AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳ ಮಾರಾಟ ಸ್ಥಗಿತಗೊಳಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಾರು ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳನ್ನು ಸ್ಥಗಿತಗೊಳಿಸಿದೆ.

Praveen Sannamani
|

Updated on: Apr 06, 2023 | 1:27 PM

Share

ಭಾರತದಲ್ಲಿ ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸ ವಾಹನಗಳಿಗೆ ಆರ್ ಡಿಇ(Real Driving Emissions) ಮಾನದಂಡವನ್ನ ಏಪ್ರಿಲ್ 1ರಿಂದಲೇ ಕಡ್ಡಾಯವಾಗಿ ಜಾರಿಗೆ ತಂದಿದ್ದು, ಹೊಸ ಮಾನದಂಡಗಳಿಗೆ ಅನುಗುಣವಾಗಿ Real Driving Emissions ಕಂಪನಿಯು ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಮಾರಾಟದಿಂದ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪೂರೈಸಲು ಸಾಧ್ಯವಿಲ್ಲದ ಕಾರುಗಳ ಸ್ಥಗಿತಕ್ಕೆ ನಿರ್ಧರಿಸಿರುವ ಹೋಂಡಾ ಕಂಪನಿಯು ಐದನೇ ತಲೆಮಾರಿನ ಸಿಟಿ ಸೆಡಾನ್ ಮತ್ತು ಹೊಸ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯನ್ನ ಹೊರತುಪಡಿಸಿ ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರನ್ನ ಅಧಿಕೃತವಾಗಿ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳಿಗೆ ಅನುಗುಣವಾಗಿ ಕಳೆದ 6 ವರ್ಷಗಳಲ್ಲಿ ಒಟ್ಟು 9 ಕಾರು ಮಾದರಿಗಳನ್ನ ಸ್ಥಗಿತಗೊಳಿಸಿದ್ದು, ಪ್ರತಿಸ್ಪರ್ಧಿ ಕಾರು ಕಂಪನಿಗಳ ಹೊಸ ಮಾದರಿಗಳಿಂದ ಭಾರೀ ಪೈಪೋಟಿ ಎದುರಿಸುತ್ತಿದೆ. 2017ರಿಂದ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗುತ್ತಿದ್ದು, ಆರಂಭದಲ್ಲಿ ಬ್ರಿಯೊ, ಮೊಬಿಲಿಯೋ ಕಾರುಗಳನ್ನ ತದನಂತರ ಸಿವಿಕ್, ಸಿಆರ್-ವಿ, ಬಿಆರ್-ವಿ ಮತ್ತು ಜಾಝ್ ಡೀಸಲ್ ಮಾದರಿಯನ್ನ ಸ್ಥಗಿತಗೊಳಿಸಲಾಗಿತ್ತು. ಇದೀಗ ಬಿಎಸ್ 6 2ನೇ ಹಂತ ಜಾರಿ ನಂತರ ಜಾಝ್ ಪೆಟ್ರೋಲ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಸ್ಥಗಿತಗೊಳಿಸಲಾಗಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳೊಂದಿಗೆ ಪ್ರಸ್ತುತ ಮಾದರಿಗಳ ಉನ್ನತೀಕರಣವು ದುಬಾರಿಯಾಗುವ ಕಾರಣಕ್ಕೆ ಹೋಂಡಾ ಕಂಪನಿಯು ಸದ್ಯ ಹೊಚ್ಚ ಹೊಸ ಮಾದಿರಗಳ ಬಿಡುಗಡೆಯತ್ತ ಯೋಜನೆ ರೂಪಿಸಿದ್ದು, ಹೊಸ ಕಾರು ಮಾದರಿಗಳು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಹೊಸ ಕಾರುಗಳ ಪಟ್ಟಿಯಲ್ಲಿ ಎಸ್ ಯುವಿ ಮಾದರಿಯೊಂದು ಸದ್ಯ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ವಿವಿಧ ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಮಾದರಿಯು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಆವೃತ್ತಿಯಲ್ಲಿ ಅನಾವರಣಗೊಳ್ಳಲಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?