ಹೊಸ ಕಾರುಗಳ ಮೇಲೆ ಐತಿಹಾಸಿಕ ವಾರಂಟಿ ಘೋಷಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಕಾರುಗಳ ಖರೀದಿ ಮೇಲೆ ಐತಿಹಾಸಿಕ ವಾರಂಟಿಗಳನ್ನು ಘೋಷಣೆ ಮಾಡಿದೆ.

ಹೊಸ ಕಾರುಗಳ ಮೇಲೆ ಐತಿಹಾಸಿಕ ವಾರಂಟಿ ಘೋಷಿಸಿದ ಮಾರುತಿ ಸುಜುಕಿ
ಮಾರುತಿ ಸುಜುಕಿ ಕಾರುಗಳು
Follow us
|

Updated on:Jul 09, 2024 | 9:43 PM

ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ (Maruti Suzuki) ತನ್ನ ಹೊಸ ಕಾರುಗಳ ಖರೀದಿ ಮೇಲೆ ಅತ್ಯುತ್ತಮ ಆಫರ್ ಗಳನ್ನು ನೀಡುತ್ತಿದ್ದು, ಇನ್ಮುಂದೆ ಹೊಸ ಕಾರು ಖರೀದಿಸುವ ಪ್ರತಿಯೊಬ್ಬ ಗ್ರಾಹಕರಿಗೂ ಅನ್ವಯಿಸುವಂತೆ ಹೊಸ ಸ್ಟ್ಯಾಂಡರ್ಡ್ ವಾರಂಟಿ ಯೋಜನೆಯನ್ನು ಪ್ರಕಟಿಸಿದೆ. ಈ ಹಿಂದೆ ಪ್ರತಿಯೊಂದು ಕಾರಿನ ಮೇಲೂ ನೀಡಲಾಗುತ್ತಿದ್ದ 2 ವರ್ಷ ಅಥವಾ 40 ಸಾವಿರ ಕಿ.ಮೀ ಗಳ ವಾರಂಟಿಯನ್ನು ಇದೀಗ 3 ವರ್ಷ ಅಥವಾ 1 ಲಕ್ಷ ಕಿ.ಮೀ ಗೆ ವಿಸ್ತರಿಸಲಾಗಿದೆ.

3 ವರ್ಷ ಅಥವಾ 1 ಲಕ್ಷ ಕಿ.ಮೀ ವಾರಂಟಿಯು ಇದೀಗ ಮಾರುತಿ ಸುಜುಕಿ ನಿರ್ಮಾಣದ ಪ್ರತಿಯೊಂದು ಕಾರು ಮಾದರಿಗೂ ಇಂದಿನಿಂದಲೇ ಅನ್ವಯಿಸುವಂತೆ ಜಾರಿಗೆ ತರಲಾಗಿದ್ದು, ಹೊಸ ಕಾರು ಉತ್ಪನ್ನಗಳಿಗೆ ಇದೀಗ ಮತ್ತಷ್ಟು ಸುರಕ್ಷತೆ ದೊರೆಯಲಿದೆ. ಈ ಮೂಲಕ ಮಾರುತಿ ಸುಜುಕಿ ಕಂಪನಿಯು ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸಿದ್ದು, ಟೊಯೊಟಾ ಕಾರುಗಳಿಗೆ ಸಮವಾಗಿ ಹೊಸ ವಾರಂಟಿಗಳನ್ನು ನೀಡುತ್ತಿದೆ.

ಮಾರುತಿ ಸುಜುಕಿ ಕಂಪನಿಯು ಸದ್ಯ ಎರಡು ಮಾದರಿಗಳಲ್ಲಿ ಹೊಸ ಕಾರುಗಳನ್ನು ಮಾರಾಟಮಾಡುತ್ತಿದ್ದು, ಸಾಮಾನ್ಯ ಕಾರುಗಳನ್ನು ಅರೆನಾ ಡೀಲರ್ಸ್ ಗಳ ಮೂಲಕ ಮತ್ತು ಪ್ರೀಮಿಯಂ ಕಾರುಗಳನ್ನು ನೆಕ್ಸಾ ಡೀಲರ್ಸ್ ಗಳ ಮೂಲಕ ಮಾರಾಟ ಮಾಡುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಟ್ಟು 17 ಕಾರು ಮಾದರಿಗಳನ್ನು ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಹೊಸ ವಾರಂಟಿ ಯೋಜನೆ ಮೂಲಕ ಪ್ರತಿಸ್ಪರ್ಧಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

ಹೊಸ ಸ್ಟ್ಯಾಂಡರ್ಡ್ ವಾರಂಟಿ ಯೋಜನೆಯ ಜೊತೆಗೆ ಮಾರುತಿ ಸುಜುಕಿ ಕಂಪನಿಯು ಆಸಕ್ತ ಗ್ರಾಹಕರಿಗೆ ಹೆಚ್ಚುವರಿ ಮೊತ್ತದೊಂದಿಗೆ ಹೊಸದಾಗಿ 6 ವರ್ಷಗಳು ಅಥವಾ 1.6 ಲಕ್ಷ ಕಿ.ಮೀ ವಿಸ್ತರಿತ ವಾರಂಟಿ ಸೌಲಭ್ಯವನ್ನು ನೀಡುತ್ತಿದೆ. ಇದರೊಂದಿಗೆ ಈ ಹಿಂದಿನ 4 ವರ್ಷಗಳು ಅಥವಾ 1.2 ಲಕ್ಷ ಕಿ.ಮೀ ವಿಸ್ತರಿತ ವಾರಂಟಿಯನ್ನು ಇದೀಗ 5 ವರ್ಷಗಳು ಅಥವಾ 1.4 ಲಕ್ಷ ಕಿ.ಮೀ ಗಳಿಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಬದಲಾವಣೆಗಳನ್ನು ಅಳವಡಿಸಿಕೊಳ್ಳುತ್ತಿರುವ ಮಾರುತಿ ಸುಜುಕಿ ಕಂಪನಿಯು ಗುಣಮಟ್ಟ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಮೂಲಕ ಗ್ರಾಹಕರ ವಿಶ್ವಾಸ ಗಳಿಸುತ್ತಿದ್ದು, ಹೊಸ ಕಾರು ಉತ್ಪನ್ನಗಳ ಮೂಲಕ ಹೊಸ ಸಂಚಲನ ಮೂಡಿಸುತ್ತಿದೆ. ಡೀಸೆಲ್ ಕಾರುಗಳಿಗೆ ಸಂಪೂರ್ಣವಾಗಿ ಗುಡ್ ಬೈ ಹೇಳುವ ಪೆಟ್ರೋಲ್, ಸಿಎನ್ ಜಿ ಮತ್ತು ಹೈಬ್ರಿಡ್ ಕಾರುಗಳ ಮೇಲೆ ಹೆಚ್ಚಿನ ಗಮನಹರಿಸಿದೆ.

Published On - 9:39 pm, Tue, 9 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್