AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EICMA 2022: ಸೂಪರ್ ಮಿಟಿಯೋರ್ 650 ಅನಾವರಣಗೊಳಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯ ತನ್ನ ಹೊಸ ಸೂಪರ್ ಮಿಟಿಯೋರ್ 650 ಕ್ರೂಸರ್ ಬೈಕ್ ಮಾದರಿಯನ್ನು 2022ರ ಅಂತಾರಾಷ್ಟ್ರೀಯ ಮೋಟಾರ್ ಸೈಕಲ್ ಮತ್ತು ಆಕ್ಸೆಸರಿಸ್ ಎಕ್ಸಿಬಿಷನ್ ನಲ್ಲಿ ಅಧಿಕೃತವಾಗಿ ಅನಾವರಣಗೊಳಿಸಿದೆ.

EICMA 2022: ಸೂಪರ್ ಮಿಟಿಯೋರ್ 650 ಅನಾವರಣಗೊಳಿಸಿದ ರಾಯಲ್ ಎನ್‌ಫೀಲ್ಡ್
Royal Enfield Super Meteor 650
Praveen Sannamani
|

Updated on:Nov 08, 2022 | 7:25 PM

Share

ಕ್ಲಾಸಿಕ್ ಬೈಕ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಯಲ್ ಎನ್‌ಫೀಲ್ಡ್(Royal Enfield) ಕಂಪನಿಯು ಇಟಾಲಿಯ ಮಿಲಾನಾದಲ್ಲಿ 2022ರ EICMA(ಅಂತಾರಾಷ್ಟ್ರೀಯ ಮೋಟಾರ್ ಸೈಕಲ್ ಮತ್ತು ಆಕ್ಸೆಸರಿಸ್ ಎಕ್ಸಿಬಿಷನ್) ನಲ್ಲಿ ಹೊಸ ಸೂಪರ್ ಮಿಟಿಯೋರ್ 650(Super Meteor 650) ಬೈಕ್ ಅನಾವರಣಗೊಳಿಸಿದ್ದು, ಹೊಸ ಬೈಕ್ ಮಾದರಿಯು ಇದೇ ತಿಂಗಳಾಂತ್ಯಕ್ಕೆ ನಡೆಯಲಿರುವ 2022ರ ರೈಡರ್ ಮೆನಿಯಾದಲ್ಲೂ ಸಹ ಪ್ರದರ್ಶನಗೊಳ್ಳಲಿದೆ.

ಹೊಸ ಸೂಪರ್ ಮಿಟಿಯೋರ್ 650 ಕ್ರೂಸರ್ ಬೈಕ್ ಮಾದರಿಯನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೂ ಪರಿಚಯಿಸಲಿದ್ದು, ಹೊಸ ಬೈಕ್ ಮಾದರಿಯು 650 ಸಿಸಿ ಬೈಕ್ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಸೂಪರ್ ಮಿಟಿಯೋರ್ 650 ಕ್ರೂಸರ್ ಬೈಕಿನಲ್ಲಿ 648 ಸಿಸಿ ಪ್ಯಾರಾಲೆಲ್-ಟ್ವಿನ್ ಎಂಜಿನ್ ಜೋಡಣೆ ಪಡೆದುಕೊಂಡಿದ್ದು, ಇದು 6-ಸ್ಪೀಡ್ ಗೇರ್ ಬಾರ್ಕ್ಸ್ ನೊಂದಿಗೆ 46.3 ಬಿಎಚ್ ಪಿ ಮತ್ತು 52.3 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ. ನ್ಯೂ ಸ್ಟ್ರೀಲ್ ಟ್ಯುಬಲರ್ ಸ್ಪೀನ್ ಫ್ರೇಮ್ ಹೊಂದಿರುವ ಹೊಸ ಬೈಕಿನಲ್ಲಿ 43 ಎಂಎಂ ಅಪ್ ಸೈಡ್ ಡೌನ್ ಫೋರ್ಕ್ ಮತ್ತು 120 ಎಂಎಂ ಫ್ರಂಟ್ ಟ್ರಾವೆಲ್ ಟ್ವಿನ್ ಶಾಕ್ ಮತ್ತು ಹಿಂಬದಿಯಲ್ಲಿ 101 ಎಂಎಂ ಟ್ರಾವೆಲ್ ಸಸ್ಷೆಂಷನ್ ನೀಡಲಾಗಿದೆ.

ಇದನ್ನೂ ಓದಿ: ಹೊಸ ಎಲ್ಎಂಎಲ್ ಸ್ಟಾರ್ ಇವಿ ಸ್ಕೂಟರ್ ಖರೀದಿ ಬುಕಿಂಗ್ ಶುರು

Royal Enfield Super Meteor 650

ಉದ್ದಳತೆ ಮತ್ತು ಗ್ರೌಂಡ್ ಕ್ಲಿಯೆರೆನ್ಸ್

ಸೂಪರ್ ಮಿಟಿಯೋರ್ 650 ಬೈಕ್ ಮಾದರಿಯು ಕ್ರೂಸರ್ ಬೈಕ್ ಪ್ರಿಯರಾಗಿಯೇ ವಿಶೇಷವಾಗಿ ಸಿದ್ದವಾಗಿದ್ದು, ಹೊಸ ಬೈಕ್ ಮಾದರಿಯು 2,260 ಉದ್ದ, 890 ಎಂಎಂ ಅಗಲ, 1,155 ಎಂಎಂ ಎತ್ತರ, 740 ಎಂಎಂ ಸೀಟ್ ಎತ್ತರ ಮತ್ತು 135 ಗ್ರೌಂಡ್ ಕ್ಲಿಯೆರೆನ್ಸ್ ಪಡೆದುಕೊಂಡಿದೆ. ಇದರೊಂದಿಗೆ ಹೊಸ ಬೈಕಿನಲ್ಲಿ 15.7 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ನೀಡಲಾಗಿದ್ದು, ಒಟ್ಟಾರೆಯಾಗಿ ಹೊಸ ಬೈಕ್ ಬರೋಬ್ಬರಿ 241 ಕೆ.ಜಿ ತೂಕ ಹೊಂದಿರಲಿದೆ.

ಡಿಸೈನ್ ಮತ್ತು ಫೀಚರ್ಸ್

650 ಟ್ವಿನ್ ಬೈಕ್ ಮಾದರಿಗಳ ಜೊತೆ ಸ್ಟ್ಯಾಂಡರ್ಡ್ ಮಿಟಿಯೋರ್ ಆಧರಿಸಿರುವ ಹೊಸ ಬೈಕ್ ಮಾದರಿಯು ಅತ್ಯುತ್ತಮ ಡಿಸೈನ್ ಪಡೆದುಕೊಂಡಿದ್ದು, ಸ್ಪೋಟಿಯಾಗಿರುವ ಎಲ್ಇಡಿ ಲೈಟಿಂಗ್ಸ್ ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿದೆ. ಜೊತೆಗೆ ಕ್ಲಾಸಿಕ್ ಸ್ಟೈಲಿಷ್ ಲುಕ್ ಹೊಂದಿರುವ ಹೆಡ್ ಲ್ಯಾಂಪ್, ವೈಡ್ ಹ್ಯಾಂಡಲ್ ಬಾರ್, ಟಿಯರ್ ಡ್ರಾಪ್ ಶೈಲಿಯ ಫ್ಯೂಲ್ ಟ್ಯಾಂಕ್, ಫೀಟ್ ಫಾರ್ವಡ್ ಫುಟ್ ಕಂಟ್ರೋಲ್ ಸೌಲಭ್ಯಗಳಿವೆ.

ಇದನ್ನೂ ಓದಿ: ಅಚ್ಚರಿ ಬೆಲೆಯಲ್ಲಿ ಬಿಡುಗಡೆಯಾದ ಓಲಾ ಎಸ್1 ಏರ್ ಇವಿ ಸ್ಕೂಟರ್!

Royal Enfield Super Meteor 650

ಸುರಕ್ಷಾ ಸೌಲಭ್ಯಗಳು

ಹೊಸ ಸೂಪರ್ ಮಿಟಿಯೋರ್ 650 ಬೈಕ್ ಮಾದರಿಯಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಮುಂಭಾಗದ ಚಕ್ರದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು 300 ಎಂಎಂ ರಿಯರ್ ಡಿಸ್ಕ್ ಬ್ರೇಕ್ ಸೌಲಭ್ಯದೊಂದಿಗೆ ಟು ಪಿಸ್ಟನ್ ಕ್ಯಾಲಿಪರ್ ಸೌಲಭ್ಯಗಳನ್ನು ನೀಡಲಾಗಿದೆ. ಹಾಗೆಯೇ ಹೊಸ ಬೈಕಿನಲ್ಲಿ ಕಂಪನಿಯು ಡ್ಯುಯಲ್ ಚಾನೆಲ್ ಎಬಿಎಸ್, 19 ಇಂಚಿನ ಫ್ರಂಟ್ ವ್ಹೀಲ್ ಜೊತೆ 100/90 -19M/C 57H ಟ್ಯೂಬ್ ಲೆಸ್ ಟೈರ್ ಮತ್ತು 16 ಇಂಚಿನ ರಿಯರ್ ವ್ಹೀಲ್ ಜೊತೆ 150/80 B16 M/C 71H ಟ್ಯೂಬ್ ಲೆಸ್ ಟೈರ್ ಹೊಂದಿರಲಿದೆ.

Published On - 7:11 pm, Tue, 8 November 22

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?