AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಕಳ್ಳತನ: ತ್ವರಿತ ತನಿಖೆಗಾಗಿ ಹೊಸ ಸೌಲಭ್ಯ ತೆರೆದ ಕರ್ನಾಟಕ ಪೊಲೀಸ್ ಇಲಾಖೆ!

ಹೊಸ ಸುರಕ್ಷಾ ಸೌಲಭ್ಯಗಳ ಹೊರತಾಗಿ ದೇಶಾದ್ಯಂತ ವಾಹನ ಕಳ್ಳತನ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು, ವಾಹನ ಕಳ್ಳತನ ಪ್ರಕರಣಗಳನ್ನು ತ್ವರಿತವಾಗಿ ಪತ್ತೆಹಚ್ಚಲು ಕರ್ನಾಟಕ ಪೊಲೀಸ್ ಇಲಾಖೆಯು ಆನ್ಲೈನ್ ದೂರು ಸಲ್ಲಿಕೆ ಸೌಲಭ್ಯ ಪರಿಚಯಿಸಿದೆ.

ವಾಹನ ಕಳ್ಳತನ: ತ್ವರಿತ ತನಿಖೆಗಾಗಿ ಹೊಸ ಸೌಲಭ್ಯ ತೆರೆದ ಕರ್ನಾಟಕ ಪೊಲೀಸ್ ಇಲಾಖೆ!
ವಾಹನ ಕಳ್ಳತನ: ತ್ವರಿತ ತನಿಖೆಗಾಗಿ ಹೊಸ ಸೌಲಭ್ಯ ತೆರೆದ ಕರ್ನಾಟಕ ಪೊಲೀಸ್ ಇಲಾಖೆ!
TV9 Web
| Edited By: |

Updated on:Nov 02, 2022 | 4:59 PM

Share

ಅತಿಹೆಚ್ಚು ವಾಹನ ಕಳ್ಳತನ ಪ್ರಕರಣಗಳ ಪಟ್ಟಿಯಲ್ಲಿ ನಮ್ಮ ಬೆಂಗಳೂರು ಕೂಡಾ ಒಂದಾಗಿದ್ದು, ಹಲವು ಪ್ರಕರಣಗಳಲ್ಲಿ ಕಳ್ಳತನವಾದ ವಾಹನಗಳು ಪತ್ತೆಯಾಗುವುದು ತುಂಬಾ ವಿರಳ. ಇದಕ್ಕಾಗಿ ಹೊಸ ಕ್ರಮ ಕೈಗೊಂಡಿರುವ ಕರ್ನಾಟಕ ಪೊಲೀಸ್ ಇಲಾಖೆಯು ವಾಹನ ಕಳ್ಳತನ ಪ್ರಕರಣಗಳ ತ್ವರಿತ ತನಿಖೆಗೆ ಸಹಕಾರಿಯಾಗುವಂತೆ ಆನ್ಲೈನ್ ದೂರು ಸಲ್ಲಿಕೆ ವ್ಯವಸ್ಥೆ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯೋತ್ಸವ ದಿನದಂದೆ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಕೇಂದ್ರಿತ ಪೋರ್ಟಲ್ ಪರಿಚಯಿಸಿದ್ದು, ವಾಹನ ಕಳ್ಳತನವಾದ ತಕ್ಷಣವೇ ಪೊಲೀಸರಿಗೆ ಮಾಹಿತಿ ಒದಗಿಸಲು ಹೊಸ ಪೋರ್ಟಲ್ ಸಾಕಷ್ಟು ಸಹಕಾರಿಯಾಗಲಿದೆ.

ವಾಹನಗಳು ಕಳ್ಳತನವಾದ ಮಾಲೀಕರು ಪೊಲೀಸ್ ಠಾಣೆ ತೆರಳಿ ದೂರು ದಾಖಲಿಸಲು ಸಾಕಷ್ಟು ಸಮಯವಾಗುವುದರಿಂದ ತನಿಖೆಯಲ್ಲೂ ವಿಳಂಬವಾಗುತ್ತದೆ. ಹೀಗಾಗಿ ವಾಹನಗಳನ್ನು ಕಳೆದುಕೊಂಡ ಮಾಲೀಕರಿಗೆ ತಕ್ಷಣವೇ ದೂರ ದಾಖಲಿಸಿ ಇ-ಎಫ್ಐಆರ್ ಪಡೆದುಕೊಳ್ಳಲು ಸಹಕಾರಿಯಾಗುವಂತೆ ಹೊಸ ಪೋರ್ಟಲ್ ತೆರೆಯಲಾಗಿದ್ದು, ಹೊಸ ಆನ್ಲೈನ್ ದೂರು ಸೌಲಭ್ಯದ ಕುರಿತಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆನ್ಲೈನ್ ದೂರು ನೀಡುವುದು ಹೇಗೆ?

ರಾಜ್ಯ ಪೊಲೀಸ್ ಇಲಾಖೆಯ https://ksp.karnataka.gov.in/ ಜಾಲತಾಣದ ಮೂಲಕ ನಾಗರಿಕ ಕೇಂದ್ರಿತ ತಾಣದ ಕಾಲಂ ಕ್ಲಿಕ್ ಮಾಡಬೇಕು. ತದನಂತರ ರಾಜ್ಯ ಪೊಲೀಸ್ ಪುಟ ತೆರೆದುಕೊಳ್ಳಲಿದ್ದು, ಇಲ್ಲಿ ಲಾಗಿನ್ ಆಗುವ ಮೂಲಕ ನ್ಯೂ ಟು ಎಸ್ಎಸ್ಒ ಬಟನ್ ಒತ್ತುವ ಮೂಲಕ ಹೊಸದಾಗಿ ಯೂಸರ್ ಮತ್ತು ಪಾಸ್ ವರ್ಡ್ ಸೃಷ್ಠಿಸಬೇಕು. ತದನಂತರ ಕಳ್ಳತನವಾದ ವಾಹನದ ವಿವರಗಳನ್ನು ದಾಖಲಿಸಬೇಕು.

vehicle theft

ವಾಹನದ ಸಂಪೂರ್ಣ ಮಾಹಿತಿ ತುಂಬಿದ ನಂತರ ಸಂಬಂಧಪಟ್ಟ ಪೊಲೀಸ್ ಠಾಣೆ ಸೂಚಿಸುತ್ತದೆ. ಎಲ್ಲಾ ದೂರು ದಾಖಲಿಸುವ ಪ್ರಕ್ರಿಯೆ ನಂತರ ಇ-ಎಫ್ಐಆರ್ ಡೌನ್ ಲೋಡ್ ಮಾಡಕೊಳ್ಳಬೇಕಿದ್ದು, ದೂರು ದಾಖಲಿಸಿದ ನಂತರ ವಾಹನ ಮಾಹಿತಿ ಆಧರಿಸಿ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ಆರಂಭಿಸುತ್ತಾರೆ.

ಹೆಚ್ಚಳವಾದ ವಾಹನ ಕಳ್ಳತನ ಪ್ರಕರಣಗಳು

ದೇಶಾದ್ಯಂತ ದಿನಂಪ್ರತಿ ನೂರಾರು ವಾಹನ ಕಳ್ಳತನ ಪ್ರಕರಣಗಳು ದಾಖಲಾಗುತ್ತಿವೆ. ವಾಹನಗಳಲ್ಲಿ ಅದೆಷ್ಟೋ ಹೊಸ ಹೊಸ ಸುರಕ್ಷಾ ತಂತ್ರಜ್ಞಾನಗಳನ್ನು ಅಳವಡಿಸಿದರೂ ಕಳ್ಳತನ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ಕಳ್ಳತನವಾಗುವುದಕ್ಕೂ ಮುನ್ನ ಮಾಲೀಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳವುದು ತುಂಬಾ ಮುಖ್ಯವಾದ ವಿಚಾರವಾಗಿದೆ. ವಾಹನ ಕಳ್ಳತನ ತಡೆಗಾಗಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಹಲವು ಹೊಸ ಸುರಕ್ಷಾ ಸಾಧನಗಳು ಖರೀದಿಗೆ ಲಭ್ಯವಿದ್ದರೂ ಸುರಕ್ಷಿತ ಪ್ರದೇಶಗಳಲ್ಲಿ ಪಾರ್ಕಿಂಗ್ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಿ.

Published On - 4:59 pm, Wed, 2 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ