AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಎಂಟು ತಿಂಗಳಲ್ಲೇ ಒಂದು ಲಕ್ಷ ಎಲೆಕ್ಟ್ರಿಕ್ ವಾಹನಗಳ ನೋಂದಣಿ

ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಒಂದು ವರ್ಷದೊಳಗೆ ಒಂದು ಲಕ್ಷ ದಾಟಿದೆ. 2022 ರಲ್ಲಿ 95,929 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದರೆ, ಈ ವರ್ಷ ಇದು ಎಂಟು ತಿಂಗಳಲ್ಲಿ ಒಂದು ಲಕ್ಷದ ಗಡಿ ದಾಟಿದೆ. ಇವಿ ಮಾರುಕಟ್ಟೆಯಲ್ಲಿ ಗ್ರಾಹಕರ ವಿಶ್ವಾಸ ಹೆಚ್ಚಾಗಿದೆ. ತಾಂತ್ರಿಕ ಪ್ರಗತಿಯಿಂದಾಗಿ, ಎಲೆಕ್ಟ್ರಿಕ್ ವಾಹನಗಳು ಒದಗಿಸುವ ಕಾರ್ಯಕ್ಷಮತೆ ಮತ್ತು ಸೌಕರ್ಯವೂ ಸುಧಾರಿಸಿರುವುದೇ ಇದಕ್ಕೆ ಕಾರಣ ಎಂದು ತಜ್ಞರು ಹೇಳುತ್ತಾರೆ.

ಕರ್ನಾಟಕದಲ್ಲಿ ಎಂಟು ತಿಂಗಳಲ್ಲೇ ಒಂದು ಲಕ್ಷ ಎಲೆಕ್ಟ್ರಿಕ್ ವಾಹನಗಳ ನೋಂದಣಿ
ಕರ್ನಾಟಕದಲ್ಲಿ ಎಂಟು ತಿಂಗಳಲ್ಲೇ ಒಂದು ಲಕ್ಷ ಎಲೆಕ್ಟ್ರಿಕ್ ವಾಹನಗಳ ನೋಂದಣಿ Image Credit source: Reuters
Follow us
Rakesh Nayak Manchi
|

Updated on: Sep 11, 2023 | 8:36 AM

ಬೆಂಗಳೂರು, ಸೆ.11: ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ (Electric Vehicles) ಸಂಖ್ಯೆ ಒಂದು ವರ್ಷದೊಳಗೆ ಒಂದು ಲಕ್ಷ ದಾಟಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MORTH) ಅಂಕಿಅಂಶಗಳ ಪ್ರಕಾರ, 2022 ರಲ್ಲಿ 95,929 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದೆ. ಆದರೆ, ಜನವರಿ 1, 2023 ಮತ್ತು ಸೆಪ್ಟೆಂಬರ್ 7, 2023 ರ ನಡುವೆ, ಅಂದರೆ ಕೇಲವ ಎಂಟು ತಿಂಗಳಲ್ಲಿ ಇ-ವಾಹನ ನೋಂದಣಿ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ.

“ಇವಿ ಮಾರುಕಟ್ಟೆಯಲ್ಲಿ ಗ್ರಾಹಕರ ವಿಶ್ವಾಸ ಹೆಚ್ಚಾಗಿದೆ. ತಾಂತ್ರಿಕ ಪ್ರಗತಿಯಿಂದಾಗಿ, ಎಲೆಕ್ಟ್ರಿಕ್ ವಾಹನಗಳು ಒದಗಿಸುವ ಕಾರ್ಯಕ್ಷಮತೆ ಮತ್ತು ಸೌಕರ್ಯವೂ ಸುಧಾರಿಸಿದೆ. ವೆಚ್ಚ ಸಮಾನತೆಯು ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಲು ಮತ್ತೊಂದು ಪ್ರಮುಖ ಅಂಶವಾಗಿದೆ ” ಎಂದು ವರ್ಲ್ಡ್ ರಿಸೋರ್ಸಸ್ ಇನ್ಸ್ಟಿಟ್ಯೂಟ್ ನಿರ್ದೇಶಕ ಪವನ್ ಮುಲುಕುಟ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಯೂಟ್ಯೂಬ್ ನೋಡಿ ಎಲೆಕ್ಟ್ರಿಕ್ ಬೈಕ್ ರೆಡಿ ಮಾಡಿದ ಯುವಕ! ಅದರ ಮೈಲೇಜ್ ನೋಡಿದ್ರೆ ಬೆಚ್ಚಿಬೀಳ್ತೀರಾ!

ಇತ್ತೀಚಿನ ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದರೂ, ಇದಕ್ಕೆ ತಕ್ಕಂತೆ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆ ಏರಿಕೆಯಾಗಿಲ್ಲ. “ಹೆಚ್ಚುತ್ತಿರುವ ಬೇಡಿಕೆಗೆ ಸರಿಹೊಂದುವಂತೆ ನಾವು ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕಾಗಿದೆ. ಬಸ್ಸುಗಳು, ಕಾರುಗಳು ಮತ್ತು ದೊಡ್ಡ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳು ಮುಖ್ಯವಾಗಿದ್ದರೂ, ಅಪಾರ್ಟ್ಮೆಂಟ್​ಗಳಲ್ಲಿ ಖಾಸಗಿ ಚಾರ್ಜಿಂಗ್ ಸ್ಥಳಗಳನ್ನು ಪ್ರೋತ್ಸಾಹಿಸುವುದು ಮುಖ್ಯ ಎಂದು ಮುಲುಕುಟ್ಲಾ ಹೇಳಿದರು.

ಆಟಫಮೊಬೈಲ್​ಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ