Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನಗಳ ಉತ್ಪಾದನೆಯಲ್ಲಿ ಜಪಾನ್ ಹಿಂದಿಕ್ಕಿ ಹೊಸ ದಾಖಲೆ ಸೃಷ್ಠಿಸಿದ ಭಾರತ!

ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ನಿರಂತರ ಬೆಳವಣಿಗೆಯು ಭಾರತದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿದೆ.

ವಾಹನಗಳ ಉತ್ಪಾದನೆಯಲ್ಲಿ ಜಪಾನ್ ಹಿಂದಿಕ್ಕಿ ಹೊಸ ದಾಖಲೆ ಸೃಷ್ಠಿಸಿದ ಭಾರತ!
ವಾಹನಗಳ ಉತ್ಪಾದನೆಯಲ್ಲಿ ಹೊಸ ದಾಖಲೆ ಸೃಷ್ಠಿಸಿದ ಭಾರತ!
Follow us
TV9 Web
| Updated By: Praveen Sannamani

Updated on: Jun 29, 2023 | 9:10 PM

2022-23 ರ ಆರ್ಥಿಕ ವರ್ಷದಲ್ಲಿ ಭಾರತೀಯ ಆಟೋಮೋಟಿವ್(Indian Automotive) ವಾಹನ ಉತ್ಪಾದನೆಯು ಜಪಾನ್ ಅನ್ನು ಹಿಂದಿಕ್ಕಿದ್ದು, ಪ್ರಮುಖ ಆಟೋಮೋಟಿವ್ ಬ್ರಾಂಡ್‌ಗಳು ಕಳೆದ ಹಣಕಾಸು ವರ್ಷದಲ್ಲಿ 108 ಶತಕೋಟಿ ಡಾಲರ್ ಮೌಲ್ಯದ 2.7 ಕೋಟಿ ವಾಹನಗಳನ್ನು ಉತ್ಪಾದನೆ ಮಾಡಿ ಹೊಸ ಮೈಲಿಗಲ್ಲು ಸಾಧಿಸಿವೆ.

ಆರ್ಥಿಕ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ಹೊಸ ನೀತಿ ಮತ್ತು ಸರ್ಕಾರದ ನಿರ್ಣಯಗಳ ಪರಿಣಾಮ ಭಾರತೀಯ ಆಟೋಮೋಟಿವ್ ವಲಯವು ಕಳೆದ ಕೆಲ ವರ್ಷಗಳಿಂದ ಭಾರೀ ಪ್ರಮಾಣದಲ್ಲಿ ಬೆಳವಣಿಗೆ ಸಾಧಿಸುತ್ತಿದ್ದು, ಇದೀಗ 2022-23ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 108 ಶತಕೋಟಿ ಡಾಲರ್ ಮೌಲ್ಯದ 2.7 ಕೋಟಿ ವಾಹನಗಳನ್ನು ಉತ್ಪಾದನೆ ಮಾಡಿದೆ. ಈ ಮೂಲಕ ಭಾರತವು ಚೀನಾ ಮತ್ತು ಅಮೆರಿಕಾ ನಂತರ ಮೂರನೇ ಅತಿ ದೊಡ್ಡ ವಾಹನ ಮಾರುಕಟ್ಟೆಯಾಗಿ ಹೊರಹೊಮ್ಮಿದೆ.

New Cars (3)

ಭಾರತದಲ್ಲಿ ಉತ್ಪಾದನೆಗೊಳ್ಳುವ ಹೊಸ ವಾಹನಗಳಲ್ಲಿ ಸದ್ಯ ದ್ವಿಚಕ್ರ ಉತ್ಪಾದನೆಯು ಮೊದಲನೇ ಸ್ಥಾನದಲ್ಲಿದ್ದು, ಒಟ್ಟು ವಾಹನಗಳ ಉತ್ಪಾದನೆಯಲ್ಲಿ ಶೇಕಡಾ 77ರಷ್ಟು ಪಾಲು ಹೊಂದಿದೆ. ಜೊತೆಗೆ ಭಾರತದಲ್ಲಿನ ದ್ವಿಚಕ್ರ ವಾಹನ ಉತ್ಪಾದನೆಯು ವಿಶ್ವದಲ್ಲೇ ಮೊದಲನೇ ಸ್ಥಾನಕ್ಕೇರಿದ್ದು, ಈ ಮೂಲಕ ಇವು ಆಟೋ ಉದ್ಯಮದ ಒಟ್ಟು ಮೌಲ್ಯದಲ್ಲಿ ಶೇ. 21 ರಷ್ಟು ಪಾಲು ಹೊಂದಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ದ್ವಿಚಕ್ರ ವಾಹನಗಳ ನಂತರ ಪ್ಯಾಸೆಂಜರ್ ಕಾರು ಉತ್ಪಾದನೆಯು ಎರಡನೇ ಸ್ಥಾನದಲ್ಲಿದ್ದು, ಇವು ಒಟ್ಟು ವಾಹನ ಉತ್ಪಾದನೆಯಲ್ಲಿ ಶೇ. 16 ರಷ್ಟು ಪಾಲು ಹೊಂದಿವೆ. ಇದರೊಂದಿಗೆ ಪ್ಯಾಸೆಂಜರ್ ಕಾರು ಉತ್ಪಾದನೆಯು ಒಟ್ಟು ಆಟೋಮೋಟಿವ್ ಮೌಲ್ಯದಲ್ಲಿ ಒಟ್ಟಾರೆಯಾಗಿ ಶೇ. 58 ರಷ್ಟು ಪಾಲು ಹೊಂದಿದ್ದು, ವಾಣಿಜ್ಯ ವಾಹನಗಳು ಮತ್ತು ತ್ರಿಚಕ್ರ ವಾಹನಗಳು ಒಟ್ಟು ಉತ್ಪಾದನಾ ಸಂಖ್ಯೆಯಲ್ಲಿ ಶೇಕಡಾ 4 ಮತ್ತು ಶೇ. 3 ರಷ್ಟು ಪಾಲು ಪಡೆದುಕೊಂಡಿವೆ.

New Scooters

ವಾಣಿಜ್ಯ ವಾಹನಗಳು ಮತ್ತು ತ್ರಿಚಕ್ರ ವಾಹನಗಳು ಒಟ್ಟು ಉತ್ಪಾದನಾ ಮೌಲ್ಯದಲ್ಲಿ ಶೇ. 19 ರಷ್ಟು ಮತ್ತು ಶೇ. 2 ರಷ್ಟು ಪಾಲು ಹೊಂದಿದ್ದು, ಭಾರತವಲ್ಲಿ ಮುಖ್ಯವಾಗಿ ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳ ಉತ್ಪಾದನೆ ಮೇಲೆ ಹೆಚ್ಚು ಕೇಂದ್ರೀಕರಿಸಲಾಗಿದೆ. ಆದರೆ ಭಾರತದಲ್ಲಿ ಇವಿ ವಾಹನ ಉತ್ಪಾದನಾ ವಲಯವು ನಿಧಾನಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿದ್ದು, ಇದು ಒಟ್ಟು ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ಶೇ. 2 ರಷ್ಟು ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: ಬಹುನೀರಿಕ್ಷಿತ ಹೋಂಡಾ ಎಲಿವೇಟ್ ಕಂಪ್ಯಾಕ್ಟ್ ಎಸ್ ಯುವಿ ಅನಾವರಣ

ಭಾರತದಲ್ಲಿ ಸುಸ್ಧಿರ ಅಭಿವೃದ್ದಿಗಾಗಿ ಸದ್ಯ ಪರಿಸರ ಸ್ನೇಹಿ ವಾಹನಗಳತ್ತ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಹೊಸ ಇವಿ ವಾಹನ ಖರೀದಿದಾರರನ್ನು ಸೆಳೆಯಲು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಹಲವಾರು ಆಕರ್ಷಕ ಯೋಜನೆಗಳನ್ನು ಅಳವಡಿಸಿಕೊಂಡಿವೆ. ಇದರ ಹೊರತಾಗಿಯೂ ವಾರ್ಷಿಕ ಬೆಳವಣಿಗೆ ನಿರೀಕ್ಷಿತ ಮಟ್ಟ ತಲುಪದಿರುವುದು ಇವಿ ಉದ್ಯಮದಲ್ಲಿ ತುಸು ಹಿನ್ನಡೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಸಾಮೂಹಿಕ ಮಾರುಕಟ್ಟೆಗೆ ಬೃಹತ್ ಕಾರು ಉತ್ಪಾದನಾ ಕಂಪನಿಗಳು ಲಗ್ಗೆಯಿಡುತ್ತಿರುವುದು ಹೊಸ ಸಂಚಲನ ಮೂಡಿಸಲಿವೆ ಎನ್ನಬಹುದು.

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ