AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Scrapping Policy: ಸರ್ಕಾರಕ್ಕಿಲ್ಲ ಮುತುವರ್ಜಿ; ಹಳೆಯ ವಾಹನಗಳ ಸ್ಕ್ರ್ಯಾಪಿಂಗ್ ಯೋಜನೆಗೆ ರಹದಾರಿ ಯಾವುದಯ್ಯಾ!?

ಇಡೀ ಕರ್ನಾಟಕದಲ್ಲಿ ಫಿಟ್‌ನೆಸ್ ಪ್ರಮಾಣ ಪತ್ರಗಳನ್ನು ಹೊಂದಿರದ, ಜೀವಿತಾವಧಿ ಕೊನೆಗೊಂಡ 14.3 ಲಕ್ಷ ವಾಹನಗಳು ಸ್ಕ್ರ್ಯಾಪಿಂಗ್‌ಗೆ ಯೋಗ್ಯವಾಗಿವೆ. ಮತ್ತು 2027 ರ ವೇಳೆಗೆ ಇನ್ನೂ 66 ಲಕ್ಷ ವಾಹನಗಳು 15 ವರ್ಷ ಅಥವಾ ಅದಕ್ಕಿಂತ ಹಳೆಯದ್ದಾಗುತ್ತವೆ ಎಂದು ಅಂದಾಜಿಸಲಾಗಿದೆ. ಗಮನಾರ್ಹವೆಂದರೆ ಸರ್ಕಾರಿ ವಾಹನಗಳಿಗೆ ಮಾತ್ರವೇ ವಾಹನ ಸ್ಕ್ರ್ಯಾಪಿಂಗ್ ನೀತಿಯನ್ನು ಕಡ್ಡಾಯಗೊಳಿಸಲಾಗಿದೆ.

Scrapping Policy: ಸರ್ಕಾರಕ್ಕಿಲ್ಲ ಮುತುವರ್ಜಿ; ಹಳೆಯ ವಾಹನಗಳ ಸ್ಕ್ರ್ಯಾಪಿಂಗ್ ಯೋಜನೆಗೆ ರಹದಾರಿ ಯಾವುದಯ್ಯಾ!?
ಹಳೆಯ ವಾಹನಗಳ ಸ್ಕ್ರ್ಯಾಪಿಂಗ್ ಯೋಜನೆಗೆ ರಹದಾರಿ ಯಾವುದಯ್ಯಾ!?
ಸಾಧು ಶ್ರೀನಾಥ್​
|

Updated on:Jul 13, 2024 | 10:55 AM

Share

ಹಳೆಯ ವಾಹನಗಳು ಇಡಿಯಾಗಿ ಮತ್ತು ಅವುಗಳ ಹಳತಾದ ಇಂಜಿನ್‌ಗಳು ಮಾಲಿನ್ಯ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಡಿಸೆಂಬರ್ 2022 ರಲ್ಲಿ ರಾಜ್ಯ ವಾಹನ ಸ್ಕ್ರ್ಯಾಪಿಂಗ್ ನೀತಿಯನ್ನು ಬಿಡುಗಡೆ ಮಾಡಿತು. ಆದಾಗ್ಯೂ, ಬೆಂಗಳೂರಿನಲ್ಲಿರುವ ಲಕ್ಷಗಟ್ಟಲೆ ವಾಹನಗಳು ಸ್ಕ್ರ್ಯಾಪಿಂಗ್ ವಿಲೇವಾರಿಗೆ ಅರ್ಹವಾಗಿದ್ದರೂ ಕೆಲವೇ ಸಾವಿರ ವಾಹನಗಳು ಮಾತ್ರ ಸ್ಕ್ರ್ಯಾಪ್​ ಆಗಿವೆಯಷ್ಟೆ. ಮಾರ್ಚ್ 31, 2023 ರಂತೆ 15 ವರ್ಷಕ್ಕಿಂತ ಮೇಲ್ಪಟ್ಟ 91,58,577 ವಾಹನಗಳಲ್ಲಿ 33,00,558 ಕ್ಕೂ ಹೆಚ್ಚು ಹಳೆಯ ವಾಹನಗಳು ಬೆಂಗಳೂರು ನಗರದಲ್ಲಿವೆ. ಕರ್ನಾಟಕದ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ನೀತಿಯು (Registered Vehicle Scrapping Policy of Karnataka 2022) ಅಯೋಗ್ಯ, ಮಾಲಿನ್ಯಕಾರಕ ವಾಹನಗಳನ್ನು ಹಂತಹಂತವಾಗಿ ಸಂಚಾರದಿಂದ ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ. ಅವುಗಳ ಜಾಗದಲ್ಲಿ ಸುರಕ್ಷಿತ, ಇಂಧನ-ಸಮರ್ಥ ವಾಹನಗಳಿಗೆ ಅವಕಾಶ ನೀಡಲಾಗುವುದು. ಇದು 15 ವರ್ಷಗಳಿಗಿಂತ ಹಳೆಯದಾದ, ಜೀವಿತಾವಧಿ ಅಂತ್ಯಗೊಂಡ ವಾಹನಗಳಿಂದ ಉಂಟಾಗುವ ಮಾಲಿನ್ಯ ಹೊರಸೂಸುವಿಕೆಯನ್ನು ನಿಭಾಯಿಸಲು ಮಾತ್ರವಷ್ಟೇ ಅಲ್ಲ. ಹಳೆಯ ವಾಹನಗಳಿಗಾಗಿ ಲಭ್ಯವಿರುವ ಮರುಬಳಕೆ ಸೇವೆಗಳನ್ನು ಹೆಚ್ಚು ಪ್ರಸ್ತುತಗೊಳಿಸಲು, ಅಥವಾ ಸಮರ್ಥವಾಗಿ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಇಡೀ ಕರ್ನಾಟಕದಲ್ಲಿ ಫಿಟ್‌ನೆಸ್ ಪ್ರಮಾಣ ಪತ್ರಗಳನ್ನು ಹೊಂದಿರದ, ಜೀವಿತಾವಧಿ ಕೊನೆಗೊಂಡ 14.3 ಲಕ್ಷ ವಾಹನಗಳು ಸ್ಕ್ರ್ಯಾಪಿಂಗ್‌ಗೆ ಯೋಗ್ಯವಾಗಿವೆ. ಮತ್ತು 2027 ರ ವೇಳೆಗೆ ಇನ್ನೂ 66 ಲಕ್ಷ ವಾಹನಗಳು 15 ವರ್ಷ ಅಥವಾ ಅದಕ್ಕಿಂತ ಹಳೆಯದ್ದಾಗುತ್ತವೆ ಎಂದು ಅಂದಾಜಿಸಲಾಗಿದೆ. ಗಮನಾರ್ಹವೆಂದರೆ ಸರ್ಕಾರಿ ವಾಹನಗಳಿಗೆ ವಾಹನ ಸ್ಕ್ರ್ಯಾಪಿಂಗ್ ನೀತಿಯು ಕಡ್ಡಾಯಗೊಳಿಸಲಾಗಿದೆ. ಆದರೆ ಖಾಸಗಿ ವಾಹನಗಳ ಸ್ಕ್ರ್ಯಾಪಿಂಗ್ ಅನ್ನು ಕಡ್ಡಾಯಗೊಳಿಸಿಲ್ಲ. ಅದು ಇನ್ನೂ ವಾಹನ ಮಾಲೀಕರ ಮರ್ಜಿಯಲ್ಲಿದೆ. ರಾಜ್ಯದಲ್ಲಿರುವ ಎರಡು...

Published On - 10:36 am, Sat, 13 July 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್