AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ

ರೆನಾಲ್ಟ್ ಇಂಡಿಯಾ ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
Praveen Sannamani
|

Updated on: Sep 03, 2023 | 7:54 PM

Share

ಹೊಸ ಕಾರುಗಳ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಇಂಡಿಯಾ(Renult India) ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಲಿಮಿಟೆಡ್ ಎಡಿಷನ್ ಕಾರುಗಳು ಟಾಪ್ ಎಂಡ್ ವೆರಿಯೆಂಟ್ ಆಧರಿಸಿ ಬಿಡುಗಡೆಯಾಗಿದ್ದು, ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ.

ಹೊಸ ಫೀಚರ್ಸ್ ಗಳೊಂದಿಗೆ ಆಕರ್ಷಕ ಬಣ್ಣದ ಆಯ್ಕೆ ಹೊಂದಿರುವ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಕಾರುಗಳು ಸ್ಟ್ಯಾಂಡರ್ಡ್ ಕಾರಿನ ಟಾಪ್ ಎಂಡ್ ಮಾದರಿಗಿಂತ ರೂ. 7 ಸಾವಿರದಿಂದ ರೂ. 15 ಸಾವಿರದಷ್ಟು ದುಬಾರಿಯಾಗಿದ್ದು, ಕೆಲವೇ ಕೆಲವು ಯುನಿಟ್ ಗಳು ಮಾತ್ರ ಖರೀದಿಗೆ ಲಭ್ಯವಿರಲಿವೆ.

ರೆನಾಲ್ಟ್ ಕಂಪನಿಯ ಮಾಹಿತಿ ಪ್ರಕಾರ ಪ್ರತಿ ಕಾರು ಮಾದರಿಯಲ್ಲಿ 300 ಯುನಿಟ್ ಲಿಮಿಟೆಡ್ ಎಡಿಷನ್ ಖರೀದಿಗೆ ಲಭ್ಯವಿರಲಿದ್ದು, ಬ್ಲ್ಯಾಕ್ ಬಣ್ಣದೊಂದಿಗೆ ಫ್ರಂಟ್ ಅಂಡ್ ರಿಯರ್ ಬಂಪರ್, ಬೂಟ್ ಲಿಡ್ ಮತ್ತು ಡೋರ್ ಗಳ ಮೇಲೆ ಸಿಲ್ವರ್ ಆಕ್ಸೆಂಟ್ ನೀಡಲಾಗಿದೆ. ಹಾಗೆಯೇ ಹೊಳೆಯುವ ಸ್ಕಫ್ ಪ್ಲೇಟ್ ಮತ್ತು ಪೆಡಲ್ ಲ್ಯಾಂಪ್ ನೀಡಲಾಗಿದ್ದು, ಸುರಕ್ಷತೆಗಾಗಿ ರಿಯರ್ ವ್ಯೂ ಮಿರರ್ ಹೊಂದಿರಲಿವೆ.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

ಇನ್ನು ಹೊಸ ಕಾರುಗಳ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ನೀಡಲಾಗಿಲ್ಲ. ಸದ್ಯ ಮಾರುಕಟ್ಟೆಯಲ್ಲಿರುವಂತೆ 1.0 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ