AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಫೀಚರ್ಸ್ ಗಳೊಂದಿಗೆ ಎಂಟ್ರಿ ಕೊಟ್ಟ ಮಹೀಂದ್ರಾ ಸ್ಕಾರ್ಪಿಯೋ ಎನ್ ಜೆಡ್8 ವೆರಿಯೆಂಟ್

ಮಹೀಂದ್ರಾ ಕಂಪನಿಯು ತನ್ನ ಬಹುಬೇಡಿಕೆಯ ಸ್ಕಾರ್ಪಿಯೋ ಎನ್ ಎಸ್ ಯುವಿ ಜೆಡ್8 ವೆರಿಯೆಂಟ್ ಹಲವು ಹೊಸ ಫೀಚರ್ಸ್ ಗಳನ್ನು ಪರಿಚಯಿಸಿದೆ.

ಸಖತ್ ಫೀಚರ್ಸ್ ಗಳೊಂದಿಗೆ ಎಂಟ್ರಿ ಕೊಟ್ಟ ಮಹೀಂದ್ರಾ ಸ್ಕಾರ್ಪಿಯೋ ಎನ್ ಜೆಡ್8 ವೆರಿಯೆಂಟ್
ಮಹೀಂದ್ರಾ ಸ್ಕಾರ್ಪಿಯೋ ಎನ್
Praveen Sannamani
Praveen Sannamani|

Updated on: Jul 02, 2024 | 10:29 PM

Share

ಮಧ್ಯಮ ಗಾತ್ರದ ಎಸ್ ಯುವಿ ಕಾರುಗಳ ಮಾರಾಟಾದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ (Mahindra) ಕಂಪನಿಯು ತನ್ನ ಜನಪ್ರಿಯ ಸ್ಕಾರ್ಪಿಯೋ ಎನ್ ಮಾದರಿಯಲ್ಲಿ ಹೊಸ ಫೀಚರ್ಸ್ ಗಳನ್ನು ಪರಿಚಯಿಸಿದೆ. ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಜೆಡ್8 ವೆರಿಯೆಂಟ್ ನಲ್ಲಿ ಹೊಸ ಫೀಚರ್ಸ್ ನೀಡಲಾಗಿದ್ದು, ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂಬುವುದು ಗಮನಿಸಬೇಕಾದ ಅಂಶವಾಗಿದೆ.

ಜೆಡ್8 ವೆರಿಯೆಂಟ್ ನಲ್ಲಿರುವ ಜೆಡ್8 ಎಸ್, ಜೆಡ್8 ಮತ್ತು ಜೆಡ್8 ಎಲ್ ವೆರಿಯೆಂಟ್ ಗಳಲ್ಲಿ ಹೊಸದಾಗಿ ಮುಂಭಾಗದ ಸಾಲಿನಲ್ಲಿ ವೆಂಟಿಲೆಟೆಡ್ ಆಸನಗಳು, ಆಕ್ಟಿವ್ ಕೂಲಿಂಗ್ ಪ್ರೇರಿತ ವೈರ್ ಲೆಸ್ ಚಾರ್ಜರ್, ಆಟೋ ಡಿಮ್ಮಿಂಗ್ ರಿಯರ್ ವ್ಯೂ ಮಿರರ್ ಮತ್ತು ಹೈ ಗ್ಲೊಸ್ ಸೆಂಟರ್ ಕನ್ಸೊನ್ ಜೋಡಣೆ ಮಾಡಲಾಗಿದೆ. ಇವು ದೂರದ ಪ್ರಯಾಣವನ್ನು ಮತ್ತಷ್ಟು ಸರಳಗೊಳಿಸಲಿದ್ದು, ಎಸ್ ಯುವಿ ಪ್ರಿಯರನ್ನು ಮತ್ತಷ್ಟು ಸೆಳೆಯಲಿವೆ.

ಹೊಸ ಫೀಚರ್ಸ್ ಹೊರತಾಗಿ ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಎನ್ ನಲ್ಲಿ ಈ ಹಿಂದಿನ ಫೀಚರ್ಸ್ ಗಳನ್ನು ಮತ್ತು ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಫೀಚರ್ಸ್ ಪಡೆದುಕೊಂಡಿದೆ. ಸ್ಕಾರ್ಪಿಯೋದಲ್ಲಿ ಸದ್ಯ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತುಜೆಡ್8ಎಲ್ ವೆರಿಯೆಂಟ್ ಹೊಂದಿದ್ದು, ಇದರಲ್ಲಿ 2.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸ್ಕಾರ್ಪಿಯೋ ಎನ್ ನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ನೀಡಿದ್ದು, ಟಾಪ್ ಎಂಡ್ ಮಾದರಿಗಳಲ್ಲಿ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಿಸಲಾಗಿದೆ. ಇದರೊಂದಿಗೆ ಹೊಸ ಕಾರಿನಲ್ಲಿ ಮಹೀಂದ್ರಾ ಕಂಪನಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ನೀಡಿದೆ. ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್‌ ನೀಡಿದ್ದು, ಇದು ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ