AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ರಸ್ತೆಯಲ್ಲಿ ಡ್ರಿಫ್ಟ್ ಮಾಡಿದ ಮರ್ಸಿಡಿಸ್ ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್

ಭಾರತದಲ್ಲಿ ಇತ್ತೀಚೆಗೆ ಸ್ಪೋರ್ಟ್ ವಾಹನಗಳ ಭರಾಟೆ ಹೆಚ್ಚುತ್ತಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಸಾಹಸ ಪ್ರದರ್ಶನದ ಮೂಲಕ ಸಾಮಾನ್ಯ ಜನರ ಜೀವಕ್ಕೆ ಅಪಾಯವನ್ನು ಉಂಟುಮಾಡುವ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ.

ಸಾರ್ವಜನಿಕ ರಸ್ತೆಯಲ್ಲಿ ಡ್ರಿಫ್ಟ್ ಮಾಡಿದ ಮರ್ಸಿಡಿಸ್ ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್
ಮರ್ಸಿಡಿಸ್ ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್
Praveen Sannamani
|

Updated on:Mar 23, 2023 | 2:32 PM

Share

ದೇಶಾದ್ಯಂತ ರಸ್ತೆ ನಿಯಮಗಳ ಸರಿಯಾದ ಪಾಲನೆಗಾಗಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದ್ದು, ಕಠಿಣ ಕ್ರಮಗಳ ಹೊರತಾಗಿಯೂ ನಿಯಮ ಉಲ್ಲಂಘಿಸಿ ಅಪಾಯಕಾರಿ ಚಾಲನಾ ಪ್ರವೃತ್ತಿ ಹೆಚ್ಚುತ್ತಿದೆ. ಇತ್ತೀಚೆಗೆ ಮರ್ಸಿಡಿಸ್ ಬೆಂಝ್(mercedes benz) ಕಾರು ಮಾಲೀಕನೊಬ್ಬ ಕೂಡಾ ಸಾರ್ವಜನಿಕ ಪ್ರದೇಶದಲ್ಲಿಯೇ ಡ್ರಿಫ್ಟ್ ಮಾಡುವ ಮೂಲಕ ಪೊಲೀಸರ ಅತಿಥಿಯಾಗಿದ್ದು, ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

Traffic violation (1)

ಮಧ್ಯಪ್ರದೇಶದ ಇಂದೋರ್‌ ಮೂಲದ 23 ವರ್ಷದ ಯುವಕನೊಬ್ಬ ತನ್ನ ಮರ್ಸಿಡಿಸ್ ಬೆಂಝ್ ಇ400 ಕ್ಯಾಬ್ರಿಯೊಲೆಟ್ ಕಾರಿನ ಮೂಲಕ ಸಾರ್ವಜನಿಕ ರಸ್ತೆಯಲ್ಲಿಯೇ ಡಿಫ್ಟ್ ಮಾಡುವ ಮೂಲಕ ಸಿಕ್ಕಿಬಿದ್ದಿದ್ದು, ಸಾರ್ವಜನಿಕರ ಮಾಹಿತಿ ಮೇರೆಗೆ ಇಂದೋರ್ ಪೊಲೀಸರು ಕಾರು ಮಾಲೀಕನ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿ ಕಾರನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಓದಿ: ಸಿಗ್ನಲ್ ಜಂಪ್ ಮಾಡಿ, ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 1.5 ಕಿ.ಮೀ ಎಳೆದೊಯ್ದ ಚಾಲಕ

ಕ್ರಿಮಿನಲ್ ಕೇಸ್ ದಾಖಲು

ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ಕಾರು ಚಾಲನೆ ಮಾಡಿದ್ದಕ್ಕಾಗಿ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279 (ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ಚಾಲನೆ) ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಡ್ರಿಫ್ಟ್ ಮಾಡಲು ಬಳಸಿದ್ದ ಮರ್ಸಿಡಿಸ್ ಬೆಂಝ್ ಕಾರನ್ನ ಸಹ ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ಕುರಿತು ಇಂದೋರ್ ಟ್ರಾಫಿಕ್ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ತಡರಾತ್ರಿ ವೇಳೆ ಟ್ರಾಫಿಕ್ ದಟ್ಟಣೆ ಕಡಿಮೆ ಇರುವಾಗ ಇಂದೋರ್ ನಗರದ ಪ್ರಮುಖ ವೃತ್ತವೊಂದರಲ್ಲಿ ಡ್ರಿಫ್ಟ್ ಮಾಡುತ್ತಿದ್ದು, ಹಿರಿಯ ನಾಗರಿಕರೊಬ್ಬರು ಹೆಚ್ಚುವರಿ ಸಿಪಿ ಟ್ರಾಫಿಕ್ ಮ್ಯಾನೇಜ್‌ಮೆಂಟ್‌ಗೆ ಮಾಹಿತಿ ಕಳುಹಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರಿನ ಮಾಹಿತಿ ಪತ್ತೆಹಚ್ಚಿ ಕ್ರಿಮಿನಲ್ ಕೇಸ್ ದಾಖಲಿಸಿದ್ದು, ದೊಡ್ಡ ಮೊತ್ತದ ದಂಡ ವಿಧಿಸುವ ಸಾಧ್ಯತೆಗಳಿವೆ.

Published On - 2:05 pm, Thu, 23 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ