AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳ ಮಾರಾಟ ಸ್ಥಗಿತಗೊಳಿಸಿದ ಹೋಂಡಾ

ಹೋಂಡಾ ಕಾರ್ಸ್ ಇಂಡಿಯಾ ಕಾರು ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಜಾಝ್, ಡಬ್ಲ್ಯೂಆರ್-ವಿ ಮತ್ತು ಸಿಟಿ ಕಾರುಗಳನ್ನು ಸ್ಥಗಿತಗೊಳಿಸಿದೆ.

Praveen Sannamani
Praveen Sannamani|

Updated on: Apr 06, 2023 | 1:27 PM

Share

ಭಾರತದಲ್ಲಿ ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸ ವಾಹನಗಳಿಗೆ ಆರ್ ಡಿಇ(Real Driving Emissions) ಮಾನದಂಡವನ್ನ ಏಪ್ರಿಲ್ 1ರಿಂದಲೇ ಕಡ್ಡಾಯವಾಗಿ ಜಾರಿಗೆ ತಂದಿದ್ದು, ಹೊಸ ಮಾನದಂಡಗಳಿಗೆ ಅನುಗುಣವಾಗಿ Real Driving Emissions ಕಂಪನಿಯು ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಮಾರಾಟದಿಂದ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪೂರೈಸಲು ಸಾಧ್ಯವಿಲ್ಲದ ಕಾರುಗಳ ಸ್ಥಗಿತಕ್ಕೆ ನಿರ್ಧರಿಸಿರುವ ಹೋಂಡಾ ಕಂಪನಿಯು ಐದನೇ ತಲೆಮಾರಿನ ಸಿಟಿ ಸೆಡಾನ್ ಮತ್ತು ಹೊಸ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯನ್ನ ಹೊರತುಪಡಿಸಿ ಜಾಝ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರನ್ನ ಅಧಿಕೃತವಾಗಿ ಸ್ಥಗಿತಗೊಳಿಸಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳಿಗೆ ಅನುಗುಣವಾಗಿ ಕಳೆದ 6 ವರ್ಷಗಳಲ್ಲಿ ಒಟ್ಟು 9 ಕಾರು ಮಾದರಿಗಳನ್ನ ಸ್ಥಗಿತಗೊಳಿಸಿದ್ದು, ಪ್ರತಿಸ್ಪರ್ಧಿ ಕಾರು ಕಂಪನಿಗಳ ಹೊಸ ಮಾದರಿಗಳಿಂದ ಭಾರೀ ಪೈಪೋಟಿ ಎದುರಿಸುತ್ತಿದೆ. 2017ರಿಂದ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗುತ್ತಿದ್ದು, ಆರಂಭದಲ್ಲಿ ಬ್ರಿಯೊ, ಮೊಬಿಲಿಯೋ ಕಾರುಗಳನ್ನ ತದನಂತರ ಸಿವಿಕ್, ಸಿಆರ್-ವಿ, ಬಿಆರ್-ವಿ ಮತ್ತು ಜಾಝ್ ಡೀಸಲ್ ಮಾದರಿಯನ್ನ ಸ್ಥಗಿತಗೊಳಿಸಲಾಗಿತ್ತು. ಇದೀಗ ಬಿಎಸ್ 6 2ನೇ ಹಂತ ಜಾರಿ ನಂತರ ಜಾಝ್ ಪೆಟ್ರೋಲ್, ಡಬ್ಲ್ಯೂಆರ್-ವಿ ಮತ್ತು ನಾಲ್ಕನೇ ತಲೆಮಾರಿನ ಸಿಟಿ ಕಾರುಗಳನ್ನ ಸ್ಥಗಿತಗೊಳಿಸಲಾಗಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳೊಂದಿಗೆ ಪ್ರಸ್ತುತ ಮಾದರಿಗಳ ಉನ್ನತೀಕರಣವು ದುಬಾರಿಯಾಗುವ ಕಾರಣಕ್ಕೆ ಹೋಂಡಾ ಕಂಪನಿಯು ಸದ್ಯ ಹೊಚ್ಚ ಹೊಸ ಮಾದಿರಗಳ ಬಿಡುಗಡೆಯತ್ತ ಯೋಜನೆ ರೂಪಿಸಿದ್ದು, ಹೊಸ ಕಾರು ಮಾದರಿಗಳು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಹೊಸ ಕಾರುಗಳ ಪಟ್ಟಿಯಲ್ಲಿ ಎಸ್ ಯುವಿ ಮಾದರಿಯೊಂದು ಸದ್ಯ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಇದು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಸ್ಕೋಡಾ ಕುಶಾಕ್ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 18 ಲಕ್ಷ ಬೆಲೆ ಅಂತರದಲ್ಲಿ ವಿವಿಧ ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರು ಮಾದರಿಯು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಆವೃತ್ತಿಯಲ್ಲಿ ಅನಾವರಣಗೊಳ್ಳಲಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ