕ್ ಜೊತೆಗೆ ವಿಸ್ತರಿತ ವಾರಂಟಿ ಮತ್ತು ಉಚಿತ ನಿರ್ವಹಣಾ ಪ್ಯಾಕೇಜ್ ಪಡೆದುಕೊಳ್ಳಬಹುದಾಗಿದ್ದು, ಎಸ್ ಯುವಿ ಕಾರು ಖರೀದಿದಾರರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಸಿಟ್ರನ್ ಹೊಸ ಆಫರ್ ನಲ್ಲಿ ಸಿ3 ಏರ್‌ಕ್ರಾಸ್ ಎಸ್‍ಯುವಿ ಖರೀದಿದಾರರಿಗೆ ಒಟ್ಟಾರೆ ರೂ. 1 ಲಕ್ಷ ಮೌಲ್ಯದ ಆಫರ್ ನೀಡುತ್ತಿದ್ದು, ಇದರಲ್ಲಿ ರೂ. 30 ಸಾವಿರ ಕ್ಯಾಶ್ ಡಿಸ್ಕೌಂಟ್ ಸಿಗಲಿದ್ದರೆ ರೂ 25 ಸಾವಿರ ಮೌಲ್ಯದ 5 ವರ್ಷಗಳ ಅಥವಾ 60 ಸಾವಿರ ಕಿ.ಮೀ ವಿಸ್ತೃತ ವಾರಂಟಿ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ 5 ವರ್ಷಗಳ ಅಥವಾ 50 ಸಾವಿರ ಕಿ.ಮೀ ತನಕ ಕಾರು ನಿರ್ವಹಣೆಗಾಗಿ ರೂ 45 ಸಾವಿರ ಮೌಲ್ಯದ ನಿರ್ವಹಣಾ ಪ್ಯಾಕೇಜ್ ನೀಡಲಾಗುತ್ತಿದ್ದು, ಹೊಸ ಆಫರ್ ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

Citroen C3 Aircross (1)

ಹೊಸ ಆಫರ್ ನಲ್ಲಿ ಸಿಟ್ರನ್ ಕಂಪನಿಯು ಮೇಲೆ ತಿಳಿಸಿರುವ ಕ್ಯಾಶ್ ಬ್ಯಾಕ್, ವಿಸ್ತರಿತ ವಾರಂಟಿ ಮತ್ತು ಉಚಿತ ನಿರ್ವಹಣಾ ಪ್ಯಾಕೇಜ್ ಹೊರತಾಗಿಯೂ ಮತ್ತೊಂದು ಆಫರ್ ನೀಡುತ್ತಿದ್ದು, ವಿಸ್ತರಿತ ವಾರಂಟಿ ಮತ್ತು ಉಚಿತ ನಿರ್ವಹಣಾ ಪ್ಯಾಕೇಜ್ ಬಿಟ್ಟು ರೂ. 90 ಸಾವಿರ ಮೌಲ್ಯದ ಕ್ಯಾಶ್ ಬ್ಯಾಕ್ ಆಫರ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ನ್ಯೂ ಜನರೇಷನ್ ಸುಜುಕಿ ಸ್ವಿಫ್ಟ್ ಅನಾವರಣ

ಇನ್ನು ಇತ್ತೀಚೆಗೆ ಬಿಡುಗಡೆಗೊಂಡಿರುವ ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯು ಯು, ಪ್ಲಸ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ಮತ್ತು ಟಾಪ್ ಎಂಡ್ ಆವೃತ್ತಿಯು ರೂ. 12.34 ಲಕ್ಷ ಬೆಲೆ ಹೊಂದಿದೆ.

ಸಿ3 ಏರ್‌ಕ್ರಾಸ್ ಎಸ್‌ಯುವಿಯ ಮತ್ತೊಂದು ವಿಶೇಷವೆಂದರೆ ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 5 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಖರೀದಿಸಬಹುದಾಗಿದ್ದು, 7 ಸೀಟರ್ ಮಾದರಿಯು ಪ್ಲಸ್ ಮತ್ತು ಮ್ಯಾಕ್ಸ್ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿರಲಿದೆ. ಇನ್ನುಳಿದಂತೆ ಎಲ್ಲಾ ವೆರಿಯೆಂಟ್ ಗಳಲ್ಲೂ 5 ಸೀಟರ್ ಮಾದರಿಯು ಸ್ಟ್ಯಾಂಡರ್ಡ್ ಆಗಿ ಖರೀದಿಗೆ ಲಭ್ಯವಿರಲಿದ್ದು, 7 ಸೀಟರ್ ಮಾದರಿಯು 5 ಸೀಟರ್ ಮಾದರಿಗಿಂತಲೂ ರೂ. 35 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿವೆ.

ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿಯಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ 110 ಹಾರ್ಸ್ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಹೊಂದಿರಲಿದೆ. ಸದ್ಯ ಹೊಸ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಜೊತೆ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆ ಮಾತ್ರ ನೀಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಯು ಬಿಡುಗಡೆಯಾಗುವ ನೀರಿಕ್ಷೆಗಳಿವೆ.

ಇದನ್ನೂ ಓದಿ: ಫೀಚರ್ಸ್ ವಿಚಾರದಲ್ಲಿ ಮಹೀಂದ್ರಾ ಎಕ್ಸ್ ಯುವಿ700 ಹಿಂದಿಕ್ಕಿದ ಟಾಟಾ ಸಫಾರಿ

ಈ ಮೂಲಕ ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಹೊಸದಾಗಿ ಬಿಡುಗಡೆಯಾಗಿರುವ ಹೋಂಡಾ ಎಲಿವೇಟ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದೆ.

Published On - 3:41 pm, Wed, 1 November 23

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್