AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ

ರೆನಾಲ್ಟ್ ಇಂಡಿಯಾ ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ.

Renault: ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
ಕೈಗರ್, ಕ್ವಿಡ್ ಮತ್ತು ಟ್ರೈಬರ್ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ
Praveen Sannamani
Praveen Sannamani|

Updated on: Sep 03, 2023 | 7:54 PM

Share

ಹೊಸ ಕಾರುಗಳ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಇಂಡಿಯಾ(Renult India) ಕಂಪನಿಯು ಕೈಗರ್, ಕ್ವಿಡ್ ಮತ್ತು ಟ್ರೈಬರ್ ಕಾರುಗಳಲ್ಲಿ ಹೊಸದಾಗಿ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಲಿಮಿಟೆಡ್ ಎಡಿಷನ್ ಕಾರುಗಳು ಟಾಪ್ ಎಂಡ್ ವೆರಿಯೆಂಟ್ ಆಧರಿಸಿ ಬಿಡುಗಡೆಯಾಗಿದ್ದು, ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ.

ಹೊಸ ಫೀಚರ್ಸ್ ಗಳೊಂದಿಗೆ ಆಕರ್ಷಕ ಬಣ್ಣದ ಆಯ್ಕೆ ಹೊಂದಿರುವ ಅರ್ಬನ್ ನೈಟ್ ಲಿಮಿಟೆಡ್ ಎಡಿಷನ್ ಕಾರುಗಳು ಸ್ಟ್ಯಾಂಡರ್ಡ್ ಕಾರಿನ ಟಾಪ್ ಎಂಡ್ ಮಾದರಿಗಿಂತ ರೂ. 7 ಸಾವಿರದಿಂದ ರೂ. 15 ಸಾವಿರದಷ್ಟು ದುಬಾರಿಯಾಗಿದ್ದು, ಕೆಲವೇ ಕೆಲವು ಯುನಿಟ್ ಗಳು ಮಾತ್ರ ಖರೀದಿಗೆ ಲಭ್ಯವಿರಲಿವೆ.

ರೆನಾಲ್ಟ್ ಕಂಪನಿಯ ಮಾಹಿತಿ ಪ್ರಕಾರ ಪ್ರತಿ ಕಾರು ಮಾದರಿಯಲ್ಲಿ 300 ಯುನಿಟ್ ಲಿಮಿಟೆಡ್ ಎಡಿಷನ್ ಖರೀದಿಗೆ ಲಭ್ಯವಿರಲಿದ್ದು, ಬ್ಲ್ಯಾಕ್ ಬಣ್ಣದೊಂದಿಗೆ ಫ್ರಂಟ್ ಅಂಡ್ ರಿಯರ್ ಬಂಪರ್, ಬೂಟ್ ಲಿಡ್ ಮತ್ತು ಡೋರ್ ಗಳ ಮೇಲೆ ಸಿಲ್ವರ್ ಆಕ್ಸೆಂಟ್ ನೀಡಲಾಗಿದೆ. ಹಾಗೆಯೇ ಹೊಳೆಯುವ ಸ್ಕಫ್ ಪ್ಲೇಟ್ ಮತ್ತು ಪೆಡಲ್ ಲ್ಯಾಂಪ್ ನೀಡಲಾಗಿದ್ದು, ಸುರಕ್ಷತೆಗಾಗಿ ರಿಯರ್ ವ್ಯೂ ಮಿರರ್ ಹೊಂದಿರಲಿವೆ.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

ಇನ್ನು ಹೊಸ ಕಾರುಗಳ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ನೀಡಲಾಗಿಲ್ಲ. ಸದ್ಯ ಮಾರುಕಟ್ಟೆಯಲ್ಲಿರುವಂತೆ 1.0 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ