AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ-ಬೀಮ್ ಹೆಡ್‌ಲೈಟ್ ಹೊಂದಿರುವ ವಾಹನ ಮಾಲೀಕರಿಂದ ಭರ್ಜರಿ ದಂಡ ವಸೂಲಿ

ಪ್ರಕಾಶಮಾನವಾಗಿರುವ ಹೆಡ್‌ಲೈಟ್ಸ್ ಹೊಂದಿರುವ ವಾಹನಗಳಿಂದ ಅಪಘಾತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಹೈ-ಬೀಮ್ ಹೆಡ್‌ಲೈಟ್ ಬಳಕೆಗೆ ಕಡಿವಾಣ ಹಾಕಲು ದಂಡದ ಪ್ರಯೋಗ ಆರಂಭವಾಗಿದೆ.

ಹೈ-ಬೀಮ್ ಹೆಡ್‌ಲೈಟ್ ಹೊಂದಿರುವ ವಾಹನ ಮಾಲೀಕರಿಂದ ಭರ್ಜರಿ ದಂಡ ವಸೂಲಿ
ಹೈ-ಬೀಮ್ ಹೆಡ್‌ಲೈಟ್
Praveen Sannamani
Praveen Sannamani|

Updated on:Jul 05, 2024 | 2:30 PM

Share

ಪ್ರಕಾಶಮಾನವಾದ ಹೆಡ್‌ಲೈಟ್ ಗಳನ್ನು ವಾಹನಗಳಲ್ಲಿ ಬಳಕೆಗೆ ನಿಷೇಧವಿದ್ದರೂ ಹೈ-ಬೀಮ್ ಹೆಡ್‌ಲೈಟ್ಸ್ (High-Beam Headlights) ಬಳಕೆಯು ವೇಗವಾಗಿ ಹೆಚ್ಚುತ್ತಿದ್ದು, ಇದರಿಂದ ಅಪಘಾತಗಳ ಸಂಖ್ಯೆ ಇತ್ತೀಚೆಗೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಹೈ-ಬೀಮ್ ಹೆಡ್‌ಲೈಟ್ಸ್ ಬಳಕೆ ಕೆಲವು ಸಂದರ್ಭದಲ್ಲಿ ಅನುಕೂಲಕವಾಗಿದ್ದರೂ ಕೂಡಾ ನಗರಪ್ರದೇಶಗಳಲ್ಲಿ ಇವುಗಳ ಬಳಕೆಯು ಹೆಚ್ಚಿನ ಮಟ್ಟದ ಅಪಘಾತಗಳಿಗೆ ಮೂಲ ಕಾರಣವಾಗಿದ್ದು, ಇದನ್ನು ತಡೆಯಲು ಬೆಂಗಳೂರು ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.

ನಿಯಮ ಉಲ್ಲಂಘನೆ ಮಾಡಿ ಹೈ-ಬೀಮ್ ಹೆಡ್‌ಲೈಟ್ ಬಳಕೆ ಮಾಡುತ್ತಿರುವ ವಾಹನ ಮಾಲೀಕರು ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಸಂಚಾರಿ ಪೊಲೀಸರು ಜುಲೈ 1ರಿಂದ ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ನಮ್ಮ ಬೆಂಗಳೂರಿನ ಪೂರ್ವ ವಿಭಾಗ ಒಂದಲ್ಲೇ ಬರೋಬ್ಬರಿ 400ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದು, ಇದರಿಂದ ರೂ. 2.16 ಲಕ್ಷಕ್ಕಿಂತೂ ಹೆಚ್ಚು ದಂಡವನ್ನು ಸಹ ವಸೂಲಿ ಮಾಡಲಾಗಿದೆ.

ದಂಡವಿಧಿಸುವುದರ ಜೊತೆಗೆ ಹೈ-ಬೀಮ್ ಹೆಡ್‌ಲೈಟ್ ಬಳಕೆಯಿಂದಾಗಿ ಆಗುತ್ತಿರುವ ಅನಾಹುತಗಳ ಬಗ್ಗೆ ಅರಿವು ಸಹ ಮೂಡಿಸುತ್ತಿದ್ದು, ಇನ್ಮುಂದೆ ಯಾವುದೇ ಕಾರಣಕ್ಕೂ ಹೈ-ಬೀಮ್ ಹೆಡ್‌ಲೈಟ್ ಬಳಸದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 177 ಅಡಿಯಲ್ಲಿ ದಂಡ ವಿಧಿಸುತ್ತಿರುವ ಪೊಲೀಸರು ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದವರಿಗೆ ರೂ. 500 ದಂಡ ವಿಧಿಸುತ್ತಿದ್ದು, ಎರಡನೇ ಬಾರಿಗೆ ಸಿಕ್ಕಿಬಿದ್ದಲ್ಲಿ ರೂ. 1 ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಇನ್ನು ಪ್ರಕಾಶಮಾನವಾದ ಹೆಡ್‌ಲೈಟ್ ಗಳಿಂದಲಾಗಿ ವಿರುದ್ದ ದಿಕ್ಕಿನಲ್ಲಿ ಬರುವ ವಾಹನ ಸವಾರರು ಸಾಕಷ್ಟು ಕಿರಿಕಿರಿ ಅನುಭವಿಸುವಂತಾಗಿದ್ದು, ಅನಗತ್ಯವಾಗಿರುವ ಹೈ-ಬೀಮ್ ಹೆಡ್‌ಲೈಟ್ ಗಳು ವಾಹನ ಸವಾರಿಗೆ ಕಂಟಕವಾಗಿವೆ. ಪ್ರಕಾಶಮಾನದ ಬೆಳಕು ಹೊರಸೂಸುವುದಿಂದ ವಿರುದ್ದ ದಿಕ್ಕಿನಲ್ಲಿ ಬರುವ ವಾಹನ ಸವಾರರ ಕಣ್ಣಿಗೆ ಅಘಾತವಾಗಲಿದ್ದು, ಇದು ಅಪಘಾತಗಳಿಗೆ ಮೂಲ ಕಾರಣವಾಗುತ್ತಿದೆ. ಹೀಗಾಗಿ ದೇಶಾದ್ಯಂತ ಈಗಾಗಲೇ ಹಲವು ರಾಜ್ಯಗಳು ಹೈ-ಬೀಮ್ ಹೆಡ್‌ಲೈಟ್ಸ್ ಹೊಂದಿರುವ ವಾಹನಗಳ ವಿರುದ್ದ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಇದೀಗ ರಾಜ್ಯ ಪೊಲೀಸರು ಕೂಡಾ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

Published On - 10:38 pm, Thu, 4 July 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ