AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಫೀಚರ್ಸ್ ಗಳೊಂದಿಗೆ ಎಂಟ್ರಿ ಕೊಟ್ಟ ಮಹೀಂದ್ರಾ ಸ್ಕಾರ್ಪಿಯೋ ಎನ್ ಜೆಡ್8 ವೆರಿಯೆಂಟ್

ಮಹೀಂದ್ರಾ ಕಂಪನಿಯು ತನ್ನ ಬಹುಬೇಡಿಕೆಯ ಸ್ಕಾರ್ಪಿಯೋ ಎನ್ ಎಸ್ ಯುವಿ ಜೆಡ್8 ವೆರಿಯೆಂಟ್ ಹಲವು ಹೊಸ ಫೀಚರ್ಸ್ ಗಳನ್ನು ಪರಿಚಯಿಸಿದೆ.

ಸಖತ್ ಫೀಚರ್ಸ್ ಗಳೊಂದಿಗೆ ಎಂಟ್ರಿ ಕೊಟ್ಟ ಮಹೀಂದ್ರಾ ಸ್ಕಾರ್ಪಿಯೋ ಎನ್ ಜೆಡ್8 ವೆರಿಯೆಂಟ್
ಮಹೀಂದ್ರಾ ಸ್ಕಾರ್ಪಿಯೋ ಎನ್
Praveen Sannamani
|

Updated on: Jul 02, 2024 | 10:29 PM

Share

ಮಧ್ಯಮ ಗಾತ್ರದ ಎಸ್ ಯುವಿ ಕಾರುಗಳ ಮಾರಾಟಾದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ (Mahindra) ಕಂಪನಿಯು ತನ್ನ ಜನಪ್ರಿಯ ಸ್ಕಾರ್ಪಿಯೋ ಎನ್ ಮಾದರಿಯಲ್ಲಿ ಹೊಸ ಫೀಚರ್ಸ್ ಗಳನ್ನು ಪರಿಚಯಿಸಿದೆ. ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಜೆಡ್8 ವೆರಿಯೆಂಟ್ ನಲ್ಲಿ ಹೊಸ ಫೀಚರ್ಸ್ ನೀಡಲಾಗಿದ್ದು, ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂಬುವುದು ಗಮನಿಸಬೇಕಾದ ಅಂಶವಾಗಿದೆ.

ಜೆಡ್8 ವೆರಿಯೆಂಟ್ ನಲ್ಲಿರುವ ಜೆಡ್8 ಎಸ್, ಜೆಡ್8 ಮತ್ತು ಜೆಡ್8 ಎಲ್ ವೆರಿಯೆಂಟ್ ಗಳಲ್ಲಿ ಹೊಸದಾಗಿ ಮುಂಭಾಗದ ಸಾಲಿನಲ್ಲಿ ವೆಂಟಿಲೆಟೆಡ್ ಆಸನಗಳು, ಆಕ್ಟಿವ್ ಕೂಲಿಂಗ್ ಪ್ರೇರಿತ ವೈರ್ ಲೆಸ್ ಚಾರ್ಜರ್, ಆಟೋ ಡಿಮ್ಮಿಂಗ್ ರಿಯರ್ ವ್ಯೂ ಮಿರರ್ ಮತ್ತು ಹೈ ಗ್ಲೊಸ್ ಸೆಂಟರ್ ಕನ್ಸೊನ್ ಜೋಡಣೆ ಮಾಡಲಾಗಿದೆ. ಇವು ದೂರದ ಪ್ರಯಾಣವನ್ನು ಮತ್ತಷ್ಟು ಸರಳಗೊಳಿಸಲಿದ್ದು, ಎಸ್ ಯುವಿ ಪ್ರಿಯರನ್ನು ಮತ್ತಷ್ಟು ಸೆಳೆಯಲಿವೆ.

ಹೊಸ ಫೀಚರ್ಸ್ ಹೊರತಾಗಿ ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಎನ್ ನಲ್ಲಿ ಈ ಹಿಂದಿನ ಫೀಚರ್ಸ್ ಗಳನ್ನು ಮತ್ತು ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಫೀಚರ್ಸ್ ಪಡೆದುಕೊಂಡಿದೆ. ಸ್ಕಾರ್ಪಿಯೋದಲ್ಲಿ ಸದ್ಯ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತುಜೆಡ್8ಎಲ್ ವೆರಿಯೆಂಟ್ ಹೊಂದಿದ್ದು, ಇದರಲ್ಲಿ 2.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸ್ಕಾರ್ಪಿಯೋ ಎನ್ ನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ನೀಡಿದ್ದು, ಟಾಪ್ ಎಂಡ್ ಮಾದರಿಗಳಲ್ಲಿ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಿಸಲಾಗಿದೆ. ಇದರೊಂದಿಗೆ ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ನೀಡಿದೆ. ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್‌ ನೀಡಿದ್ದು, ಇದು ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ