AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳ ಮಾರಾಟ ಸ್ಥಗಿತಗೊಳಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಾರು ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳನ್ನು ಸ್ಥಗಿತಗೊಳಿಸಿದೆ.

Praveen Sannamani
Praveen Sannamani|

Updated on: Apr 06, 2023 | 1:27 PM

Share

ಭಾರತದಲ್ಲಿ ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸ ವಾಹನಗಳಿಗೆ ಆರ್ ಡಿಇ(Real Driving Emissions) ಮಾನದಂಡವನ್ನ ಏಪ್ರಿಲ್ 1ರಿಂದಲೇ ಕಡ್ಡಾಯವಾಗಿ ಜಾರಿಗೆ ತಂದಿದ್ದು, ಹೊಸ ಮಾನದಂಡಗಳಿಗೆ ಅನುಗುಣವಾಗಿ Real Driving Emissions ಕಂಪನಿಯು ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಮಾರಾಟದಿಂದ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪೂರೈಸಲು ಸಾಧ್ಯವಿಲ್ಲದ ಕಾರುಗಳ ಸ್ಥಗಿತಕ್ಕೆ ನಿರ್ಧರಿಸಿರುವ ಹೋಂಡಾ ಕಂಪನಿಯು ಐದನೇ ತಲೆಮಾರಿನ ಸಿಟಿ ಸೆಡಾನ್ ಮತ್ತು ಹೊಸ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯನ್ನ ಹೊರತುಪಡಿಸಿ ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರನ್ನ ಅಧಿಕೃತವಾಗಿ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳಿಗೆ ಅನುಗುಣವಾಗಿ ಕಳೆದ 6 ವರ್ಷಗಳಲ್ಲಿ ಒಟ್ಟು 9 ಕಾರು ಮಾದರಿಗಳನ್ನ ಸ್ಥಗಿತಗೊಳಿಸಿದ್ದು, ಪ್ರತಿಸ್ಪರ್ಧಿ ಕಾರು ಕಂಪನಿಗಳ ಹೊಸ ಮಾದರಿಗಳಿಂದ ಭಾರೀ ಪೈಪೋಟಿ ಎದುರಿಸುತ್ತಿದೆ. 2017ರಿಂದ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗುತ್ತಿದ್ದು, ಆರಂಭದಲ್ಲಿ ಬ್ರಿಯೊ, ಮೊಬಿಲಿಯೋ ಕಾರುಗಳನ್ನ ತದನಂತರ ಸಿವಿಕ್, ಸಿಆರ್-ವಿ, ಬಿಆರ್-ವಿ ಮತ್ತು ಜಾಝ್ ಡೀಸಲ್ ಮಾದರಿಯನ್ನ ಸ್ಥಗಿತಗೊಳಿಸಲಾಗಿತ್ತು. ಇದೀಗ ಬಿಎಸ್ 6 2ನೇ ಹಂತ ಜಾರಿ ನಂತರ ಜಾಝ್ ಪೆಟ್ರೋಲ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಸ್ಥಗಿತಗೊಳಿಸಲಾಗಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳೊಂದಿಗೆ ಪ್ರಸ್ತುತ ಮಾದರಿಗಳ ಉನ್ನತೀಕರಣವು ದುಬಾರಿಯಾಗುವ ಕಾರಣಕ್ಕೆ ಹೋಂಡಾ ಕಂಪನಿಯು ಸದ್ಯ ಹೊಚ್ಚ ಹೊಸ ಮಾದಿರಗಳ ಬಿಡುಗಡೆಯತ್ತ ಯೋಜನೆ ರೂಪಿಸಿದ್ದು, ಹೊಸ ಕಾರು ಮಾದರಿಗಳು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಹೊಸ ಕಾರುಗಳ ಪಟ್ಟಿಯಲ್ಲಿ ಎಸ್ ಯುವಿ ಮಾದರಿಯೊಂದು ಸದ್ಯ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ವಿವಿಧ ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಮಾದರಿಯು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಆವೃತ್ತಿಯಲ್ಲಿ ಅನಾವರಣಗೊಳ್ಳಲಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ