AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cow Dung: ಹಸುವಿನ ಸಗಣಿಯಿಂದ ತಯಾರಿಸಿದ ಪರ್ಯಾಯ ಇಂಧನ ಬಳಕೆ ಸಕ್ಸಸ್

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಜಾಗತಿಕ ಪ್ರಯತ್ನ ನಡೆಯುತ್ತಿರುವ ಸಮಯದಲ್ಲಿ ಪರ್ಯಾಯ ಇಂಧನಗಳ ಬಳಕೆ ಮಾಲಿನ್ಯವನ್ನು ತಗ್ಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

Cow Dung: ಹಸುವಿನ ಸಗಣಿಯಿಂದ ತಯಾರಿಸಿದ ಪರ್ಯಾಯ ಇಂಧನ ಬಳಕೆ ಸಕ್ಸಸ್
ಹಸುವಿನ ಸಗಣಿಯಿಂದ ತಯಾರಿಸಿದ ಪರ್ಯಾಯ ಇಂಧನ ಬಳಕೆ ಸಕ್ಸಸ್
Praveen Sannamani
|

Updated on: Mar 01, 2023 | 2:43 PM

Share

ವಿಶ್ವಾದ್ಯಂತ ಹೆಚ್ಚುತ್ತಿರುವ ವಾಹನಗಳ ಪರಿಣಾಮ ಮಾಲಿನ್ಯ ಹೊರಸೂಸುವಿಕೆ ಪ್ರಮಾಣವನ್ನ ಪರಿಣಾಮಕಾರಿ ತಗ್ಗಿಸಲು ಹಲವು ಮಹತ್ವದ ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಲಂಬನೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಪರ್ಯಾಯ ಇಂಧನ ಬಳಕೆಯ ವಾಹನಗಳ ಬಳಕೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ತಗ್ಗಿಸುವುದಕ್ಕಾಗಿ ಫಾನ್ಸ್ ಮೂಲದ ಫಾರ್ಮಾ ಹೌಸ್ ಮಾಲೀಕರೊಬ್ಬರು ಹೊಸ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಹಸುವಿನ ಸಗಣಿಯಿಂದ ತಯಾರಿಸಿದ ಜೈವಿಕ ಇಂಧನ ಬಳಕೆಯೊಂದಿಗೆ ಹೊಸ ಸಂಚಲನಕ್ಕೆ ಮೂಡಿಸಿದ್ದಾರೆ.

ಡೀಸೆಲ್‌ಗಿಂತಲೂ ಶುದ್ದವಾದ ಮತ್ತು ಅಗ್ಗವಾಗಿರುವ ಹೊಸ ಪರ್ಯಾಯ ಇಂಧನ ಉತ್ಪಾದನೆಯನ್ನ ಈಗಾಗಲೇ ಹಂತ-ಹಂತವಾಗಿ ಸುಧಾರಿಸಲಾಗಿದ್ದು, ಇದೀಗ ಹೊಸ ಪರ್ಯಾಯ ಇಂಧನ ಮಾದರಿಯು ಸಾಮೂಹಿಕ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿದೆ.

ಪರ್ಯಾಯ ಇಂಧನ ಉತ್ಪಾದನಾ ತಂತ್ರಜ್ಞಾನ

ಹಸುಗಳ ಕೊಟ್ಟಿಗೆಯಿಂದ ಸಂಗ್ರಹವಾಗುವ ಗೊಬ್ಬರದಿಂದ ಉತ್ಪತ್ತಿಯಾಗುವ ಮೀಥೇನ್ ಅನಿಲವನ್ನ ಶುದ್ಧ ಇಂಧನವಾಗಿ ಪರಿವರ್ತಿಸಲು ಹಲವು ಸುಧಾರಿತ ತಂತ್ರಜ್ಞಾನ ಸೌಲಭ್ಯಗಳನ್ನ ಬಳಕೆ ಮಾಡಲಾಗುತ್ತಿದೆ. ಸಂಪೂರ್ಣವಾಗಿ ಮಚ್ಚಲಾಗಿರುವ ಟ್ಯಾಂಕರ್ ಗಳಲ್ಲಿ ಹಸುಗಳ ಗೊಬ್ಬರವನ್ನು 38 ಡಿಗ್ರಿ ಸೆಲ್ಸಿಯಸ್ ನಲ್ಲಿ ಹುದುಗಿಸಲಿದ್ದು, ಇದರಿಂದ ಇಂಗಾಲದ ಡೈಆಕ್ಸೈಡ್ ಮತ್ತು ಮೀಥೇನ್ ಬಿಡುಗಡೆಯಾಗುತ್ತವೆ.

ಕೊಳೆಯುವಿಕೆ ಪ್ರಕ್ರಿಯೆಯನ್ನು ವೇಗಗೊಳಿಸುವುದಕ್ಕಾಗಿ ತ್ಯಾಜ್ಯ ಸಂಗ್ರಹ ಘಟಕಗಳಿಗೆ ಪ್ರತಿ ದಿನ 40 ಟನ್‌ಗಳಷ್ಟು ಸಾವಯವ ಪದಾರ್ಥಗಳು, ಮೂರನೇ ಎರಡರಷ್ಟು ಹಸುವಿನ ಗೊಬ್ಬರ ಮತ್ತು ಮೂರನೇ ಒಂದು ಭಾಗದಷ್ಟು ಆಹಾರ ತ್ಯಾಜ್ಯ ಸುರಿಯವಾಗುತ್ತದೆ. ಇದರಿಂದ ಬಿಡುಗಡೆಯಾಗುವ ಮೀಥೇನ್ ಅನ್ನು ಶುದ್ಧೀಕರಿಸಿ ನಂತರ ವಾಹನಗಳಲ್ಲಿ ಬಳಸಲು ಸಂಕುಚಿತಗೊಳಿಸಲಾಗುತ್ತದೆ.

ಜೊತೆಗೆ ಮೀಥೇನ್ ಘಟಕಗಳಲ್ಲಿ ಕೊಳೆತ ತ್ಯಾಜ್ಯವನ್ನು ಕೊನೆಯ ಹಂತದಲ್ಲಿ ಜಮೀನುಗಳಿಗೆ ಗೊಬ್ಬರವಾಗಿ ಬಳಸಲಿದ್ದು, ಇದು ಕೂಡಾ ಪಳೆಯುಳಿಕೆ ಇಂಧನಗಳಿಂದ ತಯಾರಿಸಿದ ಸಂಶ್ಲೇಷಿತ ರಸಗೊಬ್ಬರಗಳ ಬಳಕಯನ್ನ ಕಡಿಮೆ ಮಾಡಲು ಅನುವು ಮಾಡಿಕೊಡುತ್ತದೆ.

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ