AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ-ಬೀಮ್ ಹೆಡ್‌ಲೈಟ್ ಬಳಕೆ ಮಾಡುವ ವಾಹನ ಮಾಲೀಕರಿಗೆ ಭಾರೀ ದಂಡ ಫಿಕ್ಸ್

ಪ್ರಕಾಶಮಾನವಾದ ಹೆಡ್‌ಲೈಟ್ ಹೊಂದಿರುವ ವಾಹನಗಳ ಬಳಕೆಯು ಹೆಚ್ಚುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಕೂಡಾ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

ಹೈ-ಬೀಮ್ ಹೆಡ್‌ಲೈಟ್ ಬಳಕೆ ಮಾಡುವ ವಾಹನ ಮಾಲೀಕರಿಗೆ ಭಾರೀ ದಂಡ ಫಿಕ್ಸ್
ಹೈ-ಬೀಮ್ ಹೆಡ್‌ಲೈಟ್
Praveen Sannamani
Praveen Sannamani|

Updated on: Jun 20, 2024 | 10:24 PM

Share

ವಾಹನಗಳಲ್ಲಿ ಪ್ರಕಾಶಮಾನವಾದ ಹೆಡ್‌ಲೈಟ್ ಗಳ ಬಳಕೆಗೆ ನಿಷೇಧವಿದ್ದರೂ ಹೈ-ಬೀಮ್ ಹೆಡ್‌ಲೈಟ್ಸ್ (High-Beam Headlights) ಹೊಂದಿರುವ ವಾಹನಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು, ಇದರಿಂದ ಅಪಘಾತಗಳ ಸಂಖ್ಯೆ ಕೂಡಾ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಹೈ-ಬೀಮ್ ಹೆಡ್‌ಲೈಟ್ಸ್ ಬಳಕೆ ಕೆಲವು ಸಂದರ್ಭದಲ್ಲಿ ಅನುಕೂಲಕವಾಗಿದ್ದರೂ ಕೂಡಾ ನಗರಪ್ರದೇಶಗಳಲ್ಲಿ ಇವುಗಳ ಬಳಕೆಯು ಹೆಚ್ಚಿನ ಮಟ್ಟದ ಅಪಘಾತಗಳಿಗೆ ಮೂಲ ಕಾರಣವಾಗಿರುವುದು ಈಗಾಗಲೇ ಹಲವು ಪ್ರಕರಣಗಳಲ್ಲಿ ಸಾಬೀತಾಗಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು ನಿಯಮ ಉಲ್ಲಂಘನೆ ಮಾಡುತ್ತಿರುವ ವಾಹನ ಮಾಲೀಕರು ವಿರುದ್ದ ವಿಶೇಷ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ.

ಜುಲೈ 1ರಿಂದಲೇ ಹೈ-ಬೀಮ್ ಹೆಡ್‌ಲೈಟ್ ಬಳಕೆ ಮಾಡುತ್ತಿರುವ ವಾಹನಗಳ ಮಾಲೀಕರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸುತ್ತಿದ್ದು, ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 177 ಅಡಿಯಲ್ಲಿ ದಂಡ ವಿಧಿಸಲು ಸಜ್ಜಾಗಿದ್ದಾರೆ.

ಮೊದಲ ಬಾರಿಗೆ ಸಿಕ್ಕಿಬಿಳುವ ಹೈ-ಬೀಮ್ ಹೆಡ್‌ಲೈಟ್ಸ್ ಹೊಂದಿರುವ ವಾಹನಗಳಿಗೆ ರೂ. 500 ದಂಡ ವಿಧಿಸಲು ನಿರ್ಧರಿಸಲಾಗಿದ್ದು, ಎರಡನೇ ಬಾರಿಗೆ ಸಿಕ್ಕಿಬಿದ್ದಲ್ಲಿ ರೂ. 1 ಸಾವಿರ ದಂಡ ಪ್ರಯೋಗಿಸಲಾಗುತ್ತದೆ. ದಂಡಕ್ಕೂ ಕ್ಯಾರೆ ಅನ್ನದೇ ಪದೇ ಪದೇ ಸಿಕ್ಕಿಬಿಳುವ ವಾಹನಗಳನ್ನು ಸೀಜ್ ಮಾಡಲು ನಿರ್ಧರಿಸಲಾಗಿದ್ದು, ಸುರಕ್ಷಿತ ಸಂಚಾರ ನಿಯಮ ಪಾಲನೆಗೆ ಒತ್ತು ನೀಡಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಪ್ರಕಾಶಮಾನವಾದ ಹೆಡ್‌ಲೈಟ್ ಗಳಿಂದಲಾಗಿ ವಿರುದ್ದ ದಿಕ್ಕಿನಲ್ಲಿ ಬರುವ ವಾಹನ ಸವಾರರು ಸಾಕಷ್ಟು ಕಿರಿಕಿರಿ ಅನುಭವಿಸುವಂತಾಗಿದ್ದು, ಅನಗತ್ಯವಾಗಿರುವ ಹೈ-ಬೀಮ್ ಹೆಡ್‌ಲೈಟ್ ಗಳು ವಾಹನ ಸವಾರಿಗೆ ಕಂಟಕವಾಗಿವೆ. ಪ್ರಕಾಶಮಾನದ ಬೆಳಕು ಹೊರಸೂಸುವುದಿಂದ ವಿರುದ್ದ ದಿಕ್ಕಿನಲ್ಲಿ ಬರುವ ವಾಹನ ಸವಾರರ ಕಣ್ಣಿಗೆ ಅಘಾತವಾಗಲಿದ್ದು, ಇದು ಅಪಘಾತಗಳಿಗೆ ಮೂಲ ಕಾರಣವಾಗುತ್ತಿದೆ. ಹೀಗಾಗಿ ದೇಶಾದ್ಯಂತ ಈಗಾಗಲೇ ಹಲವು ರಾಜ್ಯಗಳು ಹೈ-ಬೀಮ್ ಹೆಡ್‌ಲೈಟ್ಸ್ ಹೊಂದಿರುವ ವಾಹನಗಳ ವಿರುದ್ದ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಇದೀಗ ರಾಜ್ಯ ಪೊಲೀಸರು ಕೂಡಾ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಾಗ ಇರಲಿ ಈ ಬಗ್ಗೆ ಎಚ್ಚರ!

ಈ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಬೆಂಗಳೂರಿನಲ್ಲಿ ಮಾತ್ರವಲ್ಲ ಜಿಲ್ಲಾ ಕೇಂದ್ರಗಳಲ್ಲೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವ ವಾಹನಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸುವಂತೆ ಆದೇಶಿಸಿದ್ದಾರೆ.

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!