Sign In

By signing in or creating an account, you agree with Associated Broadcasting Company's Terms & Conditions and Privacy Policy.

Hydrogen Fuel Cell Bus: ದೇಶದ ಮೊದಲ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಚಾಲನೆ

ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ದೇಶದ ಮೊದಲ ಹಸಿರು ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

Hydrogen Fuel Cell Bus: ದೇಶದ ಮೊದಲ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಚಾಲನೆ
ಹೈಡ್ರೋಜನ್ ಇಂಧನ ಚಾಲಿತ ಬಸ್
Follow us
Praveen Sannamani
|

Updated on: Sep 25, 2023 | 4:59 PM

ಭಾರತ ಸರ್ಕಾರವು ನವೀಕರಿಸಬಹುದಾದ ಶಕ್ತಿಯ ಮೂಲಗಳನ್ನು ಬಳಸಿಕೊಂಡು ಹಸಿರು ಚಲನಶೀಲತೆಯತ್ತ ಮಹತ್ವದ ದಾಪುಗಾಲು ಹಾಕುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಹಸಿರು ಹೈಡ್ರೋಜನ್ ಇಂಧನ ಚಾಲಿತ(Green Hydrogen Fuel Cell) ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ದೇಶದ ಮೊದಲ ಹಸಿರು ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇದು ಸಾರ್ವಜನಿಕ ಸಾರಿಗೆ ವಲಯದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗುತ್ತಿದೆ.

ದೆಹಲಿಯ ಕರ್ತವ್ಯ ಪಥ್‌ನಲ್ಲಿ ಭಾರತದ ಮೊದಲ ಹಸಿರು ಹೈಡ್ರೋಜನ್ ಇಂಧನ ಸೆಲ್ ಬಳಕೆಯ ಬಸ್ ಸಂಚಾರಕ್ಕೆ ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಇದು ಆಮದು ಮಾಡಲಾಗುವ ಇಂಧನಗಳ ಮೇಲಿನ ಅವಲಂಬನೆ ತಗ್ಗಿಸುವುದರ ಜೊತೆಗೆ ಮಾಲಿನ್ಯ ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

Hydrogen Fuel Cell Bus (1)

ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ಆಯ್ದ ಮಾರ್ಗಗಳಲ್ಲಿ ಒಟ್ಟು 15 ಹಸಿರು ಹೈಡ್ರೋಜನ್‌ನಿಂದ ಚಾಲಿತವಾಗುವ ಬಸ್‌ಗಳನ್ನು ಪ್ರಾಯೋಗಿಕವಾಗಿ ಸಂಚರಿಸಲಿದ್ದು, ಇಂಡಿಯನ್ ಆಯಿಲ್‌ ಕಂಪನಿಯ ಪ್ರಯತ್ನಗಳ ಭಾಗವಾಗಿ ಹೊಸ ಯೋಜನೆಗೆ ಚಾಲನೆ ನೀಡಲಾಗಿದೆ. ಫರಿದಾಬಾದ್‌ನಲ್ಲಿರುವ ಇಂಡಿಯನ್ ಆಯಿಲ್‌ ಆರ್ ಅಂಡ್ ಡಿ ಕ್ಯಾಂಪಸ್‌ನಲ್ಲಿ ಹೈಡ್ರೋಜನ್‌ ಬಸ್ ಗಳಿಗೆ ಇಂಧನ ತುಂಬುವ ಸೌಲಭ್ಯವನ್ನು ಸ್ಥಾಪಿಸಲಾಗಿದ್ದು, ಇದಕ್ಕಾಗಿ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಎಡಿಎಎಸ್ ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

ಹೈಡ್ರೋಜನ್ ಇಂಧನ ಚಾಲಿತ ಬಸ್ ಗಳಿಗೆ ಸೌರ ಪಿವಿ ಪ್ಯಾನೆಲ್‌ಗಳನ್ನು ಬಳಸಿಕೊಂಡು ವಿದ್ಯುದ್ವಿಭಜನೆಯ ಮೂಲಕ ಉತ್ಪಾದಿಸಲಾದ ಹಸಿರು ಹೈಡ್ರೋಜನ್ ಇಂಧನವನ್ನು ತುಂಬಿಸಲಿದ್ದು, ಹೈಡ್ರೋಜನ್ ಇಂಧನವನ್ನು ಹೆಚ್ಚಿನ ಒತ್ತಡದಲ್ಲಿ ಅಂದರೆ 350 ಬಾರ್‌ನಲ್ಲಿ ಸಂಗ್ರಹಿಸಲಾಗುತ್ತದೆ. ಇಂಧನ ಕೋಶಗಳಲ್ಲಿನ ಎಲೆಕ್ಟ್ರೋ-ರಾಸಾಯನಿಕ ಪ್ರಕ್ರಿಯೆಯು ಹೈಡ್ರೋಜನ್ ಮತ್ತು ಆಮ್ಲಜನಕವು ನೀರಿಗೆ ಪರಿಣಾಮಕಾರಿಯಾಗಿ ಪರಿವರ್ತಿಸುವ ಮೂಲಕ ಅದು ವಿದ್ಯುತ್ ಶಕ್ತಿಯನ್ನು ಉತ್ಪಾದಿಸುತ್ತದೆ.

Hydrogen Fuel Cell Bus (3)

ಜೊತೆಗೆ ಹೈಡ್ರೋಜನ್ ಇಂಧನ ಚಾಲಿತ ಬಸ್ ಗಳು ಬ್ಯಾಟರಿ ಚಾಲಿತ ಬಸ್ ಸಂಚಾರಕ್ಕೆ ಹೋಲಿಸಿದರೆ ದೀರ್ಘ ಶ್ರೇಣಿ ಮತ್ತು ಕಡಿಮೆ ಇಂಧನದಂತಹ ಪ್ರಯೋಜನಗಳನ್ನು ಹೊಂದಿರಲಿದ್ದು, ಈ ಮೂಲಕ ಇಂಧನ ಚಾಲಿತ ವಾಹನಗಳ ಬಳಕೆಯನ್ನು ಹಂತ ಹಂತವಾಗಿ ತಗ್ಗಿಸಲು ನೆರವಾಗಲಿದೆ.

ಇದನ್ನೂ ಓದಿ: ಹೊಸ ಕಾರುಗಳಿಗೆ ಕಡ್ಡಾಯ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಜಾರಿ

ಸದ್ಯಕ್ಕೆ ಇಂಡಿಯನ್ ಆಯಿಲ್‌ ಕಂಪನಿಯು ಒಟ್ಟು 15 ಹಸಿರು ಹೈಡ್ರೋಜನ್‌ ಬಸ್ ಗಳ ಮೂಲಕ ಬರೋಬ್ಬರಿ 3 ಲಕ್ಷ ಕಿ.ಮೀ ಸಂಚಾರವನ್ನು ಪ್ರಾಯೋಗಿಕವಾಗಿ ನಡೆಸುವ ಯೋಜನೆ ಹೊಂದಿದ್ದು, ಹೊಸ ಪ್ರಯೋಗದಲ್ಲಿ ಸಂಗ್ರಹಿಸಲಾದ ಡೇಟಾ ಆಧರಿಸಿ ಮುಂಬರುವ ದಿನಗಳಲ್ಲಿ ಹೈಡ್ರೋಜನ್ ಇಂಧನ ಚಾಲಿತ ಬಸ್ ಸಂಚಾರದ ಮಾರ್ಗಗಳನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ.

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!