AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki: ದೋಷಯುಕ್ತ ಏರ್​ಬ್ಯಾಗ್; 17,362 ಕಾರುಗಳನ್ನು ವಾಪಸ್ ಪಡೆಯಲಿದೆ ಮಾರುತಿ ಸುಜುಕಿ

ಹಿಂಪಡೆಯಲಾಗುವ ಕಾರುಗಳ ಏರ್​ಬ್ಯಾಗ್​ಗಳನ್ನು ಪರಿಶೀಲಿಸಲಾಗುವುದು. ಸಮಸ್ಯೆ ಕಂಡುಬಂದಲ್ಲಿ ಉಚಿತವಾಗಿ ಬೇರೆ ಏರ್​ಬ್ಯಾಗ್​​ ಅಳವಡಿಸಿಕೊಡಲಾಗುವುದು ಎಂದು ಕಂಪನಿ ಹೇಳಿದೆ.

Maruti Suzuki: ದೋಷಯುಕ್ತ ಏರ್​ಬ್ಯಾಗ್; 17,362 ಕಾರುಗಳನ್ನು ವಾಪಸ್ ಪಡೆಯಲಿದೆ ಮಾರುತಿ ಸುಜುಕಿ
ಮಾರುತಿ ಸುಜುಕಿ ಇಂಡಿಯಾ
TV9 Web
| Edited By: |

Updated on:Jan 18, 2023 | 12:53 PM

Share

ನವದೆಹಲಿ: ದೋಷಯುಕ್ತ ಏರ್​​ಬ್ಯಾಗ್​ ಸಮಸ್ಯೆಯ ಕಾರಣ 17,362 ಕಾರುಗಳನ್ನು ಹಿಂಪಡೆಯುತ್ತಿರುವುದಾಗಿ ಮಾರುತಿ ಸುಜುಕಿ ಇಂಡಿಯಾ (Maruti Suzuki India) ತಿಳಿಸಿದೆ. ವಾಪಸ್ ಪಡೆಯಲಾಗುವ ಕಾರುಗಳಲ್ಲಿ ಆಲ್ಟೊ ಕೆ10, ಬ್ರೆಜ್ಜಾ ಹಾಗೂ ಬಾಲೆನೊ ಮಾಡೆಲ್​​ ಕಾರುಗಳೂ ಇವೆ. ಕಾರುಗಳ ಏರ್​ಬ್ಯಾಗ್ ದೋಷ ಪರಿಶೀಲಿಸಲು ಮತ್ತು ಸರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ. ಎಸ್​-ಪ್ರೆಸ್ಸೊ, ಇಕೊ, ಗ್ರ್ಯಾಂಡ್ ವಿಟಾರ ಮಾಡೆಲ್​​ ಕಾರುಗಳನ್ನೂ ಹಿಂಪಡೆಯಲಾಗುತ್ತಿದೆ. 2022ರ ಡಿಸೆಂಬರ್​ 8ರಿಂದ 2023ರ ಜನವರಿ 12ರ ಅವಧಿಯಲ್ಲಿ ತಯಾರಾಗಿರುವ ಕಾರುಗಳನ್ನು ವಾಪಸ್ ಪಡೆಯಲಾಗುವುದು ಎಂದು ಕಂಪನಿಯು ಮಾರುಕಟ್ಟೆ ನಿಯಂತ್ರಕಕ್ಕೆ ನೀಡಿರುವ ಮಾಹಿತಿಯಲ್ಲಿ ತಿಳಿಸಿದೆ.

ಹಿಂಪಡೆಯಲಾಗುವ ಕಾರುಗಳ ಏರ್​ಬ್ಯಾಗ್​ಗಳನ್ನು ಪರಿಶೀಲಿಸಲಾಗುವುದು. ಸಮಸ್ಯೆ ಕಂಡುಬಂದಲ್ಲಿ ಉಚಿತವಾಗಿ ಬೇರೆ ಏರ್​ಬ್ಯಾಗ್​​ ಅಳವಡಿಸಿಕೊಡಲಾಗುವುದು ಎಂದು ಕಂಪನಿ ಹೇಳಿದೆ. ಮೇಲೆ ಉಲ್ಲೇಖಿಸಿದ ಅವಧಿಯಲ್ಲಿ ತಯಾರಾದ ನಿರ್ದಿಷ್ಟ ಮಾದರಿಯ ಕೆಲವು ಕಾರುಗಳಲ್ಲಿ ಏರ್​ಬ್ಯಾಗ್​ಗಳಲ್ಲಿ ದೋಷವಿರಬಹುದು ಎಂದು ಶಂಕಿಸಲಾಗಿದೆ. ಇದು ವಾಹನ ಅಪಘಾತದ ಸಂದರ್ಭದಲ್ಲಿ ಏರ್‌ಬ್ಯಾಗ್‌ಗಳು ಮತ್ತು ಸೀಟ್ ಬೆಲ್ಟ್ ಪ್ರಿಟೆನ್ಷನರ್‌ಗಳನ್ನು ನಿಯೋಜಿಸದಿರುವಿಕೆಗೆ ಕಾರಣವಾಗಬಹುದು. ಹೀಗಾಗಿ ಈ ಕುರಿತು ತಪಾಸಣೆ ನಡೆಸುವ ಅಗತ್ಯವಿದೆ ಎಂದು ಕಂಪನಿ ಹೇಳಿದೆ.

ಇದನ್ನೂ ಓದಿ: Auto Expo 2023: ಮಹೀಂದ್ರಾ ಥಾರ್ ಪ್ರತಿಸ್ಪರ್ಧಿ ಮಾರುತಿ ಸುಜುಕಿ ಜಿಮ್ನಿ ಅನಾವರಣ!

ಸಾಕಷ್ಟು ಎಚ್ಚರಿಕೆ ಕೈಗೊಳ್ಳಲಾಗಿದೆ. ಏರ್​ಬ್ಯಾಗ್ ಲೋಪದ ಬಗ್ಗೆ ಶಂಕೆಯುಳ್ಳ ವಾಹನಗಳನ್ನು ಪಡೆದಿರುವ ಗ್ರಾಹಕರು ಅದನ್ನು ಪರಿಶೀಲಿಸಿ, ಬದಲಾಯಿಸುವವರೆಗೆ ವಾಹನವನ್ನು ಓಡಿಸದಂತೆ ಅಥವಾ ವಾಹನವನ್ನು ಬಳಸದಂತೆ ಸೂಚಿಸಲಾಗಿದೆ ಎಂದು ಕಂಪನಿ ಹೇಳಿದೆ. ಲೋಪ ಇರಬಹುದು ಎಂದು ಶಂಕಿಸಲಾದ ಕಾರುಗಳ ಮಾಲೀಕರನ್ನು ಕಂಪನಿಯು ತಕ್ಷಣವೇ ಸಂಪರ್ಕಿಸುತ್ತಿದೆ. ಸಂಬಂಧಪಟ್ಟ ಶೋರೂಮ್​ಗಳು ಈ ಬಗ್ಗೆ ಕ್ರಮ ಕೈಗೊಂಡಿವೆ ಎಂದು ಕಂಪನಿ ಹೇಳಿದೆ.

ಇನ್ನಷ್ಟು ಆಟೋಮೊಬೈಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Wed, 18 January 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!