Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳ ಮಾರಾಟ ಸ್ಥಗಿತಗೊಳಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಾರು ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳನ್ನು ಸ್ಥಗಿತಗೊಳಿಸಿದೆ.

Follow us
Praveen Sannamani
|

Updated on: Apr 06, 2023 | 1:27 PM

ಭಾರತದಲ್ಲಿ ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸ ವಾಹನಗಳಿಗೆ ಆರ್ ಡಿಇ(Real Driving Emissions) ಮಾನದಂಡವನ್ನ ಏಪ್ರಿಲ್ 1ರಿಂದಲೇ ಕಡ್ಡಾಯವಾಗಿ ಜಾರಿಗೆ ತಂದಿದ್ದು, ಹೊಸ ಮಾನದಂಡಗಳಿಗೆ ಅನುಗುಣವಾಗಿ Real Driving Emissions ಕಂಪನಿಯು ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಮಾರಾಟದಿಂದ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪೂರೈಸಲು ಸಾಧ್ಯವಿಲ್ಲದ ಕಾರುಗಳ ಸ್ಥಗಿತಕ್ಕೆ ನಿರ್ಧರಿಸಿರುವ ಹೋಂಡಾ ಕಂಪನಿಯು ಐದನೇ ತಲೆಮಾರಿನ ಸಿಟಿ ಸೆಡಾನ್ ಮತ್ತು ಹೊಸ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯನ್ನ ಹೊರತುಪಡಿಸಿ ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರನ್ನ ಅಧಿಕೃತವಾಗಿ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳಿಗೆ ಅನುಗುಣವಾಗಿ ಕಳೆದ 6 ವರ್ಷಗಳಲ್ಲಿ ಒಟ್ಟು 9 ಕಾರು ಮಾದರಿಗಳನ್ನ ಸ್ಥಗಿತಗೊಳಿಸಿದ್ದು, ಪ್ರತಿಸ್ಪರ್ಧಿ ಕಾರು ಕಂಪನಿಗಳ ಹೊಸ ಮಾದರಿಗಳಿಂದ ಭಾರೀ ಪೈಪೋಟಿ ಎದುರಿಸುತ್ತಿದೆ. 2017ರಿಂದ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗುತ್ತಿದ್ದು, ಆರಂಭದಲ್ಲಿ ಬ್ರಿಯೊ, ಮೊಬಿಲಿಯೋ ಕಾರುಗಳನ್ನ ತದನಂತರ ಸಿವಿಕ್, ಸಿಆರ್-ವಿ, ಬಿಆರ್-ವಿ ಮತ್ತು ಜಾಝ್ ಡೀಸಲ್ ಮಾದರಿಯನ್ನ ಸ್ಥಗಿತಗೊಳಿಸಲಾಗಿತ್ತು. ಇದೀಗ ಬಿಎಸ್ 6 2ನೇ ಹಂತ ಜಾರಿ ನಂತರ ಜಾಝ್ ಪೆಟ್ರೋಲ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಸ್ಥಗಿತಗೊಳಿಸಲಾಗಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳೊಂದಿಗೆ ಪ್ರಸ್ತುತ ಮಾದರಿಗಳ ಉನ್ನತೀಕರಣವು ದುಬಾರಿಯಾಗುವ ಕಾರಣಕ್ಕೆ ಹೋಂಡಾ ಕಂಪನಿಯು ಸದ್ಯ ಹೊಚ್ಚ ಹೊಸ ಮಾದಿರಗಳ ಬಿಡುಗಡೆಯತ್ತ ಯೋಜನೆ ರೂಪಿಸಿದ್ದು, ಹೊಸ ಕಾರು ಮಾದರಿಗಳು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಹೊಸ ಕಾರುಗಳ ಪಟ್ಟಿಯಲ್ಲಿ ಎಸ್ ಯುವಿ ಮಾದರಿಯೊಂದು ಸದ್ಯ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ವಿವಿಧ ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಮಾದರಿಯು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಆವೃತ್ತಿಯಲ್ಲಿ ಅನಾವರಣಗೊಳ್ಳಲಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ.

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ