AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honda Elevate: ಸೆಪ್ಟೆಂಬರ್ 4ಕ್ಕೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Honda Elevate: ಸೆಪ್ಟೆಂಬರ್ 4ಕ್ಕೆ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಹೋಂಡಾ ಎಲಿವೇಟ್
ಹೋಂಡಾ ಎಲಿವೇಟ್
Praveen Sannamani
|

Updated on: Aug 31, 2023 | 6:41 PM

Share

ಪ್ರೀಮಿಯಂ ಕಾರು ಉತ್ಪಾದನಾ ಕಂಪನಿಯಾಗಿರುವ ಹೋಂಡಾ ಕಾರ್ಸ್(Honda Cars) ತನ್ನ ಹೊಸ ಎಲಿವೇಟ್(Elevate) ಕಂಪ್ಯಾಕ್ಟ್ ಎಸ್ ಯುವಿಯನ್ನು ಭಾರತದಲ್ಲಿ ಅನಾವರಣಗೊಳಿಸಿ ಬುಕಿಂಗ್ ಆರಂಭಿಸಿದ್ದು, ಹೊಸ ಕಾರನ್ನು ಮುಂದಿನ ತಿಂಗಳು ಸೆಪ್ಟೆಂಬರ್ 4 ರಂದು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ. ಹೊಸ ಕಾರು ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಫೋಕ್ಸ್ ವ್ಯಾಗನ್ ಟೈಗುನ್, ಕಿಯಾ ಸೆಲ್ಟೊಸ್, ಟೊಯೊಟಾ ಹೈರೈಡರ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ನ್ಯೂ ಜನರೇಷನ್ ಸಿಆರ್-ವಿ ಮತ್ತು ಡಬ್ಲ್ಯುಆರ್-ವಿ ಕಾರುಗಳ ವಿನ್ಯಾಸ ಪ್ರೇರಣೆ ಹೊಂದಿದೆ.

ಹೊಸ ಎಲಿವೇಟ್ ಕಾರು ಫೀಚರ್ಸ್ ಗಳಿಗೆ ಅನುಗುಣವಾಗಿ ಎಸ್ ವಿ(SV), ವಿ(V), ವಿಎಕ್ಸ್(VX) ಮತ್ತು ಜೆಡ್ಎಕ್ಸ್(ZX) ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಇದರಲ್ಲಿ ಜೆಡ್ಎಕ್ಸ್ ವೆರಿಯೆಂಟ್ ಹೆಚ್ಚಿನ ಮಟ್ಟದ ಫೀಚರ್ಸ್ ಗಳನ್ನು ಹೊಂದಿರಲಿದೆ. ಹೊಸ ಎಲಿವೇಟ್ ಕಾರು ಮುಂಭಾಗದಲ್ಲಿ ದೊಡ್ಡದಾದ ಕ್ರೊಮ್ ಸಿಗ್ನೆಚರ್ ಗ್ರಿಲ್, ಬೋಲ್ಡ್ ಏರ್ ಡ್ಯಾಮ್, ಆಲ್ ಎಲ್ಇಡಿ ಲೈಟಿಂಗ್ಸ್, ಫ್ಲಕ್ಸ್ ಸ್ಕೀಡ್ ಪ್ಲೇಟ್, 17 ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಗಳನ್ನು ಹೊಂದಿದ್ದು, ಹೊಸ ಕಾರಿನ ಒಳಭಾಗವು ಕೂಡಾ ಆಕರ್ಷಕ ವಿನ್ಯಾಸದೊಂದಿಗೆ 10.25 ಇಂಚಿನ ಇನ್ಪೊಟೈನ್ ಮೆಂಟ್ ಸಿಸ್ಟಂ, ಸಿಂಗಲ್ ಪೇನ್ ಪನೊರಮಿಕ್ ಸನ್ ರೂಪ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇನ್ವಿಕ್ಟೊ ಎಂಪಿವಿ ಬಿಡುಗಡೆ

ಹಾಗೆಯೇ ಎಲಿವೇಟ್ ಕಾರು 4,312 ಎಂಎಂ ಉದ್ದ, 1,650 ಎಂಎಂ ಎತ್ತರ ಮತ್ತು 220 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಇದರಲ್ಲಿ ನಾಲ್ಕು ಮೊನೊ ಟೋನ್ ಬಣ್ಣಗಳ ಆಯ್ಕೆ ಮತ್ತು ಮೂರು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಪರಿಚಯಿಸಲಾಗುತ್ತಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್ ಎಲಿವೇಟ್ ಕಾರು 1.5 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಜೋಡಣೆ ಹೊಂದಿರಲಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 121 ಹಾರ್ಸ್ ಪವರ್ ಮತ್ತು 145 ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಹುದಾಗಿದ್ದು, ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಇನ್ನು ಹೋಂಡಾ ಕಂಪನಿಯು ಎಲಿವೇಟ್ ಕಾರಿನಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಜೋಡಣೆ ಮಾಡಿದ್ದು, ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಸೇರಿದಂತೆ ಹಿಲ್ ಸ್ಟಾರ್ಟ್ ಅಸಿಸ್ಟ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ನೀಡಿದೆ. ಜೊತೆಗೆ ಜೆಡ್ಎಕ್ಸ್ ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೂಟ್ ಸಹ ಜೋಡಣೆ ಮಾಡಲಾಗಿದ್ದು, ಇದು ಕಾರಿಗೆ ಹೆಚ್ಚಿನ ಸುರಕ್ಷತೆ ಖಾತ್ರಿಪಡಿಸುತ್ತದೆ.

ಇದನ್ನೂ ಓದಿ: ರೀಬ್ಯಾಡ್ಜ್ ಟೊಯೊಟಾ ರೂಮಿಯಾನ್ ಎಂಪಿವಿ ಬಿಡುಗಡೆ

ಈ ಮೂಲಕ ಹೊಸ ಕಾರು ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಕಾರುಗಳ ಬೆಲೆಗೆ ಅನುಗುಣವಾಗಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.40 ಲಕ್ಷ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರು ಹೋಂಡಾ ಕಾರು ಮಾರಾಟ ಸುಧಾರಣೆಗೆ ಸಹಕಾರಿಯಾಗುವ ನೀರಿಕ್ಷೆಯಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು