ಎಂಜಿ ಹೊಸ ಇವಿ ಕಾರು ಬಿಡುಗಡೆಗೆ ಕ್ಷಣಗಣನೆ.. ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ಪಕ್ಕಾ!

ಎಂಜಿ ಮೋಟಾರ್ ಕಂಪನಿ ತನ್ನ ಬಹುನೀರಿಕ್ಷಿತ ವಿಂಡ್ಸರ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಕಾರು ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ.

ಎಂಜಿ ಹೊಸ ಇವಿ ಕಾರು ಬಿಡುಗಡೆಗೆ ಕ್ಷಣಗಣನೆ.. ಭರ್ಜರಿ ಫೀಚರ್ಸ್ ಮತ್ತು ಮೈಲೇಜ್ ಪಕ್ಕಾ!
ವಿಂಡ್ಸರ್ ಎಲೆಕ್ಟ್ರಿಕ್
Follow us
|

Updated on:Sep 10, 2024 | 9:33 PM

ಎಂಜಿ ಮೋಟಾರ್ (MG Motor) ಕಂಪನಿಯು ತನ್ನ ಬಹುನೀರಿಕ್ಷಿತ ವಿಂಡ್ಸರ್ ಇವಿ ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಇದೇ ತಿಂಗಳು ಸೆಪ್ಟೆಂಬರ್ 11ರಂದು ಅಧಿಕೃತವಾಗಿ ಬಿಡುಗಡೆಯಾಗಲಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಇವಿ ಮತ್ತು ಕಾಮೆಟ್ ಇವಿ ನಡುವಿನ ಸ್ಥಾನದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಇವಿ ಕಾರು ಅತ್ಯಾಧುನಿಕ ವಿನ್ಯಾಸ ಭಾಷೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಜೆಎಸ್ ಡಬ್ಲ್ಯು ಜೊತೆಗೂಡಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಬೃಹತ್ ಯೋಜನೆ ಚಾಲನೆ ನೀಡಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಹೂಡಿಕೆಯೊಂದಿಗೆ ವಿಂಡ್ಸರ್ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಇದು ದೇಶಿಯ ಮಾರುಕಟ್ಟೆಯಲ್ಲಿ ಮಧ್ಯಮ ವರ್ಗದ ಗ್ರಾಹಕರ ಹಲವು ಬೇಡಿಕೆಗಳನ್ನು ಪೂರೈಸಲಿದೆ.

ಹೊಸ ವಿಂಡ್ಸರ್ ಕಾರು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇದು 4,295 ಎಂಎಂ ಉದ್ದಳತೆಯೊಂದಿಗೆ ಅತ್ಯಾಧುನಿಕ ವಿನ್ಯಾಸದೊಂದಿಗೆ ಹಲವಾರು ಐಷಾರಾಮಿ ಫೀಚರ್ಸ್ ಗಳನ್ನು ಪಡೆದುಕೊಂಡಿರಲಿದೆ. 5 ಸೀಟರ್ ಮಾದರಿಯಾಗಿರುವ ಹೊಸ ಇವಿ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೊಂದಿಗೆ ವಿವಿಧ ಬ್ಯಾಟರಿ ಪ್ಯಾಕ್ ಗಳ ಆಯ್ಕೆ ನೀಡಲಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಪ್ರತಿ ಚಾರ್ಜ್ ಗೆ 460 ಕಿ.ಮೀ ಮೈಲೇಜ್ ನೀಡಲಿದೆ.

ಹಾಗೆಯೇ ಹೊಸ ಇವಿ ಕಾರಿನಲ್ಲಿ ಆಧುನಿಕ ಕಾರುಗಳಲ್ಲಿ ಫೀಚರ್ಸ್ ಗಳಾದ ಎಲ್ಇಡಿ ಲೈಟ್ಸ್, ಫ್ಲಶ್ ಡೋರ್ ಹ್ಯಾಂಡಲ್ಸ್, ಡ್ಯುಯಲ್ ಡಿಜಿಟಲ್ ಸ್ಕ್ರೀನ್, 360 ಡಿಗ್ರಿ ಕ್ಯಾಮೆರಾ, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಕನೆಕ್ಡೆಡ್ ಕಾರ್ ಟೆಕ್ ಸೇರಿದಂತೆ 135 ಡಿಗ್ರಿಯಲ್ಲಿ ಮಡಿಕೆ ಮಾಡಬಹುದಾದ ಹಿಂಬದಿಯ ಆಸನಗಳನ್ನು ನೀಡಲಿದೆ. ಜೊತೆಗೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷತೆಗಾಗಿ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ನೀಡಲಾಗುತ್ತಿದ್ದು, ಇದು ಸಂಭಾವ್ಯ ಅಪಘಾತಗಳನ್ನು ತಡೆಯುವ ಮೂಲಕ ಪ್ರಾಣಹಾನಿ ಪ್ರಕರಣಗಳನ್ನು ತಡೆಯಲಿದೆ.

ಇದರೊಂದಿಗೆ ಹೊಸ ಇವಿ ಕಾರು ತಂತ್ರಜ್ಞಾನ ಮತ್ತು ಬ್ಯಾಟರಿ ಪ್ಯಾಕ್ ಗಳಿಗೆ ಅನುಗುಣವಾಗಿ ರೂ. 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಇದು ಬೆಲೆ ವಿಚಾರವಾಗಿ ಬಿವೈಡಿ ಇ6 ಎಂಪಿವಿ ಮತ್ತು ಟಾಟಾ ಕರ್ವ್ ಇವಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Published On - 9:33 pm, Tue, 10 September 24

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ